Connect with us

ದಿನದ ಸುದ್ದಿ

ದೇಶದಲ್ಲಿರುವ ‘ಓಬಿಸಿಗಳಿಗೆ ಸಂವಿಧಾನದತ್ತ ಮೀಸಲಾತಿಯ’ ಮಹತ್ವದ ಅರಿವಿಲ್ಲ ; ಡಾ.ಶಿಲಾಧರ ಮುಗಳಿ

Published

on

ಸುದ್ದಿದಿನ,ಧಾರವಾಡ : ನಮ್ಮ ದೇಶದಲ್ಲಿರುವ ಇತರೆ ಹಿಂದುಳಿದ ವರ್ಗ(ಓಬಿಸಿ)ಗಳ ಹಿತರಕ್ಷಣೆಗಾಗಿ ಸೇರಿಸಲಾಗಿರುವ ಸಂವಿಧಾನದ ಆರ್ಟಿಕಲ್-340ರ ಮಹತ್ವ ಮತ್ತು ಅರಿವಿಲ್ಲದ ಓಬಿಸಿಗಳಿಗೆ ಬಾಬಾಸಾಹೇಬರು ನೀಡಿದ ಸಂವಿಧಾನದತ್ತ ಮೀಸಲಾತಿಯ ಕುರಿತು ತಿಳಿದುಕೊಳ್ಳದೆ ಹಿತಶತ್ರುಗಳ ಮಾತಿಗೆ ಮರುಳಾಗಿ ಸಂವಿಧಾನದ ಸವಲತ್ತುಗಳಿಂದ ವoಚಿತರಾಗಲು ತಮಗೆ ತಾವೇ ಕಾರಣರಾಗಿದ್ದಾರೆ ಎಂದು ಕವಿವಿ ಇತಿಹಾಸ ಪ್ರಾಧ್ಯಾಪಕ ಡಾ.ಶಿಲಾಧರ ಮುಗಳಿ ವಿಷಾದ ವ್ಯಕ್ತಪಡಿಸಿದರು.

ಅವರು ಧಾರವಾಡದಲ್ಲಿ ಗಣಕರಂಗ ಸಂಸ್ಥೆಯು (Nov.26) ಸಂವಿಧಾನ ದಿನಾಚರಣೆ ಅಂಗವಾಗಿ ಎರ್ಪಡಿಸಿದ್ದ 3ಬಿ ನೆನಪಿನ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು. ಬಹುಮುಖ ವ್ಯಕ್ತಿತ್ವದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ಗುರುತಿಸಿರುವಂತೆ ಈ ದೇಶದಲ್ಲಿ ಆಚರಿಸಲಾಗುತ್ತಿರುವ ಅಸ್ಪøಶ್ಯತೆಯ ಮೂರು ಪ್ರಕಾರಗಳಾದ ಮುಟ್ಟಿಸಿಕೊಳ್ಳದ, ಸಂಪರ್ಕಿಸದ ಮತ್ತು ನೋಡಬಾರದ ಶೋಷಿತ ವರ್ಗಗಳ ಉದ್ಧಾರವನ್ನು ಗಮನದಲ್ಲಿಟ್ಟುಕೊಂಡು ವಿಶ್ವವೇ ಒಪ್ಪುವಂತಹ ಸಂವಿಧಾನ ರಚನೆ ಮಾಡಿದ್ದು ಈಗ ಇತಿಹಾಸ. ಮೊದಲು ಮತ್ತು ಅಂತಿಮವಾಗಿ ನಾವು ಭಾರತೀಯರು ಎಂದು ಪ್ರತಿಪಾಧಿಸಿದ ದೇಶಭಕ್ತ ಬಾಬಾಸಾಹೇಬ ಡಾ.ಅಂಬೇಡ್ಕರ ಅವರು ಕೊಡುಗೆಯಾಗಿ ಈ ದೇಶಕ್ಕೆ ನೀಡಿದ್ದು ರಾಜಕೀಯ ಮೀಸಲಾತಿ ಮತ್ತು ರಾಜಕೀಯೇತರ ಮೀಸಲಾತಿ ಎಂಬ ಎರಡು ಮೀಸಲಾತಿಗಳು ಮಾತ್ರ. ರಾಜಕೀಯ ದುರ್ಲಾಭಕ್ಕಾಗಿ ರಾಜಕೀಯ ಮೀಸಲಾತಿಯನ್ನು ಇಂದಿಗೂ ಮುಂದುವರೆಸಲಾಗುತ್ತಿದೆ. ರಾಜಕೀಯೇತರ ಮೀಸಲಾತಿಗೆ ಕೊನೆಯೆಂಬುದಿಲ್ಲ. ವಿವಿಧ ವಲಯಗಳಲ್ಲಿ ಅಂದರೆ ಭಾಷಾ ಮಾಧ್ಯಮ ಮೀಸಲಾತಿ, ಯೋಜನಾ ನಿರಾಶ್ರಿತರ ಮೀಸಲಾತಿ, ಮಹಿಳಾ ಮೀಸಲಾತಿ, ವಿಶೇಷ ವಲಯ ಮೀಸಲಾತಿ, ಕಾಶ್ಮೀರ ಪಂಡಿತರಿಗೆ ಮೀಸಲಾತಿ ಹೀಗೆ ಹಲವಾರು ರೀತಿಯ ಮೀಸಲಾತಿಗಳು ಜಾರಿಯಲಿದ್ದರೂ ಸಹ ಎಲ್ಲರ ಕಣ್ಣುಕಿಸುರಾಗುವುದು ಎಸ್ಸಿ-ಎಸ್ಟಿ ಅಂದರೆ ದಲಿತ-ದಮನಿತರ ಮೀಸಲಾತಿಯ ವಿಷಯದಲ್ಲಿ. ಆದರೆ ಇತ್ತೀಚಿನ ದಿನಗಳಲ್ಲಿ ಮೀಸಲಾತಿಯ ಸಂಪೂರ್ಣ ಅರಿವಿರದ ಕೆಲವು ಎಡಬಿಡಂಗಿಗಳು ದೇಶಬಾಂಧವರಲ್ಲಿ ತಪ್ಪು ತಿಳುವಳಿಕೆ, ಪರಸ್ಪರ ಅಪನಂಬಿಕೆ, ಅಸೂಯೆ, ವೈರತ್ವ ಮೂಡುವಂಥಹ ಸನ್ನಿವೇಶ ಸೃಷ್ಟಿಸುವ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಈ ದೇಶದ ಸಂವಿಧಾನದ ಸರ್ವ ಫಲಾನುಭವಿಗಳು ಅಂದರೆ ಜಾಗೃತ ದೇಶಬಾಂಧವರು ಎಚ್ಚರಿಕೆಯಿಂದ ಇರಬೇಕಾದುದು ಅವಶ್ಯ ಎಂದು ವಿವರಿಸಿದರು.

ಆಶಯ ನುಡಿಗಳನ್ನಾಡಿದ ಕವಿ ಡಾ.ಮಹೇಶ ರುದ್ರಕರ ಅವರು, ಸರ್ವ ಶೊಷಿತ ಸಮುದಾಯಗಳಷ್ಟೇ ಅಲ್ಲದೇ ಸರ್ವ ಪ್ರಜೆಗಳ ಕಲ್ಯಾಣವನ್ನು ಬಯಸುವ ವಿಶ್ವಶ್ರೇಷ್ಟ ಭಾರತದ ಸಂವಿಧಾನ ನೀಡುವ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲು ಸಂವಿಧಾನದ ಕುರಿತಾದ ಅರಿವು, ತಿಳುವಳಿಕೆ ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ. ಕೆಲವು ರೂಡಿಗತ ಸಂಪ್ರದಾಯವಾದಿಗಳು ಬಹುತ್ವದ ಭಾರತದ ಮುಗ್ದರನ್ನು ದುರೂಪಯೋಗಪಡಿಸಿಕೊಳ್ಳಲು ಇಲ್ಲದ ಕಥೆ, ಪುರಾಣಗಳನ್ನು ಕಟ್ಟಿ ದಾರಿ ತಪ್ಪಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಕøತ್ಯವನ್ನು ತಡೆಯುವುದು ಸುಶಿಕ್ಷಿತ ಸಮುದಾಯದ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ, ಕೊನೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ವರಚಿತ ಕವನ ವಾಚಿಸಿದರು.

ಜಗತ್ತಿನ ಶಾಂತಿ, ಮೈತ್ರಿಯ ಸಂದೇಶ ನೀಡಿದ ಬುದ್ಧ, ಕಾಯಕದ ಮಹತ್ವ ಸಾರಿದ ಬಸವಾದಿ ಶರಣರು ಮತ್ತು ಆಧುನಿಕ ಭಾರತಕ್ಕೆ ದಿಕ್ಸೂಚಿಯಾದ ವಿಶ್ವಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ ಡಾ.ಅಂಬೇಡ್ಕರ ನೆನಪಿನ ಕವಿಗೋಷ್ಟಿ ಮತ್ತು ಸಂವಿಧಾನ ದಿನಾಚರಣೆ ಹೆಚ್ಚು ಸೂಕ್ತವಾಗಿದೆ. 3ಬಿ ನೆನಪಿನ ಕವಿಗೋಷ್ಟಿ ಹೆಚ್ಚು ಅರ್ಥಪೂರ್ಣವಾಗಿದೆ. ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಸಿನಿಕತನ ಹೆಚ್ಚಾಗುತ್ತಿರುವ ಇಂದಿನ ಸಾಮಾಜೀಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ತೀವ್ರವಾಗಿದೆ ಎಂದು ಅತಿಥಿಗಳಾಗಿ ಆಗಮಿಸಿದ್ದ ಕವಿ, ಕಥೆಗಾರ ಡಾ.ಬಸು ಬೇವಿನಗಿಡದ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಂತಕ ಲಕ್ಷ್ಮಣ ಬಕ್ಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಅಚ್ಚುಕಟ್ಟಾಗಿ ನಿರ್ವಹಿಸಲು ನಿತಿನ್ ಗುಡಿಮನಿ ಸಹಕರಿಸಿದರು. ಕಾರ್ಯಕ್ರಮದ ಆರಂಭಕ್ಕೆ ಇತ್ತಿಚೆಗೆ ಅಗಲಿದ ಮಹಾನ್ ಚೇತನಗಳಾದ ಕನ್ನಡದ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಕಲಾವಿದ-ರಾಜಕಾರಣಿ ಡಾ.ಅಂಬರೀಷ ಮತ್ತು ಕವಿ-ರಾಜಕಾರಣಿ ಜಾಫರ್ ಶರೀಪ್ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ನಂತರ ನಡೆದ ‘ನಮ್ಮ ಭಾರತದ ಸಂವಿಧಾನ’ ಶೀರ್ಷಿಕೆಯಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂದೀಪ ಕುಲಕರ್ಣಿ, ಶ್ರೀಧರ ಗಸ್ತಿ, ಆನಂದ ಮಾಲಗಿತ್ತಿಮಠ, ಆನಂದ ಹಕ್ಕೇನ್ನವರ, ಅರುಣ ಮೂಡಿ, ಅರುಣ ಕೊಪ್ಪ, ಭಾಗ್ಯಶ್ರೀ ರಜಪೂತ, ಎನ್.ಆರ್.ಠಕ್ಕಾಯಿ, ಸಚಿನ್ ಮುಂದಿನಕೇರಿ, ವಿನೋದಾ ಕರಣಂ, ಸುಭಾಸ ಚವಾಣ್, ಶರಣಪ್ಪ ಗೊಲ್ಲರ, ಶಿವಾನಂದ ಚವಾರ, ಅನಿಲಕುಮಾರ ಉಮಚಗಿ ಮುಂತಾದ ಕವಿಗಳು ಸ್ವರಚಿತ ಕವನ ವಾಚಿಸಿದ ನಂತರ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ನಿರ್ವಾಹಕರು

9902674005 / 9845109480

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ19 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ20 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ20 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ20 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ20 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ22 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ22 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending