Connect with us

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

ದಿನದ ಸುದ್ದಿ

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್

Published

on

medical-college-hostel-canteen-food-safety-inspection-karnataka
ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆಹಾರ ಸುರಕ್ಷತಾ ಇಲಾಖೆ: ಅವಧಿ ಮೀರಿದ ರವೆ, ಹಾಲು ಜಪ್ತಿ

ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34 ಕ್ಯಾಂಟೀನ್‌ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಹೈಲೈಟ್ಸ್

  • ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ 34 ಹಾಸ್ಟೆಲ್ ಕ್ಯಾಂಟೀನ್‌ಗಳ ಪರಿಶೀಲನೆ
  • ಲೋಪದೋಷ ಕಂಡುಬಂದ 5 ಕ್ಯಾಂಟೀನ್‌ಗಳಿಗೆ ನೋಟಿಸ್
  • ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್ ನಿಯಮ ಉಲ್ಲಂಘನೆ
  • 07 ಕೆ.ಜಿ. ಅವಧಿ ಮೀರಿದ ರವೆ, 08 ಲೀಟರ್ ಹಾಲು ಜಪ್ತಿ
  • ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ

http://Visit : www.suddidina.com

ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತೆಗೆ ಒತ್ತು

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಕ್ಯಾಂಟೀನ್ ಆಹಾರವನ್ನೇ ಅವಲಂಬಿಸಿರುತ್ತಾರೆ. ಹೀಗಾಗಿ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಆಹಾರ ಪದಾರ್ಥಗಳ ಸಂಗ್ರಹಣೆ, ಲೇಬಲಿಂಗ್ ಹಾಗೂ ಅವಧಿ ಪರಿಶೀಲನೆ ಅತ್ಯಂತ ಮಹತ್ವದ್ದಾಗಿದೆ.

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ವಿವಿಧ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳನ್ನು ಪರಿಶೀಲಿಸಿ, ಆಹಾರ ತಯಾರಿಕೆಯಿಂದ ಹಿಡಿದು ಪದಾರ್ಥಗಳ ಸಂಗ್ರಹಣೆವರೆಗೆ ಹಲವು ಅಂಶಗಳನ್ನು ಪರಿಶೀಲಿಸಿದ್ದಾರೆ. ನಿಯಮ ಪಾಲನೆಯಲ್ಲಿ ವ್ಯತ್ಯಾಸ ಕಂಡುಬಂದ ಕ್ಯಾಂಟೀನ್‌ಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಅವಧಿ ಮೀರಿದ ರವೆ, ಹಾಲು ಪತ್ತೆ

ಪರಿಶೀಲನೆ ವೇಳೆ ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಇದೇ ವೇಳೆ ಅಡುಗೆ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ 07 ಕೆ.ಜಿ. ಅವಧಿ ಮೀರಿದ ರವೆ ಹಾಗೂ 08 ಲೀಟರ್ ಅವಧಿ ಮೀರಿದ ಹಾಲು ಪತ್ತೆಯಾಗಿದೆ.

ವಿದ್ಯಾರ್ಥಿಗಳ ಸೇವನೆಗೆ ಬಳಸುವ ಆಹಾರ ಪದಾರ್ಥಗಳು ಅವಧಿ ಮೀರಿದ ಬಳಿಕವೂ ಅಡುಗೆಮನೆಯಲ್ಲಿ ಸಂಗ್ರಹಿಸಿರುವುದು ಗಂಭೀರ ಲೋಪವಾಗಿದೆ. ಅಧಿಕಾರಿಗಳು ಈ ಪದಾರ್ಥಗಳನ್ನು ತಕ್ಷಣ ಜಪ್ತಿ ಮಾಡಿಕೊಂಡಿದ್ದು, ಸಂಬಂಧಿತ ಕ್ಯಾಂಟೀನ್ ವಿರುದ್ಧ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಸಂಬಂಧಿತ ಆಹಾರ ಉದ್ದಿಮೆದಾರರ ವಿರುದ್ಧ ಅನ್ವಯವಾಗುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಪ್ರಕರಣಗಳನ್ನು ಸಕ್ಷಮ ಪ್ರಾಧಿಕಾರವಾದ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯಕ್ಕೆ ಆದ್ಯತೆ

ವೈದ್ಯಕೀಯ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ಭವಿಷ್ಯದ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಅವರ ಹಾಸ್ಟೆಲ್ ಆಹಾರದ ಗುಣಮಟ್ಟದ ಬಗ್ಗೆ ಇಲಾಖೆ ಹೆಚ್ಚಿನ ನಿಗಾ ವಹಿಸಿರುವುದು ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲೂ ಇಂತಹ ಪರಿಶೀಲನೆಗಳು ಮುಂದುವರಿಯುವ ಸಾಧ್ಯತೆ ಇದ್ದು, ಕ್ಯಾಂಟೀನ್ ನಿರ್ವಹಣೆ ಮಾಡುವವರು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ.

Continue Reading

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

Trending