Connect with us

ದಿನದ ಸುದ್ದಿ

ಈ ಹತ್ತು ಸಂಶೋಧನೆಗಳ ಇತಿಹಾಸ ತಿಳಿದರೆ ಅಚ್ಚರಿ ಪಡುತ್ತೀರಿ ?

Published

on

ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು.
ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ ಬದಲಾಗ ತೊಡಗಿದೆ. ಈ ರೀತಿ ಬೆಳೆದು ನಿಂತ ತಂತ್ರಜ್ಞಾನದ ಹಿಂದೆ ಮುಸ್ಲಿಮರ ಕೊಡುಗೆ ಇದೆ ಎಂದ್ರೆ ನಂಬ್ತೀರಾ..? ಯಾಕೆ ನಂಬಲ್ವ…? ಹಾ… ನಂಬ್ಲೇ ಬೇಕು. ಯಾಕಂದ್ರೆ ಮುಸ್ಲಿಮರ ಸಂಶೋಧನೆ 1000 ವರ್ಷಗಳ ಇತಿಹಾಸವಿದೆ. ಮುಸ್ಲಿಮರು ಸಂಶೋಧಿಸಿದ ವಸ್ತುಗಳು ಇಂದು ಡೆವಲಪ್ ಆಗಿ ಕೆಲವೊಂದು ವಸ್ತುಗಳು ಇನ್ಯಾರೋ ಯುರೋಪಿಯನ್ ಸಂಶೋಧಕನ ಹೆಸರಿನೊಂದಿಗೆ ತಳಕು ಹಾಕಿಕೊಂಡಿದೆ. ಇವತ್ತು ನಾವು ನಿಮಗೆ ಮುಸ್ಲಿಮರು ಈ ಜಗತ್ತಿಗೆ ನೀಡಿದ ಇಂದು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಉಪಯೋಗಿಸುವ 10 ವಸ್ತುಗಳನ್ನು ಪರಿಚಯ ಮಾಡಿಕೊಡಲಿದ್ದೇವೆ.

1.ಕಾಫಿ:

ಈ ಸಂಶೋಧನೆಗೆ 1200 ವರ್ಷಗಳ ಇತಿಹಾಸವಿದೆ. ಖಾಲಿದ್ ಎನ್ನುವ ಅರಬ್ ಹುಡುಗನೊಬ್ಬ ಇಥಿಯೋಪಿಯನ್ ಇಳಿಜಾರು ಪ್ರದೇಶಗಳಲ್ಲಿ ಆಡು ಮೇಯಿಸುತ್ತಿರುವಾಗ ಬೆಟ್ಟದ ತಪ್ಪಲಿನಲ್ಲಿ ಒಂದು ಬೀಜವು ದೊರೆಯಿತು. ಅದನ್ನು ಜಗಿದು ನೋಡಿದ ಆತನಿಗೆ ರುಚಿಸಿತು. ಬೀಜವನ್ನು ಮನೆಗೆ ಕೊಂಡು ಹೋಗಿ ನೀರಿನಲ್ಲಿ ಬೇಯಿಸಿ ಪ್ರಯೋಗ ನಡೆಸಿದಾಗ ಅದರ ಬೇಯಿಸಿದ ನೀರಿನ ರುಚಿ ಬಹಳ ಸ್ವಾದಿಷ್ಟವಾಗಿತ್ತು. ಕೊನೆಗೆ ಬೀಜವನ್ನು ಒಣಗಿಸಿ ಪುಡಿ ಮಾಡಿ ಪ್ರಯೋಗ ಮಾಡಿದ ಹೀಗೆ ಸಂಶೋಧಿಸಲ್ಪಟ್ಟ ಬೀಜವು “ಅಲ್-ಖವಾಹ್” ಎಂದು ಹೆಸರಾಯಿತು. ಇದುವೇ ಯುರೋಪ್ಗೆ ಕಾಲಿಟ್ಟಾಗ “ಕಾಫಿ” ಎಂದು ಪ್ರಸಿದ್ಧಿ ಪಡೆಯಿತು.

2. ಗಡಿಯಾರ

ನಮ್ಮ ಜೀವನವನ್ನು ಸ್ವಸ್ಥವಾಗಿ ಮುನ್ನಡೆಸಲು ನಮಗೆ ಇಂದು ಸಮಯ ಅತ್ಯಗತ್ಯವಾಗಿದೆ. ಇದನ್ನೂ ಕೂಡ ಎಂಟು ನೂರು ನೂರು ವರ್ಷಗಳ ಹಿಂದೆ ಮುಸ್ಲಿಮರು ಮಾಡಿದ್ದರು. ಆಗ್ನೇಯದ ಟರ್ಕಿಯ ಡಯಾರ್‌ಬಕೀರ್ ಎಂಬಲ್ಲಿ ಅಲ್-ಜಝಾರಿ ಎಂಬ ವ್ಯಕ್ತಿಯೊಬ್ಬರು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರು. ಮತ್ತು ಅತ್ಯಂತ ಪರಿಣತ ಎಂಜಿನಿಯರ್ ಕೂಡ ಆಗಿದ್ದು, ಇವರು ಗಡಿಯಾರ ಎಂಬ ಸ್ವಯಂಚಾಲಿತ ಯಂತ್ರದ ಪರಿಕಲ್ಪನೆಗೆ ಜನ್ಮ ನೀಡಿದರು. 1206 ರ ಹೊತ್ತಿಗೆ ಅಲ್-ಜಝಾರಿ ಎಲ್ಲಾ ಆಕಾರಗಳ ಮತ್ತು ಗಾತ್ರಗಳ ಹಲವಾರು ಗಡಿಯಾರಗಳನ್ನು ಮಾಡಿದ್ದರು.

ಅಲ್ ಜಝಾರಿಯವರ ಗಡಿಯಾರ ಸಂಶೋಧನೆಗೆ ಪ್ರೇರಣೆಯಾದದ್ದು ಪ್ರತಿದಿನ ಮುಸ್ಲಿಮರು ಕಡ್ಡಾಯವಾಗಿ ನಿರ್ವಹಿಸುವ ಐದು ಹೊತ್ತಿನ ಪ್ರಾರ್ಥನೆಯ ಸಮಯವನ್ನು ಅರಿಯುವುದಾಗಿತ್ತು. ಸುದೀರ್ಘ ಸಂಶೋಧನೆಯ ನಂತರ ಒಂದು ಉತ್ತಮ ಗಡಿಯಾರವನ್ನು ನಿರ್ಮಿಸುವಲ್ಲಿ ಜಝಾರಿ ಯಶಸ್ವಿಯಾಗಿದ್ದರು.

3.ಕ್ಯಾಮರಾ

ಇಬ್ನ್ ಅಲ್-ಹೈಥಮ್ ದೃಗ್ವಿಜ್ಞಾನವನ್ನು ಸಂಶೋಧಿಸಿದರು. ಕಣ್ಣಿನಿಂದ ಹೊರಸೂಸುವ ಅದೃಶ್ಯವಾದ ಬೆಳಕು ದೃಷ್ಟಿಗೆ ಕಾರಣವಾಗಿದೆಯೆಂಬ ಗ್ರೀಕ್ ಕಲ್ಪನೆಯನ್ನು ಅವರು ತಿರಸ್ಕರಿಸಿದರು. ಇದರ ಬದಲಾಗಿ ಬೆಳಕಿನಿಂದ ದೃಷ್ಟಿಯು ಉಂಟಾಗುತ್ತದೆ. ಬೆಳಕು ಒಂದು ವಸ್ತುವನ್ನು ಪ್ರತಿಫಲಿಸುತ್ತದೆ ಮತ್ತು ಕಣ್ಣಿನ ಅಕ್ಷಿ ಪಟಲವನ್ನು ಪ್ರವೇಶಿಸುತ್ತದೆ. ಅಕ್ಷಿ ಪಟಲದ ತೆರೆಯಲ್ಲಿ ವಸ್ತುವಿನ ಆಕಾರವು ಮೂಡುತ್ತದೆ ಎಂದು ದೃಷ್ಟಿಯನ್ನು ಸರಿಯಾಗಿ ವಿಶ್ಲೇಷಿಸಿದರು.ಒಂದು ಬದಿಯಲ್ಲಿ ಡಾರ್ಕ್ ರೂಮ್ ನಿಂದ ಒಂದು ಪಿನ್ ಹೋಲ್(ರಂಧ್ರ) ನ ಮೂಲಕ ಬೆಳಕನ್ನು ಇನ್ನೊಂದು ಬದಿಯಲ್ಲಿ ಬಿಳಿ ಹಾಳೆಯ ಮೇಲೆ ಹಾಯಿಸಿ ಅವರು ತನ್ನ ಸಿದ್ಧಾಂತಕ್ಕೆ ಪುರಾವೆಯನ್ನು ನೀಡಿದರು.
ಈ ಪ್ರಯೋಗದಲ್ಲಿ ಬೆಳಕು ರಂಧ್ರದ ಮೂಲಕ ಬಂದಿತು ಮತ್ತು ಬಿಳಿ ಹಾಳೆಯಲ್ಲಿ ಕೋಣೆಯ ಹೊರಗಡೆ ಇರುವ ವಸ್ತುಗಳ ವಿಲೋಮ ಚಿತ್ರವೊಂದನ್ನು ಯೋಜಿಸಿತು. ಅವರು ಇದನ್ನು “ಕಮರಾ” ಎಂದು ಕರೆದರು. ಇದು ವಿಶ್ವದ ಮೊದಲ ಬಿಂಬಗ್ರಾಹಿ ಕ್ಯಾಮರಾ ಆಗಿತ್ತು.

4.ಶುಚಿತ್ವ ಸಾಧನಗಳು

ಶುಚಿತ್ವವು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. 10 ನೆಯ ಶತಮಾನದ ಇಸ್ಲಾಮಿಕ್ ಜಗತ್ತಿನಲ್ಲಿ ಟಾಯ್ಲೆಟ್ ಬಾತ್ರೂಮ್ ಮತ್ತು ನೈರ್ಮಲ್ಯ ಅಭ್ಯಾಸಗಳು ಕಂಡುಬರುವ ಉತ್ಪನ್ನಗಳ ಸಂಶೋಧನೆ ನಡೆಯಿತು. 13 ನೇ ಶತಮಾನದಲ್ಲಿ, ಗಡಿಯಾರ ಸಂಶೋಧಿಸಿದ ಅದೇ ಇಂಜಿನಿಯರ್ ಅಲ್-ಜಝಾರಿ, “ವುದು”(ಅಂಗಶುದ್ಧಿ) ಯಂತ್ರಗಳನ್ನು ಒಳಗೊಂಡಂತೆ ಯಾಂತ್ರಿಕ ಸಾಧನಗಳನ್ನು ವಿವರಿಸುವ ಒಂದು ಎಂಜಿನಿಯರಿಂಗ್ ಸಂಸೋಧನೆಯ ಪುಸ್ತಕವನ್ನು ಬರೆದರು.
ಈ ವುದೂ ಯಂತ್ರವು ಒಂದು ಮೊಬೈಲ್ ಡಿವೈಸ್(ಸ್ಥಳಾಂತರಿಸ ಬಹುದಾದ ವಸ್ತು) ಆಗಿತ್ತು. ಅದನ್ನು ಯಾರಾದರೂ ಅತಿಥಿ ಇದ್ದರೆ ಅವರಿಗಾಗಿ ತೆಗೆದು ಕೊಂಡು ಹೋಗಲಾಗುತ್ತಿತ್ತು. ಅತಿಥಿ ಯಂತ್ರದ ತಲೆಯನ್ನು ಸ್ಪರ್ಶಿಸಿದಾಗ ಎಂಟು ಸಣ್ಣ ರಂಧ್ರಗಳಲ್ಲಿ ನೀರು ಬರುತ್ತಿತ್ತು. ಶುದ್ಧೀಕರಣಕ್ಕಾಗಿ ಸಾಕಷ್ಟು ನೀರು ನೀಡುವುದು. ಮತ್ತು ನೀರನ್ನು ಮಿತ ಬಳಕೆ ಮಾಡಿ ಸಂರಕ್ಷಿಸುವುದು ಇದರ ಉದ್ದೇಶವಾಗಿತ್ತು. ಮುಸ್ಲಿಮರು ನಿಜವಾಗಿಯೂ ಸ್ವಚ್ಛವಾಗಿರಲು ಬಯಸುತ್ತಾರೆ ಮತ್ತು ನೀರಿನಿಂದ ಮಾತ್ರ ತೊಳೆದರೆ ಶುದ್ಧಿಯಾಗಲಾರದು ಎಂಬುದನ್ನು ಅರಿತು, ಅವರು ಸಾಬೂನು ಕಂಡು ಹಿಡಿದರು. ಇದಕ್ಕಾಗಿ ಆಲಿವ್ ಎಣ್ಣೆಯನ್ನು “ಅಲ್-ಖಲಿ” ಎಂಬ ಉಪ್ಪು-ತರಹದ ಪದಾರ್ಥದೊಂದಿಗೆ ಮಿಶ್ರ ಮಾಡಿದರು. ನಂತರ ಅದನ್ನು ಸರಿಯಾದ ಮಿಶ್ರಣವನ್ನು ಸಾಧಿಸಲು ಬೇಯಿಸಿದರು. ಅದು ಗಟ್ಟಿಯಾದ ನಂತರ ಸ್ನಾನಗೃಹಗಳಲ್ಲಿ ಬಳಸಿದರು.

5.ಸುಗಂಧ ದ್ರವ್ಯ

ಅಲ್-ಕಿಂಡಿ ಅವರು ಸುಗಂಧ ದ್ಯವ್ಯದ ಬಗ್ಗೆ ಒಂದು ಪುಸ್ತವಕವನ್ನು ಬರೆದರು. ಇದು ಇಂಗ್ಲೀಷ್ ನಲ್ಲಿ, “ಕೆಮಿಸ್ಟ್ರಿ ಆಫ್ ಪರ್ಫ್ಯೂಮ್ ಅಂಡ್ ಡಿಸ್ಟೈಲೇಶನ್ಸ್” ಎಂಬ ಹೆಸರಿನಲ್ಲಿ ಲಭ್ಯವಿದೆ. ಸುಗಂಧ ತಯಾರಿಕೆಯ ಶತಮಾನಗಳ-ಹಳೆಯ ಸಂಪ್ರದಾಯವು ಮುಸ್ಲಿಂ ವಿಜ್ಞಾನಿಗಳು ಮತ್ತು ಅವರ ಶುದ್ಧೀಕರಣದ ವಿಧಾನಗಳಿಂದ ಸಾಧ್ಯವಾಯಿ. ಕಿಂಡಿಯವರ ಪುಸ್ತಕದಲ್ಲಿ ಸಸ್ಯಗಳು ಮತ್ತು ಹೂವುಗಳನ್ನು ಬಟ್ಟಿ ಇಳಿಸಿ ಸುಗಂಧದ್ರವ್ಯ ಮತ್ತು ಔಷಧಿಗಳನ್ನು ತಯಾರಿಸುವ ವಿಧಾನಗಳನ್ನು ವಿವರಿಸಲಾಗಿತ್ತು.

6.ವಿಶ್ವ ವಿದ್ಯಾನಿಲಯಗಳು

ಜ್ಞಾನದ ಅನ್ವೇಷಣೆ ಮುಸ್ಲಿಮರ ಹೃದಯಕ್ಕೆ ಹತ್ತಿರದಲ್ಲಿದೆ. ಕುರ್‌ಆನ್‍ನ ಜ್ಞಾನವನ್ನು ಸಂಪಾದಿಸುವುದು ಅತೀ ಅವಶ್ಯಕವೆಂದು ಮುಸ್ಲಿಮರಿಗೆ ಆಜ್ಞಾಪಿಸಲಾಗಿದೆ. ಆದ್ದರಿಂದ ಫಾತಿಮಾ ಅಲ್ ಫಿಹ್ರಿ ಎಂಬ ಮಹಿಳೆಯು ಮೊರಕ್ಕೋದ ಫೆಜ್ ಎಂಬಲ್ಲಿ ಮದರಸಾ ರೂಪದ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸ್ಥಾಪನೆಯು ಅತೀ ಶೀಘ್ರದಲ್ಲೇ ಅತೀ ದೊಡ್ಡ ಧಾರ್ಮಿಕ ಶಿಕ್ಷಣ ಮತ್ತು ರಾಜಕೀಯ ಚರ್ಚೆಗಾಗಿ ಒಂದು ಸ್ಥಳವಾಗಿ ಅಭಿವೃದ್ಧಿ ಹೊಂದಿತು. ಕ್ರಮೇಣ ತನ್ನ ಶಿಕ್ಷಣವನ್ನು ಎಲ್ಲಾ ವಿಷಯಗಳಲ್ಲೂ, ವಿಶೇಷವಾಗಿ ನೈಸರ್ಗಿಕ ವಿಜ್ಞಾನಗಳಿಗೆ ವಿಸ್ತರಿಸಿತು. ಆದ್ದರಿಂದ ಇದು ಇತಿಹಾಸದಲ್ಲಿನ ಮೊದಲ ವಿಶ್ವವಿದ್ಯಾನಿಲಯ ಎಂದು ಪ್ರಸಿದ್ಧಿ ಪಡೆಯಿತು. ಫೆಜ್ನಲ್ಲಿನ “ಅಲ್-ಖರವಾಯಿನ್” ವಿಶ್ವ ವಿದ್ಯಾನಿಲಯ ಇವತ್ತಿಗೂ ಕಾರ್ಯಾಚರಿಸುತ್ತಿದೆ.

7.ಹಾರುವ ಯಂತ್ರ (ವಿಮಾನ)

ಸ್ಪೇನ್ ನ ಅಬ್ಬಾಸ್ ಇಬ್ನ್ ಫಿರ್ನಾಸ್ ಹಾರುವ ಯಂತ್ರವನ್ನು ನಿರ್ಮಿಸಲು ಮತ್ತು ವಾಸ್ತವವಾಗಿ ಹಾರಲು ನಿಜವಾದ ಪ್ರಯತ್ನವನ್ನು ಮಾಡಿದ ಮೊದಲ ವ್ಯಕ್ತಿ. 9 ನೆಯ ಶತಮಾನದಲ್ಲಿ ಅವರು ಪಕ್ಷಿ ವೇಷಭೂಷಣವನ್ನು ಹೋಲುವ ರೆಕ್ಕೆಯ ಉಪಕರಣವನ್ನು ವಿನ್ಯಾಸಗೊಳಿಸಿದರು. ಸ್ಪೇನ್ನ ಕಾರ್ಡೊಬ ಬಳಿ ತನ್ನ ಅತ್ಯಂತ ಪ್ರಸಿದ್ಧವಾದ ಪ್ರಯೋಗದಲ್ಲಿ, ಫಿರ್ನಾಸ್ ಕೆಲವು ಕ್ಷಣಗಳಿಗಾಗಿ ಮೇಲ್ಮುಖವಾಗಿ ಹಾರಿಹೋದರು. ಆದರೆ ಪಕ್ಷಿಗಳು ತಮ್ಮ ಕೊಕ್ಕಿನ ಸಹಾಯದಿಂದ ಇಳಿಯುತ್ತದೆ ಎಂಬುದನ್ನು ಅಬ್ಬಾಸ್ ಇಬ್ನ್ ಫಿರ್ನಾಸ್ ಗೆ ತಿಳಿದಿರಲಿಲ್ಲ. ಇದರಿಂದಾಗಿ ಅವರು ಅವೈಜ್ಞಾನಿಕವಾಗಿ ಕೆಳಗಿಳಿದು ಬೆನ್ನು ಮೂಳೆ ಮುರಿದು ಕೊಂಡರು.

8.ಶಸ್ತ್ರಚಿಕಿತ್ಸಾ ಉಪಕರಣಗಳು

ನಾವು 10 ನೆಯ ಶತಮಾನದಲ್ಲಿ ಪ್ರಯಾಣಿಸಿದರೆ, ಪಾಶ್ಚಾತ್ಯರಿಂದ “ಅಬುಲ್ಕಾಸಿಸ್” ಎಂದು ಕರೆಯಲ್ಪಡುವ ವ್ಯಕ್ತಿ ಶಸ್ತ್ರಚಿಕಿತ್ಸಾ ಉಪಕರಣಗಳ ಪಿತಾಮಹ. ಇವರ ಪೂರ್ಣ ಹೆಸರು “ಅಬುಲ್ ಖಾಸಿಮ್ ಖಲಾಫ್ ಇಬ್ನ್ ಅಲ್-ಅಬಾದ್ ಅಲ್-ಝಹ್ರಾವಿ”. ಇವರು ಬರೆದ “ಅಲ್-ತದ್ರಿಫ್” ಗ್ರಂಥವನ್ನು ಆ ಕಾಲದಲ್ಲಿ ಯುರೋಪಿಯನ್ನರು “ಮೆಡಿಕಲ್ ಎನ್ಸೈಕ್ಲೋಪೀಡಿಯ” ಎಂದು ಕರೆದರು. ಇದು ಸುಮಾರು ಇನ್ನೂರಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಪರಿಚಯಿಸಿದ ಒಂದು ದಿಗ್ಭ್ರಮೆಗೊಳಿಸುವ ಮಾಹಿತಿಗಳನ್ನು ಹೊಂದಿತ್ತು. ಆ ಕಾಲದಲ್ಲಿ ಶಸ್ತ್ರ ಚಿಕಿತ್ಸಾ ಪದ್ಧತಿ ಇತ್ತಾದರೂ ಅದಕ್ಕಾಗಿ ಉಪರಕರಣಗಳನ್ನು ಬಳಸುವ ಇವರ ಸಂಶೋಧನೆ ಪ್ರಸಿದ್ದಿಯಾಯಿತು.

9.ಭೂಪಟ ಮತ್ತು ದಿಕ್ಸೂಚಿ

ಇವತ್ತು ಗೂಗಲ್ ಮ್ಯಾಪ್ ಮುಂತಾದ ಟೆಕ್ನಾಲಜಿಗಳು ಅಭಿವೃದ್ಧಿ ಹೊಂದಿದೆಯಾದರೂ, ಹಿಂದಿನ ಕಾಲದಲ್ಲಿ ಮಣ್ಣಿನ ಫಲಕಗಳ ಮೇಲೆ ಭೂಪಟದ ಚಿತ್ರವನ್ನು ಬರೆದು ಅದನ್ನು ಮಾರ್ಗ ಸೂಚಿಯಾಗಿ ಬಳಸುತ್ತಿದ್ದರು. 3,500 ವರ್ಷಗಳ ಹಿಂದಿನಿಂದಲೂ ಇದನ್ನು ಬಳಸಲಾಗುತ್ತಿತ್ತು. ತದನಂತರ ಪೇಪರ್ ಟೆಕ್ನಾಲಜಿ ಅಭಿವೃದ್ಧಿಯಾದ ನಂತರ ಪೇಪರ್ ಹಾಳೆಗಳಲ್ಲಿ ಇದನ್ನು ಬಳಸಲಾಗುತ್ತಿತ್ತು. ಆದರೆ ಎಲ್ಲಾ ಕಾಲದಲ್ಲೂ ಭೂಪಟ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದವರು ಮುಸ್ಲಿಮರು ಎಂಬುದು ಗಮನಾರ್ಹ.
ಮುಸ್ಲಿಮರು ವ್ಯಾಪಾರಕ್ಕಾಗಿ ಮತ್ತು ಅವರ ಧಾರ್ಮಿಕ ಕಾರಣಗಳಿಗಾಗಿ ತಮ್ಮ ಮನೆಗಳನ್ನು ಬಿಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಗತ್ತಿನ ವಿವಿಧ ಪ್ರದೇಶಗಳ ಮಾರ್ಗವನ್ನು ಕಂಡುಹಿಡಿಯಲು ಪ್ರಾರಂಭಿಸಿದರು. ಇದಕ್ಕಾಗಿ ಭೂಪಟಗಳ ಬಳಕೆ ಮಾಡಿದರು ನಂತರ ಜಲಮಾರ್ಗಗಳ ಅನ್ವೇಷಣೆಗೆ ದಿಕ್ಸೂಚಿಯನ್ನು ಅಭಿವೃದ್ಧಿ ಪಡಿಸಿದರು.

10.ಅಲ್ಜೀಬ್ರಾ (ಬೀಜ ಗಣಿತ)

“ಅಲ್ಜೀಬ್ರಾ” ಎಂಬ ಪದವು ಪರ್ಷಿಯನ್ ಗಣಿತ ಶಾಸ್ತ್ರಜ್ಞ 9 ನೇ ಶತಮಾನದ ಪ್ರಸಿದ್ಧವಾದ “ಕಿಟಾಬ್ ಅಲ್-ಜಬ್ ವಾ ಲಾ-ಮುಗಾಬಲಾ” ಎಂಬ ಶೀರ್ಷಿಕೆಯಿಂದ ಬಂದಿದೆ, ಇದು ಸ್ಥೂಲವಾಗಿ “ದಿ ಬುಕ್ ಆಫ್ ರೀಸನಿಂಗ್ ಅಂಡ್ ಬ್ಯಾಲೆನ್ಸಿಂಗ್” ಎಂದು ಭಾಷಾಂತರಿಸುತ್ತದೆ. ಆಲ್-ಖ್ವಾರಿಜ್ಮಿ ಬೀಜಗಣಿತದ ಪ್ರಾರಂಭವನ್ನು ಪರಿಚಯಿಸುತ್ತಾನೆ. ಈ ಹೊಸ ಕಲ್ಪನೆಯು ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ವಾಸ್ತವವಾಗಿ, ಇದು ಗಣಿತಶಾಸ್ತ್ರದ ಗ್ರೀಕ್ ಪರಿಕಲ್ಪನೆಯಿಂದ ಒಂದು ಕ್ರಾಂತಿಕಾರಿ ಚಲನೆಯಾಗಿತ್ತು, ಇದು ಮೂಲಭೂತವಾಗಿ ಜ್ಯಾಮಿತಿಯನ್ನು ಆಧರಿಸಿದೆ. ಗಣಿತಜ್ಞ ಅಲ್-ಖ್ವಾರಿಜ್ಮಿಯು ಒಂದು ಸಂಖ್ಯೆಯನ್ನು ಅಧಿಕಾರಕ್ಕೆ ಏರಿಸುವ ಪರಿಕಲ್ಪನೆಯನ್ನು ಪರಿಚಯಿಸಿದ ಮೊದಲ ವ್ಯಕ್ತಿ.

ಸಂಗ್ರಹ

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

Published

on

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು.

ಜಿಎಂ ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲೂ ಇರುವ ರಂಗಾಸಕ್ತ,ಅಭಿನಯ ಪ್ರಿಯ ವಿದ್ಯಾರ್ಥಿಗಳ ಅಭಿನಯ ಕಲೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶ ರಂಗೋತ್ಸವದಾಗಿದ್ದು, ಮೂರು ಹಂತಗಳಲ್ಲಿ ಈ ಸ್ಪರ್ಧೆಯನ್ನು ನಡೆಸಲಾಯಿತು.

ಪ್ರಥಮ ಹಂತ ಆಡಿಷನ್ (ಆಯ್ಕೆ) ಗುಂಪುಗಳ ರಚನೆ ,ಎರಡನೇ ಹಂತ ಪೌರಾಣಿಕ ಸುತ್ತು ಈ ಹಂತದಲ್ಲಿ ಎಲಿಮಿನೇಷನ್ ಪ್ರಕ್ರಿಯೆ ಇದ್ದು ಕಡಿಮೆ ಅಂಕಗಳಿಸಿದವರನ್ನು ಗುಂಪಿನಿಂದ ಹೊರಗುಳಿಸಲಾಯಿತು. ಮೂರನೇ ಹಂತ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆ ಆಗಿದ್ದು ಈ ಸುತ್ತಿಗೆ ಬಂದ ನಾಲ್ಕು ತಂಡಗಳಿಗೆ ‘ಸಾಮಾಜಿಕ ಜಾಗೃತಿ ‘ಎಂಬ ವಿಷಯ ನೀಡಲಾಗಿದ್ದು, ಲೈಂಗಿಕ ದೌರ್ಜನ್ಯ ರೈತರ ಬವಣೆ, ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಡ್ರಗ್ಸ್ ಹಾವಳಿ ಈ ವಿಷಯಗಳನ್ನು ಕೇಂದ್ರೀಕರಿಸಿ ನಾಲ್ಕು ತಂಡಗಳು ಮನೋಜ್ಞವಾಗಿ ಅಭಿನಯಿಸಿದವು.

ತೀರ್ಪುಗಾರರಾಗಿ ಪ್ರೊ. ಗಣೇಶ್ ಜಿ ತಿಲ್ವೆ, ಪ್ರೊ. ದೀಪಿಕಾ ವಿ.ಬಿ, ಪ್ರೊ. ರಾಜೇಶ್ವರಿ ವೈ.ಎಂ ಮೂರು ಹಂತಗಳಲ್ಲೂ ತೀರ್ಪನ್ನು ನೀಡಿದರು. ಶೇಕಡ 70 ತೀರ್ಪುಗಾರರ ತೀರ್ಪು, ಶೇಕಡ 30 ಪ್ರೇಕ್ಷಕರ ಆನ್ಲೈನ್ ವೋಟಿಂಗ್ ಮೂಲಕ ಅಂತಿಮ ತೀರ್ಪನ್ನು ಪ್ರಕಟಿಸಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಸುನಿಲ್ ಕುಮಾರ್ ಬಿ.ಎಸ್, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪನಿರ್ದೇಶಕರಾದ ಡಾ. ಸಂತೋಷ್ ಕುಮಾರ್ ಎಂ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಾ ಬಿ.ಎಸ್ ಉಪಸ್ಥಿತರಿದ್ದು, ರಂಗೋತ್ಸವ-2025ರ ವಿನ್ನರ್ಸ್ ಟ್ರೋಫಿಯನ್ನು ಹಾಗೂ 10000 ನಗದು ಬಹುಮಾನವನ್ನು ಲಿಖಿತ ಮತ್ತು ತಂಡದವರಿಗೆ ಹಾಗೂ ಗೌತಮ್ ಮತ್ತು ತಂಡದವರಿಗೆ ರನ್ನರ್ಸ್ ಟ್ರೋಫಿ ಮತ್ತು 7500 ನಗದು ಬಹುಮಾನವನ್ನು ನೀಡಿದರು.

ಸಾಹಿತ್ಯ, ನಿರ್ದೇಶನ, ರಂಗಸಜ್ಜಿಕೆ ಎಲ್ಲವನ್ನು ಆಯಾ ತಂಡದ ವಿದ್ಯಾರ್ಥಿಗಳೇ ನಿರ್ವಹಿಸಿಕೊಂಡದ್ದು ವಿಶೇಷವಾಗಿತ್ತು. ಪ್ರಸ್ತುತ ಧಾವಂತದ ದಿನಮಾನಗಳಲ್ಲೂ ವಿದ್ಯಾರ್ಥಿಗಳಲ್ಲಿ ಹುದುಗಿರುವ ಈ ರಂಗ ಪ್ರೇಮ, ನಟನಾ ಚತುರತೆ ಪ್ರೇಕ್ಷಕರನ್ನು ಬೆರಗುಗೊಳಿಸಿತು.

ಕಾರ್ಯಕ್ರಮದ ಮೂರು ಹಂತಗಳಲ್ಲೂ ನಿಶಾ ನಿತ್ಯಾ ಕೆ, ಸಾಕಿದ್ ಬಿ.ಆರ್ ರವರು ಮನೋಜ್ಞವಾಗಿ ನಿರೂಪಿಸಿದರು ಹಾಗೂ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವಿದ್ಯಾರ್ಥಿ ಕಾರ್ಯದರ್ಶಿಯಾದ ಸಚಿನ್ ರವರು ಹಾಗೂ ಎಲ್ಲಾ ವಿಭಾಗಗಳ ಸಾಂಸ್ಕೃತಿಕ ವಿದ್ಯಾರ್ಥಿ ಪ್ರತಿನಿಧಿಗಳು ಕಾರ್ಯಕ್ರಮದ ಎಲ್ಲಾ ಹಂತಗಳು ಸುಸೂತ್ರವಾಗಿ ನೆರವೇರಲು ಸಹಕರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 hours ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ1 day ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ2 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ2 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ2 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ2 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ1 week ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

ದಿನದ ಸುದ್ದಿ1 week ago

ಹರಿಹರ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ವಿರೋಧಿ ದಿನ ಆಚರಣೆ

ಸುದ್ದಿದಿನ,ಹರಿಹರ:ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದಿಂದ ಮಂಗಳವಾರ ಅಂತರಾಷ್ಟ್ರೀಯ ಮಹಿಳೆಯರ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಯಿತು. ಪ್ರಸ್ತುತ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ...

ದಿನದ ಸುದ್ದಿ2 weeks ago

ಕತೆ | ಹದ್ದುಗಳ ರಾಜ್ಯ

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್‌, ಕನ್ನಡಕ್ಕೆ: ಡಾ.ಶಿವಕುಮಾರ್‌ ಕಂಪ್ಲಿ ಮಟಮಟ ಮಧ್ಯಾನ್ಹದೊಳಗ ಬರ ಬರನ ಕಾಲು ಬೀಸಿಗೋಂತ ಪಟ್ನದ ಕಡಿಗೆ ಹೋಗಿ ಬರುತಿದ್ದ ವೀರಭದ್ರಿ. ಆತ ಎಲ್ಯಾನ...

Trending