Connect with us

ಕ್ರೀಡೆ

ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ; ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶ

Published

on

ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶಿಸಿದ್ದಾರೆ.

ನಿನ್ನೆ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸಿಂಧು, ಜಪಾನಿನ ಎರಡನೇ ಶ್ರೇಯಾಂಕಿತ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ 21-15,20-22,21-13ಅಂಕಗಳಿಂದ ಜಯಗಳಿಸಿ ಮುನ್ನಡೆ ಸಾಧಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ ಪ್ರಸಕ್ತ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಹಾಗೂ ನೂತನ ಅವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ನ್ಯಾಷನಲ್ ಅವಾರ್ಡ್ ಪೋರ್ಟಲ್ ನಲ್ಲಿ ಆನ್ ಲೈನ್ ವೆಬ್ ಸೈಟ್ https://awards.gov.in ಮೂಲಕ ಅರ್ಜಿ ಸಲ್ಲಿಸಬಹುದು .

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222701, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿ.ಹೆಚ್ ಪಟೇಲ್ ಬಡಾವಣೆ, ಜಿಲ್ಲಾ ಬಾಲಭವನ, ದಾವಣಗೆರೆ ಇಲ್ಲಿ ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕವಿತಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಸುದ್ದಿದಿನ ಕನ್ನಡ ಬೆಳಗಿನ ಪ್ರಮುಖ ಸುದ್ದಿಗಳು

  1. ಇಂದು ಭಾರತದ ಪ್ರಪ್ರಥಮ ಪ್ರಧಾನಿ ಪಂಡಿತ್ ಜವಹಾರ್‌ಲಾಲ್ ನೆಹರು ಅವರ ಪುಣ್ಯತಿಥಿ. ಸ್ವಾತಂತ್ರ‍್ಯ ನಂತರ ಪ್ರಧಾನಿಯಾಗಿ ದೇಶವನ್ನು ಮುನ್ನೆಡೆಸಿದ್ದ ಅವರು, 1964ರ ಮೇ 27 ರಂದು ನಿಧನರಾದರು. 16 ವರ್ಷಗಳ ಕಾಲ ಪ್ರಧಾನಿಯಾಗಿ ಆಡಳಿತ ನಡೆಸಿದ್ದ ಅವರನ್ನು ಇಂದು ದೇಶ ಸ್ಮರಿಸುತ್ತಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ಪಂಡಿತ್ ಜವಹಾರ್‌ಲಾಲ್ ನೆಹರು ಪುಣ್ಯಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
  2. ಪರಿಸರ, ಸಾಮಾಜಿಕ ಆಡಳಿತಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾದರಿಯಾಗಿದೆ ಎಂದು ವಿಮಾನ ನಿಲ್ದಾಣದ ಪರಿಸರ ಮತ್ತು ಸಾಮಾಜಿಕ ಆಡಳಿತ ವಿಭಾಗದ ಮುಖ್ಯಸ್ಥ ಎಲ್. ಶ್ರೀಧರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ’ದಿ ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರೀಸ್ ಆಫ್ ಇಂಡಿಯಾ’ ದಿಂದ ಆಯೋಜಿಸಿದ್ದ ಇಎಸ್‌ಜಿ ಸಮಾವೇಶದಲ್ಲಿ ಮಾತನಾಡಿ, ಶೀಘ್ರದಲ್ಲೇ ವಿಮಾನ ನಿಲ್ದಾಣದಲ್ಲಿ ಮಳೆ ನೀರಿನ ಸಂಗ್ರಹದ ಮೂಲಕ ಶೇಖಡ 100ರಷ್ಟು ಶುದ್ಧ ಕುಡಿಯುವ ನೀರು ಪೂರೈಸಲಾಗುವುದು ಎಂದರು.
  3. ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್, ಇಂದು ಬೆಳಗಾವಿ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಬೆಳಗಾವಿಯಲ್ಲಿ ರಾಷ್ಟ್ರೀಯ ಸಾಂಪ್ರದಾಯಿಕ ಔಷಧ ಸಂಸ್ಥೆ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕೆಎಲ್‌ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
  4. ಜಮ್ಮು-ಕಾಶ್ಮೀರದ ಅನಂತ್ ನಾಗ್-ರಾಜೌರಿ ಲೋಕಸಭಾ ಕ್ಷೇತ್ರದಲ್ಲಿ ದಾಖಲೆ ಮಟ್ಟದ ಮತದಾನವಾಗಿರುವ ಹಿನ್ನೆಲೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜನರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗೆ ಜನರ ಪಾಲ್ಗೊಳ್ಳುವಿಕೆ ಪ್ರಮುಖ ಕೊಡುಗೆ ನೀಡಲಿದೆ. ಜಮ್ಮು-ಕಾಶ್ಮೀರದ ನಾಗರಿಕರು ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರಿಸಿದ್ದಾರೆ ಎಂದು ಹೇಳಿದ್ದಾರೆ.
  5. ಉತ್ತರ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತ ಬೀತಿ ಹಿನ್ನೆಲೆಯಲ್ಲಿ ಸನ್ನದ್ಧತೆ ಕುರಿತು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಮಹತ್ವದ ಸಭೆ ನಡೆಸಿದರು. ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ ಅಧಿಕಾರಿಗಳು ಚಂಡಮಾರುತ ಎದುರಿಸಲು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
  6. ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ 8 ಲಕ್ಷ ಜನರನ್ನು ಸ್ಥಳಾಂತರಿಸಲಾಗಿದೆ. ಬಾಂಗ್ಲಾದೇಶದ ವಿಪತ್ತು ನಿರ್ವಹಣೆ ಹಾಗೂ ಪರಿಹಾರ ಖಾತೆ ರಾಜ್ಯ ಸಚಿವ ಮಹಿಬೂರ್ ರೆಹಮಾನ್ ಮಾತನಾಡಿ, ಜನರ ಸುರಕ್ಷತೆಗಾಗಿ ವ್ಯಾಪಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದರು.
  7. ಲೋಕಸಭೆ ಚುನಾವಣೆಯ ಏಳನೇ ಹಾಗೂ ಅಂತಿಮ ಹಂತದಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್‌ನ ತಲಾ 13, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3 ಮತ್ತು ಚಂಡೀಗಢ್ ಕೇಂದ್ರಾಡಳಿತ ಪ್ರದೇಶದ 1 ಲೋಕಸಭಾ ಕ್ಷೇತ್ರಗಳಲ್ಲಿ ಜೂನ್ 1 ರಂದು ಮತದಾನ ನಡೆಯಲಿದೆ.
  8. ಕೆನರಾ ಬ್ಯಾಂಕ್ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರ್ ಡಿಟಿಪಿ/ ಗ್ರಾಫಿಕ್ ಡಿಸೈನಿಂಗ್ ಕುರಿತು 45 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ.
  9. ರಾಜ್‌ಕೋಟ್ ಅಗ್ನಿ ದುರಂತದಲ್ಲಿ. ಮೃತಪಟ್ಟವರನ್ನು ಗುರುತು ಹಚ್ಚಲು ಡಿಎನ್‌ಎ ಮಾದರಿಯನ್ನು ಅಗತ್ಯ ಪರಿಕ್ಷೆಗಾಗಿ ಕಳುಹಿಸಲಾಗಿದೆ. ಈ ದುರಂತದ ವಿಚಾರವನ್ನು ಗುಜರಾತ್ ಹೈಕೋರ್ಟ್ ಖುದ್ದಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ಈ ಪ್ರಕರಣ ಇಂದು ವಿಚಾರಣೆಗೆ ಬರಲಿದೆ.
  10. ಹಿರಿಯ ಬಿಜೆಪಿ ನಾಯಕ ಹಾಗೂ ಪ್ರಧಾನಿ ನರೇಂದ್ರ ಮೋದಿ ಮಿರ್ಜಾಪುರ್‌ದಲ್ಲಿ ನಿನ್ನೆ ಚುನಾವಣಾ ಸಭೆ ಉದ್ದೇಶಿಸಿ ಮಾತನಾಡಿ, ಐಎನ್‌ಡಿಐ ಮೈತ್ರಿಕೂಟ ಜಾತಿವಾದಿ ಹಾಗೂ ಕೋಮುವಾದಿ ಎನ್ನುವುದನ್ನು ದೇಶದ ಜನತೆ ಅರ್ಥ ಮಾಡಿಕೊಂಡಿದ್ದಾರೆ. ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಎನ್‌ಡಿಎ ಬಡವರು, ದುರ್ಬಲರು ಮತ್ತು ಹಿಂದುಳಿದ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.
  11. ಹಿರಿಯ ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿ ಅವರು, ಹಿಮಾಚಲ ಪ್ರದೇಶದ ಶಿಮ್ಲಾ ಲೋಕಸಭಾ ಕ್ಷೇತ್ರದಲ್ಲಿ ನಿನ್ನೆ ಚುನಾವಣಾ ರ‍್ಯಾಲಿ ನಡೆಸಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದು ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಹೋರಾಡುತ್ತಿರುವ ಚುನಾವಣೆಯಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಮಧ್ಯಾಹ್ನದ ಪ್ರಮುಖ ಸುದ್ದಿಗಳು 

Published

on

ಸುದ್ದಿದಿನ ಕನ್ನಡ ನ್ಯೂಸ್ ಮಧ್ಯಾಹ್ನದ ಪ್ರಮುಖ ಸುದ್ದಿಗಳು 

  1. ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ಮತದಾನ ಪ್ರಗತಿಯಲ್ಲಿದೆ. 11 ಗಂಟೆಯ ವೇಳೆಗೆ ಬಂದ ವರದಿಯ ಪ್ರಕಾರ ಒಟ್ಟಾರೆ 6ನೇ ಹಂತದ 58 ಕ್ಷೇತ್ರಗಳಲ್ಲಿ ಶೇಕಡ 25.76ರಷ್ಟು ಮತದಾನವಾಗಿದೆ. ಬಿಹಾರದಲ್ಲಿ ಶೇಕಡ 23.67, ಹರಿಯಾಣದ ಶೇಕಡ 22.09, ಜಾರ್ಖಂಡ್‌ನಲ್ಲಿ ಶೇಕಡ 27.80, ಒಡಿಶಾದ ಶೇಕಡ 21.30, ಉತ್ತರಪ್ರದೇಶದ 27.06, ಪಶ್ಚಿಮಬಂಗಾಳದಲ್ಲಿ 36.88, ದೆಹಲಿಯಲ್ಲಿ 21.69 ಹಾಗೂ ಜಮ್ಮು-ಕಾಶ್ಮೀರದಲ್ಲಿ ಶೇಕಡ 23.11ರಷ್ಟು ಮತದಾನವಾಗಿದೆ.
  2. ದೆಹಲಿಯಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಸಚಿವರಾದ ಡಾ. ಎಸ್. ಜೈಶಂಕರ್, ಹರ್‌ದೀಪ್ ಸಿಂಗ್ ಪುರಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಆಪ್ ನಾಯಕಿ ಅತೀಶಿ ಸಿಂಗ್ ಸೇರಿದಂತೆ ಹಲವು ಪ್ರಮುಖರು ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಮತದಾನದಲ್ಲಿ ಭಾಗವಹಿಸಲು ಪ್ರೇರೇಪಿಸಿದ್ದಾರೆ.
  3. ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹಾವೇರಿ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
  4. ಎರಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಾಗೂ ಗಾಳಿಯಿಂದ ಉಂಟಾದ ಹಾನಿಗೆ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆಯೂ ಆಗಿರುವ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.
  5. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ – ಎನ್‌ಐಎ ಬಂಧಿಸಿದೆ. ಹುಬ್ಬಳ್ಳಿಯ 35 ವರ್ಷದ ಶೋಯಬ್ ಅಹಮದ್ ಮಿರ್ಜಾ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯಾಗಿದ್ದು, ಲಷ್ಕರ್ ಎ ತೊಯ್ಬಾದ ಭಯೋತ್ಪಾದನಾ ಸಂಚು ಪ್ರಕರಣದಲ್ಲಿ ಮಾಜಿ ಆರೋಪಿಯಾಗಿದ್ದಾನೆ ಎಂದು ಎನ್‌ಐಎ ತಿಳಿಸಿದೆ.
  6. ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್ಸ್ ಪಂದ್ಯದಲ್ಲಿ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು, ವಿಶ್ವದ 20ನೇ ಶ್ರೇಯಾಂಕಿತ ಥೈಲ್ಯಾಂಡ್‌ನ ಬುಸಾನನ್ ಆಂಗ್‌ಬಾಮ್‌ರುಂಗ್‌ಫಾನ್ ವಿರುದ್ಧ ಫೈನಲ್ಸ್ ಪ್ರವೇಶಿಸಲು ಸೆಣಸಲಿದ್ದಾರೆ.
  7. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 36 ರನ್‌ಗಳ ಗೆಲುವು ದಾಖಲಿಸಿದ್ದು, ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending