ದಿನದ ಸುದ್ದಿ
ದೇಶದಲ್ಲಿರುವ ‘ಓಬಿಸಿಗಳಿಗೆ ಸಂವಿಧಾನದತ್ತ ಮೀಸಲಾತಿಯ’ ಮಹತ್ವದ ಅರಿವಿಲ್ಲ ; ಡಾ.ಶಿಲಾಧರ ಮುಗಳಿ
ಸುದ್ದಿದಿನ,ಧಾರವಾಡ : ನಮ್ಮ ದೇಶದಲ್ಲಿರುವ ಇತರೆ ಹಿಂದುಳಿದ ವರ್ಗ(ಓಬಿಸಿ)ಗಳ ಹಿತರಕ್ಷಣೆಗಾಗಿ ಸೇರಿಸಲಾಗಿರುವ ಸಂವಿಧಾನದ ಆರ್ಟಿಕಲ್-340ರ ಮಹತ್ವ ಮತ್ತು ಅರಿವಿಲ್ಲದ ಓಬಿಸಿಗಳಿಗೆ ಬಾಬಾಸಾಹೇಬರು ನೀಡಿದ ಸಂವಿಧಾನದತ್ತ ಮೀಸಲಾತಿಯ ಕುರಿತು ತಿಳಿದುಕೊಳ್ಳದೆ ಹಿತಶತ್ರುಗಳ ಮಾತಿಗೆ ಮರುಳಾಗಿ ಸಂವಿಧಾನದ ಸವಲತ್ತುಗಳಿಂದ ವoಚಿತರಾಗಲು ತಮಗೆ ತಾವೇ ಕಾರಣರಾಗಿದ್ದಾರೆ ಎಂದು ಕವಿವಿ ಇತಿಹಾಸ ಪ್ರಾಧ್ಯಾಪಕ ಡಾ.ಶಿಲಾಧರ ಮುಗಳಿ ವಿಷಾದ ವ್ಯಕ್ತಪಡಿಸಿದರು.
ಅವರು ಧಾರವಾಡದಲ್ಲಿ ಗಣಕರಂಗ ಸಂಸ್ಥೆಯು (Nov.26) ಸಂವಿಧಾನ ದಿನಾಚರಣೆ ಅಂಗವಾಗಿ ಎರ್ಪಡಿಸಿದ್ದ 3ಬಿ ನೆನಪಿನ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು. ಬಹುಮುಖ ವ್ಯಕ್ತಿತ್ವದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ಗುರುತಿಸಿರುವಂತೆ ಈ ದೇಶದಲ್ಲಿ ಆಚರಿಸಲಾಗುತ್ತಿರುವ ಅಸ್ಪøಶ್ಯತೆಯ ಮೂರು ಪ್ರಕಾರಗಳಾದ ಮುಟ್ಟಿಸಿಕೊಳ್ಳದ, ಸಂಪರ್ಕಿಸದ ಮತ್ತು ನೋಡಬಾರದ ಶೋಷಿತ ವರ್ಗಗಳ ಉದ್ಧಾರವನ್ನು ಗಮನದಲ್ಲಿಟ್ಟುಕೊಂಡು ವಿಶ್ವವೇ ಒಪ್ಪುವಂತಹ ಸಂವಿಧಾನ ರಚನೆ ಮಾಡಿದ್ದು ಈಗ ಇತಿಹಾಸ. ಮೊದಲು ಮತ್ತು ಅಂತಿಮವಾಗಿ ನಾವು ಭಾರತೀಯರು ಎಂದು ಪ್ರತಿಪಾಧಿಸಿದ ದೇಶಭಕ್ತ ಬಾಬಾಸಾಹೇಬ ಡಾ.ಅಂಬೇಡ್ಕರ ಅವರು ಕೊಡುಗೆಯಾಗಿ ಈ ದೇಶಕ್ಕೆ ನೀಡಿದ್ದು ರಾಜಕೀಯ ಮೀಸಲಾತಿ ಮತ್ತು ರಾಜಕೀಯೇತರ ಮೀಸಲಾತಿ ಎಂಬ ಎರಡು ಮೀಸಲಾತಿಗಳು ಮಾತ್ರ. ರಾಜಕೀಯ ದುರ್ಲಾಭಕ್ಕಾಗಿ ರಾಜಕೀಯ ಮೀಸಲಾತಿಯನ್ನು ಇಂದಿಗೂ ಮುಂದುವರೆಸಲಾಗುತ್ತಿದೆ. ರಾಜಕೀಯೇತರ ಮೀಸಲಾತಿಗೆ ಕೊನೆಯೆಂಬುದಿಲ್ಲ. ವಿವಿಧ ವಲಯಗಳಲ್ಲಿ ಅಂದರೆ ಭಾಷಾ ಮಾಧ್ಯಮ ಮೀಸಲಾತಿ, ಯೋಜನಾ ನಿರಾಶ್ರಿತರ ಮೀಸಲಾತಿ, ಮಹಿಳಾ ಮೀಸಲಾತಿ, ವಿಶೇಷ ವಲಯ ಮೀಸಲಾತಿ, ಕಾಶ್ಮೀರ ಪಂಡಿತರಿಗೆ ಮೀಸಲಾತಿ ಹೀಗೆ ಹಲವಾರು ರೀತಿಯ ಮೀಸಲಾತಿಗಳು ಜಾರಿಯಲಿದ್ದರೂ ಸಹ ಎಲ್ಲರ ಕಣ್ಣುಕಿಸುರಾಗುವುದು ಎಸ್ಸಿ-ಎಸ್ಟಿ ಅಂದರೆ ದಲಿತ-ದಮನಿತರ ಮೀಸಲಾತಿಯ ವಿಷಯದಲ್ಲಿ. ಆದರೆ ಇತ್ತೀಚಿನ ದಿನಗಳಲ್ಲಿ ಮೀಸಲಾತಿಯ ಸಂಪೂರ್ಣ ಅರಿವಿರದ ಕೆಲವು ಎಡಬಿಡಂಗಿಗಳು ದೇಶಬಾಂಧವರಲ್ಲಿ ತಪ್ಪು ತಿಳುವಳಿಕೆ, ಪರಸ್ಪರ ಅಪನಂಬಿಕೆ, ಅಸೂಯೆ, ವೈರತ್ವ ಮೂಡುವಂಥಹ ಸನ್ನಿವೇಶ ಸೃಷ್ಟಿಸುವ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಈ ದೇಶದ ಸಂವಿಧಾನದ ಸರ್ವ ಫಲಾನುಭವಿಗಳು ಅಂದರೆ ಜಾಗೃತ ದೇಶಬಾಂಧವರು ಎಚ್ಚರಿಕೆಯಿಂದ ಇರಬೇಕಾದುದು ಅವಶ್ಯ ಎಂದು ವಿವರಿಸಿದರು.
ಆಶಯ ನುಡಿಗಳನ್ನಾಡಿದ ಕವಿ ಡಾ.ಮಹೇಶ ರುದ್ರಕರ ಅವರು, ಸರ್ವ ಶೊಷಿತ ಸಮುದಾಯಗಳಷ್ಟೇ ಅಲ್ಲದೇ ಸರ್ವ ಪ್ರಜೆಗಳ ಕಲ್ಯಾಣವನ್ನು ಬಯಸುವ ವಿಶ್ವಶ್ರೇಷ್ಟ ಭಾರತದ ಸಂವಿಧಾನ ನೀಡುವ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲು ಸಂವಿಧಾನದ ಕುರಿತಾದ ಅರಿವು, ತಿಳುವಳಿಕೆ ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ. ಕೆಲವು ರೂಡಿಗತ ಸಂಪ್ರದಾಯವಾದಿಗಳು ಬಹುತ್ವದ ಭಾರತದ ಮುಗ್ದರನ್ನು ದುರೂಪಯೋಗಪಡಿಸಿಕೊಳ್ಳಲು ಇಲ್ಲದ ಕಥೆ, ಪುರಾಣಗಳನ್ನು ಕಟ್ಟಿ ದಾರಿ ತಪ್ಪಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಕøತ್ಯವನ್ನು ತಡೆಯುವುದು ಸುಶಿಕ್ಷಿತ ಸಮುದಾಯದ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ, ಕೊನೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ವರಚಿತ ಕವನ ವಾಚಿಸಿದರು.
ಜಗತ್ತಿನ ಶಾಂತಿ, ಮೈತ್ರಿಯ ಸಂದೇಶ ನೀಡಿದ ಬುದ್ಧ, ಕಾಯಕದ ಮಹತ್ವ ಸಾರಿದ ಬಸವಾದಿ ಶರಣರು ಮತ್ತು ಆಧುನಿಕ ಭಾರತಕ್ಕೆ ದಿಕ್ಸೂಚಿಯಾದ ವಿಶ್ವಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ ಡಾ.ಅಂಬೇಡ್ಕರ ನೆನಪಿನ ಕವಿಗೋಷ್ಟಿ ಮತ್ತು ಸಂವಿಧಾನ ದಿನಾಚರಣೆ ಹೆಚ್ಚು ಸೂಕ್ತವಾಗಿದೆ. 3ಬಿ ನೆನಪಿನ ಕವಿಗೋಷ್ಟಿ ಹೆಚ್ಚು ಅರ್ಥಪೂರ್ಣವಾಗಿದೆ. ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಸಿನಿಕತನ ಹೆಚ್ಚಾಗುತ್ತಿರುವ ಇಂದಿನ ಸಾಮಾಜೀಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ತೀವ್ರವಾಗಿದೆ ಎಂದು ಅತಿಥಿಗಳಾಗಿ ಆಗಮಿಸಿದ್ದ ಕವಿ, ಕಥೆಗಾರ ಡಾ.ಬಸು ಬೇವಿನಗಿಡದ ಅಭಿಪ್ರಾಯ ವ್ಯಕ್ತಪಡಿಸಿದರು.
ಚಿಂತಕ ಲಕ್ಷ್ಮಣ ಬಕ್ಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಅಚ್ಚುಕಟ್ಟಾಗಿ ನಿರ್ವಹಿಸಲು ನಿತಿನ್ ಗುಡಿಮನಿ ಸಹಕರಿಸಿದರು. ಕಾರ್ಯಕ್ರಮದ ಆರಂಭಕ್ಕೆ ಇತ್ತಿಚೆಗೆ ಅಗಲಿದ ಮಹಾನ್ ಚೇತನಗಳಾದ ಕನ್ನಡದ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಕಲಾವಿದ-ರಾಜಕಾರಣಿ ಡಾ.ಅಂಬರೀಷ ಮತ್ತು ಕವಿ-ರಾಜಕಾರಣಿ ಜಾಫರ್ ಶರೀಪ್ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ನಂತರ ನಡೆದ ‘ನಮ್ಮ ಭಾರತದ ಸಂವಿಧಾನ’ ಶೀರ್ಷಿಕೆಯಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂದೀಪ ಕುಲಕರ್ಣಿ, ಶ್ರೀಧರ ಗಸ್ತಿ, ಆನಂದ ಮಾಲಗಿತ್ತಿಮಠ, ಆನಂದ ಹಕ್ಕೇನ್ನವರ, ಅರುಣ ಮೂಡಿ, ಅರುಣ ಕೊಪ್ಪ, ಭಾಗ್ಯಶ್ರೀ ರಜಪೂತ, ಎನ್.ಆರ್.ಠಕ್ಕಾಯಿ, ಸಚಿನ್ ಮುಂದಿನಕೇರಿ, ವಿನೋದಾ ಕರಣಂ, ಸುಭಾಸ ಚವಾಣ್, ಶರಣಪ್ಪ ಗೊಲ್ಲರ, ಶಿವಾನಂದ ಚವಾರ, ಅನಿಲಕುಮಾರ ಉಮಚಗಿ ಮುಂತಾದ ಕವಿಗಳು ಸ್ವರಚಿತ ಕವನ ವಾಚಿಸಿದ ನಂತರ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮ ನಿರ್ವಾಹಕರು
9902674005 / 9845109480
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
![](https://suddidina.com/wp-content/uploads/2024/06/New_Criminal_law_suddidina.jpg)
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
“ಐಪಿಸಿ, ಸಿಆರ್ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”
ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”
ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ
![](https://suddidina.com/wp-content/uploads/2022/05/petrol_suddidina.jpg)
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ
![](https://suddidina.com/wp-content/uploads/2024/06/food_poison_suddidina.jpg)
ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ7 days ago
JOB NEWS | ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
-
ಅಂತರಂಗ7 days ago
ನಾಳೆ ಡಾ.ಅಂಬೇಡ್ಕರ್ ಬರಹಗಳು ಮತ್ತು ಅವರ ಪ್ರಭಾವಿತ ಸಾಧಕರ ಸಂದರ್ಶನ ಸರಣಿ ಕಾರ್ಯಕ್ರಮ
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ