Connect with us

ರಾಜಕೀಯ

ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ

Published

on

ಸುದ್ದಿದಿನ,ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂಧನ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಿರುವ ಬಗ್ಗೆ ಪತ್ರ ಬರೆದಿದ್ದಾರೆ.

ಮೋದಿ ಅವರೇ ನಿಮ್ಮ ಸರ್ಕಾರವು “ಜನರ ಕಷ್ಟಗಳಿಂದ ಲಾಭ ಗಳಿಸುತ್ತಿದೆ” ಎಂದು ಆರೋಪಿಸಿ ಮತ್ತು ಬೆಲೆಗಳ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮೂರು ಪುಟಗಳ ಪತ್ರದಲ್ಲಿ, ಸೋನಿಯ ಗಾಂಧಿ ಅವರು ಮೋದಿ ಅವರೇ ತಮ್ಮದೇ ಸರ್ಕಾರ “ಆರ್ಥಿಕ ದುರುಪಯೋಗ ಮಾಡಿಕೊಂಡಿದ್ದಲ್ಲದೆ, ಹಿಂದಿನ ಸರ್ಕಾರಗಳನ್ನು ದೂಷಿಸಿದ್ದಕ್ಕಾಗಿ ಪ್ರಧಾನ ಮಂತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನಿಮ್ಮ ಸರ್ಕಾರವು ಸುಳ್ಳುಗಳನ್ನು ಹೇಳುವ ಬದಲು ಜನರ ಕಷ್ಟ ಗಳಿಗೆ ಪರಿಹಾರಗಳತ್ತ ಗಮನ ಹರಿಸಿ ”ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

ಮುಂಬಯಿಯಲ್ಲಿ ಶನಿವಾರ ಪೆಟ್ರೋಲ್ ಬೆಲೆ ಗರಿಷ್ಠ 97 ರೂ.ಗೆ ತಲುಪಿದ್ದರೆ, ಡೀಸೆಲ್ ದರ 88 ರೂ. ಇದು ಬೆಲೆ ಏರಿಕೆಯ ಸತತ 12 ನೇ ದಿನ ಮತ್ತು ತೈಲ ಕಂಪನಿಗಳು 2017 ರಲ್ಲಿ ಪ್ರತಿದಿನವೂ ದರಗಳನ್ನು ಪರಿಷ್ಕರಿಸಲು ಪ್ರಾರಂಭಿಸಿದ ನಂತರದ ಅತಿದೊಡ್ಡ ದೈನಂದಿನ ಹೆಚ್ಚಳವಾಗಿದೆ. ಜನರ ಹೊರೆಗಳನ್ನು ಪರಿಹಾರ ಗೊಳಿಸುವ ಸಲುವಾಗಿ ಸರ್ಕಾರವನ್ನು ಜನತೆ ಆಯ್ಕೆ ಮಾಡಿದ್ದಾರೆ ನೀವು ಅವರನ್ನು ಸಂಕಷ್ಟಕ್ಕೆ ದೂರ ಬೇಡಿ ಎಂದು ಹೇಳಿದ್ದಾರೆ.

“ದುಃಖಕರ ವಿಷಯವೆಂದರೆ, ಈ ಕಷ್ಟದ ಸಮಯದಲ್ಲಿ, ಜನರ ಕಷ್ಟ ಮತ್ತು ಸಂಕಟಗಳಿಂದ ಲಾಭ ಗಳಿಸಲು ಮೋದಿ ಸರ್ಕಾರ ಫಣತೊಟ್ಟಂತಿದೆ”. ಮೋದಿ ಸರ್ಕಾರವು “ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸಿದೆ”, ಇದು ಇಂಧನದ ಮೂಲ ಬೆಲೆಗಿಂತ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ

ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಮ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದ್ದು, ನಾಗರಿಕರನ್ನು ಆತಂಕಕ್ಕೆ ಎಡೆಮಾಡಿದೆ.ಕಚ್ಚಾ ತೈಲ ಬೆಲೆ ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಅರ್ಧದಷ್ಟಿದೆ, ಎಂದಿದ್ದಾರೆ.

2020 ರಲ್ಲಿ ದೇಶೀಯ ಕಚ್ಚಾ ತೈಲ ಉತ್ಪಾದನೆಯು 18 ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ಅವರು ಹೇಳಿದ್ದು ಹೆಚ್ಚಳವನ್ನು ತಡೆಗಟ್ಟಿ ಸಾಮಾನ್ಯ ಜನರ ಒಳಿತಿಗಾಗಿ ಕಾರ್ಯ ನಿರ್ವಹಿಸಿ ಎಂದು ಅವರು ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದ್ದಾರೆ.

ನಿಮ್ಮ ಸರ್ಕಾರವು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 820% ಮತ್ತು ಪೆಟ್ರೋಲ್ ಮೇಲೆ 258% ರಷ್ಟು ಹೆಚ್ಚಿಸಿದೆ ಮತ್ತು ಕಳೆದ ಆರು ಮತ್ತು ಒಂದೂವರೆ ವರ್ಷಗಳಲ್ಲಿ 21 ಲಕ್ಷ ಕೋಟಿ ರೂ. ಈ ಲೆಕ್ಕ ಜನರಿಗೆ ಇನ್ನೂ ರವಾನೆಯಾಗಿಲ್ಲ, ಯಾರ ಪ್ರಯೋಜನಕ್ಕಾಗಿ ಅದನ್ನು ಸಂಗ್ರಹಿಸಲಾಗಿದೆ, “ಎಂದು ಅವರು ಪ್ರಶ್ನಿಸಿದ್ದಾರೆ.

ಜಾಗತಿಕ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 20 ಡಾಲರ್‌ಗೆ ಕುಸಿದಾಗ ಇಂಧನ ಬೆಲೆಗಳನ್ನು ಕಡಿಮೆ ಮಾಡಲು ನಿರಾಕರಿಸುವುದು ಸರ್ಕಾರದ ನೀಚತನ ಎಂದು ಗುಡುಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ‌ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಆಟ-ಪಾಠ ಕಾಣುವಂತಾಗಿದೆ ಎಂಬ ಆರೋಪದ ಜೊತೆಗೆ ಕಾಳಜಿಯ ಒತ್ತಾಯ ಕೇಳಿ ಬರುತ್ತಿದೆ.

ಶಾಲೆಯ ಎದುರೇ ಕೆರೆ ಮತ್ತು ಗ್ರಾಮದ ಸಂಪರ್ಕಿಸುವ ರಸ್ತೆ ಜೊತೆಗೆ ವಿದ್ಯುತ್ ಸಂಪರ್ಕವುಳ್ಳ ಟ್ರ್ಯಾನ್ಫರ್ಮರ್ ಹಾಗೂ ಬೋರ್ವೆಲ್ ಇದೆ. ಅಲ್ಲದೇ ತೆರೆದ ಒಳಚರಂಡಿ ಸಹ ಇದೆ. ಹೀಗೆ ಅಪಾಯಕ್ಕೆ ಕಾದು ಕುಳಿತು ಜೀವ ಬಲಿ ಪಡೆಯುವಂತಹ ಪರಿಸ್ಥಿತಿ ಇದ್ದು, ಶಾಲೆಗೆ ತಡೆಗೋಡೆ ಇಲ್ಲದೇ ಮಕ್ಕಳ ಜೀವಕ್ಕೆ ರಕ್ಷಣೆ ಇಲ್ಲದಂತಾಗಿ 20 ರಿಂದ 30 ವಿದ್ಯಾರ್ಥಿಗಳ ಜೀವದ ಪ್ರಶ್ನೆಯಾಗಿ ಉಳಿದಿದೆ.

ಹೀಗೆ ವಿದ್ಯಾರ್ಥಿಗಳು ಆಟದ ವೇಳೆಯಲ್ಲಾಗಲೀ ಅಥವಾ ಶಾಲೆಗೆ ಬರುವಾಗ, ಮನೆಗೆ ಹೋಗುವಾಗ ಈ ಯಾವುದಾದರೂ ಅಪಾಯಕ್ಕೆ ಸಿಲುಕಿದರೆ ಅಮೂಲ್ಯ ಜೀವ ಬಲಿಯಾಗಲಿದೆ. ಅಕ್ಷರ ಜ್ಞಾನ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಶಾಲೆಯೇ ಭವಿಷ್ಯ ಕಟ್ಟಿಕೊಡುವ ಬದಲು ಜೀವ ಬಲಿಪಡೆಯುವ ವಾತಾವರಣ ನಿರ್ಮಾಣವಾಗಿದ್ದು, ಇದಕ್ಕೆ ಹೊಸದಾಗಿ ನಿರ್ಮಾಣವಾಗಬೇಕಿರುವ ಶಾಲಾ ಕಾಂಪೌಂಡ್ 4 ವರ್ಷಗಳೇ ಕಳೆದರೂ ನಿರ್ಮಾಣ ಕಾಣದಂತಾಗಿದೆ ಎಂಬುದು ಈ ಶಾಲೆಯ ಕೆಲ ಹಳೇ ವಿದ್ಯಾರ್ಥಿಗಳ ಮುತುವರ್ಜಿಯಾಗಿದೆ.

ಈ ಶಾಲೆಗೆ ಹಿಂದೆ ಶಾಲಾ ಕಾಂಪೌಂಡ್ ದುರಸ್ತಿಯಲ್ಲಿದ್ದ ಕಾರಣ ಹೊಸ ಕಾಂಪೌಂಡ್ ನಿರ್ಮಾಣಕ್ಕಾಗಿ 2021-22ರ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಅಧಿನಿಯಮ -2005 ರ ಮಹಾತ್ಮ ಗಾಂಧಿ ನರೇಗಾ ಕಾಮಗಾರಿಯಡಿ 4 ಲಕ್ಷ ರೂ. ಮಂಜೂರು ಆಗಿತ್ತು. ಸುಮಾರು ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಈ ಶಾಲೆಗೆ ಕಾಂಪೌಂಡ್ ಮರೀಚಿಕೆಯಾಗಿದೆ ಎನ್ನುತ್ತಾರೆ ಹಳೇ ವಿದ್ಯಾರ್ಥಿ ಮಂಜುನಾಥ್ ಆರ್.

“ರಸ್ತೆಯ ಸಂಪರ್ಕಕ್ಕೆ ಹತ್ತಿರವಾಗಿದ್ದು, ಮಕ್ಕಳಿಗೆ ಅಪಘಾತ ಆಗುವ ಸಂದರ್ಭ ಇದೆ ಮತ್ತು ಶಾಲೆಯ ಮುಂಭಾಗದಲ್ಲಿ ಗ್ರಾಮದ ಕೆರೆ ಇದ್ದು ಕೆರೆವು ಸಂಪೂರ್ಣವಾಗಿ ನೀರಿನಿಂದ ತುಂಬಿದೆ ಇದರಿಂದ ಮಕ್ಕಳ ಜೀವಕ್ಕೆ ತೊಂದರೆ ಆಗುವ ಸಂಭವ ಸಹ ಇದೆ. ಈ ಎಲ್ಲ ತೊಂದರೆಗಳಿಗೂ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ನಿರ್ಲಕ್ಷತನ ಎಂದು ಹೇಳಬಹುದು. ಶಾಸಕರು ಸಹ ಇದರ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ.”

|ಹಳೇ ವಿದ್ಯಾರ್ಥಿ ಮಂಜುನಾಥ್

“ಶಾಲೆಯ ಕಾಂಪೌಂಡ್ ನಿರ್ಮಾಣ ವಿಚಾರವಾಗಿ ನಾನೂ ಸಹ ಪಿಡಿಓಗೆ ಸಾಕಷ್ಟು ಮನವಿ ಸಾಕಾಗಿದೆ. ಯಾವುದೇ ಸರಿಯಾದ ಸ್ಪಂದನೆ ಇಲ್ಲ. ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಹಿಂದೆ ಅಡೆ-ತಡೆಯೂ ಉಂಟಾಯಿತು. ಹೀಗಾಗಿ ನರೇಗಾ ಯೋಜನೆಯ ಕಾರ್ಮಿಕರು ನಿರ್ಮಾಣಕ್ಕೆ ಮುಂದಾಗದಂತಾಯಿತು. ಶಾಲೆಗೆ ಕಾಂಪೌಂಡ್ ಇಲ್ಲದೇ ಅಪಾಯದ ವಾತಾವರಣವಿರುವ ಕಾರಣ ಯಾವುದೇ ಪಠ್ಯೇತರ ಚಟುವಟಿಕೆಗಳು ನಡೆಸಲು ಆಗುತ್ತಿಲ್ಲ. ಮಕ್ಕಳ ಜೀವವನ್ನು ನಾನು ಕಾವಲುಗಾರನಾಗಿ ಕಾಯುತ್ತಿದ್ದೇನೆ. ಶಾಲೆಗೆ ಕಾಂಪೌಂಡ್ ಇಲ್ಲದೇ ತೆರೆದ ಪ್ರದೇಶವಾಗಿರುವ ಕಾರಣ ಮದ್ಯ ವ್ಯಸನಿಗಳ ತಾಣವಾಗಿದ್ದು, ದಿನವೂ ಮದ್ಯದ ಬಾಟಲ್, ಪೌಚ್ಗಳ ಸ್ವಚ್ಚಗೊಳಿಸಿ ಶಾಲೆಯೊಳಗೆ ಕರ್ತವ್ಯಕ್ಕೆ ತೆರಳುವಂತಾಗಿದೆ.”

| ಜಯರಾಜ್, ಮುಖ್ಯೋಪಾದ್ಯಾಯರು

“ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ
ನರೇಗಾ ಯೋಜನೆಯಡಿಯ ಈ ಕಾಮಗಾರಿ ಕೈಗೊಳ್ಳಲು ಉದ್ಯೋಗ ಖಾತ್ರಿ ಕಾರ್ಡ್ವುಳ್ಳ ಕಾರ್ಮಿಕರು ಮುಂದಾಗುತ್ತಿಲ್ಲ. ಕಾಂಪೌಂಡ್ ನಿರ್ಮಾಣದಲ್ಲಿ ತಡವಾಗುತ್ತಿರುವುದಾಗಲೀ, ಅಡೆ-ತಡೆ ಬಗ್ಗೆಯಾಗಲೀ ನನಗೆ ಯಾವುದೇ ಮಾಹಿತಿ ಇಲ್ಲ. ಇದೀಗ ಶಾಲೆಯ ಹಳೇ ವಿದ್ಯಾರ್ಥಿಗಳು ಸಹಕಾರ ನೀಡಲು ಮುಂದಾಗಿದ್ದು, ಇನ್ನೆರಡು ದಿನಗಳಲ್ಲಿ ನಿರ್ಮಾಣ ಕಾರ್ಯ ಪ್ರಗತಿಗೆ ಬರಲಿದೆ”

| ರಶ್ಮಿ, ಪ್ರಭಾರ ಪಿಡಿಓ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Published

on

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.

ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending