Connect with us

ದಿನದ ಸುದ್ದಿ

ಈ ಹತ್ತು ಸಂಶೋಧನೆಗಳ ಇತಿಹಾಸ ತಿಳಿದರೆ ಅಚ್ಚರಿ ಪಡುತ್ತೀರಿ ?

Published

on

ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು.
ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ ಬದಲಾಗ ತೊಡಗಿದೆ. ಈ ರೀತಿ ಬೆಳೆದು ನಿಂತ ತಂತ್ರಜ್ಞಾನದ ಹಿಂದೆ ಮುಸ್ಲಿಮರ ಕೊಡುಗೆ ಇದೆ ಎಂದ್ರೆ ನಂಬ್ತೀರಾ..? ಯಾಕೆ ನಂಬಲ್ವ…? ಹಾ… ನಂಬ್ಲೇ ಬೇಕು. ಯಾಕಂದ್ರೆ ಮುಸ್ಲಿಮರ ಸಂಶೋಧನೆ 1000 ವರ್ಷಗಳ ಇತಿಹಾಸವಿದೆ. ಮುಸ್ಲಿಮರು ಸಂಶೋಧಿಸಿದ ವಸ್ತುಗಳು ಇಂದು ಡೆವಲಪ್ ಆಗಿ ಕೆಲವೊಂದು ವಸ್ತುಗಳು ಇನ್ಯಾರೋ ಯುರೋಪಿಯನ್ ಸಂಶೋಧಕನ ಹೆಸರಿನೊಂದಿಗೆ ತಳಕು ಹಾಕಿಕೊಂಡಿದೆ. ಇವತ್ತು ನಾವು ನಿಮಗೆ ಮುಸ್ಲಿಮರು ಈ ಜಗತ್ತಿಗೆ ನೀಡಿದ ಇಂದು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಉಪಯೋಗಿಸುವ 10 ವಸ್ತುಗಳನ್ನು ಪರಿಚಯ ಮಾಡಿಕೊಡಲಿದ್ದೇವೆ.

1.ಕಾಫಿ:

ಈ ಸಂಶೋಧನೆಗೆ 1200 ವರ್ಷಗಳ ಇತಿಹಾಸವಿದೆ. ಖಾಲಿದ್ ಎನ್ನುವ ಅರಬ್ ಹುಡುಗನೊಬ್ಬ ಇಥಿಯೋಪಿಯನ್ ಇಳಿಜಾರು ಪ್ರದೇಶಗಳಲ್ಲಿ ಆಡು ಮೇಯಿಸುತ್ತಿರುವಾಗ ಬೆಟ್ಟದ ತಪ್ಪಲಿನಲ್ಲಿ ಒಂದು ಬೀಜವು ದೊರೆಯಿತು. ಅದನ್ನು ಜಗಿದು ನೋಡಿದ ಆತನಿಗೆ ರುಚಿಸಿತು. ಬೀಜವನ್ನು ಮನೆಗೆ ಕೊಂಡು ಹೋಗಿ ನೀರಿನಲ್ಲಿ ಬೇಯಿಸಿ ಪ್ರಯೋಗ ನಡೆಸಿದಾಗ ಅದರ ಬೇಯಿಸಿದ ನೀರಿನ ರುಚಿ ಬಹಳ ಸ್ವಾದಿಷ್ಟವಾಗಿತ್ತು. ಕೊನೆಗೆ ಬೀಜವನ್ನು ಒಣಗಿಸಿ ಪುಡಿ ಮಾಡಿ ಪ್ರಯೋಗ ಮಾಡಿದ ಹೀಗೆ ಸಂಶೋಧಿಸಲ್ಪಟ್ಟ ಬೀಜವು “ಅಲ್-ಖವಾಹ್” ಎಂದು ಹೆಸರಾಯಿತು. ಇದುವೇ ಯುರೋಪ್ಗೆ ಕಾಲಿಟ್ಟಾಗ “ಕಾಫಿ” ಎಂದು ಪ್ರಸಿದ್ಧಿ ಪಡೆಯಿತು.

2. ಗಡಿಯಾರ

ನಮ್ಮ ಜೀವನವನ್ನು ಸ್ವಸ್ಥವಾಗಿ ಮುನ್ನಡೆಸಲು ನಮಗೆ ಇಂದು ಸಮಯ ಅತ್ಯಗತ್ಯವಾಗಿದೆ. ಇದನ್ನೂ ಕೂಡ ಎಂಟು ನೂರು ನೂರು ವರ್ಷಗಳ ಹಿಂದೆ ಮುಸ್ಲಿಮರು ಮಾಡಿದ್ದರು. ಆಗ್ನೇಯದ ಟರ್ಕಿಯ ಡಯಾರ್‌ಬಕೀರ್ ಎಂಬಲ್ಲಿ ಅಲ್-ಜಝಾರಿ ಎಂಬ ವ್ಯಕ್ತಿಯೊಬ್ಬರು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರು. ಮತ್ತು ಅತ್ಯಂತ ಪರಿಣತ ಎಂಜಿನಿಯರ್ ಕೂಡ ಆಗಿದ್ದು, ಇವರು ಗಡಿಯಾರ ಎಂಬ ಸ್ವಯಂಚಾಲಿತ ಯಂತ್ರದ ಪರಿಕಲ್ಪನೆಗೆ ಜನ್ಮ ನೀಡಿದರು. 1206 ರ ಹೊತ್ತಿಗೆ ಅಲ್-ಜಝಾರಿ ಎಲ್ಲಾ ಆಕಾರಗಳ ಮತ್ತು ಗಾತ್ರಗಳ ಹಲವಾರು ಗಡಿಯಾರಗಳನ್ನು ಮಾಡಿದ್ದರು.

ಅಲ್ ಜಝಾರಿಯವರ ಗಡಿಯಾರ ಸಂಶೋಧನೆಗೆ ಪ್ರೇರಣೆಯಾದದ್ದು ಪ್ರತಿದಿನ ಮುಸ್ಲಿಮರು ಕಡ್ಡಾಯವಾಗಿ ನಿರ್ವಹಿಸುವ ಐದು ಹೊತ್ತಿನ ಪ್ರಾರ್ಥನೆಯ ಸಮಯವನ್ನು ಅರಿಯುವುದಾಗಿತ್ತು. ಸುದೀರ್ಘ ಸಂಶೋಧನೆಯ ನಂತರ ಒಂದು ಉತ್ತಮ ಗಡಿಯಾರವನ್ನು ನಿರ್ಮಿಸುವಲ್ಲಿ ಜಝಾರಿ ಯಶಸ್ವಿಯಾಗಿದ್ದರು.

3.ಕ್ಯಾಮರಾ

ಇಬ್ನ್ ಅಲ್-ಹೈಥಮ್ ದೃಗ್ವಿಜ್ಞಾನವನ್ನು ಸಂಶೋಧಿಸಿದರು. ಕಣ್ಣಿನಿಂದ ಹೊರಸೂಸುವ ಅದೃಶ್ಯವಾದ ಬೆಳಕು ದೃಷ್ಟಿಗೆ ಕಾರಣವಾಗಿದೆಯೆಂಬ ಗ್ರೀಕ್ ಕಲ್ಪನೆಯನ್ನು ಅವರು ತಿರಸ್ಕರಿಸಿದರು. ಇದರ ಬದಲಾಗಿ ಬೆಳಕಿನಿಂದ ದೃಷ್ಟಿಯು ಉಂಟಾಗುತ್ತದೆ. ಬೆಳಕು ಒಂದು ವಸ್ತುವನ್ನು ಪ್ರತಿಫಲಿಸುತ್ತದೆ ಮತ್ತು ಕಣ್ಣಿನ ಅಕ್ಷಿ ಪಟಲವನ್ನು ಪ್ರವೇಶಿಸುತ್ತದೆ. ಅಕ್ಷಿ ಪಟಲದ ತೆರೆಯಲ್ಲಿ ವಸ್ತುವಿನ ಆಕಾರವು ಮೂಡುತ್ತದೆ ಎಂದು ದೃಷ್ಟಿಯನ್ನು ಸರಿಯಾಗಿ ವಿಶ್ಲೇಷಿಸಿದರು.ಒಂದು ಬದಿಯಲ್ಲಿ ಡಾರ್ಕ್ ರೂಮ್ ನಿಂದ ಒಂದು ಪಿನ್ ಹೋಲ್(ರಂಧ್ರ) ನ ಮೂಲಕ ಬೆಳಕನ್ನು ಇನ್ನೊಂದು ಬದಿಯಲ್ಲಿ ಬಿಳಿ ಹಾಳೆಯ ಮೇಲೆ ಹಾಯಿಸಿ ಅವರು ತನ್ನ ಸಿದ್ಧಾಂತಕ್ಕೆ ಪುರಾವೆಯನ್ನು ನೀಡಿದರು.
ಈ ಪ್ರಯೋಗದಲ್ಲಿ ಬೆಳಕು ರಂಧ್ರದ ಮೂಲಕ ಬಂದಿತು ಮತ್ತು ಬಿಳಿ ಹಾಳೆಯಲ್ಲಿ ಕೋಣೆಯ ಹೊರಗಡೆ ಇರುವ ವಸ್ತುಗಳ ವಿಲೋಮ ಚಿತ್ರವೊಂದನ್ನು ಯೋಜಿಸಿತು. ಅವರು ಇದನ್ನು “ಕಮರಾ” ಎಂದು ಕರೆದರು. ಇದು ವಿಶ್ವದ ಮೊದಲ ಬಿಂಬಗ್ರಾಹಿ ಕ್ಯಾಮರಾ ಆಗಿತ್ತು.

4.ಶುಚಿತ್ವ ಸಾಧನಗಳು

ಶುಚಿತ್ವವು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. 10 ನೆಯ ಶತಮಾನದ ಇಸ್ಲಾಮಿಕ್ ಜಗತ್ತಿನಲ್ಲಿ ಟಾಯ್ಲೆಟ್ ಬಾತ್ರೂಮ್ ಮತ್ತು ನೈರ್ಮಲ್ಯ ಅಭ್ಯಾಸಗಳು ಕಂಡುಬರುವ ಉತ್ಪನ್ನಗಳ ಸಂಶೋಧನೆ ನಡೆಯಿತು. 13 ನೇ ಶತಮಾನದಲ್ಲಿ, ಗಡಿಯಾರ ಸಂಶೋಧಿಸಿದ ಅದೇ ಇಂಜಿನಿಯರ್ ಅಲ್-ಜಝಾರಿ, “ವುದು”(ಅಂಗಶುದ್ಧಿ) ಯಂತ್ರಗಳನ್ನು ಒಳಗೊಂಡಂತೆ ಯಾಂತ್ರಿಕ ಸಾಧನಗಳನ್ನು ವಿವರಿಸುವ ಒಂದು ಎಂಜಿನಿಯರಿಂಗ್ ಸಂಸೋಧನೆಯ ಪುಸ್ತಕವನ್ನು ಬರೆದರು.
ಈ ವುದೂ ಯಂತ್ರವು ಒಂದು ಮೊಬೈಲ್ ಡಿವೈಸ್(ಸ್ಥಳಾಂತರಿಸ ಬಹುದಾದ ವಸ್ತು) ಆಗಿತ್ತು. ಅದನ್ನು ಯಾರಾದರೂ ಅತಿಥಿ ಇದ್ದರೆ ಅವರಿಗಾಗಿ ತೆಗೆದು ಕೊಂಡು ಹೋಗಲಾಗುತ್ತಿತ್ತು. ಅತಿಥಿ ಯಂತ್ರದ ತಲೆಯನ್ನು ಸ್ಪರ್ಶಿಸಿದಾಗ ಎಂಟು ಸಣ್ಣ ರಂಧ್ರಗಳಲ್ಲಿ ನೀರು ಬರುತ್ತಿತ್ತು. ಶುದ್ಧೀಕರಣಕ್ಕಾಗಿ ಸಾಕಷ್ಟು ನೀರು ನೀಡುವುದು. ಮತ್ತು ನೀರನ್ನು ಮಿತ ಬಳಕೆ ಮಾಡಿ ಸಂರಕ್ಷಿಸುವುದು ಇದರ ಉದ್ದೇಶವಾಗಿತ್ತು. ಮುಸ್ಲಿಮರು ನಿಜವಾಗಿಯೂ ಸ್ವಚ್ಛವಾಗಿರಲು ಬಯಸುತ್ತಾರೆ ಮತ್ತು ನೀರಿನಿಂದ ಮಾತ್ರ ತೊಳೆದರೆ ಶುದ್ಧಿಯಾಗಲಾರದು ಎಂಬುದನ್ನು ಅರಿತು, ಅವರು ಸಾಬೂನು ಕಂಡು ಹಿಡಿದರು. ಇದಕ್ಕಾಗಿ ಆಲಿವ್ ಎಣ್ಣೆಯನ್ನು “ಅಲ್-ಖಲಿ” ಎಂಬ ಉಪ್ಪು-ತರಹದ ಪದಾರ್ಥದೊಂದಿಗೆ ಮಿಶ್ರ ಮಾಡಿದರು. ನಂತರ ಅದನ್ನು ಸರಿಯಾದ ಮಿಶ್ರಣವನ್ನು ಸಾಧಿಸಲು ಬೇಯಿಸಿದರು. ಅದು ಗಟ್ಟಿಯಾದ ನಂತರ ಸ್ನಾನಗೃಹಗಳಲ್ಲಿ ಬಳಸಿದರು.

5.ಸುಗಂಧ ದ್ರವ್ಯ

ಅಲ್-ಕಿಂಡಿ ಅವರು ಸುಗಂಧ ದ್ಯವ್ಯದ ಬಗ್ಗೆ ಒಂದು ಪುಸ್ತವಕವನ್ನು ಬರೆದರು. ಇದು ಇಂಗ್ಲೀಷ್ ನಲ್ಲಿ, “ಕೆಮಿಸ್ಟ್ರಿ ಆಫ್ ಪರ್ಫ್ಯೂಮ್ ಅಂಡ್ ಡಿಸ್ಟೈಲೇಶನ್ಸ್” ಎಂಬ ಹೆಸರಿನಲ್ಲಿ ಲಭ್ಯವಿದೆ. ಸುಗಂಧ ತಯಾರಿಕೆಯ ಶತಮಾನಗಳ-ಹಳೆಯ ಸಂಪ್ರದಾಯವು ಮುಸ್ಲಿಂ ವಿಜ್ಞಾನಿಗಳು ಮತ್ತು ಅವರ ಶುದ್ಧೀಕರಣದ ವಿಧಾನಗಳಿಂದ ಸಾಧ್ಯವಾಯಿ. ಕಿಂಡಿಯವರ ಪುಸ್ತಕದಲ್ಲಿ ಸಸ್ಯಗಳು ಮತ್ತು ಹೂವುಗಳನ್ನು ಬಟ್ಟಿ ಇಳಿಸಿ ಸುಗಂಧದ್ರವ್ಯ ಮತ್ತು ಔಷಧಿಗಳನ್ನು ತಯಾರಿಸುವ ವಿಧಾನಗಳನ್ನು ವಿವರಿಸಲಾಗಿತ್ತು.

6.ವಿಶ್ವ ವಿದ್ಯಾನಿಲಯಗಳು

ಜ್ಞಾನದ ಅನ್ವೇಷಣೆ ಮುಸ್ಲಿಮರ ಹೃದಯಕ್ಕೆ ಹತ್ತಿರದಲ್ಲಿದೆ. ಕುರ್‌ಆನ್‍ನ ಜ್ಞಾನವನ್ನು ಸಂಪಾದಿಸುವುದು ಅತೀ ಅವಶ್ಯಕವೆಂದು ಮುಸ್ಲಿಮರಿಗೆ ಆಜ್ಞಾಪಿಸಲಾಗಿದೆ. ಆದ್ದರಿಂದ ಫಾತಿಮಾ ಅಲ್ ಫಿಹ್ರಿ ಎಂಬ ಮಹಿಳೆಯು ಮೊರಕ್ಕೋದ ಫೆಜ್ ಎಂಬಲ್ಲಿ ಮದರಸಾ ರೂಪದ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸ್ಥಾಪನೆಯು ಅತೀ ಶೀಘ್ರದಲ್ಲೇ ಅತೀ ದೊಡ್ಡ ಧಾರ್ಮಿಕ ಶಿಕ್ಷಣ ಮತ್ತು ರಾಜಕೀಯ ಚರ್ಚೆಗಾಗಿ ಒಂದು ಸ್ಥಳವಾಗಿ ಅಭಿವೃದ್ಧಿ ಹೊಂದಿತು. ಕ್ರಮೇಣ ತನ್ನ ಶಿಕ್ಷಣವನ್ನು ಎಲ್ಲಾ ವಿಷಯಗಳಲ್ಲೂ, ವಿಶೇಷವಾಗಿ ನೈಸರ್ಗಿಕ ವಿಜ್ಞಾನಗಳಿಗೆ ವಿಸ್ತರಿಸಿತು. ಆದ್ದರಿಂದ ಇದು ಇತಿಹಾಸದಲ್ಲಿನ ಮೊದಲ ವಿಶ್ವವಿದ್ಯಾನಿಲಯ ಎಂದು ಪ್ರಸಿದ್ಧಿ ಪಡೆಯಿತು. ಫೆಜ್ನಲ್ಲಿನ “ಅಲ್-ಖರವಾಯಿನ್” ವಿಶ್ವ ವಿದ್ಯಾನಿಲಯ ಇವತ್ತಿಗೂ ಕಾರ್ಯಾಚರಿಸುತ್ತಿದೆ.

7.ಹಾರುವ ಯಂತ್ರ (ವಿಮಾನ)

ಸ್ಪೇನ್ ನ ಅಬ್ಬಾಸ್ ಇಬ್ನ್ ಫಿರ್ನಾಸ್ ಹಾರುವ ಯಂತ್ರವನ್ನು ನಿರ್ಮಿಸಲು ಮತ್ತು ವಾಸ್ತವವಾಗಿ ಹಾರಲು ನಿಜವಾದ ಪ್ರಯತ್ನವನ್ನು ಮಾಡಿದ ಮೊದಲ ವ್ಯಕ್ತಿ. 9 ನೆಯ ಶತಮಾನದಲ್ಲಿ ಅವರು ಪಕ್ಷಿ ವೇಷಭೂಷಣವನ್ನು ಹೋಲುವ ರೆಕ್ಕೆಯ ಉಪಕರಣವನ್ನು ವಿನ್ಯಾಸಗೊಳಿಸಿದರು. ಸ್ಪೇನ್ನ ಕಾರ್ಡೊಬ ಬಳಿ ತನ್ನ ಅತ್ಯಂತ ಪ್ರಸಿದ್ಧವಾದ ಪ್ರಯೋಗದಲ್ಲಿ, ಫಿರ್ನಾಸ್ ಕೆಲವು ಕ್ಷಣಗಳಿಗಾಗಿ ಮೇಲ್ಮುಖವಾಗಿ ಹಾರಿಹೋದರು. ಆದರೆ ಪಕ್ಷಿಗಳು ತಮ್ಮ ಕೊಕ್ಕಿನ ಸಹಾಯದಿಂದ ಇಳಿಯುತ್ತದೆ ಎಂಬುದನ್ನು ಅಬ್ಬಾಸ್ ಇಬ್ನ್ ಫಿರ್ನಾಸ್ ಗೆ ತಿಳಿದಿರಲಿಲ್ಲ. ಇದರಿಂದಾಗಿ ಅವರು ಅವೈಜ್ಞಾನಿಕವಾಗಿ ಕೆಳಗಿಳಿದು ಬೆನ್ನು ಮೂಳೆ ಮುರಿದು ಕೊಂಡರು.

8.ಶಸ್ತ್ರಚಿಕಿತ್ಸಾ ಉಪಕರಣಗಳು

ನಾವು 10 ನೆಯ ಶತಮಾನದಲ್ಲಿ ಪ್ರಯಾಣಿಸಿದರೆ, ಪಾಶ್ಚಾತ್ಯರಿಂದ “ಅಬುಲ್ಕಾಸಿಸ್” ಎಂದು ಕರೆಯಲ್ಪಡುವ ವ್ಯಕ್ತಿ ಶಸ್ತ್ರಚಿಕಿತ್ಸಾ ಉಪಕರಣಗಳ ಪಿತಾಮಹ. ಇವರ ಪೂರ್ಣ ಹೆಸರು “ಅಬುಲ್ ಖಾಸಿಮ್ ಖಲಾಫ್ ಇಬ್ನ್ ಅಲ್-ಅಬಾದ್ ಅಲ್-ಝಹ್ರಾವಿ”. ಇವರು ಬರೆದ “ಅಲ್-ತದ್ರಿಫ್” ಗ್ರಂಥವನ್ನು ಆ ಕಾಲದಲ್ಲಿ ಯುರೋಪಿಯನ್ನರು “ಮೆಡಿಕಲ್ ಎನ್ಸೈಕ್ಲೋಪೀಡಿಯ” ಎಂದು ಕರೆದರು. ಇದು ಸುಮಾರು ಇನ್ನೂರಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಪರಿಚಯಿಸಿದ ಒಂದು ದಿಗ್ಭ್ರಮೆಗೊಳಿಸುವ ಮಾಹಿತಿಗಳನ್ನು ಹೊಂದಿತ್ತು. ಆ ಕಾಲದಲ್ಲಿ ಶಸ್ತ್ರ ಚಿಕಿತ್ಸಾ ಪದ್ಧತಿ ಇತ್ತಾದರೂ ಅದಕ್ಕಾಗಿ ಉಪರಕರಣಗಳನ್ನು ಬಳಸುವ ಇವರ ಸಂಶೋಧನೆ ಪ್ರಸಿದ್ದಿಯಾಯಿತು.

9.ಭೂಪಟ ಮತ್ತು ದಿಕ್ಸೂಚಿ

ಇವತ್ತು ಗೂಗಲ್ ಮ್ಯಾಪ್ ಮುಂತಾದ ಟೆಕ್ನಾಲಜಿಗಳು ಅಭಿವೃದ್ಧಿ ಹೊಂದಿದೆಯಾದರೂ, ಹಿಂದಿನ ಕಾಲದಲ್ಲಿ ಮಣ್ಣಿನ ಫಲಕಗಳ ಮೇಲೆ ಭೂಪಟದ ಚಿತ್ರವನ್ನು ಬರೆದು ಅದನ್ನು ಮಾರ್ಗ ಸೂಚಿಯಾಗಿ ಬಳಸುತ್ತಿದ್ದರು. 3,500 ವರ್ಷಗಳ ಹಿಂದಿನಿಂದಲೂ ಇದನ್ನು ಬಳಸಲಾಗುತ್ತಿತ್ತು. ತದನಂತರ ಪೇಪರ್ ಟೆಕ್ನಾಲಜಿ ಅಭಿವೃದ್ಧಿಯಾದ ನಂತರ ಪೇಪರ್ ಹಾಳೆಗಳಲ್ಲಿ ಇದನ್ನು ಬಳಸಲಾಗುತ್ತಿತ್ತು. ಆದರೆ ಎಲ್ಲಾ ಕಾಲದಲ್ಲೂ ಭೂಪಟ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದವರು ಮುಸ್ಲಿಮರು ಎಂಬುದು ಗಮನಾರ್ಹ.
ಮುಸ್ಲಿಮರು ವ್ಯಾಪಾರಕ್ಕಾಗಿ ಮತ್ತು ಅವರ ಧಾರ್ಮಿಕ ಕಾರಣಗಳಿಗಾಗಿ ತಮ್ಮ ಮನೆಗಳನ್ನು ಬಿಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಗತ್ತಿನ ವಿವಿಧ ಪ್ರದೇಶಗಳ ಮಾರ್ಗವನ್ನು ಕಂಡುಹಿಡಿಯಲು ಪ್ರಾರಂಭಿಸಿದರು. ಇದಕ್ಕಾಗಿ ಭೂಪಟಗಳ ಬಳಕೆ ಮಾಡಿದರು ನಂತರ ಜಲಮಾರ್ಗಗಳ ಅನ್ವೇಷಣೆಗೆ ದಿಕ್ಸೂಚಿಯನ್ನು ಅಭಿವೃದ್ಧಿ ಪಡಿಸಿದರು.

10.ಅಲ್ಜೀಬ್ರಾ (ಬೀಜ ಗಣಿತ)

“ಅಲ್ಜೀಬ್ರಾ” ಎಂಬ ಪದವು ಪರ್ಷಿಯನ್ ಗಣಿತ ಶಾಸ್ತ್ರಜ್ಞ 9 ನೇ ಶತಮಾನದ ಪ್ರಸಿದ್ಧವಾದ “ಕಿಟಾಬ್ ಅಲ್-ಜಬ್ ವಾ ಲಾ-ಮುಗಾಬಲಾ” ಎಂಬ ಶೀರ್ಷಿಕೆಯಿಂದ ಬಂದಿದೆ, ಇದು ಸ್ಥೂಲವಾಗಿ “ದಿ ಬುಕ್ ಆಫ್ ರೀಸನಿಂಗ್ ಅಂಡ್ ಬ್ಯಾಲೆನ್ಸಿಂಗ್” ಎಂದು ಭಾಷಾಂತರಿಸುತ್ತದೆ. ಆಲ್-ಖ್ವಾರಿಜ್ಮಿ ಬೀಜಗಣಿತದ ಪ್ರಾರಂಭವನ್ನು ಪರಿಚಯಿಸುತ್ತಾನೆ. ಈ ಹೊಸ ಕಲ್ಪನೆಯು ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ವಾಸ್ತವವಾಗಿ, ಇದು ಗಣಿತಶಾಸ್ತ್ರದ ಗ್ರೀಕ್ ಪರಿಕಲ್ಪನೆಯಿಂದ ಒಂದು ಕ್ರಾಂತಿಕಾರಿ ಚಲನೆಯಾಗಿತ್ತು, ಇದು ಮೂಲಭೂತವಾಗಿ ಜ್ಯಾಮಿತಿಯನ್ನು ಆಧರಿಸಿದೆ. ಗಣಿತಜ್ಞ ಅಲ್-ಖ್ವಾರಿಜ್ಮಿಯು ಒಂದು ಸಂಖ್ಯೆಯನ್ನು ಅಧಿಕಾರಕ್ಕೆ ಏರಿಸುವ ಪರಿಕಲ್ಪನೆಯನ್ನು ಪರಿಚಯಿಸಿದ ಮೊದಲ ವ್ಯಕ್ತಿ.

ಸಂಗ್ರಹ

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ17 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ19 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending