Connect with us

ದಿನದ ಸುದ್ದಿ

ಈ ಹತ್ತು ಸಂಶೋಧನೆಗಳ ಇತಿಹಾಸ ತಿಳಿದರೆ ಅಚ್ಚರಿ ಪಡುತ್ತೀರಿ ?

Published

on

ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು.
ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ ಬದಲಾಗ ತೊಡಗಿದೆ. ಈ ರೀತಿ ಬೆಳೆದು ನಿಂತ ತಂತ್ರಜ್ಞಾನದ ಹಿಂದೆ ಮುಸ್ಲಿಮರ ಕೊಡುಗೆ ಇದೆ ಎಂದ್ರೆ ನಂಬ್ತೀರಾ..? ಯಾಕೆ ನಂಬಲ್ವ…? ಹಾ… ನಂಬ್ಲೇ ಬೇಕು. ಯಾಕಂದ್ರೆ ಮುಸ್ಲಿಮರ ಸಂಶೋಧನೆ 1000 ವರ್ಷಗಳ ಇತಿಹಾಸವಿದೆ. ಮುಸ್ಲಿಮರು ಸಂಶೋಧಿಸಿದ ವಸ್ತುಗಳು ಇಂದು ಡೆವಲಪ್ ಆಗಿ ಕೆಲವೊಂದು ವಸ್ತುಗಳು ಇನ್ಯಾರೋ ಯುರೋಪಿಯನ್ ಸಂಶೋಧಕನ ಹೆಸರಿನೊಂದಿಗೆ ತಳಕು ಹಾಕಿಕೊಂಡಿದೆ. ಇವತ್ತು ನಾವು ನಿಮಗೆ ಮುಸ್ಲಿಮರು ಈ ಜಗತ್ತಿಗೆ ನೀಡಿದ ಇಂದು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಉಪಯೋಗಿಸುವ 10 ವಸ್ತುಗಳನ್ನು ಪರಿಚಯ ಮಾಡಿಕೊಡಲಿದ್ದೇವೆ.

1.ಕಾಫಿ:

ಈ ಸಂಶೋಧನೆಗೆ 1200 ವರ್ಷಗಳ ಇತಿಹಾಸವಿದೆ. ಖಾಲಿದ್ ಎನ್ನುವ ಅರಬ್ ಹುಡುಗನೊಬ್ಬ ಇಥಿಯೋಪಿಯನ್ ಇಳಿಜಾರು ಪ್ರದೇಶಗಳಲ್ಲಿ ಆಡು ಮೇಯಿಸುತ್ತಿರುವಾಗ ಬೆಟ್ಟದ ತಪ್ಪಲಿನಲ್ಲಿ ಒಂದು ಬೀಜವು ದೊರೆಯಿತು. ಅದನ್ನು ಜಗಿದು ನೋಡಿದ ಆತನಿಗೆ ರುಚಿಸಿತು. ಬೀಜವನ್ನು ಮನೆಗೆ ಕೊಂಡು ಹೋಗಿ ನೀರಿನಲ್ಲಿ ಬೇಯಿಸಿ ಪ್ರಯೋಗ ನಡೆಸಿದಾಗ ಅದರ ಬೇಯಿಸಿದ ನೀರಿನ ರುಚಿ ಬಹಳ ಸ್ವಾದಿಷ್ಟವಾಗಿತ್ತು. ಕೊನೆಗೆ ಬೀಜವನ್ನು ಒಣಗಿಸಿ ಪುಡಿ ಮಾಡಿ ಪ್ರಯೋಗ ಮಾಡಿದ ಹೀಗೆ ಸಂಶೋಧಿಸಲ್ಪಟ್ಟ ಬೀಜವು “ಅಲ್-ಖವಾಹ್” ಎಂದು ಹೆಸರಾಯಿತು. ಇದುವೇ ಯುರೋಪ್ಗೆ ಕಾಲಿಟ್ಟಾಗ “ಕಾಫಿ” ಎಂದು ಪ್ರಸಿದ್ಧಿ ಪಡೆಯಿತು.

2. ಗಡಿಯಾರ

ನಮ್ಮ ಜೀವನವನ್ನು ಸ್ವಸ್ಥವಾಗಿ ಮುನ್ನಡೆಸಲು ನಮಗೆ ಇಂದು ಸಮಯ ಅತ್ಯಗತ್ಯವಾಗಿದೆ. ಇದನ್ನೂ ಕೂಡ ಎಂಟು ನೂರು ನೂರು ವರ್ಷಗಳ ಹಿಂದೆ ಮುಸ್ಲಿಮರು ಮಾಡಿದ್ದರು. ಆಗ್ನೇಯದ ಟರ್ಕಿಯ ಡಯಾರ್‌ಬಕೀರ್ ಎಂಬಲ್ಲಿ ಅಲ್-ಜಝಾರಿ ಎಂಬ ವ್ಯಕ್ತಿಯೊಬ್ಬರು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರು. ಮತ್ತು ಅತ್ಯಂತ ಪರಿಣತ ಎಂಜಿನಿಯರ್ ಕೂಡ ಆಗಿದ್ದು, ಇವರು ಗಡಿಯಾರ ಎಂಬ ಸ್ವಯಂಚಾಲಿತ ಯಂತ್ರದ ಪರಿಕಲ್ಪನೆಗೆ ಜನ್ಮ ನೀಡಿದರು. 1206 ರ ಹೊತ್ತಿಗೆ ಅಲ್-ಜಝಾರಿ ಎಲ್ಲಾ ಆಕಾರಗಳ ಮತ್ತು ಗಾತ್ರಗಳ ಹಲವಾರು ಗಡಿಯಾರಗಳನ್ನು ಮಾಡಿದ್ದರು.

ಅಲ್ ಜಝಾರಿಯವರ ಗಡಿಯಾರ ಸಂಶೋಧನೆಗೆ ಪ್ರೇರಣೆಯಾದದ್ದು ಪ್ರತಿದಿನ ಮುಸ್ಲಿಮರು ಕಡ್ಡಾಯವಾಗಿ ನಿರ್ವಹಿಸುವ ಐದು ಹೊತ್ತಿನ ಪ್ರಾರ್ಥನೆಯ ಸಮಯವನ್ನು ಅರಿಯುವುದಾಗಿತ್ತು. ಸುದೀರ್ಘ ಸಂಶೋಧನೆಯ ನಂತರ ಒಂದು ಉತ್ತಮ ಗಡಿಯಾರವನ್ನು ನಿರ್ಮಿಸುವಲ್ಲಿ ಜಝಾರಿ ಯಶಸ್ವಿಯಾಗಿದ್ದರು.

3.ಕ್ಯಾಮರಾ

ಇಬ್ನ್ ಅಲ್-ಹೈಥಮ್ ದೃಗ್ವಿಜ್ಞಾನವನ್ನು ಸಂಶೋಧಿಸಿದರು. ಕಣ್ಣಿನಿಂದ ಹೊರಸೂಸುವ ಅದೃಶ್ಯವಾದ ಬೆಳಕು ದೃಷ್ಟಿಗೆ ಕಾರಣವಾಗಿದೆಯೆಂಬ ಗ್ರೀಕ್ ಕಲ್ಪನೆಯನ್ನು ಅವರು ತಿರಸ್ಕರಿಸಿದರು. ಇದರ ಬದಲಾಗಿ ಬೆಳಕಿನಿಂದ ದೃಷ್ಟಿಯು ಉಂಟಾಗುತ್ತದೆ. ಬೆಳಕು ಒಂದು ವಸ್ತುವನ್ನು ಪ್ರತಿಫಲಿಸುತ್ತದೆ ಮತ್ತು ಕಣ್ಣಿನ ಅಕ್ಷಿ ಪಟಲವನ್ನು ಪ್ರವೇಶಿಸುತ್ತದೆ. ಅಕ್ಷಿ ಪಟಲದ ತೆರೆಯಲ್ಲಿ ವಸ್ತುವಿನ ಆಕಾರವು ಮೂಡುತ್ತದೆ ಎಂದು ದೃಷ್ಟಿಯನ್ನು ಸರಿಯಾಗಿ ವಿಶ್ಲೇಷಿಸಿದರು.ಒಂದು ಬದಿಯಲ್ಲಿ ಡಾರ್ಕ್ ರೂಮ್ ನಿಂದ ಒಂದು ಪಿನ್ ಹೋಲ್(ರಂಧ್ರ) ನ ಮೂಲಕ ಬೆಳಕನ್ನು ಇನ್ನೊಂದು ಬದಿಯಲ್ಲಿ ಬಿಳಿ ಹಾಳೆಯ ಮೇಲೆ ಹಾಯಿಸಿ ಅವರು ತನ್ನ ಸಿದ್ಧಾಂತಕ್ಕೆ ಪುರಾವೆಯನ್ನು ನೀಡಿದರು.
ಈ ಪ್ರಯೋಗದಲ್ಲಿ ಬೆಳಕು ರಂಧ್ರದ ಮೂಲಕ ಬಂದಿತು ಮತ್ತು ಬಿಳಿ ಹಾಳೆಯಲ್ಲಿ ಕೋಣೆಯ ಹೊರಗಡೆ ಇರುವ ವಸ್ತುಗಳ ವಿಲೋಮ ಚಿತ್ರವೊಂದನ್ನು ಯೋಜಿಸಿತು. ಅವರು ಇದನ್ನು “ಕಮರಾ” ಎಂದು ಕರೆದರು. ಇದು ವಿಶ್ವದ ಮೊದಲ ಬಿಂಬಗ್ರಾಹಿ ಕ್ಯಾಮರಾ ಆಗಿತ್ತು.

4.ಶುಚಿತ್ವ ಸಾಧನಗಳು

ಶುಚಿತ್ವವು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. 10 ನೆಯ ಶತಮಾನದ ಇಸ್ಲಾಮಿಕ್ ಜಗತ್ತಿನಲ್ಲಿ ಟಾಯ್ಲೆಟ್ ಬಾತ್ರೂಮ್ ಮತ್ತು ನೈರ್ಮಲ್ಯ ಅಭ್ಯಾಸಗಳು ಕಂಡುಬರುವ ಉತ್ಪನ್ನಗಳ ಸಂಶೋಧನೆ ನಡೆಯಿತು. 13 ನೇ ಶತಮಾನದಲ್ಲಿ, ಗಡಿಯಾರ ಸಂಶೋಧಿಸಿದ ಅದೇ ಇಂಜಿನಿಯರ್ ಅಲ್-ಜಝಾರಿ, “ವುದು”(ಅಂಗಶುದ್ಧಿ) ಯಂತ್ರಗಳನ್ನು ಒಳಗೊಂಡಂತೆ ಯಾಂತ್ರಿಕ ಸಾಧನಗಳನ್ನು ವಿವರಿಸುವ ಒಂದು ಎಂಜಿನಿಯರಿಂಗ್ ಸಂಸೋಧನೆಯ ಪುಸ್ತಕವನ್ನು ಬರೆದರು.
ಈ ವುದೂ ಯಂತ್ರವು ಒಂದು ಮೊಬೈಲ್ ಡಿವೈಸ್(ಸ್ಥಳಾಂತರಿಸ ಬಹುದಾದ ವಸ್ತು) ಆಗಿತ್ತು. ಅದನ್ನು ಯಾರಾದರೂ ಅತಿಥಿ ಇದ್ದರೆ ಅವರಿಗಾಗಿ ತೆಗೆದು ಕೊಂಡು ಹೋಗಲಾಗುತ್ತಿತ್ತು. ಅತಿಥಿ ಯಂತ್ರದ ತಲೆಯನ್ನು ಸ್ಪರ್ಶಿಸಿದಾಗ ಎಂಟು ಸಣ್ಣ ರಂಧ್ರಗಳಲ್ಲಿ ನೀರು ಬರುತ್ತಿತ್ತು. ಶುದ್ಧೀಕರಣಕ್ಕಾಗಿ ಸಾಕಷ್ಟು ನೀರು ನೀಡುವುದು. ಮತ್ತು ನೀರನ್ನು ಮಿತ ಬಳಕೆ ಮಾಡಿ ಸಂರಕ್ಷಿಸುವುದು ಇದರ ಉದ್ದೇಶವಾಗಿತ್ತು. ಮುಸ್ಲಿಮರು ನಿಜವಾಗಿಯೂ ಸ್ವಚ್ಛವಾಗಿರಲು ಬಯಸುತ್ತಾರೆ ಮತ್ತು ನೀರಿನಿಂದ ಮಾತ್ರ ತೊಳೆದರೆ ಶುದ್ಧಿಯಾಗಲಾರದು ಎಂಬುದನ್ನು ಅರಿತು, ಅವರು ಸಾಬೂನು ಕಂಡು ಹಿಡಿದರು. ಇದಕ್ಕಾಗಿ ಆಲಿವ್ ಎಣ್ಣೆಯನ್ನು “ಅಲ್-ಖಲಿ” ಎಂಬ ಉಪ್ಪು-ತರಹದ ಪದಾರ್ಥದೊಂದಿಗೆ ಮಿಶ್ರ ಮಾಡಿದರು. ನಂತರ ಅದನ್ನು ಸರಿಯಾದ ಮಿಶ್ರಣವನ್ನು ಸಾಧಿಸಲು ಬೇಯಿಸಿದರು. ಅದು ಗಟ್ಟಿಯಾದ ನಂತರ ಸ್ನಾನಗೃಹಗಳಲ್ಲಿ ಬಳಸಿದರು.

5.ಸುಗಂಧ ದ್ರವ್ಯ

ಅಲ್-ಕಿಂಡಿ ಅವರು ಸುಗಂಧ ದ್ಯವ್ಯದ ಬಗ್ಗೆ ಒಂದು ಪುಸ್ತವಕವನ್ನು ಬರೆದರು. ಇದು ಇಂಗ್ಲೀಷ್ ನಲ್ಲಿ, “ಕೆಮಿಸ್ಟ್ರಿ ಆಫ್ ಪರ್ಫ್ಯೂಮ್ ಅಂಡ್ ಡಿಸ್ಟೈಲೇಶನ್ಸ್” ಎಂಬ ಹೆಸರಿನಲ್ಲಿ ಲಭ್ಯವಿದೆ. ಸುಗಂಧ ತಯಾರಿಕೆಯ ಶತಮಾನಗಳ-ಹಳೆಯ ಸಂಪ್ರದಾಯವು ಮುಸ್ಲಿಂ ವಿಜ್ಞಾನಿಗಳು ಮತ್ತು ಅವರ ಶುದ್ಧೀಕರಣದ ವಿಧಾನಗಳಿಂದ ಸಾಧ್ಯವಾಯಿ. ಕಿಂಡಿಯವರ ಪುಸ್ತಕದಲ್ಲಿ ಸಸ್ಯಗಳು ಮತ್ತು ಹೂವುಗಳನ್ನು ಬಟ್ಟಿ ಇಳಿಸಿ ಸುಗಂಧದ್ರವ್ಯ ಮತ್ತು ಔಷಧಿಗಳನ್ನು ತಯಾರಿಸುವ ವಿಧಾನಗಳನ್ನು ವಿವರಿಸಲಾಗಿತ್ತು.

6.ವಿಶ್ವ ವಿದ್ಯಾನಿಲಯಗಳು

ಜ್ಞಾನದ ಅನ್ವೇಷಣೆ ಮುಸ್ಲಿಮರ ಹೃದಯಕ್ಕೆ ಹತ್ತಿರದಲ್ಲಿದೆ. ಕುರ್‌ಆನ್‍ನ ಜ್ಞಾನವನ್ನು ಸಂಪಾದಿಸುವುದು ಅತೀ ಅವಶ್ಯಕವೆಂದು ಮುಸ್ಲಿಮರಿಗೆ ಆಜ್ಞಾಪಿಸಲಾಗಿದೆ. ಆದ್ದರಿಂದ ಫಾತಿಮಾ ಅಲ್ ಫಿಹ್ರಿ ಎಂಬ ಮಹಿಳೆಯು ಮೊರಕ್ಕೋದ ಫೆಜ್ ಎಂಬಲ್ಲಿ ಮದರಸಾ ರೂಪದ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸ್ಥಾಪನೆಯು ಅತೀ ಶೀಘ್ರದಲ್ಲೇ ಅತೀ ದೊಡ್ಡ ಧಾರ್ಮಿಕ ಶಿಕ್ಷಣ ಮತ್ತು ರಾಜಕೀಯ ಚರ್ಚೆಗಾಗಿ ಒಂದು ಸ್ಥಳವಾಗಿ ಅಭಿವೃದ್ಧಿ ಹೊಂದಿತು. ಕ್ರಮೇಣ ತನ್ನ ಶಿಕ್ಷಣವನ್ನು ಎಲ್ಲಾ ವಿಷಯಗಳಲ್ಲೂ, ವಿಶೇಷವಾಗಿ ನೈಸರ್ಗಿಕ ವಿಜ್ಞಾನಗಳಿಗೆ ವಿಸ್ತರಿಸಿತು. ಆದ್ದರಿಂದ ಇದು ಇತಿಹಾಸದಲ್ಲಿನ ಮೊದಲ ವಿಶ್ವವಿದ್ಯಾನಿಲಯ ಎಂದು ಪ್ರಸಿದ್ಧಿ ಪಡೆಯಿತು. ಫೆಜ್ನಲ್ಲಿನ “ಅಲ್-ಖರವಾಯಿನ್” ವಿಶ್ವ ವಿದ್ಯಾನಿಲಯ ಇವತ್ತಿಗೂ ಕಾರ್ಯಾಚರಿಸುತ್ತಿದೆ.

7.ಹಾರುವ ಯಂತ್ರ (ವಿಮಾನ)

ಸ್ಪೇನ್ ನ ಅಬ್ಬಾಸ್ ಇಬ್ನ್ ಫಿರ್ನಾಸ್ ಹಾರುವ ಯಂತ್ರವನ್ನು ನಿರ್ಮಿಸಲು ಮತ್ತು ವಾಸ್ತವವಾಗಿ ಹಾರಲು ನಿಜವಾದ ಪ್ರಯತ್ನವನ್ನು ಮಾಡಿದ ಮೊದಲ ವ್ಯಕ್ತಿ. 9 ನೆಯ ಶತಮಾನದಲ್ಲಿ ಅವರು ಪಕ್ಷಿ ವೇಷಭೂಷಣವನ್ನು ಹೋಲುವ ರೆಕ್ಕೆಯ ಉಪಕರಣವನ್ನು ವಿನ್ಯಾಸಗೊಳಿಸಿದರು. ಸ್ಪೇನ್ನ ಕಾರ್ಡೊಬ ಬಳಿ ತನ್ನ ಅತ್ಯಂತ ಪ್ರಸಿದ್ಧವಾದ ಪ್ರಯೋಗದಲ್ಲಿ, ಫಿರ್ನಾಸ್ ಕೆಲವು ಕ್ಷಣಗಳಿಗಾಗಿ ಮೇಲ್ಮುಖವಾಗಿ ಹಾರಿಹೋದರು. ಆದರೆ ಪಕ್ಷಿಗಳು ತಮ್ಮ ಕೊಕ್ಕಿನ ಸಹಾಯದಿಂದ ಇಳಿಯುತ್ತದೆ ಎಂಬುದನ್ನು ಅಬ್ಬಾಸ್ ಇಬ್ನ್ ಫಿರ್ನಾಸ್ ಗೆ ತಿಳಿದಿರಲಿಲ್ಲ. ಇದರಿಂದಾಗಿ ಅವರು ಅವೈಜ್ಞಾನಿಕವಾಗಿ ಕೆಳಗಿಳಿದು ಬೆನ್ನು ಮೂಳೆ ಮುರಿದು ಕೊಂಡರು.

8.ಶಸ್ತ್ರಚಿಕಿತ್ಸಾ ಉಪಕರಣಗಳು

ನಾವು 10 ನೆಯ ಶತಮಾನದಲ್ಲಿ ಪ್ರಯಾಣಿಸಿದರೆ, ಪಾಶ್ಚಾತ್ಯರಿಂದ “ಅಬುಲ್ಕಾಸಿಸ್” ಎಂದು ಕರೆಯಲ್ಪಡುವ ವ್ಯಕ್ತಿ ಶಸ್ತ್ರಚಿಕಿತ್ಸಾ ಉಪಕರಣಗಳ ಪಿತಾಮಹ. ಇವರ ಪೂರ್ಣ ಹೆಸರು “ಅಬುಲ್ ಖಾಸಿಮ್ ಖಲಾಫ್ ಇಬ್ನ್ ಅಲ್-ಅಬಾದ್ ಅಲ್-ಝಹ್ರಾವಿ”. ಇವರು ಬರೆದ “ಅಲ್-ತದ್ರಿಫ್” ಗ್ರಂಥವನ್ನು ಆ ಕಾಲದಲ್ಲಿ ಯುರೋಪಿಯನ್ನರು “ಮೆಡಿಕಲ್ ಎನ್ಸೈಕ್ಲೋಪೀಡಿಯ” ಎಂದು ಕರೆದರು. ಇದು ಸುಮಾರು ಇನ್ನೂರಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಪರಿಚಯಿಸಿದ ಒಂದು ದಿಗ್ಭ್ರಮೆಗೊಳಿಸುವ ಮಾಹಿತಿಗಳನ್ನು ಹೊಂದಿತ್ತು. ಆ ಕಾಲದಲ್ಲಿ ಶಸ್ತ್ರ ಚಿಕಿತ್ಸಾ ಪದ್ಧತಿ ಇತ್ತಾದರೂ ಅದಕ್ಕಾಗಿ ಉಪರಕರಣಗಳನ್ನು ಬಳಸುವ ಇವರ ಸಂಶೋಧನೆ ಪ್ರಸಿದ್ದಿಯಾಯಿತು.

9.ಭೂಪಟ ಮತ್ತು ದಿಕ್ಸೂಚಿ

ಇವತ್ತು ಗೂಗಲ್ ಮ್ಯಾಪ್ ಮುಂತಾದ ಟೆಕ್ನಾಲಜಿಗಳು ಅಭಿವೃದ್ಧಿ ಹೊಂದಿದೆಯಾದರೂ, ಹಿಂದಿನ ಕಾಲದಲ್ಲಿ ಮಣ್ಣಿನ ಫಲಕಗಳ ಮೇಲೆ ಭೂಪಟದ ಚಿತ್ರವನ್ನು ಬರೆದು ಅದನ್ನು ಮಾರ್ಗ ಸೂಚಿಯಾಗಿ ಬಳಸುತ್ತಿದ್ದರು. 3,500 ವರ್ಷಗಳ ಹಿಂದಿನಿಂದಲೂ ಇದನ್ನು ಬಳಸಲಾಗುತ್ತಿತ್ತು. ತದನಂತರ ಪೇಪರ್ ಟೆಕ್ನಾಲಜಿ ಅಭಿವೃದ್ಧಿಯಾದ ನಂತರ ಪೇಪರ್ ಹಾಳೆಗಳಲ್ಲಿ ಇದನ್ನು ಬಳಸಲಾಗುತ್ತಿತ್ತು. ಆದರೆ ಎಲ್ಲಾ ಕಾಲದಲ್ಲೂ ಭೂಪಟ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದವರು ಮುಸ್ಲಿಮರು ಎಂಬುದು ಗಮನಾರ್ಹ.
ಮುಸ್ಲಿಮರು ವ್ಯಾಪಾರಕ್ಕಾಗಿ ಮತ್ತು ಅವರ ಧಾರ್ಮಿಕ ಕಾರಣಗಳಿಗಾಗಿ ತಮ್ಮ ಮನೆಗಳನ್ನು ಬಿಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಗತ್ತಿನ ವಿವಿಧ ಪ್ರದೇಶಗಳ ಮಾರ್ಗವನ್ನು ಕಂಡುಹಿಡಿಯಲು ಪ್ರಾರಂಭಿಸಿದರು. ಇದಕ್ಕಾಗಿ ಭೂಪಟಗಳ ಬಳಕೆ ಮಾಡಿದರು ನಂತರ ಜಲಮಾರ್ಗಗಳ ಅನ್ವೇಷಣೆಗೆ ದಿಕ್ಸೂಚಿಯನ್ನು ಅಭಿವೃದ್ಧಿ ಪಡಿಸಿದರು.

10.ಅಲ್ಜೀಬ್ರಾ (ಬೀಜ ಗಣಿತ)

“ಅಲ್ಜೀಬ್ರಾ” ಎಂಬ ಪದವು ಪರ್ಷಿಯನ್ ಗಣಿತ ಶಾಸ್ತ್ರಜ್ಞ 9 ನೇ ಶತಮಾನದ ಪ್ರಸಿದ್ಧವಾದ “ಕಿಟಾಬ್ ಅಲ್-ಜಬ್ ವಾ ಲಾ-ಮುಗಾಬಲಾ” ಎಂಬ ಶೀರ್ಷಿಕೆಯಿಂದ ಬಂದಿದೆ, ಇದು ಸ್ಥೂಲವಾಗಿ “ದಿ ಬುಕ್ ಆಫ್ ರೀಸನಿಂಗ್ ಅಂಡ್ ಬ್ಯಾಲೆನ್ಸಿಂಗ್” ಎಂದು ಭಾಷಾಂತರಿಸುತ್ತದೆ. ಆಲ್-ಖ್ವಾರಿಜ್ಮಿ ಬೀಜಗಣಿತದ ಪ್ರಾರಂಭವನ್ನು ಪರಿಚಯಿಸುತ್ತಾನೆ. ಈ ಹೊಸ ಕಲ್ಪನೆಯು ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ವಾಸ್ತವವಾಗಿ, ಇದು ಗಣಿತಶಾಸ್ತ್ರದ ಗ್ರೀಕ್ ಪರಿಕಲ್ಪನೆಯಿಂದ ಒಂದು ಕ್ರಾಂತಿಕಾರಿ ಚಲನೆಯಾಗಿತ್ತು, ಇದು ಮೂಲಭೂತವಾಗಿ ಜ್ಯಾಮಿತಿಯನ್ನು ಆಧರಿಸಿದೆ. ಗಣಿತಜ್ಞ ಅಲ್-ಖ್ವಾರಿಜ್ಮಿಯು ಒಂದು ಸಂಖ್ಯೆಯನ್ನು ಅಧಿಕಾರಕ್ಕೆ ಏರಿಸುವ ಪರಿಕಲ್ಪನೆಯನ್ನು ಪರಿಚಯಿಸಿದ ಮೊದಲ ವ್ಯಕ್ತಿ.

ಸಂಗ್ರಹ

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ6 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ6 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ3 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ3 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending