ದಿನದ ಸುದ್ದಿ
ಟ್ರ್ಯಾಕ್ಟರ್’ನಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವು
ಸುದ್ದಿದಿನ,ಉಡುಪಿ: ಟ್ರ್ಯಾಕ್ಟರ್ ನಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿರುವ ಸಂದರ್ಭ ಚಾಲಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಜಿಲ್ಲೆಯ ಕುಂದಾಪುರದ ಕೆರಾಡಿ ಗ್ರಾಮದ ದೀಟಿಯಲ್ಲಿ ನಡೆದಿದೆ.
ಸಾವಿಗೀಡಾದ ವ್ಯಕ್ತಿವು ಹರಿಹರ ಮೂಲದ ರಾಜು ಎಂದು ಗುರುತಿಸಲಾಗಿದೆ. ಇವರು ದೀಟಿ ಗ್ರಾಮದಲ್ಲಿ ಗದ್ದೆಯಲ್ಲಿ ಟ್ರ್ಯಾಕ್ಟರ್ ಮೂಲಕ ಗದ್ದೆ ಉಳುಮೆ ಮಾಡುತ್ತಿದ್ದರು. ಈ ಸಂದರ್ಭ ಹೃದಯಾಘಾತ ಉಂಟಾಗಿದೆ. ಗದ್ದೆಯಲ್ಲಿ ಯಾರು ಇಲ್ಲದ ಹಿನ್ನೆಲೆ ಟ್ರ್ಯಾಕ್ಟರ್ ನಿಂದ ರಾಜು ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243