ದಿನದ ಸುದ್ದಿ
ದೇಶದಲ್ಲಿರುವ ‘ಓಬಿಸಿಗಳಿಗೆ ಸಂವಿಧಾನದತ್ತ ಮೀಸಲಾತಿಯ’ ಮಹತ್ವದ ಅರಿವಿಲ್ಲ ; ಡಾ.ಶಿಲಾಧರ ಮುಗಳಿ
ಸುದ್ದಿದಿನ,ಧಾರವಾಡ : ನಮ್ಮ ದೇಶದಲ್ಲಿರುವ ಇತರೆ ಹಿಂದುಳಿದ ವರ್ಗ(ಓಬಿಸಿ)ಗಳ ಹಿತರಕ್ಷಣೆಗಾಗಿ ಸೇರಿಸಲಾಗಿರುವ ಸಂವಿಧಾನದ ಆರ್ಟಿಕಲ್-340ರ ಮಹತ್ವ ಮತ್ತು ಅರಿವಿಲ್ಲದ ಓಬಿಸಿಗಳಿಗೆ ಬಾಬಾಸಾಹೇಬರು ನೀಡಿದ ಸಂವಿಧಾನದತ್ತ ಮೀಸಲಾತಿಯ ಕುರಿತು ತಿಳಿದುಕೊಳ್ಳದೆ ಹಿತಶತ್ರುಗಳ ಮಾತಿಗೆ ಮರುಳಾಗಿ ಸಂವಿಧಾನದ ಸವಲತ್ತುಗಳಿಂದ ವoಚಿತರಾಗಲು ತಮಗೆ ತಾವೇ ಕಾರಣರಾಗಿದ್ದಾರೆ ಎಂದು ಕವಿವಿ ಇತಿಹಾಸ ಪ್ರಾಧ್ಯಾಪಕ ಡಾ.ಶಿಲಾಧರ ಮುಗಳಿ ವಿಷಾದ ವ್ಯಕ್ತಪಡಿಸಿದರು.
ಅವರು ಧಾರವಾಡದಲ್ಲಿ ಗಣಕರಂಗ ಸಂಸ್ಥೆಯು (Nov.26) ಸಂವಿಧಾನ ದಿನಾಚರಣೆ ಅಂಗವಾಗಿ ಎರ್ಪಡಿಸಿದ್ದ 3ಬಿ ನೆನಪಿನ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು. ಬಹುಮುಖ ವ್ಯಕ್ತಿತ್ವದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ಗುರುತಿಸಿರುವಂತೆ ಈ ದೇಶದಲ್ಲಿ ಆಚರಿಸಲಾಗುತ್ತಿರುವ ಅಸ್ಪøಶ್ಯತೆಯ ಮೂರು ಪ್ರಕಾರಗಳಾದ ಮುಟ್ಟಿಸಿಕೊಳ್ಳದ, ಸಂಪರ್ಕಿಸದ ಮತ್ತು ನೋಡಬಾರದ ಶೋಷಿತ ವರ್ಗಗಳ ಉದ್ಧಾರವನ್ನು ಗಮನದಲ್ಲಿಟ್ಟುಕೊಂಡು ವಿಶ್ವವೇ ಒಪ್ಪುವಂತಹ ಸಂವಿಧಾನ ರಚನೆ ಮಾಡಿದ್ದು ಈಗ ಇತಿಹಾಸ. ಮೊದಲು ಮತ್ತು ಅಂತಿಮವಾಗಿ ನಾವು ಭಾರತೀಯರು ಎಂದು ಪ್ರತಿಪಾಧಿಸಿದ ದೇಶಭಕ್ತ ಬಾಬಾಸಾಹೇಬ ಡಾ.ಅಂಬೇಡ್ಕರ ಅವರು ಕೊಡುಗೆಯಾಗಿ ಈ ದೇಶಕ್ಕೆ ನೀಡಿದ್ದು ರಾಜಕೀಯ ಮೀಸಲಾತಿ ಮತ್ತು ರಾಜಕೀಯೇತರ ಮೀಸಲಾತಿ ಎಂಬ ಎರಡು ಮೀಸಲಾತಿಗಳು ಮಾತ್ರ. ರಾಜಕೀಯ ದುರ್ಲಾಭಕ್ಕಾಗಿ ರಾಜಕೀಯ ಮೀಸಲಾತಿಯನ್ನು ಇಂದಿಗೂ ಮುಂದುವರೆಸಲಾಗುತ್ತಿದೆ. ರಾಜಕೀಯೇತರ ಮೀಸಲಾತಿಗೆ ಕೊನೆಯೆಂಬುದಿಲ್ಲ. ವಿವಿಧ ವಲಯಗಳಲ್ಲಿ ಅಂದರೆ ಭಾಷಾ ಮಾಧ್ಯಮ ಮೀಸಲಾತಿ, ಯೋಜನಾ ನಿರಾಶ್ರಿತರ ಮೀಸಲಾತಿ, ಮಹಿಳಾ ಮೀಸಲಾತಿ, ವಿಶೇಷ ವಲಯ ಮೀಸಲಾತಿ, ಕಾಶ್ಮೀರ ಪಂಡಿತರಿಗೆ ಮೀಸಲಾತಿ ಹೀಗೆ ಹಲವಾರು ರೀತಿಯ ಮೀಸಲಾತಿಗಳು ಜಾರಿಯಲಿದ್ದರೂ ಸಹ ಎಲ್ಲರ ಕಣ್ಣುಕಿಸುರಾಗುವುದು ಎಸ್ಸಿ-ಎಸ್ಟಿ ಅಂದರೆ ದಲಿತ-ದಮನಿತರ ಮೀಸಲಾತಿಯ ವಿಷಯದಲ್ಲಿ. ಆದರೆ ಇತ್ತೀಚಿನ ದಿನಗಳಲ್ಲಿ ಮೀಸಲಾತಿಯ ಸಂಪೂರ್ಣ ಅರಿವಿರದ ಕೆಲವು ಎಡಬಿಡಂಗಿಗಳು ದೇಶಬಾಂಧವರಲ್ಲಿ ತಪ್ಪು ತಿಳುವಳಿಕೆ, ಪರಸ್ಪರ ಅಪನಂಬಿಕೆ, ಅಸೂಯೆ, ವೈರತ್ವ ಮೂಡುವಂಥಹ ಸನ್ನಿವೇಶ ಸೃಷ್ಟಿಸುವ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಈ ದೇಶದ ಸಂವಿಧಾನದ ಸರ್ವ ಫಲಾನುಭವಿಗಳು ಅಂದರೆ ಜಾಗೃತ ದೇಶಬಾಂಧವರು ಎಚ್ಚರಿಕೆಯಿಂದ ಇರಬೇಕಾದುದು ಅವಶ್ಯ ಎಂದು ವಿವರಿಸಿದರು.
ಆಶಯ ನುಡಿಗಳನ್ನಾಡಿದ ಕವಿ ಡಾ.ಮಹೇಶ ರುದ್ರಕರ ಅವರು, ಸರ್ವ ಶೊಷಿತ ಸಮುದಾಯಗಳಷ್ಟೇ ಅಲ್ಲದೇ ಸರ್ವ ಪ್ರಜೆಗಳ ಕಲ್ಯಾಣವನ್ನು ಬಯಸುವ ವಿಶ್ವಶ್ರೇಷ್ಟ ಭಾರತದ ಸಂವಿಧಾನ ನೀಡುವ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲು ಸಂವಿಧಾನದ ಕುರಿತಾದ ಅರಿವು, ತಿಳುವಳಿಕೆ ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ. ಕೆಲವು ರೂಡಿಗತ ಸಂಪ್ರದಾಯವಾದಿಗಳು ಬಹುತ್ವದ ಭಾರತದ ಮುಗ್ದರನ್ನು ದುರೂಪಯೋಗಪಡಿಸಿಕೊಳ್ಳಲು ಇಲ್ಲದ ಕಥೆ, ಪುರಾಣಗಳನ್ನು ಕಟ್ಟಿ ದಾರಿ ತಪ್ಪಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಕøತ್ಯವನ್ನು ತಡೆಯುವುದು ಸುಶಿಕ್ಷಿತ ಸಮುದಾಯದ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ, ಕೊನೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ವರಚಿತ ಕವನ ವಾಚಿಸಿದರು.
ಜಗತ್ತಿನ ಶಾಂತಿ, ಮೈತ್ರಿಯ ಸಂದೇಶ ನೀಡಿದ ಬುದ್ಧ, ಕಾಯಕದ ಮಹತ್ವ ಸಾರಿದ ಬಸವಾದಿ ಶರಣರು ಮತ್ತು ಆಧುನಿಕ ಭಾರತಕ್ಕೆ ದಿಕ್ಸೂಚಿಯಾದ ವಿಶ್ವಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ ಡಾ.ಅಂಬೇಡ್ಕರ ನೆನಪಿನ ಕವಿಗೋಷ್ಟಿ ಮತ್ತು ಸಂವಿಧಾನ ದಿನಾಚರಣೆ ಹೆಚ್ಚು ಸೂಕ್ತವಾಗಿದೆ. 3ಬಿ ನೆನಪಿನ ಕವಿಗೋಷ್ಟಿ ಹೆಚ್ಚು ಅರ್ಥಪೂರ್ಣವಾಗಿದೆ. ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಸಿನಿಕತನ ಹೆಚ್ಚಾಗುತ್ತಿರುವ ಇಂದಿನ ಸಾಮಾಜೀಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ತೀವ್ರವಾಗಿದೆ ಎಂದು ಅತಿಥಿಗಳಾಗಿ ಆಗಮಿಸಿದ್ದ ಕವಿ, ಕಥೆಗಾರ ಡಾ.ಬಸು ಬೇವಿನಗಿಡದ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿಂತಕ ಲಕ್ಷ್ಮಣ ಬಕ್ಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಅಚ್ಚುಕಟ್ಟಾಗಿ ನಿರ್ವಹಿಸಲು ನಿತಿನ್ ಗುಡಿಮನಿ ಸಹಕರಿಸಿದರು. ಕಾರ್ಯಕ್ರಮದ ಆರಂಭಕ್ಕೆ ಇತ್ತಿಚೆಗೆ ಅಗಲಿದ ಮಹಾನ್ ಚೇತನಗಳಾದ ಕನ್ನಡದ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಕಲಾವಿದ-ರಾಜಕಾರಣಿ ಡಾ.ಅಂಬರೀಷ ಮತ್ತು ಕವಿ-ರಾಜಕಾರಣಿ ಜಾಫರ್ ಶರೀಪ್ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ನಂತರ ನಡೆದ ‘ನಮ್ಮ ಭಾರತದ ಸಂವಿಧಾನ’ ಶೀರ್ಷಿಕೆಯಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂದೀಪ ಕುಲಕರ್ಣಿ, ಶ್ರೀಧರ ಗಸ್ತಿ, ಆನಂದ ಮಾಲಗಿತ್ತಿಮಠ, ಆನಂದ ಹಕ್ಕೇನ್ನವರ, ಅರುಣ ಮೂಡಿ, ಅರುಣ ಕೊಪ್ಪ, ಭಾಗ್ಯಶ್ರೀ ರಜಪೂತ, ಎನ್.ಆರ್.ಠಕ್ಕಾಯಿ, ಸಚಿನ್ ಮುಂದಿನಕೇರಿ, ವಿನೋದಾ ಕರಣಂ, ಸುಭಾಸ ಚವಾಣ್, ಶರಣಪ್ಪ ಗೊಲ್ಲರ, ಶಿವಾನಂದ ಚವಾರ, ಅನಿಲಕುಮಾರ ಉಮಚಗಿ ಮುಂತಾದ ಕವಿಗಳು ಸ್ವರಚಿತ ಕವನ ವಾಚಿಸಿದ ನಂತರ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮ ನಿರ್ವಾಹಕರು
9902674005 / 9845109480
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.
ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.
ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು.
ಜಿಎಂ ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲೂ ಇರುವ ರಂಗಾಸಕ್ತ,ಅಭಿನಯ ಪ್ರಿಯ ವಿದ್ಯಾರ್ಥಿಗಳ ಅಭಿನಯ ಕಲೆಯನ್ನು ಗುರುತಿಸಿ ಅವರಿಗೆ ವೇದಿಕೆ ಕಲ್ಪಿಸುವ ಮಹತ್ತರ ಉದ್ದೇಶ ರಂಗೋತ್ಸವದಾಗಿದ್ದು, ಮೂರು ಹಂತಗಳಲ್ಲಿ ಈ ಸ್ಪರ್ಧೆಯನ್ನು ನಡೆಸಲಾಯಿತು.
ಪ್ರಥಮ ಹಂತ ಆಡಿಷನ್ (ಆಯ್ಕೆ) ಗುಂಪುಗಳ ರಚನೆ ,ಎರಡನೇ ಹಂತ ಪೌರಾಣಿಕ ಸುತ್ತು ಈ ಹಂತದಲ್ಲಿ ಎಲಿಮಿನೇಷನ್ ಪ್ರಕ್ರಿಯೆ ಇದ್ದು ಕಡಿಮೆ ಅಂಕಗಳಿಸಿದವರನ್ನು ಗುಂಪಿನಿಂದ ಹೊರಗುಳಿಸಲಾಯಿತು. ಮೂರನೇ ಹಂತ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆ ಆಗಿದ್ದು ಈ ಸುತ್ತಿಗೆ ಬಂದ ನಾಲ್ಕು ತಂಡಗಳಿಗೆ ‘ಸಾಮಾಜಿಕ ಜಾಗೃತಿ ‘ಎಂಬ ವಿಷಯ ನೀಡಲಾಗಿದ್ದು, ಲೈಂಗಿಕ ದೌರ್ಜನ್ಯ ರೈತರ ಬವಣೆ, ಹೆಣ್ಣು ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳು, ಡ್ರಗ್ಸ್ ಹಾವಳಿ ಈ ವಿಷಯಗಳನ್ನು ಕೇಂದ್ರೀಕರಿಸಿ ನಾಲ್ಕು ತಂಡಗಳು ಮನೋಜ್ಞವಾಗಿ ಅಭಿನಯಿಸಿದವು.
ತೀರ್ಪುಗಾರರಾಗಿ ಪ್ರೊ. ಗಣೇಶ್ ಜಿ ತಿಲ್ವೆ, ಪ್ರೊ. ದೀಪಿಕಾ ವಿ.ಬಿ, ಪ್ರೊ. ರಾಜೇಶ್ವರಿ ವೈ.ಎಂ ಮೂರು ಹಂತಗಳಲ್ಲೂ ತೀರ್ಪನ್ನು ನೀಡಿದರು. ಶೇಕಡ 70 ತೀರ್ಪುಗಾರರ ತೀರ್ಪು, ಶೇಕಡ 30 ಪ್ರೇಕ್ಷಕರ ಆನ್ಲೈನ್ ವೋಟಿಂಗ್ ಮೂಲಕ ಅಂತಿಮ ತೀರ್ಪನ್ನು ಪ್ರಕಟಿಸಲಾಯಿತು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಜಿಎಂ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಸುನಿಲ್ ಕುಮಾರ್ ಬಿ.ಎಸ್, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪನಿರ್ದೇಶಕರಾದ ಡಾ. ಸಂತೋಷ್ ಕುಮಾರ್ ಎಂ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ. ದೀಪಾ ಬಿ.ಎಸ್ ಉಪಸ್ಥಿತರಿದ್ದು, ರಂಗೋತ್ಸವ-2025ರ ವಿನ್ನರ್ಸ್ ಟ್ರೋಫಿಯನ್ನು ಹಾಗೂ 10000 ನಗದು ಬಹುಮಾನವನ್ನು ಲಿಖಿತ ಮತ್ತು ತಂಡದವರಿಗೆ ಹಾಗೂ ಗೌತಮ್ ಮತ್ತು ತಂಡದವರಿಗೆ ರನ್ನರ್ಸ್ ಟ್ರೋಫಿ ಮತ್ತು 7500 ನಗದು ಬಹುಮಾನವನ್ನು ನೀಡಿದರು.
ಸಾಹಿತ್ಯ, ನಿರ್ದೇಶನ, ರಂಗಸಜ್ಜಿಕೆ ಎಲ್ಲವನ್ನು ಆಯಾ ತಂಡದ ವಿದ್ಯಾರ್ಥಿಗಳೇ ನಿರ್ವಹಿಸಿಕೊಂಡದ್ದು ವಿಶೇಷವಾಗಿತ್ತು. ಪ್ರಸ್ತುತ ಧಾವಂತದ ದಿನಮಾನಗಳಲ್ಲೂ ವಿದ್ಯಾರ್ಥಿಗಳಲ್ಲಿ ಹುದುಗಿರುವ ಈ ರಂಗ ಪ್ರೇಮ, ನಟನಾ ಚತುರತೆ ಪ್ರೇಕ್ಷಕರನ್ನು ಬೆರಗುಗೊಳಿಸಿತು.
ಕಾರ್ಯಕ್ರಮದ ಮೂರು ಹಂತಗಳಲ್ಲೂ ನಿಶಾ ನಿತ್ಯಾ ಕೆ, ಸಾಕಿದ್ ಬಿ.ಆರ್ ರವರು ಮನೋಜ್ಞವಾಗಿ ನಿರೂಪಿಸಿದರು ಹಾಗೂ ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ವಿದ್ಯಾರ್ಥಿ ಕಾರ್ಯದರ್ಶಿಯಾದ ಸಚಿನ್ ರವರು ಹಾಗೂ ಎಲ್ಲಾ ವಿಭಾಗಗಳ ಸಾಂಸ್ಕೃತಿಕ ವಿದ್ಯಾರ್ಥಿ ಪ್ರತಿನಿಧಿಗಳು ಕಾರ್ಯಕ್ರಮದ ಎಲ್ಲಾ ಹಂತಗಳು ಸುಸೂತ್ರವಾಗಿ ನೆರವೇರಲು ಸಹಕರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ2 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ2 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ6 hours agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

