Connect with us

ದಿನದ ಸುದ್ದಿ

ಐಟಿ ಹಬ್ ಕನಸು ನನಸಾಗಲಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜನರ ಸಾಫ್ಟ್ ವೇರ್ ಪಾರ್ಕ್ ಕನಸು ಕೆಲವೇ ದಿನಗಳಲ್ಲಿ ನನಸಾಗಲಿದೆ. ದಾವಣಗರೆಯಲ್ಲಿ ಇಂಜನಿಯರಿಂಗ್ ಮಾಡಿದವರು ಉದ್ಯೋಗಕ್ಕಾಗಿ ಬೆಂಗಳೂರು ಅಥವಾ ನೆರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳ ಅವಲಂಭನೆ ಇಲ್ಲದೆ ಜಿಲ್ಲೆಯಲ್ಲಿಯೇ ದುಡಿಯುವ ದಿನಗಳು ಸಮೀಪಿಸುತ್ತಿವೆ ಎಂದು ಸಂಸದರಾದ ಡಾ: ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾಡಳಿತ, ಸಾಫ್ಟ್ವೇರ್ ಟೆಕ್ನಾಲಜಿ ಆಫ್ ಇಂಡಿಯಾ ಬೆಂಗಳೂರು, ವಿಷನ್ ದಾವಣಗೆರೆ ಹಾಗೂ ದಾವಣಗೆರೆಯ ಐಟಿಬಿಟಿ ಸಂಸ್ಥೆಗಳ ಸಂಯುಕ್ತಾಶಯದಲ್ಲಿ ಬಿಐಟಿ ಇಂಜಿನಿಯರಿಂಗ್ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೆಂಟರ್ ಆಫ್ ಎಕ್ಸಲೆನ್ಸ್ ಮೂಲಕ ನಾವೀನ್ಯತೆಗೆ ಅವರು ಚಾಲನೆ ನೀಡಲು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಮತ್ತು ದಾವಣಗೆರೆಯ ಐಟಿಬಿಟಿ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಮೇರು ಪತದಲ್ಲಿಡಲು ವಿನ್ಯಾಸಗೊಳ್ಳಲಾಗಿತ್ತಿದೆ. ಜಿಲ್ಲೆಯಲ್ಲಿ ಐಟಿ ಪಾರ್ಕ್ ಮಾಡಲು ಪೂರಕ ವಾತಾವರಣವಿದೆ. ಅದನ್ನು ನಾವೆಲ್ಲಾ ಸರಿಯಾದ ರೀತಿ ಬಳಕೆ ಮಾಡಿಕೊಳ್ಳಬೇಕು. ಟೈಯರ್ 2 ಅಥವಾ 3 ಜಿಲ್ಲೆಗಳಲ್ಲಿ ಐಟಿ ಹಬ್ ಸ್ಥಾಪಿಸಿದಲ್ಲಿ ಜಿಲ್ಲೆಯು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸಾಫ್ಟ್ವೇರ್ ಪಾರ್ಕ್ ಜೊತೆಗೆ 25 ರಿಂದ 30 ಎಕರೆ ವಿಸ್ತೀರ್ಣದಲ್ಲಿ ಅತೀ ಶೀಘ್ರದಲ್ಲಿಯೇ ಡಾಟಾ ಸೆಂಟರ್ ಸ್ಥಾಪಿಸಲಾಗುವುದು ಎಂದರು.

ಲೋಕಸಭಾ ಚುನಾವಣಾ ಸಮಯದಲ್ಲಿ ಚುನಾವಣಾ ಪ್ರಚಾರಕ್ಕೆ ಹೋದಾಗ ಮತದಾರರು ನಮ್ಮ ಮಕ್ಕಳು ಬೇರೆ ಊರುಗಳಲ್ಲಿ ಉದ್ಯೋಗ ಮಾಡುತ್ತಿದ್ದು ಇಲ್ಲಿ ಐಟಿ ಪಾರ್ಕ್ ಮಾಡುವಂತೆ ಒತ್ತಾಯಿಸಿದ್ದರು. ಅದರ ಫಲವೇ ಇಂದು ದಾವಣಗೆರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೊಳ್ಳುತ್ತಿದೆ. ಲೋಕಸಭೆಯ ಪ್ರಶ್ನಾವಳಿ ಸಂದರ್ಭದಲ್ಲಿ ನಾನು ದಾವಣಗೆರೆಗೆ ಐಟಿ ಪಾರ್ಕ್ ಸ್ಥಾಪನೆ ಬಗ್ಗೆ ಪ್ರಸ್ಥಾಪಿಸಿದ್ದೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿ ಈಗಾಗಲೆ ಐಟಿ ಹಬ್ ಸ್ಥಾಪಿಸಲು ಪ್ರಸ್ಥಾಪಿಸಲಾಗಿದ್ದು ಅದನ್ನು ನೀವು ಅಭಿವೃದ್ಧಿಪಡಿಸಿಕೊಂಡು ಹೋಗುವಂತೆ ನಾಲ್ಕು ಪುಟಗಳ ಮಾಹಿತಿಯನ್ನು ನೀಡಿದರು ಎಂದರು.

ಮುಂದಿನ ಆರು ತಿಂಗಳಲ್ಲಿ ಸ್ಥಳೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ ಆಯೋಜಿಸಲಾಗುವುದು. ಇದೇ ಅಕ್ಟೋಬರ್ 15, 16 ರಂದು ಕೃತಕ ಬುದ್ದಿಮತ್ತೆ (ಎಐ), ಬಿಗ್ ಡೆಟಾ, ಎಡಿಎ ಟೂಲ್ಸ್, ಇಂಟರ್‌ನೆಟ್ ಆಫ್ ಎಥಿಕಲ್ ಥಿಂಗ್ಸ್ , ಡಿಸೈನ್ ಐಪಿಗಳು ರೊಬೋಟಿಕ್ಸ್ ಇನ್ ಎಜುಕೇಷನ್ ಇಂಡಸ್ಟ್ರೀ ಹಾರ್ಡ್ವೇರ್ ಮತ್ತು ಸಾಫ್ಟೆವೇರ್ ತಂತ್ರಾಂಶಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.

ದಾವಣಗೆರೆಯಲ್ಲಿ ಐಟಿ ಹಬ್ ಮಾಡುವ ಉದ್ದೇಶದಿಂದ ಅಧಿಕಾರಿಗಳ ತಂಡದೊಂದಿಗೆ ಬೆಂಗಳೂರಿನ ಐಟಿಬಿಟಿ ಕಂಪನಿಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ, ಅವಶ್ಯಕತೆ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಅದೇ ಉದ್ದೇಶದಿಂದ ದಾವಣಗೆರೆಯಲ್ಲಿ ಮೊದಲಿಗೆ ಎರಡು ಎಕರೆ ಜಾಗವನ್ನು ಗುರುತಿಸಿ ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮೀಟಿಂಗ್ ಹಾಲ್, ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದೊಂದಿಗೆ ಎಸ್‌ಟಿಪಿಐ ಯನ್ನು ಸ್ಥಾಪಿಸಲಾಯಿತು.

ಕೈಗಾರಿಕೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ಪರಿಸರ ವ್ಯವಸ್ಥೆ ನಿರ್ಮಾಣ ಮಾಡಿ ತಂತ್ರಜ್ಞಾನ ದೃಶ್ಯವನ್ನು ಅಭಿವೃದ್ಧಿಪಡಿಸುವ ಸೆಂಟರ್ ಆಫ್ ಎಕ್ಸಲೆನ್ಸ್ಗಳ ಮೂಲಕ ಜಿಲ್ಲೆಯಲ್ಲಿ ಸ್ಟಾರ್ಟ್ಅಪ್ ಸ್ಥಾಪಿಸುವುದು. ಇಂತಹ ಸಂಸ್ಥೆಗಳ ಮೂಲಕ ಉದ್ಯಮದ ತಜ್ಞರು, ಶೈಕ್ಷಣಿಕ ಸಂಶೋಧಕರು, ಸರ್ಕಾರಿ ಸಂಸ್ಥೆಗಳು ಮತ್ತು ನವೋದ್ಯಮಿಗಳನ್ನು ಭೇಟಿ ಮಾಡಿ ದಾವಣಗೆರೆ ಐಟಿ ಹಬ್‌ಗೆ ಅವಶ್ಯವಿರುವ ಸೌಕರ್ಯಗಳನ್ನು ಪಡೆಯಲು ಸಲಹೆ ಸೂಚನೆಗಳನ್ನು ಪಡೆಯಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯುತ್ತಾರೆ. ಇಲ್ಲಿ ವ್ಯಾಸಂಗ ಮಾಡಿದಂತಹ ಅನೇಕ ನಿರುದ್ಯೋಗಿಗಳಿಗೆ ಕೌಶಲ್ಯ ಮತ್ತು ಭಾಷೆಯ ತೊಂದರೆ ಉಂಟಾಗುತ್ತಿದೆ. ಅಂತಹ ಯಾವುದೇ ತೊಂದರೆಗಳು ವಿದ್ಯಾರ್ಥಿಗಳಿಗೆ ಆಗದಂತೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಸಹ ನೀಡಲಾಗುವುದು ಎಂದರು.

ಕೃತಿಕ ಬುದ್ದಿಮತ್ತೆಯಿಂದ ಕೃಷಿ, ಆರೋಗ್ಯ, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಇಂಟೆಲ್ ಕಂಪನಿಯಿಂದ ಈಗಾಗಲೇ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತಿದೆ. ಇಂತಹ 35 ಕ್ಕೂ ಹೆಚ್ಚು ಹೆಸರಾಂತ ಕಂಪನಿಗಳು ದಾವಣಗೆರೆಯಲ್ಲಿ ಘಟಕ ತೆರೆಯಲು ಉತ್ಸುಕತೆ ತೋರುತ್ತಿವೆ ಎಂದರು.

ಎಸ್‌ಟಿಪಿಐ ನಿರ್ದೇಶಕರಾದ ಸಂಜಯ್ ತ್ಯಾಗಿ ಯವರು ಮಾತನಾಡಿ ದಾವಣಗೆರೆಯಲ್ಲಿ ಐಟಿ ಪಾರ್ಕ್ ಮಾಡಲು ನಾವು ಉತ್ಸಕರಾಗಿದ್ದೇವೆ. ಇಲ್ಲಿನ ವಾತಾವರಣವು ಸಹ ಅದಕ್ಕೆ ಪೂರಕವಾಗಿದೆ. ಇಲ್ಲಿ ಅನೇಕ ಕಂಪನಿಗಳು ಘಟಕ ಪ್ರಾರಂಭಿಸಲು ಉತ್ಸಾಕರಾಗಿದ್ದಾರೆ. ಈಗಾಗಲೇ ಅನೇಕ ಸುತ್ತಿನ ಮಾತುಕತೆಯಾಗಿದೆ, ಇದರ ಪ್ರಯೋಜನೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ, ದಾವಣಗೆರೆ ಸಾಫ್ಟ್ವೇರ್ ಪಾರ್ಕ್ ಮಾಡಲು ಲೋಕಸಭಾ ಸದಸ್ಯರು, ಜಿಲ್ಲಾಧಿಕಾರಿಗಳು ಸೇರಿದಂತೆ ಒಂದು ವಿಷನ್ ಟೀಮ್ ಮಾಡಲಾಗಿದೆ. ಅದರ ಫಲವೇ ಸಾಪ್ಟ್ವೇರ್ ಪಾರ್ಕ್ ದಾವಣಗೆರೆಯಲ್ಲಿ ಆಗಲು ಸಾಧ್ಯವಾಯಿತು. ವಿಷನ್ ದಾವಣಗೆರೆ ಬಗ್ಗೆ ಫೇಸ್‌ಬುಕ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಾಫ್ಟ್ವೇರ್ ಪಾರ್ಕ್ ಬಗ್ಗೆ ಮಾಹಿತಿ ಇದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡುವಂತೆ ತಿಳಿಸಿದರು. ವಿಷನ್ ಟೀಂ ನಾಸಿಕ್ ಮತ್ತು ಚೆನ್ನೈನ ಡಾಟಾ ಸೆಂಟರ್‌ಗೆ ಭೇಟಿ ನೀಡಲಿವೆ. ಎಸ್‌ಟಿಪಿಐ ಮತ್ತು ಕಿಯೋನಿಕ್ಸ್ ಸಂಸ್ಥೆಗಳಿಗೆ ತಲಾ ನಾಲ್ಕು ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದರು. 25 ರಿಂದ 30 ಎಕರೆ ಜಮೀನಿನಲ್ಲಿ ಜಿಲ್ಲೆಯಲ್ಲಿ ಗಾಲ್ಪ್ ಕೋರ್ಸ್ ಅನ್ನು ತೆರೆಯಲು ಸಹ ಚಿಂತನೆ ನಡೆಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಎಸ್‌ಟಿಪಿಐ ಬಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಜೈನ್ ತಾಂತ್ರಿಕ ಕಾಲೇಜು, ಯುಬಿಡಿಟಿ, ಜಿಎಂಐಟಿ ಕಾಲೇಜು ಮತ್ತು ಬಿಐಇಟಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಇಂಟಲ್ ಸಂಸ್ಥೆಯ ಸಾಮ್ಯೂಯಲ್ ದೊರೆರಾಜ್, ಕೆಡಿಇಎಂ ಪ್ರೊಗ್ರಾಮ್ ಡೈರೆಕ್ಟರ್ ಸುವಿನ್ ನಾರಾಯಣ್ ಬಿಐಇಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ. ಅರವಿಂದ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending