ದಿನದ ಸುದ್ದಿ
ಈ ಹತ್ತು ಸಂಶೋಧನೆಗಳ ಇತಿಹಾಸ ತಿಳಿದರೆ ಅಚ್ಚರಿ ಪಡುತ್ತೀರಿ ?
ನಾವು ನಮ್ಮ ದಿನ ನಿತ್ಯದ ಜೀವನದಲ್ಲಿ ಬಳಸುವ ಈ 10 ಸಾಧನಗಳನ್ನು ಸಂಶೋಧಿಸಿದವರು ಮುಸ್ಲಿಮರು.
ಇಂದು ನಾವು ಜೀವಿಸುತ್ತಿರುವ ಪ್ರಪಂಚದಲ್ಲಿ ಅನೇಕ ಅನೇಕ ತಂತ್ರಜ್ಞಾನಗಳು ಬೆಳೆದು ನಿಂತಿದೆ. ತಂತ್ರಜ್ಞಾನ ಬೆಳೆದ ಹಾಗೆ ಮನುಷ್ಯನ ಜೀವನ ಕ್ರಮ ಬದಲಾಗ ತೊಡಗಿದೆ. ಈ ರೀತಿ ಬೆಳೆದು ನಿಂತ ತಂತ್ರಜ್ಞಾನದ ಹಿಂದೆ ಮುಸ್ಲಿಮರ ಕೊಡುಗೆ ಇದೆ ಎಂದ್ರೆ ನಂಬ್ತೀರಾ..? ಯಾಕೆ ನಂಬಲ್ವ…? ಹಾ… ನಂಬ್ಲೇ ಬೇಕು. ಯಾಕಂದ್ರೆ ಮುಸ್ಲಿಮರ ಸಂಶೋಧನೆ 1000 ವರ್ಷಗಳ ಇತಿಹಾಸವಿದೆ. ಮುಸ್ಲಿಮರು ಸಂಶೋಧಿಸಿದ ವಸ್ತುಗಳು ಇಂದು ಡೆವಲಪ್ ಆಗಿ ಕೆಲವೊಂದು ವಸ್ತುಗಳು ಇನ್ಯಾರೋ ಯುರೋಪಿಯನ್ ಸಂಶೋಧಕನ ಹೆಸರಿನೊಂದಿಗೆ ತಳಕು ಹಾಕಿಕೊಂಡಿದೆ. ಇವತ್ತು ನಾವು ನಿಮಗೆ ಮುಸ್ಲಿಮರು ಈ ಜಗತ್ತಿಗೆ ನೀಡಿದ ಇಂದು ನಾವು ನಮ್ಮ ದಿನನಿತ್ಯದ ಜೀವನದಲ್ಲಿ ಉಪಯೋಗಿಸುವ 10 ವಸ್ತುಗಳನ್ನು ಪರಿಚಯ ಮಾಡಿಕೊಡಲಿದ್ದೇವೆ.
1.ಕಾಫಿ:
ಈ ಸಂಶೋಧನೆಗೆ 1200 ವರ್ಷಗಳ ಇತಿಹಾಸವಿದೆ. ಖಾಲಿದ್ ಎನ್ನುವ ಅರಬ್ ಹುಡುಗನೊಬ್ಬ ಇಥಿಯೋಪಿಯನ್ ಇಳಿಜಾರು ಪ್ರದೇಶಗಳಲ್ಲಿ ಆಡು ಮೇಯಿಸುತ್ತಿರುವಾಗ ಬೆಟ್ಟದ ತಪ್ಪಲಿನಲ್ಲಿ ಒಂದು ಬೀಜವು ದೊರೆಯಿತು. ಅದನ್ನು ಜಗಿದು ನೋಡಿದ ಆತನಿಗೆ ರುಚಿಸಿತು. ಬೀಜವನ್ನು ಮನೆಗೆ ಕೊಂಡು ಹೋಗಿ ನೀರಿನಲ್ಲಿ ಬೇಯಿಸಿ ಪ್ರಯೋಗ ನಡೆಸಿದಾಗ ಅದರ ಬೇಯಿಸಿದ ನೀರಿನ ರುಚಿ ಬಹಳ ಸ್ವಾದಿಷ್ಟವಾಗಿತ್ತು. ಕೊನೆಗೆ ಬೀಜವನ್ನು ಒಣಗಿಸಿ ಪುಡಿ ಮಾಡಿ ಪ್ರಯೋಗ ಮಾಡಿದ ಹೀಗೆ ಸಂಶೋಧಿಸಲ್ಪಟ್ಟ ಬೀಜವು “ಅಲ್-ಖವಾಹ್” ಎಂದು ಹೆಸರಾಯಿತು. ಇದುವೇ ಯುರೋಪ್ಗೆ ಕಾಲಿಟ್ಟಾಗ “ಕಾಫಿ” ಎಂದು ಪ್ರಸಿದ್ಧಿ ಪಡೆಯಿತು.
2. ಗಡಿಯಾರ
ನಮ್ಮ ಜೀವನವನ್ನು ಸ್ವಸ್ಥವಾಗಿ ಮುನ್ನಡೆಸಲು ನಮಗೆ ಇಂದು ಸಮಯ ಅತ್ಯಗತ್ಯವಾಗಿದೆ. ಇದನ್ನೂ ಕೂಡ ಎಂಟು ನೂರು ನೂರು ವರ್ಷಗಳ ಹಿಂದೆ ಮುಸ್ಲಿಮರು ಮಾಡಿದ್ದರು. ಆಗ್ನೇಯದ ಟರ್ಕಿಯ ಡಯಾರ್ಬಕೀರ್ ಎಂಬಲ್ಲಿ ಅಲ್-ಜಝಾರಿ ಎಂಬ ವ್ಯಕ್ತಿಯೊಬ್ಬರು ತುಂಬಾ ಧಾರ್ಮಿಕ ವ್ಯಕ್ತಿಯಾಗಿದ್ದರು. ಮತ್ತು ಅತ್ಯಂತ ಪರಿಣತ ಎಂಜಿನಿಯರ್ ಕೂಡ ಆಗಿದ್ದು, ಇವರು ಗಡಿಯಾರ ಎಂಬ ಸ್ವಯಂಚಾಲಿತ ಯಂತ್ರದ ಪರಿಕಲ್ಪನೆಗೆ ಜನ್ಮ ನೀಡಿದರು. 1206 ರ ಹೊತ್ತಿಗೆ ಅಲ್-ಜಝಾರಿ ಎಲ್ಲಾ ಆಕಾರಗಳ ಮತ್ತು ಗಾತ್ರಗಳ ಹಲವಾರು ಗಡಿಯಾರಗಳನ್ನು ಮಾಡಿದ್ದರು.
ಅಲ್ ಜಝಾರಿಯವರ ಗಡಿಯಾರ ಸಂಶೋಧನೆಗೆ ಪ್ರೇರಣೆಯಾದದ್ದು ಪ್ರತಿದಿನ ಮುಸ್ಲಿಮರು ಕಡ್ಡಾಯವಾಗಿ ನಿರ್ವಹಿಸುವ ಐದು ಹೊತ್ತಿನ ಪ್ರಾರ್ಥನೆಯ ಸಮಯವನ್ನು ಅರಿಯುವುದಾಗಿತ್ತು. ಸುದೀರ್ಘ ಸಂಶೋಧನೆಯ ನಂತರ ಒಂದು ಉತ್ತಮ ಗಡಿಯಾರವನ್ನು ನಿರ್ಮಿಸುವಲ್ಲಿ ಜಝಾರಿ ಯಶಸ್ವಿಯಾಗಿದ್ದರು.
3.ಕ್ಯಾಮರಾ
ಇಬ್ನ್ ಅಲ್-ಹೈಥಮ್ ದೃಗ್ವಿಜ್ಞಾನವನ್ನು ಸಂಶೋಧಿಸಿದರು. ಕಣ್ಣಿನಿಂದ ಹೊರಸೂಸುವ ಅದೃಶ್ಯವಾದ ಬೆಳಕು ದೃಷ್ಟಿಗೆ ಕಾರಣವಾಗಿದೆಯೆಂಬ ಗ್ರೀಕ್ ಕಲ್ಪನೆಯನ್ನು ಅವರು ತಿರಸ್ಕರಿಸಿದರು. ಇದರ ಬದಲಾಗಿ ಬೆಳಕಿನಿಂದ ದೃಷ್ಟಿಯು ಉಂಟಾಗುತ್ತದೆ. ಬೆಳಕು ಒಂದು ವಸ್ತುವನ್ನು ಪ್ರತಿಫಲಿಸುತ್ತದೆ ಮತ್ತು ಕಣ್ಣಿನ ಅಕ್ಷಿ ಪಟಲವನ್ನು ಪ್ರವೇಶಿಸುತ್ತದೆ. ಅಕ್ಷಿ ಪಟಲದ ತೆರೆಯಲ್ಲಿ ವಸ್ತುವಿನ ಆಕಾರವು ಮೂಡುತ್ತದೆ ಎಂದು ದೃಷ್ಟಿಯನ್ನು ಸರಿಯಾಗಿ ವಿಶ್ಲೇಷಿಸಿದರು.ಒಂದು ಬದಿಯಲ್ಲಿ ಡಾರ್ಕ್ ರೂಮ್ ನಿಂದ ಒಂದು ಪಿನ್ ಹೋಲ್(ರಂಧ್ರ) ನ ಮೂಲಕ ಬೆಳಕನ್ನು ಇನ್ನೊಂದು ಬದಿಯಲ್ಲಿ ಬಿಳಿ ಹಾಳೆಯ ಮೇಲೆ ಹಾಯಿಸಿ ಅವರು ತನ್ನ ಸಿದ್ಧಾಂತಕ್ಕೆ ಪುರಾವೆಯನ್ನು ನೀಡಿದರು.
ಈ ಪ್ರಯೋಗದಲ್ಲಿ ಬೆಳಕು ರಂಧ್ರದ ಮೂಲಕ ಬಂದಿತು ಮತ್ತು ಬಿಳಿ ಹಾಳೆಯಲ್ಲಿ ಕೋಣೆಯ ಹೊರಗಡೆ ಇರುವ ವಸ್ತುಗಳ ವಿಲೋಮ ಚಿತ್ರವೊಂದನ್ನು ಯೋಜಿಸಿತು. ಅವರು ಇದನ್ನು “ಕಮರಾ” ಎಂದು ಕರೆದರು. ಇದು ವಿಶ್ವದ ಮೊದಲ ಬಿಂಬಗ್ರಾಹಿ ಕ್ಯಾಮರಾ ಆಗಿತ್ತು.
4.ಶುಚಿತ್ವ ಸಾಧನಗಳು
ಶುಚಿತ್ವವು ಮುಸ್ಲಿಮರ ವಿಶ್ವಾಸದ ಭಾಗವಾಗಿದೆ. 10 ನೆಯ ಶತಮಾನದ ಇಸ್ಲಾಮಿಕ್ ಜಗತ್ತಿನಲ್ಲಿ ಟಾಯ್ಲೆಟ್ ಬಾತ್ರೂಮ್ ಮತ್ತು ನೈರ್ಮಲ್ಯ ಅಭ್ಯಾಸಗಳು ಕಂಡುಬರುವ ಉತ್ಪನ್ನಗಳ ಸಂಶೋಧನೆ ನಡೆಯಿತು. 13 ನೇ ಶತಮಾನದಲ್ಲಿ, ಗಡಿಯಾರ ಸಂಶೋಧಿಸಿದ ಅದೇ ಇಂಜಿನಿಯರ್ ಅಲ್-ಜಝಾರಿ, “ವುದು”(ಅಂಗಶುದ್ಧಿ) ಯಂತ್ರಗಳನ್ನು ಒಳಗೊಂಡಂತೆ ಯಾಂತ್ರಿಕ ಸಾಧನಗಳನ್ನು ವಿವರಿಸುವ ಒಂದು ಎಂಜಿನಿಯರಿಂಗ್ ಸಂಸೋಧನೆಯ ಪುಸ್ತಕವನ್ನು ಬರೆದರು.
ಈ ವುದೂ ಯಂತ್ರವು ಒಂದು ಮೊಬೈಲ್ ಡಿವೈಸ್(ಸ್ಥಳಾಂತರಿಸ ಬಹುದಾದ ವಸ್ತು) ಆಗಿತ್ತು. ಅದನ್ನು ಯಾರಾದರೂ ಅತಿಥಿ ಇದ್ದರೆ ಅವರಿಗಾಗಿ ತೆಗೆದು ಕೊಂಡು ಹೋಗಲಾಗುತ್ತಿತ್ತು. ಅತಿಥಿ ಯಂತ್ರದ ತಲೆಯನ್ನು ಸ್ಪರ್ಶಿಸಿದಾಗ ಎಂಟು ಸಣ್ಣ ರಂಧ್ರಗಳಲ್ಲಿ ನೀರು ಬರುತ್ತಿತ್ತು. ಶುದ್ಧೀಕರಣಕ್ಕಾಗಿ ಸಾಕಷ್ಟು ನೀರು ನೀಡುವುದು. ಮತ್ತು ನೀರನ್ನು ಮಿತ ಬಳಕೆ ಮಾಡಿ ಸಂರಕ್ಷಿಸುವುದು ಇದರ ಉದ್ದೇಶವಾಗಿತ್ತು. ಮುಸ್ಲಿಮರು ನಿಜವಾಗಿಯೂ ಸ್ವಚ್ಛವಾಗಿರಲು ಬಯಸುತ್ತಾರೆ ಮತ್ತು ನೀರಿನಿಂದ ಮಾತ್ರ ತೊಳೆದರೆ ಶುದ್ಧಿಯಾಗಲಾರದು ಎಂಬುದನ್ನು ಅರಿತು, ಅವರು ಸಾಬೂನು ಕಂಡು ಹಿಡಿದರು. ಇದಕ್ಕಾಗಿ ಆಲಿವ್ ಎಣ್ಣೆಯನ್ನು “ಅಲ್-ಖಲಿ” ಎಂಬ ಉಪ್ಪು-ತರಹದ ಪದಾರ್ಥದೊಂದಿಗೆ ಮಿಶ್ರ ಮಾಡಿದರು. ನಂತರ ಅದನ್ನು ಸರಿಯಾದ ಮಿಶ್ರಣವನ್ನು ಸಾಧಿಸಲು ಬೇಯಿಸಿದರು. ಅದು ಗಟ್ಟಿಯಾದ ನಂತರ ಸ್ನಾನಗೃಹಗಳಲ್ಲಿ ಬಳಸಿದರು.
5.ಸುಗಂಧ ದ್ರವ್ಯ
ಅಲ್-ಕಿಂಡಿ ಅವರು ಸುಗಂಧ ದ್ಯವ್ಯದ ಬಗ್ಗೆ ಒಂದು ಪುಸ್ತವಕವನ್ನು ಬರೆದರು. ಇದು ಇಂಗ್ಲೀಷ್ ನಲ್ಲಿ, “ಕೆಮಿಸ್ಟ್ರಿ ಆಫ್ ಪರ್ಫ್ಯೂಮ್ ಅಂಡ್ ಡಿಸ್ಟೈಲೇಶನ್ಸ್” ಎಂಬ ಹೆಸರಿನಲ್ಲಿ ಲಭ್ಯವಿದೆ. ಸುಗಂಧ ತಯಾರಿಕೆಯ ಶತಮಾನಗಳ-ಹಳೆಯ ಸಂಪ್ರದಾಯವು ಮುಸ್ಲಿಂ ವಿಜ್ಞಾನಿಗಳು ಮತ್ತು ಅವರ ಶುದ್ಧೀಕರಣದ ವಿಧಾನಗಳಿಂದ ಸಾಧ್ಯವಾಯಿ. ಕಿಂಡಿಯವರ ಪುಸ್ತಕದಲ್ಲಿ ಸಸ್ಯಗಳು ಮತ್ತು ಹೂವುಗಳನ್ನು ಬಟ್ಟಿ ಇಳಿಸಿ ಸುಗಂಧದ್ರವ್ಯ ಮತ್ತು ಔಷಧಿಗಳನ್ನು ತಯಾರಿಸುವ ವಿಧಾನಗಳನ್ನು ವಿವರಿಸಲಾಗಿತ್ತು.
6.ವಿಶ್ವ ವಿದ್ಯಾನಿಲಯಗಳು
ಜ್ಞಾನದ ಅನ್ವೇಷಣೆ ಮುಸ್ಲಿಮರ ಹೃದಯಕ್ಕೆ ಹತ್ತಿರದಲ್ಲಿದೆ. ಕುರ್ಆನ್ನ ಜ್ಞಾನವನ್ನು ಸಂಪಾದಿಸುವುದು ಅತೀ ಅವಶ್ಯಕವೆಂದು ಮುಸ್ಲಿಮರಿಗೆ ಆಜ್ಞಾಪಿಸಲಾಗಿದೆ. ಆದ್ದರಿಂದ ಫಾತಿಮಾ ಅಲ್ ಫಿಹ್ರಿ ಎಂಬ ಮಹಿಳೆಯು ಮೊರಕ್ಕೋದ ಫೆಜ್ ಎಂಬಲ್ಲಿ ಮದರಸಾ ರೂಪದ ಒಂದು ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದರು. ಈ ಸ್ಥಾಪನೆಯು ಅತೀ ಶೀಘ್ರದಲ್ಲೇ ಅತೀ ದೊಡ್ಡ ಧಾರ್ಮಿಕ ಶಿಕ್ಷಣ ಮತ್ತು ರಾಜಕೀಯ ಚರ್ಚೆಗಾಗಿ ಒಂದು ಸ್ಥಳವಾಗಿ ಅಭಿವೃದ್ಧಿ ಹೊಂದಿತು. ಕ್ರಮೇಣ ತನ್ನ ಶಿಕ್ಷಣವನ್ನು ಎಲ್ಲಾ ವಿಷಯಗಳಲ್ಲೂ, ವಿಶೇಷವಾಗಿ ನೈಸರ್ಗಿಕ ವಿಜ್ಞಾನಗಳಿಗೆ ವಿಸ್ತರಿಸಿತು. ಆದ್ದರಿಂದ ಇದು ಇತಿಹಾಸದಲ್ಲಿನ ಮೊದಲ ವಿಶ್ವವಿದ್ಯಾನಿಲಯ ಎಂದು ಪ್ರಸಿದ್ಧಿ ಪಡೆಯಿತು. ಫೆಜ್ನಲ್ಲಿನ “ಅಲ್-ಖರವಾಯಿನ್” ವಿಶ್ವ ವಿದ್ಯಾನಿಲಯ ಇವತ್ತಿಗೂ ಕಾರ್ಯಾಚರಿಸುತ್ತಿದೆ.
7.ಹಾರುವ ಯಂತ್ರ (ವಿಮಾನ)
ಸ್ಪೇನ್ ನ ಅಬ್ಬಾಸ್ ಇಬ್ನ್ ಫಿರ್ನಾಸ್ ಹಾರುವ ಯಂತ್ರವನ್ನು ನಿರ್ಮಿಸಲು ಮತ್ತು ವಾಸ್ತವವಾಗಿ ಹಾರಲು ನಿಜವಾದ ಪ್ರಯತ್ನವನ್ನು ಮಾಡಿದ ಮೊದಲ ವ್ಯಕ್ತಿ. 9 ನೆಯ ಶತಮಾನದಲ್ಲಿ ಅವರು ಪಕ್ಷಿ ವೇಷಭೂಷಣವನ್ನು ಹೋಲುವ ರೆಕ್ಕೆಯ ಉಪಕರಣವನ್ನು ವಿನ್ಯಾಸಗೊಳಿಸಿದರು. ಸ್ಪೇನ್ನ ಕಾರ್ಡೊಬ ಬಳಿ ತನ್ನ ಅತ್ಯಂತ ಪ್ರಸಿದ್ಧವಾದ ಪ್ರಯೋಗದಲ್ಲಿ, ಫಿರ್ನಾಸ್ ಕೆಲವು ಕ್ಷಣಗಳಿಗಾಗಿ ಮೇಲ್ಮುಖವಾಗಿ ಹಾರಿಹೋದರು. ಆದರೆ ಪಕ್ಷಿಗಳು ತಮ್ಮ ಕೊಕ್ಕಿನ ಸಹಾಯದಿಂದ ಇಳಿಯುತ್ತದೆ ಎಂಬುದನ್ನು ಅಬ್ಬಾಸ್ ಇಬ್ನ್ ಫಿರ್ನಾಸ್ ಗೆ ತಿಳಿದಿರಲಿಲ್ಲ. ಇದರಿಂದಾಗಿ ಅವರು ಅವೈಜ್ಞಾನಿಕವಾಗಿ ಕೆಳಗಿಳಿದು ಬೆನ್ನು ಮೂಳೆ ಮುರಿದು ಕೊಂಡರು.
8.ಶಸ್ತ್ರಚಿಕಿತ್ಸಾ ಉಪಕರಣಗಳು
ನಾವು 10 ನೆಯ ಶತಮಾನದಲ್ಲಿ ಪ್ರಯಾಣಿಸಿದರೆ, ಪಾಶ್ಚಾತ್ಯರಿಂದ “ಅಬುಲ್ಕಾಸಿಸ್” ಎಂದು ಕರೆಯಲ್ಪಡುವ ವ್ಯಕ್ತಿ ಶಸ್ತ್ರಚಿಕಿತ್ಸಾ ಉಪಕರಣಗಳ ಪಿತಾಮಹ. ಇವರ ಪೂರ್ಣ ಹೆಸರು “ಅಬುಲ್ ಖಾಸಿಮ್ ಖಲಾಫ್ ಇಬ್ನ್ ಅಲ್-ಅಬಾದ್ ಅಲ್-ಝಹ್ರಾವಿ”. ಇವರು ಬರೆದ “ಅಲ್-ತದ್ರಿಫ್” ಗ್ರಂಥವನ್ನು ಆ ಕಾಲದಲ್ಲಿ ಯುರೋಪಿಯನ್ನರು “ಮೆಡಿಕಲ್ ಎನ್ಸೈಕ್ಲೋಪೀಡಿಯ” ಎಂದು ಕರೆದರು. ಇದು ಸುಮಾರು ಇನ್ನೂರಕ್ಕೂ ಹೆಚ್ಚಿನ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಪರಿಚಯಿಸಿದ ಒಂದು ದಿಗ್ಭ್ರಮೆಗೊಳಿಸುವ ಮಾಹಿತಿಗಳನ್ನು ಹೊಂದಿತ್ತು. ಆ ಕಾಲದಲ್ಲಿ ಶಸ್ತ್ರ ಚಿಕಿತ್ಸಾ ಪದ್ಧತಿ ಇತ್ತಾದರೂ ಅದಕ್ಕಾಗಿ ಉಪರಕರಣಗಳನ್ನು ಬಳಸುವ ಇವರ ಸಂಶೋಧನೆ ಪ್ರಸಿದ್ದಿಯಾಯಿತು.
9.ಭೂಪಟ ಮತ್ತು ದಿಕ್ಸೂಚಿ
ಇವತ್ತು ಗೂಗಲ್ ಮ್ಯಾಪ್ ಮುಂತಾದ ಟೆಕ್ನಾಲಜಿಗಳು ಅಭಿವೃದ್ಧಿ ಹೊಂದಿದೆಯಾದರೂ, ಹಿಂದಿನ ಕಾಲದಲ್ಲಿ ಮಣ್ಣಿನ ಫಲಕಗಳ ಮೇಲೆ ಭೂಪಟದ ಚಿತ್ರವನ್ನು ಬರೆದು ಅದನ್ನು ಮಾರ್ಗ ಸೂಚಿಯಾಗಿ ಬಳಸುತ್ತಿದ್ದರು. 3,500 ವರ್ಷಗಳ ಹಿಂದಿನಿಂದಲೂ ಇದನ್ನು ಬಳಸಲಾಗುತ್ತಿತ್ತು. ತದನಂತರ ಪೇಪರ್ ಟೆಕ್ನಾಲಜಿ ಅಭಿವೃದ್ಧಿಯಾದ ನಂತರ ಪೇಪರ್ ಹಾಳೆಗಳಲ್ಲಿ ಇದನ್ನು ಬಳಸಲಾಗುತ್ತಿತ್ತು. ಆದರೆ ಎಲ್ಲಾ ಕಾಲದಲ್ಲೂ ಭೂಪಟ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದವರು ಮುಸ್ಲಿಮರು ಎಂಬುದು ಗಮನಾರ್ಹ.
ಮುಸ್ಲಿಮರು ವ್ಯಾಪಾರಕ್ಕಾಗಿ ಮತ್ತು ಅವರ ಧಾರ್ಮಿಕ ಕಾರಣಗಳಿಗಾಗಿ ತಮ್ಮ ಮನೆಗಳನ್ನು ಬಿಡಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಅವರಿಗೆ ಜಗತ್ತಿನ ವಿವಿಧ ಪ್ರದೇಶಗಳ ಮಾರ್ಗವನ್ನು ಕಂಡುಹಿಡಿಯಲು ಪ್ರಾರಂಭಿಸಿದರು. ಇದಕ್ಕಾಗಿ ಭೂಪಟಗಳ ಬಳಕೆ ಮಾಡಿದರು ನಂತರ ಜಲಮಾರ್ಗಗಳ ಅನ್ವೇಷಣೆಗೆ ದಿಕ್ಸೂಚಿಯನ್ನು ಅಭಿವೃದ್ಧಿ ಪಡಿಸಿದರು.
10.ಅಲ್ಜೀಬ್ರಾ (ಬೀಜ ಗಣಿತ)
“ಅಲ್ಜೀಬ್ರಾ” ಎಂಬ ಪದವು ಪರ್ಷಿಯನ್ ಗಣಿತ ಶಾಸ್ತ್ರಜ್ಞ 9 ನೇ ಶತಮಾನದ ಪ್ರಸಿದ್ಧವಾದ “ಕಿಟಾಬ್ ಅಲ್-ಜಬ್ ವಾ ಲಾ-ಮುಗಾಬಲಾ” ಎಂಬ ಶೀರ್ಷಿಕೆಯಿಂದ ಬಂದಿದೆ, ಇದು ಸ್ಥೂಲವಾಗಿ “ದಿ ಬುಕ್ ಆಫ್ ರೀಸನಿಂಗ್ ಅಂಡ್ ಬ್ಯಾಲೆನ್ಸಿಂಗ್” ಎಂದು ಭಾಷಾಂತರಿಸುತ್ತದೆ. ಆಲ್-ಖ್ವಾರಿಜ್ಮಿ ಬೀಜಗಣಿತದ ಪ್ರಾರಂಭವನ್ನು ಪರಿಚಯಿಸುತ್ತಾನೆ. ಈ ಹೊಸ ಕಲ್ಪನೆಯು ಎಷ್ಟು ಮಹತ್ವದ್ದಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಮುಖ್ಯವಾಗಿದೆ. ವಾಸ್ತವವಾಗಿ, ಇದು ಗಣಿತಶಾಸ್ತ್ರದ ಗ್ರೀಕ್ ಪರಿಕಲ್ಪನೆಯಿಂದ ಒಂದು ಕ್ರಾಂತಿಕಾರಿ ಚಲನೆಯಾಗಿತ್ತು, ಇದು ಮೂಲಭೂತವಾಗಿ ಜ್ಯಾಮಿತಿಯನ್ನು ಆಧರಿಸಿದೆ. ಗಣಿತಜ್ಞ ಅಲ್-ಖ್ವಾರಿಜ್ಮಿಯು ಒಂದು ಸಂಖ್ಯೆಯನ್ನು ಅಧಿಕಾರಕ್ಕೆ ಏರಿಸುವ ಪರಿಕಲ್ಪನೆಯನ್ನು ಪರಿಚಯಿಸಿದ ಮೊದಲ ವ್ಯಕ್ತಿ.
ಸಂಗ್ರಹ

ದಿನದ ಸುದ್ದಿ
ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.
ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.
‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.
ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.
ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.
ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
ಗಿರೀಶ್ ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.
ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.
ಸಾಧಿಕ್ ಪೊಲೀಸರಿಗೆ ಸಾಥ್
ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.
“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
~ವಿದ್ಯಾನಾಯ್ಕ್ ಅರೇಹಳ್ಳಿ
ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ ಕಲಿಕೆ ಎನ್ನುವುದು ಶಿಕ್ಷಣ ಕ್ಷೇತ್ರದಲ್ಲಿ ಬಳಸಲಾಗುವ ಒಂದು ವ್ಯವಸ್ಥಿತ ಮತ್ತು ಪ್ರಭಾವಶಾಲಿ ಬೋಧನಾ ವಿಧಾನವಾಗಿದ್ದು, ವಿಶೇಷವಾಗಿ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – NEP ಯಲ್ಲೂ ಇದರ ಪ್ರಸ್ತಾಪವಿದೆ ಎನ್ನಲಾಗಿದೆ.
ಪಂಚಪಾಡಿ ಎಂದರೇನು?
ಪಂಚಪಾಡಿ ಎಂದರೆ ಮಗುವಿನ ಸಮಗ್ರ ವಿಕಾಸಕ್ಕಾಗಿ ಐದು ಹಂತಗಳ ಕಲಿಕಾ ಪ್ರಕ್ರಿಯೆಯನ್ನು ಬಳಸಲಾಗುತ್ತದೆ.
ಅಂದರೆ ಜ್ಞಾನರ್ಜನೆಗೆ ಐದು ಹೆಜ್ಜೆಗಳು ಅಥವಾ ಐದು ಹಂತಗಳು ಎಂದರ್ಥ.
ಜ್ಞಾನವನ್ನು ಕೇವಲ ನೆನಪಿನಲ್ಲಿಟ್ಟುಕೊಳ್ಳುವುದರ ಬದಲಾಗಿ, ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಈ ವಿಧಾನ ಸಹಾಯ ಮಾಡುತ್ತದೆ.
ಪಂಚಪಾಡಿ ಕಲಿಕೆಯ 5 ಹಂತಗಳು
ಅದಿತಿ ( ಪರಿಚಯ / ಗ್ರಹಿಕೆ): ಈ ಪದ್ಧತಿಯ ಮೊದಲ ಹಂತವೇ ಅದಿತಿ. ಇಲ್ಲಿ ವಿದ್ಯಾರ್ಥಿಗೆ ಹೊಸ ವಿಷಯವನ್ನು ಪರಿಚಯಿಸಲಾಗುತ್ತದೆ. ಶಿಕ್ಷಕರು ಕಥೆ,ಚಿತ್ರ ಉದಾಹರಣೆ ಅಥವಾ ಚಟುವಟಿಕೆಗಳ ಮೂಲಕ ಹೊಸ ವಿಷಯವನ್ನು ಮಗುವಿನ ಮುಂದೆ ಪ್ರಸ್ತುತಪಡಿಸುತ್ತಾರೆ. ಮಗು ವಿಷಯವನ್ನು ಕೇಳಿ, ನೋಡಿ ಗ್ರಹಿಸಲು ಆರಂಭಿಸುತ್ತದೆ.
ಬೋಧ : (ತಿಳುವಳಿಕೆ / ಅರ್ಥೈಸಿಕೊಳ್ಳುವಿಕೆ): ಪರಿಚಯಿಸಿಕೊಂಡ ವಿಷಯವನ್ನು ಆಳವಾಗಿ ಅರ್ಥಮಾಡಿಕೊಳ್ಳುವ ಹಂತವಿದು. ಮಗು ವಿಷಯದ ಹಿಂದಿರುವ ಪರಿಕಲ್ಪನೆ ಮತ್ತು ಕಾರಣಗಳನ್ನು ಅರ್ಥಮಾಡಿಕೊಳ್ಳುತ್ತದೆ. ಪ್ರಶ್ನೆಗಳನ್ನು ಕೇಳುವ ಮೂಲಕ ಮತ್ತು ಚರ್ಚೆಗಳಲ್ಲಿ ಭಾಗವಹಿಸುವ ಮೂಲಕ ತನ್ನ ಗೊಂದಲಗಳನ್ನು ನಿವಾರಿಸಿಕೊಳ್ಳುತ್ತದೆ.
ಅಭ್ಯಾಸ : (ರೂಢಿಸಿಕೊಳ್ಳುವುದು / ತರಬೇತಿ): ಕಲಿತ ವಿಷಯ ಮನಸ್ಸಿನಲ್ಲಿ ಗಟ್ಟಿಯಾಗಲು ನಿರಂತರ ಸ್ಮರಣೆ ಅಥವಾ ಅಭ್ಯಾಸದ ಅಗತ್ಯವಿದೆ. ಮಕ್ಕಳು ಕಲಿತ ವಿಷಯವನ್ನು ಬರವಣಿಗೆ, ಗಣಿತದ ಲೆಕ್ಕಗಳು, ಪ್ರಯೋಗಗಳು ಅಥವಾ ಪುನರಾವರ್ತನೆ (Revision) ಮೂಲಕ ಅಭ್ಯಾಸ ಮಾಡುತ್ತಾರೆ. ಇದು ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಕೇವಲ ಪುಸ್ತಕದಲ್ಲಿ ಕಲಿತದ್ದನ್ನು ನಿಜ ಜೀವನದಲ್ಲಿ ಅಥವಾ ಹೊಸ ಸಂದರ್ಭಗಳಲ್ಲಿ ಬಳಸಿ ನೋಡುವುದೇ ಪ್ರಯೋಗ.
ಉದಾಹರಣೆಗೆ, ಗಣಿತದಲ್ಲಿ ‘ಲಾಭ-ನಷ್ಟ’ ಕಲಿತ ನಂತರ ಮಗು ಮಾರುಕಟ್ಟೆಗೆ ಹೋಗಿ ವ್ಯವಹಾರ ಮಾಡುವುದು, ಅಥವಾ ವಿಜ್ಞಾನದ ತತ್ವವನ್ನು ಪ್ರಾಜೆಕ್ಟ್ ಮೂಲಕ ಮಾಡಿ ನೋಡುವುದು.
ಪ್ರಸಾರ : (ಹಂಚಿಕೊಳ್ಳುವುದು) ಕಲಿಕೆಯ ಅತ್ಯುನ್ನತ ಹಂತವೆಂದರೆ ತಾನು ಕಲಿತ ಜ್ಞಾನವನ್ನು ಇತರರಿಗೆ ಮನವರಿಕೆ ಮಾಡಿಕೊಡುವುದು. ವಿದ್ಯಾರ್ಥಿ ತನಗೆ ತಿಳಿದ ವಿಷಯವನ್ನು ತನ್ನ ಸಹಪಾಠಿಗಳಿಗೆ ವಿವರಿಸುವುದು, ಭಾಷಣ ಮಾಡುವುದು ಅಥವಾ ಗುಂಪು ಚರ್ಚೆಯಲ್ಲಿ ಹಂಚಿಕೊಳ್ಳುವುದು. “ಕಲಿಸುವುದರಿಂದ ಕಲಿಕೆ ಪೂರ್ಣವಾಗುತ್ತದೆ” ಎಂಬ ತತ್ವ ಇದರ ಹಿಂದಿದೆ.
ಪಂಚಪಾಡಿ ಕಲಿಕೆಯ ಮಹತ್ವ
”ಶುಷ್ಕ ಜ್ಞಾನಕ್ಕಿಂತ ಪ್ರಾಯೋಗಿಕ ಜ್ಞಾನವೇ ಮೇಲು.”
ಇದು ಮಕ್ಕಳಲ್ಲಿ ಸ್ವಯಂ ಕಲಿಕೆ ಮತ್ತು ಸೃಜನಶೀಲತೆಯನ್ನು ಹೆಚ್ಚಿಸುತ್ತದೆ.
ಕಂಠಪಾಠ ಮಾಡುವ ಪದ್ಧತಿಯನ್ನು ತಪ್ಪಿಸಿ, ವಿಷಯದ ಆಳವಾದ ತಿಳುವಳಿಕೆಗೆ ನೆರವಾಗುತ್ತದೆ.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸುತ್ತದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
ಜೂನ್ 2ಕ್ಕೆ ಶಾಲಾ ಪ್ರವೇಶಕ್ಕೆ ಕೊನೆದಿನ
2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ.
ಶಾಲೆಯ ವೈಶಿಷ್ಟ
ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕಾರವನ್ನು ಕಲಿಸಬೇಕೆಂಬ ಮಹಾದಾಸೆಯಿಂದ ಶಾಲೆ ಪ್ರಾರಂಭ ಮಾಡಿರುವ ವೀಣಾ ಮಂಜುನಾಥ್ ಅವರು ಈ ಶಾಲೆಯಲ್ಲಿ ಸ್ಮಾರ್ಟ್ ತರಗತಿ, ಪ್ರೊಜೆಕ್ಟರ್ ಬಳಕೆ, 5ರಿಂದ 10ನೇ ತರಗತಿ ಮಕ್ಕಳಿಗೆ ವಿಶೇಷ ಬೋಧನೆ, ಚಟುವಟಿಕೆ ಆಧಾರಿತ ಕಲಿಕೆ, ಕರಾಟೆ, ಯೋಗ ಹೀಗೆ ವಿಭಿನ್ನ ರೀತಿಯ ಕಲಿಕೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ.
ಪ್ರಸ್ತುತ ಪೂರ್ವ ಪ್ರಾಥಮಿಕದಿಂದ 10ನೇ ತರಗತಿಯವರೆಗೆ ಮಕ್ಕಳಿಗೆ ಶಿಕ್ಷಣ ನೀಡುತ್ತಾ ಬಂದಿರುತ್ತದೆ. ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗಾಗಿ ಶಾಲೆಯಲ್ಲಿ ಪೀಠೋಪಕರಣಗಳು, ಪಾಠೋಪಕರಣಗಳು ,ಗ್ರಂಥಾಲಯ, ಆಟೋಪಕರಣಗಳು, ಕಂಪ್ಯೂಟರ್ ಮುಂತಾದ ಸೌಕರ್ಯಗಳನ್ನು ಹೊಂದಿರುತ್ತದೆ.
ಕಳೆದ ಕೆಲವು ವರ್ಷಗಳಿಂದ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ನಮ್ಮ ಶಾಲೆಯಲ್ಲಿ ಪರಿಚಯಿಸಿದ್ದು ಎಲ್ ಕೆ ಜಿ ತರಗತಿಯಿಂದ ಹತ್ತನೇ ತರಗತಿಯವರೆಗೆ ಕರಾಟೆ ಮತ್ತು ಸ್ಪೋಕನ್ ಇಂಗ್ಲಿಷ್ ಶಿಕ್ಷಣವನ್ನು ಅಳವಡಿಸಲಾಗಿದೆ.
ಸಾಂಸ್ಕೃತಿಕ ವಾತಾವರಣವನ್ನು ಶಾಲೆಯಲ್ಲಿ ನಿರ್ಮಿಸಲು ಸಂಗೀತ , ಭರತನಾಟ್ಯ , ಯೋಗ , ಚಿತ್ರಕಲೆ , ಮುಂತಾದ ಚಟುವಟಿಕೆಗಳನ್ನು ಪರಿಚಯಿಸಲಾಗುವುದು. ಇಂಗ್ಲಿಷ್ , ಹಿಂದಿ ಭಾಷೆಗಳ ಕಲಿಕೆಗೆ ಮಕ್ಕಳಲ್ಲಿ ವಿಶೇಷ ಆಸಕ್ತಿಯನ್ನು ಬೆಳೆಸುವುದು.
ಒಟ್ಟಾರೆ ಸಂಸ್ಥೆಯು ವಿದ್ಯಾರ್ಥಿಗಳನ್ನು ಸರ್ವತೋಮುಖ ಅಭಿವೃದ್ಧಿಪಡಿಸಲು ಹಾಗೂ ದೇಶದ ಜವಾಬ್ದಾರಿಯುತ ಪ್ರಜೆಯನ್ನಾಗಿ ರೂಪಿಸುವ ಉದಾತ್ತ ಧ್ಯೇಯವನ್ನು ಇಟ್ಟುಕೊಂಡಿದ್ದೇವೆ ಎನ್ನುತ್ತಾರೆ ಶಾಲೆ ಮುಖ್ಯಸ್ಥರಾದ ವೀಣಾ ಮಂಜುನಾಥ್..
“2010-11ನೇ ಸಾಲಿನಲ್ಲಿ ರಿಜಿಸ್ಟರ್ ಆದ ಈ ಶಾಲೆಯಲ್ಲಿ ಪ್ರಥಮವಾಗಿ 2012-13ರಲ್ಲಿ ಎಲ್ ಕೆಜಿ, ಯುಕೆಜಿ, 2014-15ನೇ ಸಾಲಿನಲ್ಲಿ 1ನೇ ತರಗತಿ, 2019-20ರಲ್ಲಿ 6ರಿಂದ 8ನೇ ತರಗತಿ, 2024-25ರಲ್ಲಿ 9ರಿಂದ 10ನೇ ತರಗತಿ ಹಂತ ಹಂತವಾಗಿ ಪ್ರಾರಂಭ ಮಾಡಲಾಗಿದೆ. ಕೇವಲ ಪುಸ್ತಕ ಆಧಾರಿತ ಆಧುನಿಕ ಪದ್ಧತಿಯ ಕಲಿಕೆ ಮಾತ್ರವಲ್ಲದೆ ಹಿಂದಿನ ಗುರುಕುಲ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡಿ ಮಕ್ಕಳಿಗೆ ಉತ್ತಮ ರೀತಿಯ ವಿದ್ಯಾಭ್ಯಾಸ ನೀಡುವ ಮಹಾದಾಸೆ ಇದೆ.”
| ವೀಣಾ ಮಂಜುನಾಥ್ ಮುಖ್ಯಸ್ಥರು
ಪ್ರವೇಶ ಪ್ರಾರಂಭ : ಸದರಿ ಶಾಲೆಯಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ. ಮೇ 17ರಿಂದ ಆರಂಭವಾದ ಪ್ರವೇಶ ಪ್ರಕ್ರಿಯೆ ಜೂನ್ 2ಕ್ಕೆ ಕೊನೆಗೂಳ್ಳುತ್ತದೆ. ಸಂಪರ್ಕಿಸಿ : Mandara School Tyavanige 919148141665
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ
-
ದಿನದ ಸುದ್ದಿ6 days agoಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
-
ದಿನದ ಸುದ್ದಿ4 days agoಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?
-
ಅಂಕಣ4 days agoಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ
-
ದಿನದ ಸುದ್ದಿ2 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
-
ದಿನದ ಸುದ್ದಿ5 days agoಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ



