Connect with us

ಬಹಿರಂಗ

ದಲಿತರ ಅವ್ವ ರಮಾಬಾಯಿ ಅಂಬೇಡ್ಕರ್ ಮಾಡಿದ ಮೊಟ್ಟಮೊದಲ ಸಾರ್ವಜನಿಕ ಭಾಷಣ

Published

on

ರಮಾಬಾಯಿ ಅಂಬೇಡ್ಕರ್ ರವರಿಗೆ ಜನುಮ ದಿನದ ಶುಭಾಶಯಗಳು

ದಿನದ ಬೆಳಗು ತುಂಬ ಉತ್ಸಾಹದಿಂದಲೇ ಮೂಡಿಬಂತು. ಇಂದು ಮಹಾಮಾತೆ ರಮಾಯೀ ಭೀಮರಾವ್ ಅಂಬೇಡ್ಕರ್ ಸಮಾಜದ ಮಹಿಳಾ ಮಂಡಲದಲ್ಲಿ ಭಾಷಣ ಮಾಡುವವರಿದ್ದರು. ಮನೆಯ ಎಲ್ಲ ಕೆಲಸಗಳನ್ನು ಮುಗಿಸಿದ ರಮಾಯಿ ಸಂಜೆ ಆಗಮಿಸಿದ ಮಹಿಳಾ ಮಂಡಳದ ಇಬ್ಬರು ಹೆಣ್ಣುಮಕ್ಕಳೊಂದಿಗೆ ನಡೆದಳು. ಹಾಗೆ ಹೋಗುವುದಕ್ಕಿಂತ ಮುಂಚೆ ಆಕೆ ತನ್ನ ಮಾವನ (ಸುಬೇದಾರ ರಾಮಜೀ) ಪ್ರತಿಮೆಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡಳು. ಮನಸ್ಸಿನಲ್ಲಿಯೇ ತನ್ನ ಪತಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಸ್ಮರಿಸಿದಳು. ಮಹಿಳಾ ಮಂಡಲದ ಸಭೆಯ ವೇದಿಕೆಯೇರಿದ ರಮಾಯಿ ಮಾತನಾಡತೊಡಗಿದಳು.

“ನನ್ನ ಆತ್ಮೀಯ ತಾಯಂದಿರೆ ಮತ್ತು ಸಹೋದರಿಯರೆ,
ಇಂದು ನಾನು ಮೊಟ್ಟಮೊದಲ ಬಾರಿಗೆ ಮಾತನಾಡಲು ನಿಂತಿದ್ದೇನೆ. ಮಾತಾಡುವಾಗ ಏನಾದರೂ ತಪ್ಪು-ತಡೆಗಳುಂಟಾದರೆ ತಿದ್ದಿಕೊಳ್ಳಿ. ನಾವು ಪ್ರತಿನಿತ್ಯದ ಬದುಕಿನಲ್ಲಿ ನೋಡುವುದೇನೆಂದರೆ, ಪತಿ ಯಾವ ಕಾರ್ಯದ ಭಾರವನ್ನು ತನ್ನ ಹೆಗಲ ಮೇಲೆ ಹೊತ್ತುಕೊಂಡಿರುತ್ತಾನೋ ಆ ಭಾರವನ್ನು ಸಹಧರ್ಮಿಣಿಯಾಗಿ ಪತ್ನಿಯರೂ ಹೆಗಲು ಕೊಟ್ಟು ಹೊತ್ತುಕೊಳ್ಳಬೇಕಾಗುತ್ತದೆ. ಇಂಥ ಅನುಭವಗಳು ನನ್ನ ಬದುಕಿನಲ್ಲಿ ಸಾಕಷ್ಟು ಇವೆ ಎಂದು ನನಗನ್ನಿಸುತ್ತದೆ. (ಜನಸಮುದಾಯದ ಕರತಾಡನ)

ನನ್ನಂತಹ ಮದುವೆಯಾಗಿರುವ ಹೆಣ್ಣಿಗೆ ಪತಿಸೇವೆಯ ಹೊರತು ಈ ಜಗತ್ತಿನಲ್ಲಿ ಮತ್ತೇ ಕೆಲವು ಸೇವಾಕಾರ್ಯಗಳು ಇವೆ ಎಂಬ ಅರಿವು ಇಲ್ಲಿಯವರೆಗೆ ನನಗಿರಲಿಲ್ಲ. ಆದರೆ ಇಂದು ಈ ಭವ್ಯ ವೇದಿಕೆಯ ಮೇಲೆ ನಿಂತು, ಸೇರಿರುವ ಬಹುದೊಡ್ಡ ಸಂಖ್ಯೆಯ ಜನಸಮುದಾಯವನ್ನು ಕಂಡಾಗ ನನಗನ್ನಿಸುತ್ತಿದೆ ; ‘ಸಕಲರಲ್ಲೂ ಅರಿವು ತುಂಬಿಯೇ ಬಿಡಬೇಕು’ (ಶಹಾಣೆ ಕರೂಣಿ ಸೋಡಾವೆ ಸಕಲಜನ)….. (ಜನಸಮುದಾಯ ಉತ್ಸಾಹದಿಂದ ಚಪ್ಪಾಳೆ ತಟ್ಟುತ್ತಲೇ ಘೋಷಣೆ ಕೂಗತೊಡಗಿದರು ; ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)

ನನಗೆ ಇಂತಹ ಜೈಕಾರ ಹಾಕಬೇಡಿ. ಇನ್ನೂ ನಾನು ನಿಮಗಾಗಿ ಏನನ್ನೂ ಮಾಡಿದವಳಲ್ಲ. ಆ ಬಗ್ಗೆ ನನಗೆ ವಿಷಾದವೆನಿಸುತ್ತದೆ. ಇರಲಿ. ನಮ್ಮೆಲ್ಲರ ಮುಂದಾಳು ಡಾ. ಬಾಬಾಸಾಹೇಬ ಅಂಬೇಡ್ಕರರು ಮೇಲಿಂದ ಮೇಲೆ ಹೇಳುತ್ತಿರುತ್ತಾರೆ ; ನಾವು ಹೆಣ್ಣುಮಕ್ಕಳೆಲ್ಲ ಮುಂದೆ ಬಂದು, ಸಮಾಜದ ಕ್ರಾಂತಿ-ಚಳುವಳಿಯಲ್ಲಿ, ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳಲ್ಲಿ ಭಾಗಿಯಾಗಬೇಕು. ಯಾಕೆಂದರೆ ಹೆಣ್ಣುಮಕ್ಕಳು ಏಕನಿಷ್ಠರಾಗಿರುತ್ತಾರೆ. ಯಾವುದೇ ಚಳುವಳಿಯಲ್ಲಿ ಹೆಣ್ಣುಮಕ್ಕಳು ಸಹಭಾಗಿಯಾಗಬೇಕು. ಇದರ ಹೊರತಾಗಿ ಚಳುವಳಿಯ ಹೆಜ್ಜೆ ಮುಂದೆ ಸಾಗುವುದಿಲ್ಲ.(ಜನರಿಂದ ಪ್ರಚಂಡ ಕರತಾಡನ) ಜಗತ್ತಿನ ಕ್ರಾಂತಿ-ಚಳುವಳಿ ಯಾವುದರ ಮೇಲೆ ನಡೆಯುತ್ತವೆ ? ತ್ಯಾಗದ ಮೇಲೆ. ಅದು ಎಂಥದ್ದೇ ತ್ಯಾಗ ಇರಲಿ, ಚಳುವಳಿಗಾರರು ಎಷ್ಟೋ ಅಗ್ನಿದಿವ್ಯ ಹಾದು ಬರಬೇಕಾಗುತ್ತದೆ. ಇಲ್ಲದಿದ್ದರೆ ಬಯಸಿದ ಬಂಗಾರ ದೊರೆಯಲಾರದು. ಈ ಬಗ್ಗೆ ಒಮ್ಮೆ ಡಾ. ಅಂಬೇಡ್ಕರ ಅವರು ಹೇಳಿದ ಒಂದು ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ. ಇದು ಗ್ರೀಕ್ ಪುರಾಣದಲ್ಲಿ ಬರುವ ಕತೆ.

ಡಿಮೇಟರ್ ಹೆಸರಿನ ದೇವತೆಯೊಬ್ಬಾಕೆ ಮನುಷ್ಯರೂಪ ಧರಿಸಿ ಭೂಮಿಗೆ ಬಂದಳು. ಆಕೆಯನ್ನು ಅಲ್ಲಿಯ ರಾಣಿಯೊಬ್ಬಳು ದಾಸಿಯನ್ನಾಗಿ ಇಟ್ಟುಕೊಂಡು ತನ್ನ ಬಾಲಕ ಮಗನ ಉಸ್ತುವಾರಿ ನೋಡಿಕೊಂಡಿರಲು ಹೇಳಿದಳು. ರಾಣಿಯ ಆ ಮಗನನ್ನು ‘ದೇವ’ನನ್ನಾಗಿಸಬೇಕು ಎಂಬ ಹಂಬಲ ಆ ದೇವತೆಗೆ ಉಂಟಾಯಿತು. ಹೀಗಾಗಿ ಆಕೆ ದಿನವೂ ರಾತ್ರಿ ಎಲ್ಲರೂ ಮಲಗಿಕೊಂಡ ಮೇಲೆ ಎಲ್ಲ ಬಾಗಿಲು-ಕಿಟಕಿಗಳನ್ನು ಮುಚ್ಚುತ್ತಿದ್ದಳು. ತೊಟ್ಟಿಲಲ್ಲಿ ಮಲಗಿದ ಮಗುವನ್ನು ಹೊರತೆಗೆದು, ಅದರ ಮೈಮೇಲಿನ ಬಟ್ಟೆಗಳನ್ನೆಲ್ಲ ಬಿಚ್ಚಿ ಹಾಕಿ ಬಿಸಿ ಬೂದಿಯ ಮೇಲೆ ಒಂದಿಷ್ಟು ಕಾಲ ಆ ಮಗುವನ್ನು ಮಲಗಿಸುತ್ತಿದ್ದಳು ! ಕ್ರಮೇಣ ಬೆಂಕಿಯ ಬಿಸಿಯನ್ನು ತಡೆದುಕೊಳ್ಳುವ ಸಾಮರ್ಥ್ಯ ಆ ಮಗುವಿಗೆ ಬಂತು. ಅದರ ಬಲ ವೃದ್ಧಿಸತೊಡಗಿತು. ಆ ಮಗುವಿನಲ್ಲಿ ಅತ್ಯಂತ ತೇಜಸ್ವಿಯಾದ ದೈವೀ ಅಂಶ ವಿಕಸಿತವಾಗತೊಡಗಿತ್ತು. ಆದರೆ ಒಂದು ರಾತ್ರಿ ಆ ಮಗುವಿನ ತಾಯಿ ರಾಣಿ ಅಚಾನಕ್ಕಾಗಿ ಆ ಕೋಣೆಯನ್ನು ಹೊಕ್ಕಳು. ಅಲ್ಲಿ ನಡೆಯುತ್ತಿದ್ದುದ್ದನ್ನೆಲ್ಲ ಕಣ್ಣಾರೆ ಕಂಡ ಆಕೆ ತುಂಬ ನೊಂದುಕೊಂಡಳು. ಆಕೆ ತಕ್ಷಣ ತನ್ನ ಮಗುವನ್ನು ಒಲೆಯ ಮೇಲಿನಿಂದ ಎತ್ತಿ ಎದೆಗವಚಿಕೊಂಡಳು. ಆ ರಾಣಿಗೆ ಆಕೆಯ ಮಗುವೇನೋ ದೊರೆಯಿತು. ಆದರೆ ಸಾಮರ್ಥ್ಯಶಾಲಿ ದೇವನಾಗಬೇಕಿದ್ದ ದೇವನನ್ನೇ ಆಕೆ ಕಳೆದುಕೊಂಡಳು..!

ಈ ಕತೆಯ ತಾತ್ಪರ್ಯ ಇಷ್ಟೆ ; ಕುಲುಮೆಯಲ್ಲಿ ಕಾಯದೆ ದೇವತನ ಬರುವುದಿಲ್ಲ. ಬೆಂಕಿ, ಮನುಷ್ಯನನ್ನು ಶುದ್ಧಿಗೊಳಿಸುತ್ತದೆ ಮತ್ತು ಮನುಷ್ಯನಲ್ಲಿ ಶಕ್ತಿಯನ್ನು ತುಂಬುತ್ತದೆ. ಆದ್ದರಿಂದ ಅಸ್ಪೃಶ್ಯ ಎನಿಸಿಕೊಂಡಿರುವವರು ಕಡುಕಷ್ಟ ಮತ್ತು ತ್ಯಾಗದ ಅಗ್ನಿದಿವ್ಯ ಸಹಿಸದೇ ಉದ್ಧಾರವಾಗಲಾರರು. ನೀವು ನಿಮ್ಮನ್ನು ಅಸ್ಪೃಶ್ಯ, ಕೀಳು ಎಂದುಕೊಳ್ಳಬೇಡಿ. ಮನೆಯನ್ನು ಸ್ವಚ್ಚವಾಗಿಟ್ಟುಕೊಳ್ಳಿ. ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ. ‘ಮಗನಾಗಬೇಕು ತೇಜ ; ಮೂರು ಲೋಕದಲ್ಲೂ ಇರಬೇಕು ಆತನದೇ ಧ್ವಜ’ ಎಂಬ ಆಶಯವನ್ನು ಮನಸ್ಸಿನಲ್ಲಿಟ್ಟುಕೊಂಡು ಇನ್ನುಮುಂದೆ ನಮ್ಮ ಮಕ್ಕಳನ್ನು ಬೆಳೆಸಬೇಕು. ಅದರಲ್ಲೇ ನಮ್ಮ ಉದ್ಧಾರವಿದೆ. ಇಷ್ಟು ಹೇಳಿ ನಾನು ನನ್ನ ಭಾಷಣವನ್ನು ಮುಗಿಸುತ್ತೇನೆ” (ಪ್ರಚಂಡ ಕರತಾಡನ. ಜಯಘೋಷ ‘ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಅವರಿಗೆ ಜಯವಾಗಲಿ)

ದಲಿತರ ಅವ್ವ : ರಮಾಬಾಯಿಯ ಎರಡನೆಯ ಮತ್ತು ಅಂತಿಮ ಭಾಷಣ

ಆ ದಿನ 29ನೇ ಜನೇವರಿ 1932 !
ಡಾ. ಬಾಬಾಸಾಹೇಬ ಅಂಬೇಡ್ಕರರು ಕುಳಿತ್ತಿದ್ದ ಲಂಡನ್ನಿನ ಹಡಗು ಬೆಳಿಗ್ಗೆ ಸರಿಯಾಗಿ ಆರು ಗಂಟೆಗೆ ಮುಂಬಾಯಿಯ ಬಂದರಿಗೆ ಬಂದು ತಲುಪಿತು. ಸೇರಿದ ಸಾವಿರಾರು ಅನುಯಾಯಿಗಳ ಹೃದಯ ಆನಂದದಿಂದ ತುಂಬಿ ತುಳುಕಿತು !

ಆ ದಿನ ನಸುಕಿನಿಂದಲೇ ಡಾ. ಬಾಬಾಸಾಹೇಬ ಅಂಬೇಡ್ಕರರ ನಿಷ್ಟಾವಂತ ಅನುಯಾಯಿಗಳೂ, ಸಂಬಂಧಿಕರೂ ಹಾಗೂ ಹಿತಚಿಂತಕರು ಡಾ. ಬಾಬಾಸಾಹೇಬ ಅಂಬೇಡ್ಕರರ ಹಾದಿಯನ್ನು ತುಂಬ ಉತ್ಸಾಹಿತರಾಗಿಯೇ ಕಾಯುತ್ತಿದ್ದರು. ಪ್ರತಿಯೊಬ್ಬರೂ ಕೈಯಲ್ಲಿ ಹೂಮಾಲೆ-ಹೂಗುಚ್ಛ ಹಿಡಿದುಕೊಂಡು ನಸುಕಿನ ಚಳಿಗೂ ಅಂಜದೆ ಶಾಂತವಾಗಿಯೇ ಕಾಲಿಡಲೂ ಜಾಗವಿಲ್ಲದಂತೆ ಕಿಕ್ಕಿರಿದು ನಿಂತಿದ್ದರು.

ಆ ಜನಸಂದಣಿಯಲ್ಲಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರ ಧರ್ಮಪತ್ನಿ ದಲಿತರ ಅವ್ವ ರಮಾಯಿ ನಿಂತಿದ್ದಳು ! ಸುವಾಸಿತ ಹೂವಿನಿಂದ ಮಾಡಲ್ಪಟ್ಟ ಮಾಲೆಯನ್ನು ಆಕೆ ಹಿಡಿದುಕೊಂಡು ತನ್ನ ‘ಸಾಹೇಬ’ರನ್ನು ಎದುರುಗೊಳ್ಳಲು ನಿಂತಿದ್ದಳು !ತನ್ನ ಸಾಹೇಬನನ್ನು ಯಾವಾಗ ಕಣ್ಣು ತುಂಬಿಕೊಳ್ಳುತ್ತೇನೆಯೋ ಎಂಬ ಕಾತರದಲ್ಲಿ ಆಕೆ ಇದ್ದಳು ! ಅಷ್ಟರಲ್ಲಿ ಗದ್ದಲ, ಜಯಕಾರ ಸುರುವಾದವು. ಡಾ. ಬಾಬಾಸಾಹೇಬ ಅಂಬೇಡ್ಕರರು ಹಡಗಿನಿಂದ ಇಳಿದು ಬರುತ್ತಿದ್ದರು. ಗಗನಭೇದಿ ಘೋಷಣೆ ಮುಳುಗತೊಡಗಿದವು ! ‘ಡಾ. ಬಾಬಾಸಾಹೇಬ ಅಂಬೇಡ್ಕರ ಕೀ ಜೈ !ಅಂಬೇಡ್ಕರ್ ಅಂಬೇಡ್ಕರ್ .. ದಲಿತರ ದೇವ ಅಂಬೇಡ್ಕರ್ ! ಮೊಟ್ಟಮೊದಲು ಸಮತಾ ಸೈನಿಕ ದಳವು ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಹಾರ ಹಾಕಿ ಗೌರವ ವಂದನೆ ಸಲ್ಲಿಸಿತು.

ನೋಡು ನೋಡುವಷ್ಟರಲ್ಲಿಯೇ ಹೂಮಾಲೆಗಳನ್ನು ಹಿಡಿದು ನಿಂತಿದ್ದ ಜನಸಮೂಹ ನಾ ಮುಂದು ತಾ ಮುಂದು ಎಂದು ಡಾ. ಬಾಬಾಸಾಹೇಬ ಅಂಬೇಡ್ಕರರನ್ನು ಸುತ್ತುವರಿಯಿತು ! ಅಪರಿಮಿತ ಭಕ್ತಿ, ಪ್ರೇಮ ಮತ್ತು ನಿಷ್ಟೆಯ ಸಂಕೇತವಾಗಿ ಹೂಮಾಲೆಗಳು ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳನ್ನು ಅಲಂಕರಿಸಿದವು. ರಮಾಯಿ ಮಾತ್ರ ಈ ಎಲ್ಲ ಗದ್ದಲದಿಂದ ಒಂದಿಷ್ಟು ದೂರವೇ ಉಳಿದಿದ್ದಳು ! ತನ್ನ ‘ಸಾಹೇಬ’ನ ಮೇಲೆ ಸೂಸುತ್ತಿದ್ದ ಅಪಾರ ಜನರ ಅಪರಿಮಿತ ಪರಿಶುದ್ಧ ಪ್ರೇಮವನ್ನು ಆಕೆ ಮೊದಲ ಬಾರಿ ನೋಡುತ್ತಿದ್ದಳು ! ನೋಡುತ್ತ ನೋಡುತ್ತ ಆಕೆಯ ಕಣ್ಣಾಲಿಗಳು ತುಂಬಿದವು ! ಆನಂದಭಾಷ್ಟ ಉದರಿದವು !ಎಲ್ಲರೂ ಮಾಲೆ ಹಾಕಿ ಮುಗಿದಾದ ಮೇಲೆ ರಮಾಯಿ ಕೊನೆಯವಳಾಗಿ ಡಾ. ಬಾಬಾಸಾಹೇಬ ಅಂಬೇಡ್ಕರರ ಬಳಿಗೆ ಹೋದಳು !ಅಖಂಡವಾಗಿ ನಿಂತ ಡಾ. ಬಾಬಾಸಾಹೇಬ ಅಂಬೇಡ್ಕರರು !ರಮಾಬಾಯಿ ತಲೆಯೆತ್ತಿ ಕೂಡ ನೋಡಲಿಲ್ಲ !ಕೈಯಲ್ಲಿರುವ ಸುವಾಸಿತ ಮಾಲೆಯನ್ನು ಆಕೆ ಡಾ. ಬಾಬಾಸಾಹೇಬ ಅಂಬೇಡ್ಕರರ ಕೊರಳಿಗೆ ಹಾಕಿದಳು !ಆದರೆ ಆಕೆ ದೃಷ್ಟಿ ಮಾತ್ರ ಅವರ ಪದತಲದಲ್ಲಿಯೇ ಇತ್ತು !ಹಗಲು-ರಾತ್ರಿಯೆನ್ನದೆ ಯಾವ ಮೂರ್ತಿಯ ಸೇವೆಯನ್ನು ಮಾಡಿದ್ದಳೋ ಅದೇ ಇಂದು ಎದುರಿಗೇ ನಿಂತಿದ್ದರೂ ಆಕೆ ಕಣ್ಣೆತ್ತಿಯೂ ಕೂಡ ನೋಡಲಿಲ್ಲ !ಹಾಗೆ ನೋಡುವುದಕ್ಕೆ ಆಕೆಯ ನಾಚಿಕೆ ಸ್ವಭಾವ ಮತ್ತು ಆಕೆ ಬಾಳಿದ ಸಂಸ್ಕಾರಗಳು ಅನುಮತಿಸಿರಲಿಕ್ಕಿಲ್ಲ !

ಆದರೆ…. ! ಈ ಹೃದಯಂಗಮವಾದ ಪ್ರಸಂಗವನ್ನು ನೋಡಿದ ಆಗ ಜನತಾ ಪತ್ರಿಕೆಯ ಸಂಪಾದಕರಾಗಿದ್ದ ಸಹಸ್ರಬುದ್ಧೆಯವರ ಚಾಣಾಕ್ಷ ಕಣ್ಣುಗಳು ಮರೆಯಲು ಸಾಧ್ಯವೇ ಇರಲಿಲ್ಲ ! ಸಹಸ್ರಬುದ್ಧೆಯವರು ಸಹಜವಾಗಿಯೇ ಡಾ. ಬಾಬಾಸಾಹೇಬ ಅಂಬೇಡ್ಕರರಿಗೆ ಕೊನೆಯಲ್ಲಿ ಮಾಲೆ ಹಾಕಿದ್ದು ಮತ್ತು ಮಾಲೆ ಹಾಕುವಾಗ ತಲೆಯೆತ್ತಿ ನೋಡದಿರುವುದಕ್ಕೆ ಕಾರಣ ಏನು ಎಂದು ರಮಾಯಿಗೆ ಕೇಳಿಯೇ ಬಿಟ್ಟರು ! ರಮಾಯಿಗೆ ಏನು ಹೇಳಬೇಕೆಂದು ಒಂದು ಕ್ಷಣ ತೋಚಲಿಲ್ಲ ! ಸಭೆಯಲ್ಲಿ ಮಾತನಾಡಬೇಕೆಂದರೆ ತನಗೆ ಸರಿಯಾಗಿ ಮಾತನಾಡಲೂ ಬರುವುದಿಲ್ಲ ! ಮಾತನಾಡದಿದ್ದರೆ ಡಾ. ಬಾಬಾಸಾಹೇಬ ಅಂಬೇಡ್ಕರರ ಪ್ರತಿಷ್ಠೆಗೆ ಧಕ್ಕೆ ಬರಬಹುದು ! ಹಾಗೆ ನೋಡಿದರೆ ರಮಾಯಿಯೇನೂ ಅರಿಯದ ಹೆಣ್ಣುಮಗಳಲ್ಲ ! ಆಕೆ ನಿಜವಾಗಿಯೂ ಚತುರಳೂ ಬುದ್ಧಿವಂತಳೂ ಆಗಿದ್ದಳು ! ಮರುಕ್ಷಣವೇ ಆಕೆಯ ಮೈಯಲ್ಲಿ ಮಿಂಚು ಹರಿದಾಡಿದ ಅನುಭವವಾಯಿತು. ಆಗ ಆಕೆ ತಡ ಮಾಡಲಿಲ್ಲ ; ತಟ್ಟನೇ ಎದ್ದು ಬಂದು ಮಾತನಾಡಲು ಆರಂಭಿಸಿದಳು !

“ಅಧ್ಯಕ್ಷಮಹೋದಯರೇ, ನನ್ನ ಪತಿಮಹಾದೇವರೆ ಹಾಗೂ ಇಲ್ಲಿ ಸೇರಿರುವ ನನ್ನ ಬಂಧು-ಭಗಿನಿಯರೆ, ಈಗ ತಾನೆ ಸಹಸ್ರಬುದ್ಧೆ ಸಾಹೇಬರು ನನಗೆ ಕೇಳಿರುವ ಎರಡು ಪ್ರಶ್ನೆಗಳಿಗೆ ಉತ್ತರ ನೀಡಲು ನಾನು ಮಾತನಾಡಲೇಬೇಕಿದೆ. ಅದಕ್ಕಾಗಿಯೇ ಎದ್ದಿರುವೆ. ಯಾರು ಸಾಹೇಬರನ್ನು ಯಾವಾಗಲೋ ಒಮ್ಮೆ ಕ್ವಚಿತ್ತಾಗಿ ನೋಡುತ್ತಾರೋ ಅವರೆಲ್ಲ ಅವರನ್ನು ನೋಡಲಿ … ನಾನೋ ಹಗಲು-ರಾತ್ರಿ ಸಾಹೇಬರ ದರ್ಶನ ಪಡೆದು ತೃಪ್ತಳಾದವಳು. ಆದ್ದರಿಂದ ಎಲ್ಲರೂ ಮೊದಲು ಮಾಲೆ ಹಾಕಿದ ಮೇಲೆ ನಾನು ಕೊನೆಯಲ್ಲಿ ಮಾಲೆ ಹಾಕಿದೆ. ಇದು ನಿಮಗೆಲ್ಲ ಗೊತ್ತು. ಇನ್ನು ಡಾ. ಅಂಬೇಡ್ಕರ್ ಸಾಹೇಬರು ಬಡಬಗ್ಗರ-ದೀನದಲಿತರ ಉದ್ದಾರಕ್ಕಾಗಿ ಪಣ ತೊಟ್ಟು ನಿಂತವರು. ನಾನು ಅವರ ಧರ್ಮಪತ್ನಿ. ಅವರ ಸಾಧನೆಗೆ ನನ್ನ ದೃಷ್ಟಿ ತಾಗಬಾರದೆಂಬ ಒಂದೇ ಉದ್ದೇಶದಿಂದ ನಾನು ಅವರ ಮುಖವನ್ನು ನೋಡದೇ ಬರೀ ಅವರ ಪಾದಗಳನ್ನು ಕಣ್ಣು ತುಂಬಿಕೊಂಡೆ.

ಈಗ ಹೇಳಿ ಬಂಧುಗಳೇ, ನಾನು ನೀಡಿದ ಉತ್ತರ ಸರಿಯೇ ? ಸರಿಯಾಗಿಯೇ ಇದ್ದೀತು ಮತ್ತು ಅದು ನಿಮ್ಮೆಲ್ಲರ ಜೊತೆ ಸಹಸ್ರಬುದ್ಧೆಯವರಿಗೂ ಸರಿತೋರಿದೆ ಎಂದು ನಂಬಿ ನಾನು ನನ್ನ ಈ ಭಾಷಣವನ್ನು ಮುಗಿಸುತ್ತೇನೆ. (ಪ್ರಚಂಡ ಕರತಾಡನ ಮತ್ತು ಜಯಕಾರ) ರಮಾಯಿಯ ಭಾಷಣ ಮುಗಿದ ಮೇಲೆ ಡಾ. ಬಾಬಾಸಾಹೇಬ ಅಂಬೇಡ್ಕರರು ಕೆಲವು ಮಾತುಗಳನ್ನಾಡಲು ಎದ್ದು ನಿಂತರು. ಸರಿಯಾಗಿಯೇ ಮಾತನ್ನು ಆರಂಭಿಸಿದ ಅವರು ಹೇಳತೊಡಗಿದರು ;”ಬಂಧುಗಳೇ, ದುಂಡುಮೇಜು ಪರಿಷತ್ತಿನಲ್ಲಿ ಸಾಧಿಸಿದ ಸಾಧನೆ ನನ್ನದಲ್ಲ ; ಅದು ಇಲ್ಲಿ ಸೇರಿರುವ ನನ್ನ ಎಲ್ಲ ಅಸಂಖ್ಯಾತ ಬಂಧು-ಭಗಿನಿಯರ ಸಾಧನೆ. ದುಂಡು ಮೇಜು ಪರಿಷತ್ತಿನಲ್ಲಿ ನಾನು ನಿರ್ವಹಿಸಿದ ಪಾತ್ರ ಕುರಿತು ಹಿಂದೂಗಳ ಭಾವಿ ಸಂತತಿ ನನ್ನನ್ನು ರಾಷ್ಟ್ರದ್ರೋಹಿ ಎಂದು ಬಗೆಯಬಹುದು ಎಂಬುದನ್ನು ಬಲ್ಲೆ. ಈಗ ನಾನು ಏನನ್ನೂ ಹೆಚ್ಚು ಹೇಳುವುದಿಲ್ಲ. ಆದರೂ ಈ ಮೊದಲು ಮಾತನಾಡಿದ ಸೌ. ಮೋಹಿತೆಬಾಯಿಯವರು ಸೌ. ರಮಾಬಾಯಿ ಬಗ್ಗೆ ಸಾಕಷ್ಟು ಹೇಳಿದ್ದಾರೆ. ಆದರೆ ನಾನು ಇಲ್ಲಿ ಒಂದು ಮಾತನ್ನು ಸ್ಪಷ್ಟಪಡಿಸುವುದು ಒಳಿತು ; ಇಂದಿಗೂ ಸೌ. ಮೋಹಿತೆಬಾಯಿಯವರು ಹೇಳಿದರಲ್ಲಿ ಒಂದನ್ನೂ ನನಗೆ ಈ ನಿಮ್ಮ ಆಯೀಸಾಹೇಬ ಹೇಳಿಲ್ಲ..(ನಗು) .. ನಿಮ್ಮ ಆಯೀಸಾಹೇಬರು ಬಹುದೊಡ್ಡ ಭಾಗೀರಥಿಯಾಗಿದ್ದಾರೆ ಎಂಬುದು ನನಗೆ ಇದೀಗಲೇ ಗೊತ್ತಾಗಿದ್ದು. ಅದು ಸರಿಯೇ ನಿಮ್ಮ ಆಯೀಸಾಹೇಬರು ನಿಜವಾಗಿಯೂ ಭಾಗ್ಯದ ಭಾಗೀರಥಿಯೇ ಆಗಿದ್ದಾರೆ ! ..(ನಗು.. ಸಮೂಹದ ಕರತಾಡನ ಮತ್ತು ಪ್ರಚಂಡವಾದ ಜಯಘೋಷ ನಿರಂತರವಾಗಿತ್ತು : ಡಾ. ಬಾಬಾಸಾಹೇಬ ಅಂಬೇಡ್ಕರ ಕೀ ಜೈ ! ದಲಿತರ ಅವ್ವ ರಮಾಯಿಗೆ ಜಯವಾಗಲಿ !)

ಅನುವಾದ : ಡಾ. ಸಿದ್ರಾಮ ಕಾರಣಿಕ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ20 hours ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ1 day ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ1 day ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ2 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ2 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending