Connect with us

ದಿನದ ಸುದ್ದಿ

1ಸಾವಿರ ಆಕ್ಸಿಜನ್ ಬೆಡ್ ತಾತ್ಕಾಲಿಕ ಆಸ್ಪತ್ರೆಗೆ ವಿದ್ಯುತ್ ಪೂರೈಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅವರಿಂದ ಚಾಲನೆ

Published

on

ಸುದ್ದಿದಿನ,ಬಳ್ಳಾರಿ : ಜಿಂದಾಲ್ ಎದುರುಗಡೆ ನಿರ್ಮಿಸಲಾಗಿರುವ 1ಸಾವಿರ ಆಕ್ಸಿಜನ್ ಬೆಡ್ ಗಳ ತಾತ್ಕಾಲಿಕ ಆಸ್ಪತ್ರೆಗೆ ನಿರಂತರ ವಿದ್ಯುತ್ ಪೂರೈಕೆಗೆ ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದಸಿಂಗ್ ಅವರು ಸೋಮವಾರ ಚಾಲನೆ ನೀಡಿದರು.

1ಸಾವಿರ ಆಕ್ಸಿಜನ್ ಬೆಡ್ ಗಳಿಗೆ ನಿರಂತರ ವಿದ್ಯುತ್ ಸರಬರಾಜು ಮಾಡುವ ವಿದ್ಯುತ್ ಪರಿವರ್ತಕಗಳ ಬಳಿಯ ಯಂತ್ರಗಳಿಗೆ ಸಚಿವ ಆನಂದಸಿಂಗ್ ಅವರು ಪೂಜೆ ಸಲ್ಲಿಸಿ ಬಟನ್ ಒತ್ತುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವಿಮ್ಸ್ ನಿವೃತ್ತ ನಿರ್ದೇಶಕ ಡಾ.ದೇವಾನಂದ್, ತಾತ್ಕಾಲಿಕ ಆಸ್ಪತ್ರೆಯ ಸಿಬ್ಬಂದಿ ಹಾಗೂ ಜಿಂದಾಲ್ ಸಿಬ್ಬಂದಿ ಇದ್ದರು.

ಇದನ್ನೂ ಓದಿ | ಕುವೈತ್ ರಾಷ್ಟ್ರದಿಂದ 75 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ; ಸಮರ್ಪಕ ವಿತರಣೆಗೆ ಕ್ರಮ ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ

Published

on

ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡಲಾಯಿತು.

ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ’ ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಸಮಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ತಂದೆ ತಾಯಿ, ಕುಟುಂಬದ ಸದಸ್ಯರು, ಸ್ನೇಹಿತರು ಶುಭಕೋರಿದರು.

29 ರಂದು ಪಿ.ಎಚ್.ಡಿ ಮೌಖಿಕ ಪರೀಕ್ಷೆ

29 ಅಕ್ಟೋಬರ್ 2025 ರಂದು ಕನ್ನಡ ವಿಶ್ವವಿದ್ಯಾಲಯ ವಿದ್ಯಾರಣ್ಯ ಹಂಪಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೌಖಿಕ ಪರೀಕ್ಷೆ ನಡೆಯಿತು. ಸಮಾಜ ವಿಜ್ಞಾನ ನಿಕಾಯದ ಡೀನ್ ಡಾ.ಪ್ರಶಾಂತ ಕುಮಾರ್, ಆಂತರಿಕ ವಿಶೇಷ ತಜ್ಞರಾದ ಡಾ.ಎ.ಎಸ್ ಪ್ರಭಾಕರ್, ಬಾಹ್ಯ ಮೌಲ್ಯಮಾಪಕರಾದ ಡಾ.ಪುಟ್ಟಸ್ವಾಮಿ, ಪ್ರಾಧ್ಯಾಪಕ,ಮೈಸೂರು ವಿಶ್ವವಿದ್ಯಾಲಯ, ಮಾರ್ಗದರ್ಶಕ ಸಹಾಯಕ ಪ್ರಾಧ್ಯಾಪಕ ಡಾ.ನಾಗೇಂದ್ರ, ವಿಭಾಗದ ಮುಖ್ಯಸ್ಥ ಡಾ. ಎಸ್.ವೈ ಸೋಮಶೇಖರ್, ವಿಭಾಗದ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

ವೃತ್ತಿ

ಗಿರೀಶ್ ಕುಮಾರ್.ಜಿ ಅವರು 2017 ರಿಂದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಈಟಿವಿ ಭಾರತ್, ಹೊಸಪೇಟೆ ಟೈಮ್ಸ್ ದಿನಪತ್ರಿಕೆ ವರದಿಗಾರಾಗಿ, ಆಕಾಶವಾಣಿ ತಾತ್ಕಾಲಿಕ ಉದ್ಘೋಷಕರಾಗಿ, ಶ್ರೀ ಶಂಕರ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀಮತಿ ಸರಳ ದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಪದವಿ ಕಾಲೇಜುಗಳಲ್ಲಿ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಖ್ಯ ಆವರಣ ಮತ್ತು ಕೊಪ್ಪಳ ಸ್ನಾತಕೋತ್ತರ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರಾಗಿ 9 ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಪ್ರಸ್ತುತ ಹೊಸಪೇಟೆ ಟೈಮ್ಸ್ ದಿನಪತ್ರಿಕೆ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಮತ್ತು ಲೋಕಲ್ ಆಪ್ ನಲ್ಲಿ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ‌.

ಪಿಎಚ್.ಡಿ ಸಾರಾಂಶ

ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ (ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ : ಬಳ್ಳಾರಿ ವಿಜಯನಗರ ಜಿಲ್ಲೆ) ಎಂಬ ವಿಷಯದ ಸಂಶೋಧನೆ ಕರ್ನಾಟಕ ರಾಜ್ಯದ ಕನ್ನಡದ ಮೊದಲ ಸಂಶೋಧನೆ ಮಹಾಪ್ರಬಂಧವಾಗಿದೆ.

ಈ ವಿಷಯದ ಕುರಿತು 2019 ರಿಂದ 2022 ಅವಧಿ ವರೆಗೆ ಅಧ್ಯಾಯ ಮಾಡಿ, ಸೈಬರ್ ಅಪರಾಧಗಳ ಬಳ್ಳಾರಿ ಜಿಲ್ಲಾ ಪಕ್ಷೀನೋಟ, ಸೈಬರ್ ಅಪರಾಧಗಳ ಹುಟ್ಟು, ಬೆಳವಣಿಗೆ, 4 ವರ್ಷಗಳ ಸೈಬರ್ ಅಪರಾಧಗಳ ಅಂಕಿ, ಸಂಖ್ಯೆಗಳು, ಪೈ ಮತ್ತು ಸ್ತಂಭ ನಕ್ಷೆಗಳು ಒಳಗೊಂಡಿದೆ. ಮುಖ್ಯವಾಗಿ ವಿಜಯ ಕರ್ನಾಟಕ ಮತ್ತು ವಿಜಯವಾಣಿ ದಿನಪತ್ರಿಕೆ ಹಾಗು ಮೈಸೂರಿನ ಪ್ರತಿನಿಧಿ ದಿನಪತ್ರಿಕೆಗಳಲ್ಲಿ ಬರಹ, ಲೇಖನ, ಅಂಕಣಗಳು ವಿಶೇಷ ವಿಶ್ಲೇಷಣೆ, ಸೈಬರ್ ಅಪರಾಧಗಳ ಬಗ್ಗೆ ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಐ.ಪಿ.ಎಸ್, ಸಿ.ಪಿ.ಐ, ಪಿ.ಎಸ್.ಐ ಅಧಿಕಾರಿಗಳು, ಹಿರಿಯ ಪತ್ರಕರ್ತರು, ಸೈಬರ್ ತಜ್ಞರು, ವಂಚನೆ ಒಳಗಾದವರ ಸಂರ್ದಶನ ಮತ್ತು ವಿಶ್ಲೇಷಣೆ ಮತ್ತು ಅವರ ಮಾನಸಿಕ ಸ್ಥಿತಿಗತಿ ಬಗ್ಗೆ ಈ ಸಂಶೋಧನೆ ಒಳಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Published

on

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.

ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending