ದಿನದ ಸುದ್ದಿ
ಐಟಿ ಹಬ್ ಕನಸು ನನಸಾಗಲಿದೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ದಾವಣಗೆರೆ ಜನರ ಸಾಫ್ಟ್ ವೇರ್ ಪಾರ್ಕ್ ಕನಸು ಕೆಲವೇ ದಿನಗಳಲ್ಲಿ ನನಸಾಗಲಿದೆ. ದಾವಣಗರೆಯಲ್ಲಿ ಇಂಜನಿಯರಿಂಗ್ ಮಾಡಿದವರು ಉದ್ಯೋಗಕ್ಕಾಗಿ ಬೆಂಗಳೂರು ಅಥವಾ ನೆರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳ ಅವಲಂಭನೆ ಇಲ್ಲದೆ ಜಿಲ್ಲೆಯಲ್ಲಿಯೇ ದುಡಿಯುವ ದಿನಗಳು ಸಮೀಪಿಸುತ್ತಿವೆ ಎಂದು ಸಂಸದರಾದ ಡಾ: ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಸಾಫ್ಟ್ವೇರ್ ಟೆಕ್ನಾಲಜಿ ಆಫ್ ಇಂಡಿಯಾ ಬೆಂಗಳೂರು, ವಿಷನ್ ದಾವಣಗೆರೆ ಹಾಗೂ ದಾವಣಗೆರೆಯ ಐಟಿಬಿಟಿ ಸಂಸ್ಥೆಗಳ ಸಂಯುಕ್ತಾಶಯದಲ್ಲಿ ಬಿಐಟಿ ಇಂಜಿನಿಯರಿಂಗ್ ಕಾಲೇಜಿನ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೆಂಟರ್ ಆಫ್ ಎಕ್ಸಲೆನ್ಸ್ ಮೂಲಕ ನಾವೀನ್ಯತೆಗೆ ಅವರು ಚಾಲನೆ ನೀಡಲು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಮತ್ತು ದಾವಣಗೆರೆಯ ಐಟಿಬಿಟಿ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಮೇರು ಪತದಲ್ಲಿಡಲು ವಿನ್ಯಾಸಗೊಳ್ಳಲಾಗಿತ್ತಿದೆ. ಜಿಲ್ಲೆಯಲ್ಲಿ ಐಟಿ ಪಾರ್ಕ್ ಮಾಡಲು ಪೂರಕ ವಾತಾವರಣವಿದೆ. ಅದನ್ನು ನಾವೆಲ್ಲಾ ಸರಿಯಾದ ರೀತಿ ಬಳಕೆ ಮಾಡಿಕೊಳ್ಳಬೇಕು. ಟೈಯರ್ 2 ಅಥವಾ 3 ಜಿಲ್ಲೆಗಳಲ್ಲಿ ಐಟಿ ಹಬ್ ಸ್ಥಾಪಿಸಿದಲ್ಲಿ ಜಿಲ್ಲೆಯು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಸಾಫ್ಟ್ವೇರ್ ಪಾರ್ಕ್ ಜೊತೆಗೆ 25 ರಿಂದ 30 ಎಕರೆ ವಿಸ್ತೀರ್ಣದಲ್ಲಿ ಅತೀ ಶೀಘ್ರದಲ್ಲಿಯೇ ಡಾಟಾ ಸೆಂಟರ್ ಸ್ಥಾಪಿಸಲಾಗುವುದು ಎಂದರು.
ಲೋಕಸಭಾ ಚುನಾವಣಾ ಸಮಯದಲ್ಲಿ ಚುನಾವಣಾ ಪ್ರಚಾರಕ್ಕೆ ಹೋದಾಗ ಮತದಾರರು ನಮ್ಮ ಮಕ್ಕಳು ಬೇರೆ ಊರುಗಳಲ್ಲಿ ಉದ್ಯೋಗ ಮಾಡುತ್ತಿದ್ದು ಇಲ್ಲಿ ಐಟಿ ಪಾರ್ಕ್ ಮಾಡುವಂತೆ ಒತ್ತಾಯಿಸಿದ್ದರು. ಅದರ ಫಲವೇ ಇಂದು ದಾವಣಗೆರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೊಳ್ಳುತ್ತಿದೆ. ಲೋಕಸಭೆಯ ಪ್ರಶ್ನಾವಳಿ ಸಂದರ್ಭದಲ್ಲಿ ನಾನು ದಾವಣಗೆರೆಗೆ ಐಟಿ ಪಾರ್ಕ್ ಸ್ಥಾಪನೆ ಬಗ್ಗೆ ಪ್ರಸ್ಥಾಪಿಸಿದ್ದೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವರು ಸಕಾರತ್ಮಕವಾಗಿ ಸ್ಪಂದಿಸಿ ಈಗಾಗಲೆ ಐಟಿ ಹಬ್ ಸ್ಥಾಪಿಸಲು ಪ್ರಸ್ಥಾಪಿಸಲಾಗಿದ್ದು ಅದನ್ನು ನೀವು ಅಭಿವೃದ್ಧಿಪಡಿಸಿಕೊಂಡು ಹೋಗುವಂತೆ ನಾಲ್ಕು ಪುಟಗಳ ಮಾಹಿತಿಯನ್ನು ನೀಡಿದರು ಎಂದರು.
ಮುಂದಿನ ಆರು ತಿಂಗಳಲ್ಲಿ ಸ್ಥಳೀಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ ಆಯೋಜಿಸಲಾಗುವುದು. ಇದೇ ಅಕ್ಟೋಬರ್ 15, 16 ರಂದು ಕೃತಕ ಬುದ್ದಿಮತ್ತೆ (ಎಐ), ಬಿಗ್ ಡೆಟಾ, ಎಡಿಎ ಟೂಲ್ಸ್, ಇಂಟರ್ನೆಟ್ ಆಫ್ ಎಥಿಕಲ್ ಥಿಂಗ್ಸ್ , ಡಿಸೈನ್ ಐಪಿಗಳು ರೊಬೋಟಿಕ್ಸ್ ಇನ್ ಎಜುಕೇಷನ್ ಇಂಡಸ್ಟ್ರೀ ಹಾರ್ಡ್ವೇರ್ ಮತ್ತು ಸಾಫ್ಟೆವೇರ್ ತಂತ್ರಾಂಶಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು.
ದಾವಣಗೆರೆಯಲ್ಲಿ ಐಟಿ ಹಬ್ ಮಾಡುವ ಉದ್ದೇಶದಿಂದ ಅಧಿಕಾರಿಗಳ ತಂಡದೊಂದಿಗೆ ಬೆಂಗಳೂರಿನ ಐಟಿಬಿಟಿ ಕಂಪನಿಗಳಿಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯ, ಅವಶ್ಯಕತೆ ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಅದೇ ಉದ್ದೇಶದಿಂದ ದಾವಣಗೆರೆಯಲ್ಲಿ ಮೊದಲಿಗೆ ಎರಡು ಎಕರೆ ಜಾಗವನ್ನು ಗುರುತಿಸಿ ಇಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಮೀಟಿಂಗ್ ಹಾಲ್, ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದೊಂದಿಗೆ ಎಸ್ಟಿಪಿಐ ಯನ್ನು ಸ್ಥಾಪಿಸಲಾಯಿತು.
ಕೈಗಾರಿಕೆ, ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ನವೋದ್ಯಮ ಪರಿಸರ ವ್ಯವಸ್ಥೆ ನಿರ್ಮಾಣ ಮಾಡಿ ತಂತ್ರಜ್ಞಾನ ದೃಶ್ಯವನ್ನು ಅಭಿವೃದ್ಧಿಪಡಿಸುವ ಸೆಂಟರ್ ಆಫ್ ಎಕ್ಸಲೆನ್ಸ್ಗಳ ಮೂಲಕ ಜಿಲ್ಲೆಯಲ್ಲಿ ಸ್ಟಾರ್ಟ್ಅಪ್ ಸ್ಥಾಪಿಸುವುದು. ಇಂತಹ ಸಂಸ್ಥೆಗಳ ಮೂಲಕ ಉದ್ಯಮದ ತಜ್ಞರು, ಶೈಕ್ಷಣಿಕ ಸಂಶೋಧಕರು, ಸರ್ಕಾರಿ ಸಂಸ್ಥೆಗಳು ಮತ್ತು ನವೋದ್ಯಮಿಗಳನ್ನು ಭೇಟಿ ಮಾಡಿ ದಾವಣಗೆರೆ ಐಟಿ ಹಬ್ಗೆ ಅವಶ್ಯವಿರುವ ಸೌಕರ್ಯಗಳನ್ನು ಪಡೆಯಲು ಸಲಹೆ ಸೂಚನೆಗಳನ್ನು ಪಡೆಯಲಾಗಿದೆ ಎಂದರು.
ಜಿಲ್ಲೆಯಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆಯುತ್ತಾರೆ. ಇಲ್ಲಿ ವ್ಯಾಸಂಗ ಮಾಡಿದಂತಹ ಅನೇಕ ನಿರುದ್ಯೋಗಿಗಳಿಗೆ ಕೌಶಲ್ಯ ಮತ್ತು ಭಾಷೆಯ ತೊಂದರೆ ಉಂಟಾಗುತ್ತಿದೆ. ಅಂತಹ ಯಾವುದೇ ತೊಂದರೆಗಳು ವಿದ್ಯಾರ್ಥಿಗಳಿಗೆ ಆಗದಂತೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಸಹ ನೀಡಲಾಗುವುದು ಎಂದರು.
ಕೃತಿಕ ಬುದ್ದಿಮತ್ತೆಯಿಂದ ಕೃಷಿ, ಆರೋಗ್ಯ, ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಬಳಕೆಯಾಗುತ್ತಿದೆ. ಇಂಟೆಲ್ ಕಂಪನಿಯಿಂದ ಈಗಾಗಲೇ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲಾಗುತ್ತಿದೆ. ಇಂತಹ 35 ಕ್ಕೂ ಹೆಚ್ಚು ಹೆಸರಾಂತ ಕಂಪನಿಗಳು ದಾವಣಗೆರೆಯಲ್ಲಿ ಘಟಕ ತೆರೆಯಲು ಉತ್ಸುಕತೆ ತೋರುತ್ತಿವೆ ಎಂದರು.
ಎಸ್ಟಿಪಿಐ ನಿರ್ದೇಶಕರಾದ ಸಂಜಯ್ ತ್ಯಾಗಿ ಯವರು ಮಾತನಾಡಿ ದಾವಣಗೆರೆಯಲ್ಲಿ ಐಟಿ ಪಾರ್ಕ್ ಮಾಡಲು ನಾವು ಉತ್ಸಕರಾಗಿದ್ದೇವೆ. ಇಲ್ಲಿನ ವಾತಾವರಣವು ಸಹ ಅದಕ್ಕೆ ಪೂರಕವಾಗಿದೆ. ಇಲ್ಲಿ ಅನೇಕ ಕಂಪನಿಗಳು ಘಟಕ ಪ್ರಾರಂಭಿಸಲು ಉತ್ಸಾಕರಾಗಿದ್ದಾರೆ. ಈಗಾಗಲೇ ಅನೇಕ ಸುತ್ತಿನ ಮಾತುಕತೆಯಾಗಿದೆ, ಇದರ ಪ್ರಯೋಜನೆಯನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ, ದಾವಣಗೆರೆ ಸಾಫ್ಟ್ವೇರ್ ಪಾರ್ಕ್ ಮಾಡಲು ಲೋಕಸಭಾ ಸದಸ್ಯರು, ಜಿಲ್ಲಾಧಿಕಾರಿಗಳು ಸೇರಿದಂತೆ ಒಂದು ವಿಷನ್ ಟೀಮ್ ಮಾಡಲಾಗಿದೆ. ಅದರ ಫಲವೇ ಸಾಪ್ಟ್ವೇರ್ ಪಾರ್ಕ್ ದಾವಣಗೆರೆಯಲ್ಲಿ ಆಗಲು ಸಾಧ್ಯವಾಯಿತು. ವಿಷನ್ ದಾವಣಗೆರೆ ಬಗ್ಗೆ ಫೇಸ್ಬುಕ್ ಸೇರಿದಂತೆ ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಸಾಫ್ಟ್ವೇರ್ ಪಾರ್ಕ್ ಬಗ್ಗೆ ಮಾಹಿತಿ ಇದ್ದು, ಇದಕ್ಕೆ ಸಲಹೆ ಸೂಚನೆಗಳನ್ನು ನೀಡುವಂತೆ ತಿಳಿಸಿದರು. ವಿಷನ್ ಟೀಂ ನಾಸಿಕ್ ಮತ್ತು ಚೆನ್ನೈನ ಡಾಟಾ ಸೆಂಟರ್ಗೆ ಭೇಟಿ ನೀಡಲಿವೆ. ಎಸ್ಟಿಪಿಐ ಮತ್ತು ಕಿಯೋನಿಕ್ಸ್ ಸಂಸ್ಥೆಗಳಿಗೆ ತಲಾ ನಾಲ್ಕು ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದರು. 25 ರಿಂದ 30 ಎಕರೆ ಜಮೀನಿನಲ್ಲಿ ಜಿಲ್ಲೆಯಲ್ಲಿ ಗಾಲ್ಪ್ ಕೋರ್ಸ್ ಅನ್ನು ತೆರೆಯಲು ಸಹ ಚಿಂತನೆ ನಡೆಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಎಸ್ಟಿಪಿಐ ಬಿತ್ತಿಪತ್ರವನ್ನು ಬಿಡುಗಡೆ ಮಾಡಿದರು. ಜೈನ್ ತಾಂತ್ರಿಕ ಕಾಲೇಜು, ಯುಬಿಡಿಟಿ, ಜಿಎಂಐಟಿ ಕಾಲೇಜು ಮತ್ತು ಬಿಐಇಟಿ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಇಂಟಲ್ ಸಂಸ್ಥೆಯ ಸಾಮ್ಯೂಯಲ್ ದೊರೆರಾಜ್, ಕೆಡಿಇಎಂ ಪ್ರೊಗ್ರಾಮ್ ಡೈರೆಕ್ಟರ್ ಸುವಿನ್ ನಾರಾಯಣ್ ಬಿಐಇಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್.ಬಿ. ಅರವಿಂದ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

