Connect with us

ರಾಜಕೀಯ

ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ

Published

on

ಸುದ್ದಿದಿನ,ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂಧನ ಮತ್ತು ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ಹೆಚ್ಚಿಸಿರುವ ಬಗ್ಗೆ ಪತ್ರ ಬರೆದಿದ್ದಾರೆ.

ಮೋದಿ ಅವರೇ ನಿಮ್ಮ ಸರ್ಕಾರವು “ಜನರ ಕಷ್ಟಗಳಿಂದ ಲಾಭ ಗಳಿಸುತ್ತಿದೆ” ಎಂದು ಆರೋಪಿಸಿ ಮತ್ತು ಬೆಲೆಗಳ ಹೆಚ್ಚಳವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮೂರು ಪುಟಗಳ ಪತ್ರದಲ್ಲಿ, ಸೋನಿಯ ಗಾಂಧಿ ಅವರು ಮೋದಿ ಅವರೇ ತಮ್ಮದೇ ಸರ್ಕಾರ “ಆರ್ಥಿಕ ದುರುಪಯೋಗ ಮಾಡಿಕೊಂಡಿದ್ದಲ್ಲದೆ, ಹಿಂದಿನ ಸರ್ಕಾರಗಳನ್ನು ದೂಷಿಸಿದ್ದಕ್ಕಾಗಿ ಪ್ರಧಾನ ಮಂತ್ರಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನಿಮ್ಮ ಸರ್ಕಾರವು ಸುಳ್ಳುಗಳನ್ನು ಹೇಳುವ ಬದಲು ಜನರ ಕಷ್ಟ ಗಳಿಗೆ ಪರಿಹಾರಗಳತ್ತ ಗಮನ ಹರಿಸಿ ”ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

ಮುಂಬಯಿಯಲ್ಲಿ ಶನಿವಾರ ಪೆಟ್ರೋಲ್ ಬೆಲೆ ಗರಿಷ್ಠ 97 ರೂ.ಗೆ ತಲುಪಿದ್ದರೆ, ಡೀಸೆಲ್ ದರ 88 ರೂ. ಇದು ಬೆಲೆ ಏರಿಕೆಯ ಸತತ 12 ನೇ ದಿನ ಮತ್ತು ತೈಲ ಕಂಪನಿಗಳು 2017 ರಲ್ಲಿ ಪ್ರತಿದಿನವೂ ದರಗಳನ್ನು ಪರಿಷ್ಕರಿಸಲು ಪ್ರಾರಂಭಿಸಿದ ನಂತರದ ಅತಿದೊಡ್ಡ ದೈನಂದಿನ ಹೆಚ್ಚಳವಾಗಿದೆ. ಜನರ ಹೊರೆಗಳನ್ನು ಪರಿಹಾರ ಗೊಳಿಸುವ ಸಲುವಾಗಿ ಸರ್ಕಾರವನ್ನು ಜನತೆ ಆಯ್ಕೆ ಮಾಡಿದ್ದಾರೆ ನೀವು ಅವರನ್ನು ಸಂಕಷ್ಟಕ್ಕೆ ದೂರ ಬೇಡಿ ಎಂದು ಹೇಳಿದ್ದಾರೆ.

“ದುಃಖಕರ ವಿಷಯವೆಂದರೆ, ಈ ಕಷ್ಟದ ಸಮಯದಲ್ಲಿ, ಜನರ ಕಷ್ಟ ಮತ್ತು ಸಂಕಟಗಳಿಂದ ಲಾಭ ಗಳಿಸಲು ಮೋದಿ ಸರ್ಕಾರ ಫಣತೊಟ್ಟಂತಿದೆ”. ಮೋದಿ ಸರ್ಕಾರವು “ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿಯಾದ ಅಬಕಾರಿ ಸುಂಕವನ್ನು ವಿಧಿಸಿದೆ”, ಇದು ಇಂಧನದ ಮೂಲ ಬೆಲೆಗಿಂತ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ

ಅಂತರರಾಷ್ಟ್ರೀಯ ಕಚ್ಚಾ ತೈಲದ ಮಧ್ಯಮ ಬೆಲೆಗಳ ಹೊರತಾಗಿಯೂ ಈ ಬೆಲೆಗಳನ್ನು ಹೆಚ್ಚಿಸಲಾಗಿದ್ದು, ನಾಗರಿಕರನ್ನು ಆತಂಕಕ್ಕೆ ಎಡೆಮಾಡಿದೆ.ಕಚ್ಚಾ ತೈಲ ಬೆಲೆ ಯುಪಿಎ ಸರ್ಕಾರದ ಅವಧಿಯಲ್ಲಿ ಇದ್ದದ್ದಕ್ಕಿಂತ ಅರ್ಧದಷ್ಟಿದೆ, ಎಂದಿದ್ದಾರೆ.

2020 ರಲ್ಲಿ ದೇಶೀಯ ಕಚ್ಚಾ ತೈಲ ಉತ್ಪಾದನೆಯು 18 ವರ್ಷಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಎಂದು ಅವರು ಹೇಳಿದ್ದು ಹೆಚ್ಚಳವನ್ನು ತಡೆಗಟ್ಟಿ ಸಾಮಾನ್ಯ ಜನರ ಒಳಿತಿಗಾಗಿ ಕಾರ್ಯ ನಿರ್ವಹಿಸಿ ಎಂದು ಅವರು ಪ್ರಧಾನ ಮಂತ್ರಿಯನ್ನು ಒತ್ತಾಯಿಸಿದ್ದಾರೆ.

ನಿಮ್ಮ ಸರ್ಕಾರವು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 820% ಮತ್ತು ಪೆಟ್ರೋಲ್ ಮೇಲೆ 258% ರಷ್ಟು ಹೆಚ್ಚಿಸಿದೆ ಮತ್ತು ಕಳೆದ ಆರು ಮತ್ತು ಒಂದೂವರೆ ವರ್ಷಗಳಲ್ಲಿ 21 ಲಕ್ಷ ಕೋಟಿ ರೂ. ಈ ಲೆಕ್ಕ ಜನರಿಗೆ ಇನ್ನೂ ರವಾನೆಯಾಗಿಲ್ಲ, ಯಾರ ಪ್ರಯೋಜನಕ್ಕಾಗಿ ಅದನ್ನು ಸಂಗ್ರಹಿಸಲಾಗಿದೆ, “ಎಂದು ಅವರು ಪ್ರಶ್ನಿಸಿದ್ದಾರೆ.

ಜಾಗತಿಕ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 20 ಡಾಲರ್‌ಗೆ ಕುಸಿದಾಗ ಇಂಧನ ಬೆಲೆಗಳನ್ನು ಕಡಿಮೆ ಮಾಡಲು ನಿರಾಕರಿಸುವುದು ಸರ್ಕಾರದ ನೀಚತನ ಎಂದು ಗುಡುಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending