ದಿನದ ಸುದ್ದಿ
ಸುಳ್ಳು ಸುದ್ದಿಗೆ ಕಡಿವಾಣ ಹಾಕಲು ಸಮಿತಿ ರಚನೆ

ಸುದ್ದಿದಿನ ಡೆಸ್ಕ್ | ಜನಸಮೂಹದ ಹಿಂಸಾಚಾರದ ಘಟನೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವುದಕ್ಕಾಗಿ ಕಾನೂನು ರಚನೆ ಮಾಡಲು ಕೇಂದ್ರ ಸರ್ಕಾರ ಎರಡು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್ ಗೌಬ್ ಅಧ್ಯಕ್ಷತೆಯಲ್ಲಿ ತಲಾ ಒಂದು ಸಮಿತಿ ರಚನೆಯಾಗಲಿದೆ.
ಸುಳ್ಳು ಸುದ್ದಿ, ವದಂತಿಗಳಿಂದಾಗಿ ಅನೇಕ ಸಾವು, ನೋವುಗಳು ಸಂಭವಿಸಿದ್ದವು. ಈ ಕುರಿತು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿ, ಇಂತಹ ಪ್ರಕರಣಗಳು ಜರುಗದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ತು. ಸುಪ್ರೀಂ ಕೋರ್ಟ್ ಸೂಚಿಸಿದ ಒಂದು ವಾರದ ನಂತರ ಕೇಂದ್ರ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಟಿಎನ್ಐಇ ವರದಿ ಮಾಡಿದೆ.
ಪರಿಸ್ಥಿತಿ ನಿಭಾಯಿಸುವಲ್ಲಿ ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳನ್ನು ರೂಪಿಸುವ ಸಲುವಾಗಿ ಹಾಗೂ ಶಿಫಾರಸುಗಳನ್ನು ಸಿದ್ಧಪಡಿಸುವಂತೆ ಗೃಹ ಸಚಿವಾಲಯದ ಕಾರ್ಯದರ್ಶಿ ಗೌಬಾ ನೇತೃತ್ವದ ಸಮಿತಿಗೆ ತಿಳಿಸಿದೆ. ಈ ಸಮಿತಿಯ ಸದಸ್ಯರಾಗಿ ನ್ಯಾಯಂಗ, ಕಾನೂನು ವ್ಯವಹಾರ, ಶಾಸಕಾಂಗ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಗಳ ಕಾರ್ಯದರ್ಶಿಗಳು ಕಾರ್ಯನಿರ್ವಹಿಸಲಿದ್ದಾರೆ. ಸಮಿತಿಯು ನಾಲ್ಕು ವಾರದೊಳಗೆ ಶಿಫಾರಸುಗಳ ವರದಿಯನ್ನು ಸಲ್ಲಿಸಲಿದೆ.
ಕಾರ್ಯದರ್ಶಿಗಳ ನೇತೃತ್ವದ ಸಮಿತಿ ಸಲ್ಲಿಸಿದ ಶಿಫಾರಸುಗಳನ್ನು ಅನುಮೋದನೆ ಮಾಡಲು ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಈ ಸಮಿತಿ ಸದಸ್ಯರಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಕಾನೂನು ಸಚಿವ ರವಿಶಂಕರ್ ಪ್ರಸಾದ್, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ತವಾರ್ ಚಂದ್ ಗೆಹ್ಲೋಟ್ ಕಾರ್ಯನಿರ್ವಹಿಸಲಿದ್ದಾರೆ. ಈ ಸಮಿತಿ ಒಪ್ಪಿಗೆ ನೀಡಿದ ವರದಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ