Connect with us

ದಿನದ ಸುದ್ದಿ

ಬಹುನಿರೀಕ್ಷಿತ ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ : ಸರಕಾರದಿಂದ ಅಧಿಕೃತ ಆದೇಶ

Published

on

ಸುದ್ದಿದಿನ,ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್‌ ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸೋಮವಾರ ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಭವ್ಯ ಕಾಶಿ – ದಿವ್ಯ ಕಾಶಿಯ ಭವ್ಯತೆಯನ್ನ ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿಯ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿರುತ್ತದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು.

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. ಏಪ್ರಿಲ್‌ 1, 2022 ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮಾನ್ಯ ಸಚಿವರು ಹೇಳಿದ್ದಾರೆ.

ಮಾರ್ಗಸೂಚಿಯ ಅಂಶಗಳು

1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ ಐದು ಸಾವಿರ ರೂಗಳನ್ನು ಸಹಾಯ ಧನವಾಗಿ ನೀಡಲಾಗುವುದು.

2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.

• ಕರ್ನಾಟಕ ರಾಜ್ಯ ಚುನಾವಣಾ ಆಯೋಗ ನೀಡಿರುವ “ಗುರುತಿನ ಚೀಟಿ’ ಅಥವಾ
• ಆಧಾರ್‌ ಗುರುತಿನ ಚೀಟಿ ಅಥವಾ
• ರೇಷನ್ ಕಾರ್ಡ್

3. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಏಪ್ರಿಲ್‌ 1 ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರತಕ್ಕದ್ದು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸುವುದು.

4. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.

5. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್‌ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್‌ ಆಗಿರತಕ್ಕದ್ದು,

6. ಸದರಿ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.

ಸದರಿ ಯೋಜನೆಯ ಜೊತೆಯಲ್ಲಿ “ಭಾರತ್‌ ಗೌರವ್‌” ಯೋಜನೆ ಅಡಿಯಲ್ಲಿ ಕಾಶಿ ಯಾತ್ರೆಗೆ ವಿಶೇಷ ರೈಲು

30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.

ಕೇಂದ್ರ ಸರಕಾರದ “ಭಾರತ ಗೌರವ” ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ದತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೊಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending