Connect with us

ಬಹಿರಂಗ

ದಲಿತರ ಅವ್ವ ರಮಾಬಾಯಿ ಅಂಬೇಡ್ಕರ್ ಮಾಡಿದ ಮೊಟ್ಟಮೊದಲ ಸಾರ್ವಜನಿಕ ಭಾಷಣ

Published

on

ರಮಾಬಾಯಿ ಅಂಬೇಡ್ಕರ್ ರವರಿಗೆ ಜನುಮ ದಿನದ ಶುಭಾಶಯಗಳು

ದಿನದ ಬೆಳಗು ತುಂಬ ಉತ್ಸಾಹದಿಂದಲೇ ಮೂಡಿಬಂತು. ಇಂದು ಮಹಾಮಾತೆ ರಮಾಯೀ ಭೀಮರಾವ್ ಅಂಬೇಡ್ಕರ್ ಸಮಾಜದ ಮಹಿಳಾ ಮಂಡಲದಲ್ಲಿ ಭಾಷಣ ಮಾಡುವವರಿದ್ದರು. ಮನೆಯ ಎಲ್ಲ ಕೆಲಸಗಳನ್ನು ಮುಗಿಸಿದ ರಮಾಯಿ ಸಂಜೆ ಆಗಮಿಸಿದ ಮಹಿಳಾ ಮಂಡಳದ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಡೆದಳು. ಹಾಗೆ ಹೋಗುವುದಕ್ಕಿಂತ ಮುಂಚೆ ಆಕೆ ತನ್ನ ಮಾವನ (ಸುಬೇದಾರ ರಾಮಜೀ) ಪ್ರತಿಮೆಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡಳು. ಮನಸ್ಸಿನಲ್ಲಿಯೇ ತನ್ನ ಪತಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಸ್ಮರಿಸಿದಳು. ಮಹಿಳಾ ಮಂಡಲದ ಸಭೆಯ ವೇದಿಕೆಯೇರಿದ ರಮಾಯಿ ಮಾತನಾಡತೊಡಗಿದಳು.

“ನನ್ನ ಆತ್ಮೀಯ ತಾಯಂದಿರೆ ಮತ್ತು ಸಹೋದರಿಯರೆ,
ಇಂದು ನಾನು ಮೊಟ್ಟಮೊದಲ ಬಾರಿಗೆ ಮಾತನಾಡಲು ನಿಂತಿದ್ದೇನೆ. ಮಾತಾಡುವಾಗ ಏನಾದರೂ ತಪ್ಪು-ತಡೆಗಳುಂಟಾದರೆ ತಿದ್ದಿಕೊಳ್ಳಿ. ನಾವು ಪ್ರತಿನಿತ್ಯದ ಬದುಕಿನಲ್ಲಿ ನೋಡುವುದೇನೆಂದರೆ, ಪತಿ ಯಾವ ಕಾರ್ಯದ ಭಾರವನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡಿರುತ್ತಾನೋ ಆ ಭಾರವನ್ನು ಸಹಧರ್ಮಿಣಿಯಾಗಿ ಪತ್ನಿಯರೂ ಹೆಗಲು ಕೊಟ್ಟು ಹೊತ್ತುಕೊಳ್ಳಬೇಕಾಗುತ್ತದೆ. ಇಂಥ ಅನುಭವಗಳು ನನ್ನ ಬದುಕಿನಲ್ಲಿ ಸಾಕಷ್ಟು ಇವೆ ಎಂದು ನನಗನ್ನಿಸುತ್ತದೆ. (ಜನಸಮುದಾಯದ ಕರತಾಡನ)

ನನ್ನಂತಹ ಮದುವೆಯಾಗಿರುವ ಹೆಣ್ಣಿಗೆ ಪತಿಸೇವೆಯ ಹೊರತು ಈ ಜಗತ್ತಿನಲ್ಲಿ ಮತ್ತೇ ಕೆಲವು ಸೇವಾಕಾರ್ಯಗಳು ಇವೆ ಎಂಬ ಅರಿವು ಇಲ್ಲಿಯವರೆಗೆ ನನಗಿರಲಿಲ್ಲ. ಆದರೆ ಇಂದು ಈ ಭವ್ಯ ವೇದಿಕೆಯ ಮೇಲೆ ನಿಂತು, ಸೇರಿರುವ ಬಹುದೊಡ್ಡ ಸಂಖ್ಯೆಯ ಜನಸಮುದಾಯವನ್ನು ಕಂಡಾಗ ನನಗನ್ನಿಸುತ್ತಿದೆ ; ‘ಸಕಲರಲ್ಲೂ ಅರಿವು ತುಂಬಿಯೇ ಬಿಡಬೇಕು’ (ಶಹಾಣೆ ಕರೂಣಿ ಸೋಡಾವೆ ಸಕಲಜನ)….. (ಜನಸಮುದಾಯ ಉತ್ಸಾಹದಿಂದ ಚಪ್ಪಾಳೆ ತಟ್ಟುತ್ತಲೇ ಘೋಷಣೆ ಕೂಗತೊಡಗಿದರು ; ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)

ನನಗೆ ಇಂತಹ ಜೈಕಾರ ಹಾಕಬೇಡಿ. ಇನ್ನೂ ನಾನು ನಿಮಗಾಗಿ ಏನನ್ನೂ ಮಾಡಿದವಳಲ್ಲ. ಆ ಬಗ್ಗೆ ನನಗೆ ವಿಷಾದವೆನಿಸುತ್ತದೆ. ಇರಲಿ. ನಮ್ಮೆಲ್ಲರ ಮುಂದಾಳು ಡಾ. ಬಾಬಾಸಾಹೇಬ ಅಂಬೇಡ್ಕರರು ಮೇಲಿಂದ ಮೇಲೆ ಹೇಳುತ್ತಿರುತ್ತಾರೆ ; ನಾವು ಹೆಣ್ಣುಮಕ್ಕಳೆಲ್ಲ ಮುಂದೆ ಬಂದು, ಸಮಾಜದ ಕ್ರಾಂತಿ-ಚಳುವಳಿಯಲ್ಲಿ, ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳಲ್ಲಿ ಭಾಗಿಯಾಗಬೇಕು. ಯಾಕೆಂದರೆ ಹೆಣ್ಣುಮಕ್ಕಳು ಏಕನಿಷ್ಠರಾಗಿರುತ್ತಾರೆ. ಯಾವುದೇ ಚಳುವಳಿಯಲ್ಲಿ ಹೆಣ್ಣುಮಕ್ಕಳು ಸಹಭಾಗಿಯಾಗಬೇಕು. ಇದರ ಹೊರತಾಗಿ ಚಳುವಳಿಯ ಹೆಜ್ಜೆ ಮುಂದೆ ಸಾಗುವುದಿಲ್ಲ.(ಜನರಿಂದ ಪ್ರಚಂಡ ಕರತಾಡನ) ಜಗತ್ತಿನ ಕ್ರಾಂತಿ-ಚಳುವಳಿ ಯಾವುದರ ಮೇಲೆ ನಡೆಯುತ್ತವೆ ? ತ್ಯಾಗದ ಮೇಲೆ. ಅದು ಎಂಥದ್ದೇ ತ್ಯಾಗ ಇರಲಿ, ಚಳುವಳಿಗಾರರು ಎಷ್ಟೋ ಅಗ್ನಿದಿವ್ಯ ಹಾದು ಬರಬೇಕಾಗುತ್ತದೆ. ಇಲ್ಲದಿದ್ದರೆ ಬಯಸಿದ ಬಂಗಾರ ದೊರೆಯಲಾರದು. ಈ ಬಗ್ಗೆ ಒಮ್ಮೆ ಡಾ. ಅಂಬೇಡ್ಕರ ಅವರು ಹೇಳಿದ ಒಂದು ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. ಇದು ಗ್ರೀಕ್ ಪುರಾಣದಲ್ಲಿ ಬರುವ ಕತೆ.

ಡಿಮೇಟರ್ ಹೆಸರಿನ ದೇವತೆಯೊಬ್ಬಾಕೆ ಮನುಷ್ಯರೂಪ ಧರಿಸಿ ಭೂಮಿಗೆ ಬಂದಳು. ಆಕೆಯನ್ನು ಅಲ್ಲಿಯ ರಾಣಿಯೊಬ್ಬಳು ದಾಸಿಯನ್ನಾಗಿ ಇಟ್ಟುಕೊಂಡು ತನ್ನ ಬಾಲಕ ಮಗನ ಉಸ್ತುವಾರಿ ನೋಡಿಕೊಂಡಿರಲು ಹೇಳಿದಳು. ರಾಣಿಯ ಆ ಮಗನನ್ನು ‘ದೇವ’ನನ್ನಾಗಿಸಬೇಕು ಎಂಬ ಹಂಬಲ ಆ ದೇವತೆಗೆ ಉಂಟಾಯಿತು. ಹೀಗಾಗಿ ಆಕೆ ದಿನವೂ ರಾತ್ರಿ ಎಲ್ಲರೂ ಮಲಗಿಕೊಂಡ ಮೇಲೆ ಎಲ್ಲ ಬಾಗಿಲು-ಕಿಟಕಿಗಳನ್ನು ಮುಚ್ಚುತ್ತಿದ್ದಳು. ತೊಟ್ಟಿಲಲ್ಲಿ ಮಲಗಿದ ಮಗುವನ್ನು ಹೊರತೆಗೆದು, ಅದರ ಮೈಮೇಲಿನ ಬಟ್ಟೆಗಳನ್ನೆಲ್ಲ ಬಿಚ್ಚಿ ಹಾಕಿ ಬಿಸಿ ಬೂದಿಯ ಮೇಲೆ ಒಂದಿಷ್ಟು ಕಾಲ ಆ ಮಗುವನ್ನು ಮಲಗಿಸುತ್ತಿದ್ದಳು ! ಕ್ರಮೇಣ ಬೆಂಕಿಯ ಬಿಸಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಆ ಮಗುವಿಗೆ ಬಂತು. ಅದರ ಬಲ ವೃದ್ಧಿಸತೊಡಗಿತು. ಆ ಮಗುವಿನಲ್ಲಿ ಅತ್ಯಂತ ತೇಜಸ್ವಿಯಾದ ದೈವೀ ಅಂಶ ವಿಕಸಿತವಾಗತೊಡಗಿತ್ತು. ಆದರೆ ಒಂದು ರಾತ್ರಿ ಆ ಮಗುವಿನ ತಾಯಿ ರಾಣಿ ಅಚಾನಕ್ಕಾಗಿ ಆ ಕೋಣೆಯನ್ನು ಹೊಕ್ಕಳು. ಅಲ್ಲಿ ನಡೆಯುತ್ತಿದ್ದುದ್ದನ್ನೆಲ್ಲ ಕಣ್ಣಾರೆ ಕಂಡ ಆಕೆ ತುಂಬ ನೊಂದುಕೊಂಡಳು. ಆಕೆ ತಕ್ಷಣ ತನ್ನ ಮಗುವನ್ನು ಒಲೆಯ ಮೇಲಿನಿಂದ ಎತ್ತಿ ಎದೆಗವಚಿಕೊಂಡಳು. ಆ ರಾಣಿಗೆ ಆಕೆಯ ಮಗುವೇನೋ ದೊರೆಯಿತು. ಆದರೆ ಸಾಮರ್ಥ್ಯಶಾಲಿ ದೇವನಾಗಬೇಕಿದ್ದ ದೇವನನ್ನೇ ಆಕೆ ಕಳೆದುಕೊಂಡಳು..!

ಈ ಕತೆಯ ತಾತ್ಪರ್ಯ ಇಷ್ಟೆ ; ಕುಲುಮೆಯಲ್ಲಿ ಕಾಯದೆ ದೇವತನ ಬರುವುದಿಲ್ಲ. ಬೆಂಕಿ, ಮನುಷ್ಯನನ್ನು ಶುದ್ಧಿಗೊಳಿಸುತ್ತದೆ ಮತ್ತು ಮನುಷ್ಯನಲ್ಲಿ ಶಕ್ತಿಯನ್ನು ತುಂಬುತ್ತದೆ. ಆದ್ದರಿಂದ ಅಸ್ಪೃಶ್ಯ ಎನಿಸಿಕೊಂಡಿರುವವರು ಕಡುಕಷ್ಟ ಮತ್ತು ತ್ಯಾಗದ ಅಗ್ನಿದಿವ್ಯ ಸಹಿಸದೇ ಉದ್ಧಾರವಾಗಲಾರರು. ನೀವು ನಿಮ್ಮನ್ನು ಅಸ್ಪೃಶ್ಯ, ಕೀಳು ಎಂದುಕೊಳ್ಳಬೇಡಿ. ಮನೆಯನ್ನು ಸ್ವಚ್ಚವಾಗಿಟ್ಟುಕೊಳ್ಳಿ. ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ. ‘ಮಗನಾಗಬೇಕು ತೇಜ ; ಮೂರು ಲೋಕದಲ್ಲೂ ಇರಬೇಕು ಆತನದೇ ಧ್ವಜ’ ಎಂಬ ಆಶಯವನ್ನು ಮನಸ್ಸಿನಲ್ಲಿಟ್ಟುಕೊಂಡು ಇನ್ನುಮುಂದೆ ನಮ್ಮ ಮಕ್ಕಳನ್ನು ಬೆಳೆಸಬೇಕು. ಅದರಲ್ಲೇ ನಮ್ಮ ಉದ್ಧಾರವಿದೆ. ಇಷ್ಟು ಹೇಳಿ ನಾನು ನನ್ನ ಭಾಷಣವನ್ನು ಮುಗಿಸುತ್ತೇನೆ” (ಪ್ರಚಂಡ ಕರತಾಡನ. ಜಯಘೋಷ ‘ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)

ದಲಿತರ ಅವ್ವ : ರಮಾಬಾಯಿಯ ಎರಡನೆಯ ಮತ್ತು ಅಂತಿಮ ಭಾಷಣ

ಆ ದಿನ 29ನೇ ಜನೇವರಿ 1932 !
ಡಾ. ಬಾಬಾಸಾಹೇಬ ಅಂಬೇಡ್ಕರರು ಕುಳಿತ್ತಿದ್ದ ಲಂಡನ್ನಿನ ಹಡಗು ಬೆಳಿಗ್ಗೆ ಸರಿಯಾಗಿ ಆರು ಗಂಟೆಗೆ ಮುಂಬಾಯಿಯ ಬಂದರಿಗೆ ಬಂದು ತಲುಪಿತು. ಸೇರಿದ ಸಾವಿರಾರು ಅನುಯಾಯಿಗಳ ಹೃದಯ ಆನಂದದಿಂದ ತುಂಬಿ ತುಳುಕಿತು !

ಆ ದಿನ ನಸುಕಿನಿಂದಲೇ ಡಾ. ಬಾಬಾಸಾಹೇಬ ಅಂಬೇಡ್ಕರರ ನಿಷ್ಟಾವಂತ ಅನುಯಾಯಿಗಳೂ, ಸಂಬಂಧಿಕರೂ ಹಾಗೂ ಹಿತಚಿಂತಕರು ಡಾ. ಬಾಬಾಸಾಹೇಬ ಅಂಬೇಡ್ಕರರ ಹಾದಿಯನ್ನು ತುಂಬ ಉತ್ಸಾಹಿತರಾಗಿಯೇ ಕಾಯುತ್ತಿದ್ದರು. ಪ್ರತಿಯೊಬ್ಬರೂ ಕೈಯಲ್ಲಿ ಹೂಮಾಲೆ-ಹೂಗುಚ್ಛ ಹಿಡಿದುಕೊಂಡು ನಸುಕಿನ ಚಳಿಗೂ ಅಂಜದೆ ಶಾಂತವಾಗಿಯೇ ಕಾಲಿಡಲೂ ಜಾಗವಿಲ್ಲದಂತೆ ಕಿಕ್ಕಿರಿದು ನಿಂತಿದ್ದರು.

ಆ ಜನಸಂದಣಿಯಲ್ಲಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರ ಧರ್ಮಪತ್ನಿ ದಲಿತರ ಅವ್ವ ರಮಾಯಿ ನಿಂತಿದ್ದಳು ! ಸುವಾಸಿತ ಹೂವಿನಿಂದ ಮಾಡಲ್ಪಟ್ಟ ಮಾಲೆಯನ್ನು ಆಕೆ ಹಿಡಿದುಕೊಂಡು ತನ್ನ ‘ಸಾಹೇಬ’ರನ್ನು ಎದುರುಗೊಳ್ಳಲು ನಿಂತಿದ್ದಳು !ತನ್ನ ಸಾಹೇಬನನ್ನು ಯಾವಾಗ ಕಣ್ಣು ತುಂಬಿಕೊಳ್ಳುತ್ತೇನೆಯೋ ಎಂಬ ಕಾತರದಲ್ಲಿ ಆಕೆ ಇದ್ದಳು ! ಅಷ್ಟರಲ್ಲಿ ಗದ್ದಲ, ಜಯಕಾರ ಸುರುವಾದವು. ಡಾ. ಬಾಬಾಸಾಹೇಬ ಅಂಬೇಡ್ಕರರು ಹಡಗಿನಿಂದ ಇಳಿದು ಬರುತ್ತಿದ್ದರು. ಗಗನಭೇದಿ ಘೋಷಣೆ ಮುಳುಗತೊಡಗಿದವು ! ‘ಡಾ. ಬಾಬಾಸಾಹೇಬ ಅಂಬೇಡ್ಕರ ಕೀ ಜೈ !ಅಂಬೇಡ್ಕರ್ ಅಂಬೇಡ್ಕರ್ .. ದಲಿತರ ದೇವ ಅಂಬೇಡ್ಕರ್ ! ಮೊಟ್ಟಮೊದಲು ಸಮತಾ ಸೈನಿಕ ದಳವು ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಹಾರ ಹಾಕಿ ಗೌರವ ವಂದನೆ ಸಲ್ಲಿಸಿತು.

ನೋಡು ನೋಡುವಷ್ಟರಲ್ಲಿಯೇ ಹೂಮಾಲೆಗಳನ್ನು ಹಿಡಿದು ನಿಂತಿದ್ದ ಜನಸಮೂಹ ನಾ ಮುಂದು ತಾ ಮುಂದು ಎಂದು ಡಾ. ಬಾಬಾಸಾಹೇಬ ಅಂಬೇಡ್ಕರರನ್ನು ಸುತ್ತುವರಿಯಿತು ! ಅಪರಿಮಿತ ಭಕ್ತಿ, ಪ್ರೇಮ ಮತ್ತು ನಿಷ್ಟೆಯ ಸಂಕೇತವಾಗಿ ಹೂಮಾಲೆಗಳು ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳನ್ನು ಅಲಂಕರಿಸಿದವು. ರಮಾಯಿ ಮಾತ್ರ ಈ ಎಲ್ಲ ಗದ್ದಲದಿಂದ ಒಂದಿಷ್ಟು ದೂರವೇ ಉಳಿದಿದ್ದಳು ! ತನ್ನ ‘ಸಾಹೇಬ’ನ ಮೇಲೆ ಸೂಸುತ್ತಿದ್ದ ಅಪಾರ ಜನರ ಅಪರಿಮಿತ ಪರಿಶುದ್ಧ ಪ್ರೇಮವನ್ನು ಆಕೆ ಮೊದಲ ಬಾರಿ ನೋಡುತ್ತಿದ್ದಳು ! ನೋಡುತ್ತ ನೋಡುತ್ತ ಆಕೆಯ ಕಣ್ಣಾಲಿಗಳು ತುಂಬಿದವು ! ಆನಂದಭಾಷ್ಟ ಉದರಿದವು !ಎಲ್ಲರೂ ಮಾಲೆ ಹಾಕಿ ಮುಗಿದಾದ ಮೇಲೆ ರಮಾಯಿ ಕೊನೆಯವಳಾಗಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬಳಿಗೆ ಹೋದಳು !ಅಖಂಡವಾಗಿ ನಿಂತ ಡಾ. ಬಾಬಾಸಾಹೇಬ ಅಂಬೇಡ್ಕರರು !ರಮಾಬಾಯಿ ತಲೆಯೆತ್ತಿ ಕೂಡ ನೋಡಲಿಲ್ಲ !ಕೈಯಲ್ಲಿರುವ ಸುವಾಸಿತ ಮಾಲೆಯನ್ನು ಆಕೆ ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳಿಗೆ ಹಾಕಿದಳು !ಆದರೆ ಆಕೆ ದೃಷ್ಟಿ ಮಾತ್ರ ಅವರ ಪದತಲದಲ್ಲಿಯೇ ಇತ್ತು !ಹಗಲು-ರಾತ್ರಿಯೆನ್ನದೆ ಯಾವ ಮೂರ್ತಿಯ ಸೇವೆಯನ್ನು ಮಾಡಿದ್ದಳೋ ಅದೇ ಇಂದು ಎದುರಿಗೇ ನಿಂತಿದ್ದರೂ ಆಕೆ ಕಣ್ಣೆತ್ತಿಯೂ ಕೂಡ ನೋಡಲಿಲ್ಲ !ಹಾಗೆ ನೋಡುವುದಕ್ಕೆ ಆಕೆಯ ನಾಚಿಕೆ ಸ್ವಭಾವ ಮತ್ತು ಆಕೆ ಬಾಳಿದ ಸಂಸ್ಕಾರಗಳು ಅನುಮತಿಸಿರಲಿಕ್ಕಿಲ್ಲ !

ಆದರೆ…. ! ಈ ಹೃದಯಂಗಮವಾದ ಪ್ರಸಂಗವನ್ನು ನೋಡಿದ ಆಗ ಜನತಾ ಪತ್ರಿಕೆಯ ಸಂಪಾದಕರಾಗಿದ್ದ ಸಹಸ್ರಬುದ್ಧೆಯವರ ಚಾಣಾಕ್ಷ ಕಣ್ಣುಗಳು ಮರೆಯಲು ಸಾಧ್ಯವೇ ಇರಲಿಲ್ಲ ! ಸಹಸ್ರಬುದ್ಧೆಯವರು ಸಹಜವಾಗಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಕೊನೆಯಲ್ಲಿ ಮಾಲೆ ಹಾಕಿದ್ದು ಮತ್ತು ಮಾಲೆ ಹಾಕುವಾಗ ತಲೆಯೆತ್ತಿ ನೋಡದಿರುವುದಕ್ಕೆ ಕಾರಣ ಏನು ಎಂದು ರಮಾಯಿಗೆ ಕೇಳಿಯೇ ಬಿಟ್ಟರು ! ರಮಾಯಿಗೆ ಏನು ಹೇಳಬೇಕೆಂದು ಒಂದು ಕ್ಷಣ ತೋಚಲಿಲ್ಲ ! ಸಭೆಯಲ್ಲಿ ಮಾತನಾಡಬೇಕೆಂದರೆ ತನಗೆ ಸರಿಯಾಗಿ ಮಾತನಾಡಲೂ ಬರುವುದಿಲ್ಲ ! ಮಾತನಾಡದಿದ್ದರೆ ಡಾ. ಬಾಬಾಸಾಹೇಬ ಅಂಬೇಡ್ಕರರ ಪ್ರತಿಷ್ಠೆಗೆ ಧಕ್ಕೆ ಬರಬಹುದು ! ಹಾಗೆ ನೋಡಿದರೆ ರಮಾಯಿಯೇನೂ ಅರಿಯದ ಹೆಣ್ಣುಮಗಳಲ್ಲ ! ಆಕೆ ನಿಜವಾಗಿಯೂ ಚತುರಳೂ ಬುದ್ಧಿವಂತಳೂ ಆಗಿದ್ದಳು ! ಮರುಕ್ಷಣವೇ ಆಕೆಯ ಮೈಯಲ್ಲಿ ಮಿಂಚು ಹರಿದಾಡಿದ ಅನುಭವವಾಯಿತು. ಆಗ ಆಕೆ ತಡ ಮಾಡಲಿಲ್ಲ ; ತಟ್ಟನೇ ಎದ್ದು ಬಂದು ಮಾತನಾಡಲು ಆರಂಭಿಸಿದಳು !

“ಅಧ್ಯಕ್ಷಮಹೋದಯರೇ, ನನ್ನ ಪತಿಮಹಾದೇವರೆ ಹಾಗೂ ಇಲ್ಲಿ ಸೇರಿರುವ ನನ್ನ ಬಂಧು-ಭಗಿನಿಯರೆ, ಈಗ ತಾನೆ ಸಹಸ್ರಬುದ್ಧೆ ಸಾಹೇಬರು ನನಗೆ ಕೇಳಿರುವ ಎರಡು ಪ್ರಶ್ನೆಗಳಿಗೆ ಉತ್ತರ ನೀಡಲು ನಾನು ಮಾತನಾಡಲೇಬೇಕಿದೆ. ಅದಕ್ಕಾಗಿಯೇ ಎದ್ದಿರುವೆ. ಯಾರು ಸಾಹೇಬರನ್ನು ಯಾವಾಗಲೋ ಒಮ್ಮೆ ಕ್ವಚಿತ್ತಾಗಿ ನೋಡುತ್ತಾರೋ ಅವರೆಲ್ಲ ಅವರನ್ನು ನೋಡಲಿ … ನಾನೋ ಹಗಲು-ರಾತ್ರಿ ಸಾಹೇಬರ ದರ್ಶನ ಪಡೆದು ತೃಪ್ತಳಾದವಳು. ಆದ್ದರಿಂದ ಎಲ್ಲರೂ ಮೊದಲು ಮಾಲೆ ಹಾಕಿದ ಮೇಲೆ ನಾನು ಕೊನೆಯಲ್ಲಿ ಮಾಲೆ ಹಾಕಿದೆ. ಇದು ನಿಮಗೆಲ್ಲ ಗೊತ್ತು. ಇನ್ನು ಡಾ. ಅಂಬೇಡ್ಕರ್ ಸಾಹೇಬರು ಬಡಬಗ್ಗರ-ದೀನದಲಿತರ ಉದ್ದಾರಕ್ಕಾಗಿ ಪಣ ತೊಟ್ಟು ನಿಂತವರು. ನಾನು ಅವರ ಧರ್ಮಪತ್ನಿ. ಅವರ ಸಾಧನೆಗೆ ನನ್ನ ದೃಷ್ಟಿ ತಾಗಬಾರದೆಂಬ ಒಂದೇ ಉದ್ದೇಶದಿಂದ ನಾನು ಅವರ ಮುಖವನ್ನು ನೋಡದೇ ಬರೀ ಅವರ ಪಾದಗಳನ್ನು ಕಣ್ಣು ತುಂಬಿಕೊಂಡೆ.

ಈಗ ಹೇಳಿ ಬಂಧುಗಳೇ, ನಾನು ನೀಡಿದ ಉತ್ತರ ಸರಿಯೇ ? ಸರಿಯಾಗಿಯೇ ಇದ್ದೀತು ಮತ್ತು ಅದು ನಿಮ್ಮೆಲ್ಲರ ಜೊತೆ ಸಹಸ್ರಬುದ್ಧೆಯವರಿಗೂ ಸರಿತೋರಿದೆ ಎಂದು ನಂಬಿ ನಾನು ನನ್ನ ಈ ಭಾಷಣವನ್ನು ಮುಗಿಸುತ್ತೇನೆ. (ಪ್ರಚಂಡ ಕರತಾಡನ ಮತ್ತು ಜಯಕಾರ) ರಮಾಯಿಯ ಭಾಷಣ ಮುಗಿದ ಮೇಲೆ ಡಾ. ಬಾಬಾಸಾಹೇಬ ಅಂಬೇಡ್ಕರರು ಕೆಲವು ಮಾತುಗಳನ್ನಾಡಲು ಎದ್ದು ನಿಂತರು. ಸರಿಯಾಗಿಯೇ ಮಾತನ್ನು ಆರಂಭಿಸಿದ ಅವರು ಹೇಳತೊಡಗಿದರು ;”ಬಂಧುಗಳೇ, ದುಂಡುಮೇಜು ಪರಿಷತ್ತಿನಲ್ಲಿ ಸಾಧಿಸಿದ ಸಾಧನೆ ನನ್ನದಲ್ಲ ; ಅದು ಇಲ್ಲಿ ಸೇರಿರುವ ನನ್ನ ಎಲ್ಲ ಅಸಂಖ್ಯಾತ ಬಂಧು-ಭಗಿನಿಯರ ಸಾಧನೆ. ದುಂಡು ಮೇಜು ಪರಿಷತ್ತಿನಲ್ಲಿ ನಾನು ನಿರ್ವಹಿಸಿದ ಪಾತ್ರ ಕುರಿತು ಹಿಂದೂಗಳ ಭಾವಿ ಸಂತತಿ ನನ್ನನ್ನು ರಾಷ್ಟ್ರದ್ರೋಹಿ ಎಂದು ಬಗೆಯಬಹುದು ಎಂಬುದನ್ನು ಬಲ್ಲೆ. ಈಗ ನಾನು ಏನನ್ನೂ ಹೆಚ್ಚು ಹೇಳುವುದಿಲ್ಲ. ಆದರೂ ಈ ಮೊದಲು ಮಾತನಾಡಿದ ಸೌ. ಮೋಹಿತೆಬಾಯಿಯವರು ಸೌ. ರಮಾಬಾಯಿ ಬಗ್ಗೆ ಸಾಕಷ್ಟು ಹೇಳಿದ್ದಾರೆ. ಆದರೆ ನಾನು ಇಲ್ಲಿ ಒಂದು ಮಾತನ್ನು ಸ್ಪಷ್ಟಪಡಿಸುವುದು ಒಳಿತು ; ಇಂದಿಗೂ ಸೌ. ಮೋಹಿತೆಬಾಯಿಯವರು ಹೇಳಿದರಲ್ಲಿ ಒಂದನ್ನೂ ನನಗೆ ಈ ನಿಮ್ಮ ಆಯೀಸಾಹೇಬ ಹೇಳಿಲ್ಲ..(ನಗು) .. ನಿಮ್ಮ ಆಯೀಸಾಹೇಬರು ಬಹುದೊಡ್ಡ ಭಾಗೀರಥಿಯಾಗಿದ್ದಾರೆ ಎಂಬುದು ನನಗೆ ಇದೀಗಲೇ ಗೊತ್ತಾಗಿದ್ದು. ಅದು ಸರಿಯೇ ನಿಮ್ಮ ಆಯೀಸಾಹೇಬರು ನಿಜವಾಗಿಯೂ ಭಾಗ್ಯದ ಭಾಗೀರಥಿಯೇ ಆಗಿದ್ದಾರೆ ! ..(ನಗು.. ಸಮೂಹದ ಕರತಾಡನ ಮತ್ತು ಪ್ರಚಂಡವಾದ ಜಯಘೋಷ ನಿರಂತರವಾಗಿತ್ತು : ಡಾ. ಬಾಬಾಸಾಹೇಬ ಅಂಬೇಡ್ಕರ ಕೀ ಜೈ ! ದಲಿತರ ಅವ್ವ ರಮಾಯಿಗೆ ಜಯವಾಗಲಿ !)

ಅನುವಾದ : ಡಾ. ಸಿದ್ರಾಮ ಕಾರಣಿಕ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ..!

Published

on

  • ಚೇತನ್ ನಾಡಿಗೇರ್

‘ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಜಾಸ್ತಿ ಆಗ್ತಿಲ್ಲ, ಆ ಬಗ್ಗೆ ಮಾತಾಡೋಣ. ಆಟೋ ಚಾಲಕರಿಗೆ ಬೈಕ್‍ ಸವಾರರಿಂದ ತೊಂದರೆ ಆಗುತ್ತಿದೆ ಆ ಬಗ್ಗೆ ಮಾತಾಡೋಣ. ಸರ್ಕಾರಿ ಶಾಲೆಗಳಲ್ಲಿ ಬಿಸಿಊಟ ಅಡುಗೆ ಮಾಡುವವರಿಗೆ ತಿಂಗಳಿಗೆ ಮೂರು ಸಾವಿರ ರೂಪಾಯಿ ಸಂಬಳ. ಅದರ ಬಗ್ಗೆ ಮಾತಾಡೋಣ. ಮಿಕ್ಕವರೆಲ್ಲಾ ಬಹಳ ಬ್ಯುಸಿಯಾಗಿರುವುದರಿಂದ ನಾವು ಇದರ ಬಗ್ಗೆ ಮಾತಾಡೋಣ್ವಾ?’

ಮಾರ್ಮಿಕವಾಗಿ ಕೇಳಿದರು ಪ್ರಕಾಶ್‍ ರೈ. ಅವರಿಗೆ ಆ ವಿಷಯದ ಬಗ್ಗೆ ಮಾತಾಡುವುದಕ್ಕೆ ಇಷ್ಟವಿರಲಿಲ್ಲ. ಆದರೂ ಕನ್ನಡ ಚಿತ್ರರಂಗದಲ್ಲಿ ಕಳೆದ ಒಂದು ತಿಂಗಳಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬ ಪ್ರಶ್ನೆ ಬಂತು. ಅದನ್ನು ಬಹಳ ಜಾಣ್ಮೆಯಿಂದ ತಳ್ಳಿಹಾಕಿದರು ರೈ. ಅದೊಂದು ಬಿಟ್ಟು ಹಲವು ವಿಷಯಗಳ ಬಗ್ಗೆ ಮಾತನಾಡಿದರು. ತಮ್ಮ ಇಷ್ಟದ ಚಿತ್ರದ ಬಗ್ಗೆ, ಕನ್ನಡ ಚಿತ್ರರಂಗದ ಸದ್ಯದ ಪರಿಸ್ಥಿತಿಯ ಬಗ್ಗೆ, ಸೋಷಿಯಲ್ ಮೀಡಿಯಾವನ್ನು ಕೆಲವರು ಕೆಟ್ಟದಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ, ತಂದೆ-ಮಗನ ಸಂಬಂಧದ ಬಗ್ಗೆ, STARDOM ಸಂಭಾಳಿಸುವ ಬಗ್ಗೆ, ಕಲಿಕೆಯ ಬಗ್ಗೆ … ಹೀಗೆ ಹಲವು ವಿಷಯಗಳನ್ನು ಅವರು ಮಾತನಾಡಿದರು. ಅದಕ್ಕೆ ವೇದಿಕೆಯಾಗಿದ್ದು, ಆರ್. ಚಂದ್ರು ನಿರ್ಮಾಣದ, ‘ಡಾರ್ಲಿಂಗ್‍’ ಕೃಷ್ಣ ಅಭಿನಯದ ‘ಫಾದರ್‍’ ಚಿತ್ರದ ಪತ್ರಿಕಾಗೋಷ್ಠಿ. ಈ ಚಿತ್ರದಲ್ಲಿನ ತಮ್ಮ ಪಾತ್ರ ಮತ್ತ ತಂದೆಯ ವ್ಯಾಖ್ಯಾನವನ್ನು ರೈ ಎಷ್ಟು ಚೆನ್ನಾಗಿ ಮಾಡಿದರು ಗೊತ್ತಾ? ನೀವೇ ಓದಿ …

ನಾನು ನನ್ನ ಮೂರು ದಶಕಗಳ ವೃತ್ತಿಜೀವನದಲ್ಲಿ ಯಶಸ್ಸಿನಿಂದ ಹಾಳಾದ ಬಹಳಷ್ಟು ಜನರನ್ನು ನೋಡಿದ್ದೇನೆ. ಸೋಲಿನಿಂದ ಹಾಳಾದವರನ್ನು ನೋಡಿದ್ದು ಕಡಿಮೆ. ಯಶಸ್ಸು ಎನ್ನುವುದು ಒಂದು ನಶೆ. ಯಶಸ್ವಿಯಾಗುವುದು ದೊಡ್ಡ ವಿಷಯವಲ್ಲ. ಅದನ್ನು ದಕ್ಕಿಸಿಕೊಳ್ಳೋದು, ಉಳಿಸಿಕೊಳ್ಳೋದು ಬಹಳ ಮುಖ್ಯ. ಹಾಗಾಗಿ, ಡಾ. ರಾಜಕುಮಾರ್, ರಜನಿಕಾಂತ್‍, ಕಮಲ್ ಹಾಸನ್‍ ಮುಂತಾದವರು ಆರು ದಶಕ, ಐದು ದಶಕಗಳ ಕಾಲ ಕೆಲಸ ಮಾಡಿದವರನ್ನು ನಾವು ನೋಡಬಹುದು. ಈಗ ಅಂಥವರು ಸಿಗುವುದೇ ಇಲ್ಲ ನಮಗೆ. ಬಹಳಷ್ಟು ಯುವಕರು stardomಗೆ ತಯಾರಾಗಿರುವುದಿಲ್ಲ. ಎಷ್ಟು ನಾವು ಅದನ್ನು ಇಳಿಸಿಕೊಂಡು ಹೊರಗೆ ಬರುತ್ತೀವೋ, ಅಷ್ಟು ಒಳ್ಳೆಯದು. ಇಲ್ಲದಿದ್ದರೆ ಅದು ನಮ್ಮನ್ನು ಸುಟ್ಟುಹಾಕುತ್ತದೆ. ಕೆಲವರು ಕಲಿಯುತ್ತಿದ್ದಾರೆ, ಕೆಲವರು ಕಲಿಯುವುದಿಲ್ಲ.

ಪ್ರತಿಯೊಬ್ಬರಿಗೂ ಇಗೋ ಇರಬೇಕು. ಅದು ಸ್ವಾಭಿಮಾನವಾಗಿರುವವರೆಗೂ ಇರಬೇಕು. ಅದು ಅಹಂಕಾರವಾದರೆ ಇಬ್ಬರಿಗೂ ಒಳ್ಳೆಯದಲ್ಲ. ಒಂದು ಇಗೋ ನನ್ನನ್ನು ಬೆಳೆಸುವುದಕ್ಕೆ ಸಾಧ್ಯವಾದರೆ, ಇನ್ನೊಂದನ್ನು ರೂಪಿಸುವುದಕ್ಕೆ ಸಾಧ್ಯವಾದರೆ, ಒಂದು ಧಾರ್ಮಿಕ ಕೋಪವಾದರೆ ಒಳ್ಳೆಯದಲ್ವಾ? ಅದು ಆಯಾ ಪರಿಸ್ಥಿತಿಗೆ ಬದಲಾಗುತ್ತಿರುತ್ತದೆ. ಒಂದು ಪದದ ಅರ್ಥ ಪದಕೋಶದಲ್ಲಿ ಸಿಗುವುದಿಲ್ಲ, ಆ ಸಂದರ್ಭದಲ್ಲಿ ಸಿಗುತ್ತದೆ. ಯಾವ ಸಂದರ್ಭದಲ್ಲಿ ಆ ಪದವನ್ನು ಉಪಯೋಗಿಸುತ್ತೀವೋ, ಆ ಪದಕ್ಕೆ ಅರ್ಥ ಇರುತ್ತದೆಯೇ ಹೊರತು, ಇಗೋ ಎಂದರೆ ಒಂದು definite ಅರ್ಥವಿರುವುದಿಲ್ಲ.

ಕೆಲವು ನಟರು ಸಹ ತಾವು ಜಿಮ್‍ಗೆ ಹೋಗಿಯೇ ನಟ ಆಗುತ್ತೀನಿ ಎಂದರೆ ಆಗುವುದಿಲ್ಲ. ಭಾಷೆ, ಸಂಸ್ಕೃತಿ, ಸಾಹಿತ್ಯದ ಬಗ್ಗೆ ತಿಳಿದುಕೊಳ್ಳೋದು, ಕಲೆಯ ಪ್ರಕಾರಗಳನ್ನು ಅರಿತುಕೊಳ್ಳೋದು, ಅದರಿಂದ ನನಗೆ ಹೆಸರಾಗಬೇಕೆಂದು ಬಯಸೋದು ಸಹ ಮುಖ್ಯ. ಎಲ್ಲಕ್ಕಿಂತ ಹೆಚ್ಚಾಗಿ, ಪ್ರತಿಯೊಬ್ಬರು ಗೆಲ್ಲಬೇಕೆಂಬ ಒತ್ತಡ ಯಾಕೆ? ಸೋಲು ಸಂತೋಷ ಯಾಕೆ ನಾವು ಕೊಟ್ಟಿಲ್ಲ? ಕ್ಷಮಿಸುವ ಸಂತೋಷವನ್ನು ನಾವು ಯಾಕೆ ಕೊಟ್ಟಿಲ್ಲ? ನಮಗೂ ಅವನೇನು ಹೇಳುತ್ತೇನೆ ಎನ್ನುವ ತಾಳ್ಮೆಯೇ ಇಲ್ಲ. ನಾನು ಅಂದುಕೊಂಡಿರುವ ಸಿನಿಮಾ ತೆಗೆದಿದ್ದೀಯಾ? ಅಂತಲೇ ಎಲ್ಲರೂ ಕೇಳೋದು. ಏನು ಹೇಳುತ್ತಾನೆ ಎನ್ನುವ ತಾಳ್ಮೆಯೇ ಯಾರಿಗೂ ಇಲ್ಲ.

ನಾನೇ ಈಗ ಮತ್ತೆ ಕಲಿಯಬೇಕಾದ ಪರಿಸ್ಥಿತಿಯಲ್ಲಿದ್ದೀನಿ. ಇಷ್ಟು ಸಿನಿಮಾಗಳನ್ನು ಮಾಡಿದ್ದೇನೆ, ಹೊಸಹೊಸ ಚಿತ್ರಗಳಲ್ಲಿ ಅಭಿನಯಿಸುತ್ತಿದ್ದೇನೆ. ಇವತ್ತು ಹೊಸಬರ ಜೊತೆಗೆ ಮಾಡುವಾಗ, ಅವರು ಬೇರೇನೋ ಕೇಳುತ್ತಿದ್ದಾರೆ ಅಂತನಿಸುತ್ತಿದೆ. ಹಾಗಾಗಿ, ಇದುವರೆಗೂ ಕಲಿತಿದ್ದನ್ನು ಮರೆತು, ಹೊಸದಾಗಿ ಕಲಿಯಬೇಕು. ಇದೊಂದು ಸವಾಲು. ಖುಷಿಯಾಗುತ್ತಿದೆ. ಇತ್ತೀಚೆಗೆ ‘ರಾಯನ್‍’ ಸಿನಿಮಾದ ಸಮಾರಂಭದಲ್ಲಿದ್ದೆ. ಆ ಚಿತ್ರಕ್ಕೆ ರೆಹಮಾನ್‍ ಸಂಗೀತ ಸಂಯೋಜಿಸುತ್ತಿದ್ದು, ರೆಹಮಾನ್‍ ಚಿತ್ರರಂಗಕ್ಕೆ ಬಂದು 30 ವರ್ಷಗಳಾಗಿವೆ. ನನ್ನ ಮೊದಲ ತಮಿಳು ಚಿತ್ರಕ್ಕೆ ಅವರೇ ಸಂಗೀತ ನಿರ್ದೇಶಕರು.

30 ವರ್ಷಗಳ ನಂತರವೂ ನಾವಿನ್ನೂ ಇದ್ದೀವಲ್ಲ ಎನ್ನುವುದೇ ಬಹಳ ಸಂತೋಷದ ವಿಷಯ. ಒಬ್ಬ ಕಲಾವಿದ ಬೆಳೆಯೋದು ಬರೀ ಅವನ ಪ್ರತಿಭೆಯಿಂದ ಮಾತ್ರವಲ್ಲ. ಜನರ ಪ್ರೀತಿಯಿಂದ ಮತ್ತು ಅದಕ್ಕಿಂತ ಜನರು ಅವನ ಮೇಲಿಟ್ಟಿರುವ ನಂಬಿಕೆಯಿಂದ. ಆ ನಂಬಿಕೆಯನ್ನು 30 ವರ್ಷಗಳ ಕಾಲ ಉಳಿಸಿಕೊಂಡಿದ್ದೇವೆ ಎನ್ನುವುದೇ ನಮ್ಮ ಹೆಮ್ಮೆ ಆಗುತ್ತದೆ. ಏಕೆಂದರೆ, ಅವರು ನಮ್ಮನ್ನು ನಂಬಿ ಒಂದು ವೇದಿಕೆ ಕೊಟ್ಟಿದ್ದಾರೆ. ಅವರಿಗೆ ಇಷ್ಟ ಆದರಂತೂ, ನಿಮ್ಮನ್ನು ಪ್ರೀತಿಸೋಕೆ ಕಾರಣಗಳನ್ನು ಹುಡುಕುತ್ತಾನೆ. ಒಬ್ಬ ವ್ಯಕ್ತಿಯ ಬೆಳವಣಿಗೆ ಬರೀ ಅವನು ಬೆಳೆದ ಎತ್ತರ ನೋಡಿ ಲೆಕ್ಕ ಹಾಕುವುದಲ್ಲ, ಅವನು ಎತ್ತರವಾಗಿ ಬೆಳೆದ ಮೇಲೆ ಎಷ್ಟು ಜನರನ್ನ ಬೆಳೆಸಿದ ಎನ್ನುವುದು ಬಹಳ ಮುಖ್ಯ.

‘ನಾನು ನನ್ನ ಕನಸು’ ಇರಬಹುದು, ‘ಒಗ್ಗರಣೆ’ ಅಥವಾ ‘ಇದೆಂಥಾ ರಾಮಾಯಣ’ ಚಿತ್ರಗಳು ನನ್ನ ಅಭಿರುಚಿ. ತಂದೆ-ಮಗನ ಸಂಬಂಧದ ಕುರಿತು ಸಾಕಷ್ಟು ಚಿತ್ರೆಗಳು ಬಂದಿವೆ. ಮಹಾತ್ಮ ಗಾಂಧಿ ಬಿಟ್ಟರೆ ನಾನೇ ಫಾದರ್‍ ಆಫ್‍ ದಿ ನೇಷನ್‍ ಅಂತಾರೆ. ಏಕೆಂದರೆ, ಅಷ್ಟೊಂದು ತಂದೆಯ ಪಾತ್ರಗಳನ್ನು ನಾನು ಇದುವರೆಗೂ ಮಾಡಿಬಿಟ್ಟಿದ್ದೀನಿ. ಇದು ತೀವ್ರವಾಗಿ ಕಾಡುವ ಸಿನಿಮಾ. ತಂದೆ-ಮಗನ ಬಾಂಧವ್ಯಕ್ಕಿಂತ, ಇಲ್ಲಿ ಮಗನನ್ನು ಅರ್ಥ ಮಾಡಿಕೊಳ್ಳುವುದರ ಜೊತೆಗೆ ಹಿರಿಯರನ್ನೂ ಅರ್ಥ ಮಾಡಿಕೊಳ್ಳಬೇಕು ಎಂದು ಸೂಕ್ಷ್ಮವಾಗಿ ಹೇಳಲಾಗಿದೆ. ಪರಿಸ್ಥಿತಿಯ ವಿಕೋಪಗಳಿಗೆ ಅಥವಾ ಕೆಲವು ಒತ್ತಡಗಳಿಗೆ ಆ ಸಂಬಂಧ ಪ್ರಶ್ನಿಸಲ್ಪಡುತ್ತದೆ. ಜೀವನದಲ್ಲಿ ಕೆಲವು ಸಂಘರ್ಷಗಳು ಬಂದಾಗ ನಮಗೊಂದು ಲಿಬರೇಶನ್ ‍ಸಿಗುತ್ತದೆ. ಒಂದು ಪರಿಸ್ಥಿತಿ ಎದುರಾದಾಗ ನಮ್ಮಳೊಗಿರುವ ಇನ್ನೊಂದು ಶಕ್ತಿ ನಮಗೆ ಅರ್ಥವಾಗೋದು ಅಥವಾ ನಾವು ಇನ್ನಷ್ಟು ಬೆಳೆಯೋದಕ್ಕೆ ಸಾಧ್ಯ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಇದೊಂದು ಜನ ಸಾಮಾನ್ಯರ ಸಿನಿಮಾ. ನಿಜವಾಗಲೂ ಕಾಡುವ ಸಿನಿಮಾ.

ಒಬ್ಬ ಗಂಡಸು ಮಕ್ಕಳು ಹುಟ್ಟುವ ತನಕ ಬರೀ ಒಬ್ಬ ಗಂಡ ಆಗಿರುತ್ತಾನೆ. ಮಕ್ಕಳು ಹುಟ್ಟಿದ ನಂತರ ಅಪ್ಪ ಎನ್ನುವ ಸ್ಥಿತಿ. ಅಪ್ಪನಿಗೂ, ಮಕ್ಕಳಿಗೂ ಒಂದೇ ವಯಸ್ಸು. ಅದರಲ್ಲೂ ಒಂದು ಹೆಣ್ಣು ಮಗಳ ಜೊತೆಗಿನ ಸಂಬಂಧ ಎಂದರೆ, ಅವನ ಜೀವನದಲ್ಲಿ ಬರುವ ಎಲ್ಲಾ ಸಂಬಂಧಗಳು, ಅಂದರೆ ತಾಯಿ ಇರಬಹುದು, ಹೆಂಡತಿ ಇರಬಹುದು, ತಂಗಿ ಇರಬಹುದು, ಸ್ನೇಹಿತೆ ಇರಬಹುದು. ಆದರೆ, ಮಗಳ ಜೊತೆಗೆ ಬೇರೆ ಸಂಬಂಧ ಇರುತ್ತದೆ. ಚೆನ್ನಾಗಿ ಬೆಳಸಿ ಯಾವುದನ್ನೂ ಎದುರು ನೋಡದೆ ಬಿಟ್ಟು ಕೊಡುವುದು. ತಂದೆ-ಮಗನ ಸಂಬಂಧ ಹಾಗಿರುವುದಿಲ್ಲ. ನನ್ನ ನಂತರ ನೀನು, ನನ್ನ ಇನ್ನೊಂದು ಛಾಯೆ ನೀನು ಎನ್ನುವ ಸಂಬಂಧ ಅದು. ಅದೊಂಥರಾ Love-Hate relationship. ತಂದೆ ತನ್ನ ಮಗನಿಗೆ ಕಲಿಸೋದಕ್ಕಿಂತ, ಅವನ behaviourನಿಂದ ಮಕ್ಕಳು ಕಲಿಯೋದು ತುಂಬಾ ಇರುತ್ತದೆ.

ನನಗೆ ನನ್ನ ಮಗಳ ಜೊತೆಗೆ ಇರುವ relationship ಬೇರೆ, ಮಗನ ಜೊತೆಗೆ ಇರುವ ಸಂಬಂಧ ಬೇರೆ. ಇವತ್ತಿನ ಪ್ರಪಂಚದಲ್ಲಿ ಹೊರಗೆ ಹೋಗಬೇಕು. ಸಾಕಷ್ಟು ಸಮಸ್ಯೆಗಳು ಇರುತ್ತವೆ. ಅದನ್ನು ಹೇಳಿಕೊಳ್ಳುವುದಕ್ಕೆ ಆಗಲ್ಲ. ಅದನ್ನು ಅವರೇ ನಿಭಾಯಿಸಬೇಕು. ಮಗ ಎಷ್ಟೇ ದೊಡ್ಡವನಾದರೂ, ತಂದೆಗೆ ಇನ್ನೂ ಚಿಕ್ಕವನು ಎಂದನಿಸುತ್ತದೆ. ಅದರ ಜೊತೆಗ ಮಗನಿಗೆ ತನ್ನದೇ ಆದ ನಿರ್ಧಾರಗಳೂ ಇರುತ್ತವೆ. ಅದನ್ನೂ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ನಿನಗೆ ಇಷ್ಟು ಮಾಡಿದೆ, ನೀನೇನು ವಾಪಸ್ಸು ಕೊಡುತ್ತೀಯ ಎನ್ನುವುದಕ್ಕಿಂತ ಅವನನ್ನೂ ಅರ್ಥ ಮಾಡಿಕೊಳ್ಳಬೇಕಾಗುತ್ತದೆ.

ಒಬ್ಬ ನಟನಾಗಿ ನನಗೆ ‘ನಾನು ನನ್ನ ಕನಸು’ ಬಹಳ ಇಷ್ಟವಾದ ಮತ್ತು ಕಾಡುವ ಸಿನಿಮಾ. ಏಕೆಂದರೆ, ನನ್ನ ಹೆಂಡತಿ ನನ್ನ ಹೆಂಡತಿಯಾಗಿಯೇ ಇರುತ್ತಾಳೆ. ಮಗಳು ಮದುವೆಯಾದಾಗ, ಮಾವ ಆಗ ನನಗೆ ಅರ್ಥಾವಾಗುತ್ತಾನೆ. ಅಲ್ಲಿಯವರೆಗೂ ಹೆಂಡತಿ ಅಪ್ಪ ಅಂತ ಜಗಳ ಆಡುತ್ತಿರುತ್ತೀವಿ. ನನ್ನ ಮಗಳಿಗೆ ಮಾವ ಸಿಗುತ್ತಾನೆ ಎಂದಾಗ, ನನಗೆ ಹೆಂಡತಿ ಅರ್ಥವಾಗುತ್ತಾ ಹೋಗುತ್ತಾಳೆ. ಅವಳು ಇನ್ನೊಬ್ಬಳ ಮಗಳಾಗಿದ್ದಳು, ನಾನು ಅವಳನ್ನು ಇನ್ನೊಬ್ಬರ ಮಗಳು ಅಂತ ನೋಡಿರಲೇ ಇಲ್ಲ. ನನ್ನ ಮಗಳನ್ನು ನಾನು ನೋಡುತ್ತಿದ್ದ ಹಾಗೆ, ಅವಳ ಅಪ್ಪ ಸಹ ಅವಳನ್ನು ಹಾಗೆಯೇ ನೋಡುತ್ತಿದ್ದ. ಮಗಳು ಮತ್ತು ತಂದೆಯ ಸಂಬಂಧದಲ್ಲಿ ಆ ಚಿತ್ರ ನನಗೆ ಬಹಳಷ್ಟು ವಿಷಯಗಳನ್ನು ಕಲಿಸಿತು. ಆ ಚಿತ್ರವನ್ನು ಬರೆಯುತ್ತಾ, ನಿರ್ದೇಶನ ಮಾಡುತ್ತಾ ತುಂಬಾ ಕಲಿತೆ. ಹಾಗಾಗಿ, ನನಗೆ ಅದು ಬಹಳ ಇಷ್ಟವಾದ ಚಿತ್ರ.

ಮಾಣಿಕ್ಯ ಒಳ್ಳೆಯದೇ? ಅದು ಕೋತಿ ಕೈಗೆ ಸಿಕ್ಕಿದರೆ? ಅದರ ಬಗ್ಗೆ ನಾವು ಯೋಚಿಸಬೇಕು. ಪ್ಲಸ್‍, ಮೈನಸ್‍ ಇದ್ದೇ ಇರುತ್ತದೆ. ಒಳಗಿನ ಅಸಹ್ಯವೂ ಹೊರಗೆ ಬರುತ್ತದೆ, ವಿಕಾರಗಳೂ ಹೊರಗ ಬರುತ್ತಿವೆ. ಅವೆರಡೂ ಬರಬೇಕು. ಸೋಷಿಯಲ್‍ ಮೀಡಿಯಾಗಳು ಬಹಳ ಮುಖ್ಯವಾದ ವಿಷಯಗಳನ್ನು ತಲುಪಿಸೋಕೆ ಮಹತ್ವದ ಪಾತ್ರ ವಹಿಸುತ್ತಿದೆ. ಇದರಲ್ಲಿ ಒಳ್ಳೆಯದೂ ಇದೆ, ಕೆಟ್ಟದ್ದೂ ಇದೆ. ಅವೆರಡರಲ್ಲಿ ನಾವು ಯಾವುದನ್ನು ತೆಗೆದುಕೊಳ್ಳುತ್ತೇವೆ ಎನ್ನುವುದು ಬಹಳ ಮುಖ್ಯ. ‘ಗೋಧಿಬಣ್ಣ ಸಾಧಾರಣ ಮೈಕಟ್ಟು’ ಚಿತ್ರದಲ್ಲಿ ಅನಂತ್‍ ನಾಗ್‍ ಒಂದು ಸಂಭಾಷಣೆ ಹೇಳ್ತಾರೆ. ‘ನಮ್ಮೆಲ್ಲರಲ್ಲೂ ಕಪ್ಪು ನಾಯಿ, ಬಿಳಿ ನಾಯಿ ಇರತ್ತೆ. ಕಪ್ಪು ನಾಯಿ ಕೆಟ್ಟದ್ದು, ಬಿಳಿ ನಾಯಿ ಒಳ್ಳೇದು.

ಅವೆರಡರಲ್ಲಿ ನಾವು ಯಾವುದಕ್ಕೆ ಊಟ ಜಾಸ್ತಿ ಹಾಕುತ್ತೇವೆ ಅನ್ನೋದು ಮುಖ್ಯ’ ಅಂತಾರೆ. ನಾವು ಎರಡನ್ನೂ ನೋಡಬೇಕು. ಅಣು ಬಾಂಬ್‍ ಕಂಡುಹಿಡಿದಿದ್ದು ಎನರ್ಜಿಗೆ, ಇನ್ನೊಬ್ಬರನ್ನು ಕೊಲ್ಲುವುದಕ್ಕೆ ಅಲ್ಲ. ಇಲ್ಲಿ ನಮ್ಮ ಮನಸ್ಸಾಕ್ಷಿ, ಆತ್ಮಾವಲೋಕನ ಬಹಳ ಮುಖ್ಯ. ಇದನ್ನು ಯಾರೋ ಒಬ್ಬರು ನೋಡುವುದಿಲ್ಲ. ಹೆಣ್ಮಕ್ಕಳು ನೋಡುತ್ತಿರುತ್ತಾರೆ. ಸಮಾಜದ ಒಂದು ಸ್ವಾಸ್ತ್ಯ ನೋಡುತ್ತಿರುತ್ತದೆ. ಅವರಿಗೆ ನಾವೇನು ತಲುಪಿಸಬೇಕು, ಯಾವುದು ಮುಖ್ಯ ಆಗಬೇಕು ಎಂಬುದು ನಮ್ಮ ಕೈಯಲ್ಲಿರೋದು. ಇವತ್ತಿನ ಯುವ ಜನಾಂಗದ ತಪ್ಪೇನು ಇಲ್ಲ. ಒಬ್ಬಿಬ್ಬರು ತಪ್ಪು ಮಾಡಿದರೆ, ಎಲ್ಲರೂ ತಪ್ಪು ಮಾಡುತ್ತಾರೆ ಎನ್ನುವುದು ತಪ್ಪು. Let’s be responsible ಅಷ್ಟೇ. (ಬರಹ : ಚೇತನ್ ನಾಡಿಗೇರ್, ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರಮ ಸಂಸ್ಕೃತಿ ಗೌರವಿಸುವ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ

Published

on

  • ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಸ್ಕಿ ಭಾರತ ದೇಶ ಕೃಷಿ ಪ್ರಧಾನವಾದ ದೇಶ.ಇಲ್ಲಿ ಹಲವಾರು ಭಾಷೆ, ಹಲವಾರು ಸಂಸ್ಕೃತಿ ಹಾಗೂ ಹಲವಾರು ರಾಜ್ಯಗಳನ್ನು ಒಳಗೊಂಡ ಭಾರತ. ತನ್ನೊಳಗೆ ವಿಭಿನ್ನ ಸಂಸ್ಕೃತಿಯನ್ನು ಐತಿಹಾಸಿಕ ಹಿನ್ನೆಲೆಯನ್ನು ಒಳಗೊಂಡಿದೆ. ಇಲ್ಲಿ ಆಚರಿಸುವ ಬಹುತೇಕ ಹಬ್ಬಗಳು ಹಳ್ಳಿಯ ಸೊಗಡಿನೊಂದಿಗೆ ಸಮ್ಮಿಲಿತಗೊಂಡಿವೆ. ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಬಹುತೇಕ ಹಬ್ಬಗಳ ಹಿನ್ನೆಲೆಯನ್ನು ಒಳಗೊಂಡಿವೆ .

ಮಳೆಗಾಲದಲ್ಲಿ ಬರುವ ವಿಶೇಷ ಹಬ್ಬವೇ ಮಣ್ಣೆತ್ತಿನ ಅಮಾವಾಸ್ಯೆ. ಮಳೆಗಾಲದ ಪ್ರಾರಂಭದ ದಿನಗಳಲ್ಲಿ ಬರುವ ಈ ಹಬ್ಬ ಉತ್ತರ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡುತ್ತದೆ .ಮುಂಗಾರು ಪ್ರಾರಂಭವಾಗಿ ರೈತರು ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಿ ಹೊಲಗಳನ್ನು ಹಸನು ಮಾಡಿ ಬಿತ್ತನೆ ಹಾಗೂ ನಾಟಿಯನ್ನು ಮಾಡಿರುತ್ತಾರೆ. ಹೊಲಗಳು ಹಸಿರಿನಿಂದ ಕಂಗೊಳಿಸುತ್ತಿರುತ್ತವೆ ಇಂತಹ ದಿನಗಳಲ್ಲಿ ರೈತರು ವಿಶ್ರಾಂತಿಯನ್ನು ಪಡೆಯುವ ಜೊತೆಗೆ ತಮ್ಮ ಒಡನಾಡಿಯಾದ ಜಾನುವಾರುಗಳನ್ನು, ಎತ್ತುಗಳನ್ನು ಪ್ರೀತಿಯಿಂದ ಪೋಷಿಸುತ್ತಾರೆ .ಕಾರ ಹುಣ್ಣಿಮೆಯ ನಂತರ ಬರುವ ಮಣ್ಣೆತ್ತಿನ ಅಮವಾಸೆ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಬಹು ಸಂಭ್ರಮದ ಹಬ್ಬ .

ರೈತರ ಒಡನಾಡಿ ಹಾಗೂ ರೈತರ ಉಸಿರೆಂದರೆ ಎತ್ತುಗಳು ಎತ್ತುಗಳೊಂದಿಗೆ ರೈತರು ಅವಿನಾಭಾವ ಸಂಬಂಧವನ್ನು ಹೊಂದಿರುತ್ತಾರೆ .ಎತ್ತುಗಳನ್ನು ಕೇವಲ ಪ್ರಾಣಿಗಳೆಂದು ಪರಿಗಣಿಸದೆ ತಮ್ಮ ಮನೆಯ ಸದಸ್ಯರಂದೇ ಪರಿಗಣಿಸಿ ಅವುಗಳನ್ನು ಪ್ರೀತಿಯಿಂದ ಅಕ್ಕರೆಯಿಂದ ಸಾಕುತ್ತಿರುತ್ತಾರೆ. ರಾಮ, ಲಕ್ಷ್ಮಣ ಭೀಮ, ಕರಿಯ, ಚೆನ್ನ,ಬಸವ, ಕೆಂಪ ಹಾಗೂ ತಮ್ಮ ನೆಚ್ಚಿನ ನಾಯಕ ನಟರ ಹೆಸರನ್ನು ತಮ್ಮ ಪ್ರೀತಿಯ ಎತ್ತುಗಳಿಗೆ ಇಟ್ಟು ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. ರೈತರ ಕಷ್ಟ ,ಸುಖಗಳಲ್ಲಿ ಹಾಗೂ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಎತ್ತುಗಳಿಗೆ ರೈತರು ಅಪಾರ ಗೌರವವನ್ನು ನೀಡುತ್ತಾರೆ.

ಶಂಕರ ದೇವರು ಹಿರೇಮಠ, ಸಾಹಿತಿಗಳು

ಮಣ್ಣೆತ್ತಿನ ಅಮಾವಾಸ್ಯೆ ದಿನದ ಮೊದಲೇ ಹಳ್ಳ, ಹೊಳೆ, ಗದ್ದೆಗಳಿಂದ ಮಣ್ಣನ್ನು ತಂದು ಜೋಡಿ ಎತ್ತುಗಳನ್ನು ಮಾಡಿ ಎತ್ತುಗಳಿಗೆ ಮೇವು ಹಾಕುವ ಒಂದು ಗೋದಲಿಯನ್ನು ಮಾಡುತ್ತಾರೆ. ಎತ್ತುಗಳನ್ನು ಮಣ್ಣಿನಿಂದಲೇ ಮಾಡಿ ಅವುಗಳನ್ನು ದೇವರ ಮನೆಯ ಜಗಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಇನ್ನೂ ಕೆಲವರು ಹೊಲಗಳಿಗೆ ತೆಗೆದುಕೊಂಡು ಹೋಗಿ ಅಲ್ಲಿ ಪೂಜೆ ಮಾಡುತ್ತಾರೆ .

ರೈತ ಹಾಗೂ ಎತ್ತುಗಳಿಗೆ ಅವಿನಾಭಾವ ಸಂಬಂಧ ಶತಶತಮಾನಗಳಿಂದ ಇದೆ. ಭಾರತದ ಪ್ರತಿಯೊಂದು ಕೃಷಿ ಕುಟುಂಬವು ಕೃಷಿಯೊಂದಿಗೆ ಹಾಗೂ ಮಣ್ಣಿನೊಂದಿಗೆ ಅವಿನಾಭಾವ ಸಂಬಂಧದ ನಂಟಿದೆ .ಮಳೆಗಾಲದಲ್ಲಿ ಬಿತ್ತನೆಯಾಗಿ ಬೆಳೆ ಬೆಳೆದು ಹಸಿರಿನಿಂದ ಭೂಮಿ ಕಂಗೊಳಿಸುತ್ತಿರುವ ಈ ದಿನಗಳಲ್ಲಿ ಕೃಷಿಯಲ್ಲಿ ಭಾಗಿಯಾಗುವ ಎತ್ತುಗಳಿಗೆ ಗೌರವಿಸುವ ಮೂಲಕ ಈ ದಿನಗಳಲ್ಲಿ ಶ್ರಮ ಶ್ರಮ ಸಂಸ್ಕೃತಿಯನ್ನು ಗೌರವಿಸುವ ಕಾರ್ಯ ಶತಮಾನಗಳಿಂದ ನಡೆದುಕೊಂಡು ಬಂದಿದೆ .

ಹಳ್ಳಿಗಳಲ್ಲಿ ಕುಂಬಾರರು ತಯಾರಿಸಿದ ಸುಂದರವಾದ ಎತ್ತುಗಳನ್ನು ಕೊಂಡು ತಂದು ಅವುಗಳಿಗೆ ಪೂಜೆ ಸಲ್ಲಿಸಿ ಸಂಭ್ರಮಿಸಿ ಸಂತೋಷಪಡುವರು. ರೈತರು ಹಿಂದೆ ಎತ್ತುಗಳನ್ನು ಕೊಟ್ಟು ಅದರ ಬದಲಾಗಿ ದವಸ ಧಾನ್ಯಗಳನ್ನು ಪಡೆಯುತ್ತಿದ್ದರು. ಇಂದು ನಗರೀಕರಣದ ಪರಿಣಾಮ ಎತ್ತುಗಳು ಮಾರಾಟದ ಸರಕಾಗಿ ಪರಿಣಮಿಸಿವೆ. ಆದರೂ ಇನ್ನೂ ಹಳ್ಳಿಗಳಲ್ಲಿ ಎತ್ತುಗಳನ್ನು ಪೂಜ್ಯನೀಯ ಸ್ಥಾನದಲ್ಲಿ ಇಟ್ಟು ಗೌರವಿಸುತ್ತಾರೆ. ಮಣ್ಣೆತ್ತಿನ ಅಮಾವಾಸ್ಯೆ ವಿಶೇಷವಾಗಿ ಮಕ್ಕಳಿಗೆ ಸಂಭ್ರಮದ ಹಬ್ಬ. ಹಬ್ಬದ ಮರುದಿನ ಮಕ್ಕಳು ಮನೆ ಮನೆಗೆ ತೆರಳಿ ಕುಂಟೆತ್ತು ಬಂದಿದೆ ಅಂತ ಹೇಳಿ ಅಕ್ಕಿ, ಜೋಳ, ಕಾಳು, ಬೆಲ್ಲ ತಂದು ಅವುಗಳಿಂದ ಸಿಹಿ ಅಡಿಗೆ ಮಾಡಿಕೊಂಡು ಎಲ್ಲ ಮಕ್ಕಳು ಊಟ ಮಾಡಿ ಎತ್ತುಗಳಿಗೆ ಮತ್ತೊಮ್ಮೆ ಪೂಜೆ ಸಲ್ಲಿಸಿ ಅವುಗಳನ್ನು ವಿಸರ್ಜಿಸುವ ಪದ್ಧತಿ ರೂಢಿ ಇದೆ. ಮಕ್ಕಳೆಲ್ಲ ಸಂಭ್ರಮದಿಂದ ಈ ಕಾರ್ಯದಲ್ಲಿ ಭಾಗವಹಿಸಿ ಮಣ್ಣೆತ್ತಿನ ಅಮಾವಾಸ್ಯೆ ಯನ್ನು ಜೀವಂತವಾಗಿಸುವ ಕಾರ್ಯವನ್ನು ಈಗಲೂ ಮಾಡುತ್ತಿದ್ದಾರೆ .

ಈಗೀಗ ಕೃಷಿ ಚಟುವಟಿಕೆಗಳಿಗೆ ಹೆಚ್ಚಾಗಿ ಯಂತ್ರಗಳನ್ನು ಹಾಗೂ ಟ್ರ್ಯಾಕ್ಟರ್ ಗಳನ್ನು ಬಳಸುತ್ತಿರುವ ಕಾರಣದಿಂದ ಎತ್ತುಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ರೈತರ ಒಡನಾಡಿಯಾದ ಎತ್ತುಗಳು ಇಂದು ಪ್ರತಿಷ್ಠೆಯ ಪ್ರತೀಕವಾಗಿ ಇನ್ನೂ ಕುಟುಂಬದ ಕೆಲವರು ಲಕ್ಷ ಲಕ್ಷ ಹಣ ಕೊಟ್ಟು ಖರೀದಿಸಿ ಮನೆಗೆ ತಂದು ಎತ್ತುಗಳನ್ನು ಸಾಕುತ್ತಿದ್ದಾರೆ. ಎತ್ತುಗಳು ನಮ್ಮ ಅನ್ನದಾತರ ಗೌರವ ಪ್ರತೀಕ .ನಾವೆಲ್ಲರೂ ಕುಳಿತು ಊಟ ಮಾಡುವ ಪ್ರತಿಯೊಂದು ಅನ್ನದ ಅಗಳಿನ ಹಿಂದೆ ಕೋಟಿಗಟ್ಟಲೆ ರೈತರ ಶ್ರಮ ಇದೆ .ಆ ಶ್ರಮದ ಹಿಂದೆ ಎತ್ತುಗಳ ಒಡೆಯನಾದ ರೈತನ ಮೇಲಿನ ಪ್ರೀತಿ ಇದೆ .(ಬರಹ-ಶಂಕರ ದೇವರು ಹಿರೇಮಠ, ಸಾಹಿತಿಗಳು)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ15 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ15 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ16 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ16 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ18 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending