ದಿನದ ಸುದ್ದಿ
ಶಾಕಿಂಗ್ : ಪಾಕಿಸ್ತಾನದಲ್ಲಿ ಬಂಧಿತನಾಗಿರುವ ಉಗ್ರ ಓದಿದ್ದು ಮೈಸೂರಿನಲ್ಲಿ ಅಂತೆ !

ಸುದ್ದಿದಿನ, ಮೈಸೂರು : ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯು (ಸಿಐಎ) 2002ರಲ್ಲಿ ಪಾಕಿಸ್ತಾನದಲ್ಲಿ ಬಂಧಿಸಿರುವ ಅಲ್ಖೈದಾ ಸಂಘಟನೆ ಶಂಕಿತ ಉಗ್ರ ಅಬು ಜುಬೇದಾ ಓದಿದ್ದು ಮೈಸೂರಿನಲ್ಲಿ ಎಂಬುದು ಪತ್ತೆಯಾಗಿದೆ.
ಈತನ ಡೈರಿಯನ್ನು ಅಮೆರಿಕ ಅಲ್ಜಜೀರಾ.ಕಾಂ (http://america.aljazeera.com/articles/2013/11/5/notebook-one-thesecretdiariesofabuzubaydah.html) ಬಿಡುಗಡೆಗೊಳಿಸಿದೆ. ಮೈಸೂರಿನಲ್ಲಿ ಓದಿದ ದಿನಗಳು, ಸ್ನೇಹಿತರ ಕುರಿತು ಆತ ಡೈರಿಯಲ್ಲಿ ಪ್ರಸ್ತಾಪಿಸಿದ್ದಾನೆ.
ಹೀಗಾಗಿ, ಈತನ ಬಿಡುಗಡೆಗೆ ಆಗ್ರಹಿಸುತ್ತಿರುವ ಅಂತರರಾಷ್ಟ್ರೀಯ ಮಾನವಹಕ್ಕು ಹೋರಾಟಗಾರರ ಗಮನ ಮೈಸೂರಿನತ್ತ ನೆಟ್ಟಿದೆ. ಈ ಕುರಿತು ಅಮೆರಿಕದ ಕಿರುಚಿತ್ರ ನಿರ್ಮಾಪಕ ಏಡ್ರಿಯನ್ ಲೆವಿ ಈಚೆಗೆ ನಗರಕ್ಕೆ ಬಂದು ಮಾಹಿತಿ ಸಂಗ್ರಹಿಸಿದ್ದಾರೆ. ಅಬು ಜುಬೇದಾ ಓದಿದ ಕಾಲೇಜು, ವಾಸ್ತವ್ಯವಿದ್ದ ಮನೆ, ಸ್ನೇಹಿತರ ಕುರಿತು ಹುಡುಕಾಟ ನಡೆಸಿದ್ದರು.
ಏನಿದು ಘಟನೆ?
ಪ್ಯಾಲೆಸ್ಟೀನ್ನಿಂದ ಸೌದಿ ಅರೇಬಿಯಕ್ಕೆ ಬಂದು ನೆಲೆ ನಿಂತ ಅಬು ಜುಬೇದಾ 1989ರ ಜೂನ್ನಲ್ಲಿ ಮೈಸೂರಿಗೆ ಬಂದು ಶಾರದಾ ವಿಲಾಸ ಕಾಲೇಜಿನಲ್ಲಿ ಪದವಿ ಅಧ್ಯಯನಕ್ಕೆ ಸೇರುತ್ತಾನೆ. ಆದರೆ, ಅನುತ್ತೀರ್ಣನಾಗುತ್ತಾನೆ. ಈ ಸಮಯದಲ್ಲಿ ಉದಯಗಿರಿಯಲ್ಲಿ ಯೆಮನ್, ಕುವೈತ್ನಿಂದ ಬಂದ ಇತರ ಐವರ ಜತೆ ವಾಸಿಸುತ್ತಿರುತ್ತಾನೆ.
1991ರಲ್ಲಿ ಈತ ಜಿಹಾದ್ಗಾಗಿ ಆಫ್ಘಾನಿಸ್ತಾನಕ್ಕೆ ತೆರಳುತ್ತಾನೆ. ಅಲ್ಲಿ ನಡೆದ ಯುದ್ಧವೊಂದರಲ್ಲಿ ಗಾಯಗೊಂಡು ಪಾಕಿಸ್ತಾನದ ಫೈಸಲಾಬಾದ್ಗೆ ಹೋಗಿ ಜಿಹಾದಿಗಳು ತಂಗುವ ವಸತಿಗೃಹದ ವ್ಯವಸ್ಥಾಪಕನಾಗುತ್ತಾನೆ. ಅಮೆರಿಕದಲ್ಲಿ ವಿಶ್ವ ವ್ಯಾಪಾರ ಕೇಂದ್ರದ ಕಟ್ಟಡ ಧ್ವಂಸದ ಬಳಿಕ ಅಮೆರಿಕದ ಸಿಐಎ ತಂಡವು 2001ರಲ್ಲಿ ಪಾಕಿಸ್ತಾನದಲ್ಲಿ ಅಲ್ಖೈದಾದ ಮೂರನೇ ಪ್ರಮುಖ ಉಗ್ರ ಎಂಬ ಆರೋಪ ಹೊರಿಸಿ ಬಂಧಿಸಿತು.
ಇದುವರೆಗೆ ಈತನ ಮೇಲೆ ಯಾವುದೇ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಈತ ಅಲ್ಖೈದಾ ಜತೆ ಸಂಪರ್ಕ ಇಟ್ಟುಕೊಂಡಿದ್ದ ಎಂಬುದಕ್ಕೆ ಯಾವುದೇ ಪುರಾವೆ ಸಹ ಸಿಕ್ಕಿಲ್ಲ ಎಂದು ಅಲ್ಲಿನ ಹೋರಾಟಗಾರರು ಹೇಳುತ್ತಾರೆ. ಹೀಗಾಗಿ, ಈತನ ಮೇಲೆ ದೋಷಾರೋಪ ಹೊರಿಸಬೇಕು ಇಲ್ಲವೇ ಬಿಡುಗಡೆಗೊಳಿಸಬೇಕು ಎನ್ನುವ ಒಂದು ಚಳವಳಿ ಅಮೆರಿಕದಲ್ಲಿ ಆರಂಭವಾಗಿದೆ. ಇದರ ಒಂದು ಭಾಗವಾಗಿ ಅಬು ಜುಬೇದಾ ಕುರಿತು ಕಿರುಚಿತ್ರ ನಿರ್ಮಿಸಲು ಏಡ್ರಿಯನ್ ಲೆವಿ ಮಾಹಿತಿ ಕಲೆ ಹಾಕಲು ಈಚೆಗೆ ನಗರಕ್ಕೆ ಬಂದಿದ್ದರು.

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ3 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ