ದಿನದ ಸುದ್ದಿ
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ
ಸುದ್ದಿದಿನ,ಬೆಂಗಳೂರು: “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ ವಿಶ್ವ ಪರಂಪರೆಯಲ್ಲಿ ರೈತರ ನಾಡು ಎಂದೇ ಖ್ಯಾತವಾಗಿರುವ ಭಾರತ ರೈತರ ಹಕ್ಕಿನ ಕಾರಣಕ್ಕೆ ಹಿಂದೆಂದೂ ಕಾರಣ ಐತಿಹಾಸಿಕ ಹೋರಾಟವೊಂದಕ್ಕೆ ಸಾಕ್ಷಿಯಾಗಿದೆ. ಹೊಸ ದಶಕವೊಂದು ರೈತ ಹೋರಾಟದೊಂದಿಗೆ ಉದಯಿಸಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಅಕ್ಷರಶಃ ರೈತರ ಪಾಲಿನ ಮರಣ ಶಾಸನ ಎಂಬುದು ರೈತರ ಆರೋಪ. ಹೀಗಾಗಿ ಈ ಕಾನೂನನ್ನು ಹಿಂಪಡೆಯಬೇಕು ಎಂದು ರೈತ ಸಮುದಾಯ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರೆ, ಈ ರೈತ ಹೋರಾಟ ತೀವ್ರತೆಯನ್ನು ಕಂಡಿದ್ದು ಕಳೆದ ವರ್ಷದ ನವೆಂಬರ್ ಅಂತ್ಯದಲ್ಲೇ. ರಾಷ್ಟ್ರ ರಾಜಧಾನಿಗೆ ಹತ್ತಿರದಲ್ಲೇ ಇರುವ ಪಂಜಾಬ್-ಹರಿಯಾಣ ರೈತರು ರಾಜಧಾನಿಗೆ ಲಗ್ಗೆ ಹಾಕಿ, ಇದೀಗ ದೆಹಲಿಯ ಹೊರವಲಯದಲ್ಲಿ ಬೀಡು ಬಿಟ್ಟಿದ್ದಾರೆ. ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಹಾಗಾದರೆ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟವೇ? ಈ ಹೋರಾಟಕ್ಕೆ ಬೇರೆ ರಾಜ್ಯದ ರೈತರ ಬೆಂಬಲ ಇಲ್ಲವೇ? ಎಂಬುದು ಪ್ರಶ್ನೆ. ಅಸಲಿಗೆ ಕೊರೋನಾ ಕಾರಣಕ್ಕೆ ದೇಶದ ನಾನಾ ಮೂಲೆಗಳಿಂದ ದೆಹಲಿಗೆ ತೆರಳಲಾಗದ ರೈತರು ತಮ್ಮ ರಾಜ್ಯದಲ್ಲೇ ಹಲವೆಡೆ ಉಗ್ರ ಹೋರಾಟಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ, ಇದು ಕೇವಲ ಪಂಜಾಬ್ ಹರಿಯಾಣ ರೈತರ ಹೋರಾಟವಷ್ಟೇ ಹೊರತು, ಇಡೀ ಭಾರತದ ಹೋರಾಟವಲ್ಲ ಎಂದು ಬಿಂಬಿಸುವಲ್ಲಿ ನಮ್ಮ ದೇಶದ ಮುಖ್ಯವಾಹಿನಿ ಮಾಧ್ಯಮಗಳು ಸಾಕಷ್ಟು ಶ್ರಮವಹಿಸಿವೆ. ಇದು ಮಾಧ್ಯಮಗಳು ರೈತರಿಗೆ ಎಸಗಿದ ದ್ರೋಹ ಎನ್ನಲು ಅಡ್ಡಿಯಿಲ್ಲ.
ಆದರೆ, ಹರಿವ ನದಿಗೆ ನೂರಾರು ತೊರೆ ಎಂಬಂತೆ ದೆಹಲಿ ರೈತ ಹೋರಾಟಕ್ಕೆ ಇಡೀ ದೇಶದ ರೈತರು ಸ್ಪಂದಿಸಿದ್ದಾರೆ. ತಾವಿದ್ದಲ್ಲಿಂದಲೇ ತಮ್ಮ ದನಿಗೂಡಿಸಿದ್ದಾರೆ ಎಂಬುದೇ ಕಟುವಾಸ್ತವ. ಹಾಗಾದರೆ, ಕಳೆದ ಎರಡು ತಿಂಗಳಲ್ಲಿ ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ ಭಾರತದಲ್ಲಿ ಯಾವ ಯಾವ ರಾಜ್ಯದಲ್ಲಿ ರೈತರು ಹೋರಾಟ ನಡೆಸಿದ್ದಾರೆ? ಹೋರಾಟದ ತೀವ್ರತೆ ಏನು? ಈ ಹೋರಾಟವನ್ನು ತಡೆಯಲು ಅಲ್ಲಿನ ಸರ್ಕಾರಗಳು ಕೈಗೊಂಡ ಕ್ರಮ ಏನು? ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ದ್ರಾವಿಡ ನಾಡಿನಲ್ಲಿ ಮೊಳಗಿತ್ತು ರೈತ ಕಹಳೆ
ಕೇಂದ್ರ ಸರ್ಕಾರದ ಕೃಷಿ ಕಾನೂನನ್ನು ವಿರೋಧಿಸಿ ಪಂಜಾಬ್ ಹಾಗೂ ಹರಿಯಾಣ ರೈತರು ದೆಹಲಿ ಕಡೆ ಮುಖ ಮಾಡುತ್ತಿದ್ದಂತೆಯೇ ತಮಿಳುನಾಡಿನಲ್ಲೂ ರೈತರು ಹೋರಾಟದ ಕಣಕ್ಕೆ ಧುಮುಕಿದ್ದರು.
ನವೆಂಬರ್ ಅಂತ್ಯದಲ್ಲಿ ರೈತರು ದೆಹಲಿ ಕಡೆಗೆ ಹೊರಡುತ್ತಿದ್ದಂತೆ ತಮಿಳುನಾಡಿನ ಪ್ರಬಲ ವಿರೋಧ ಪಕ್ಷವಾದ ಡಿಎಂಕೆ ಕಳೆದ ವರ್ಷ ಡಿಸೆಂಬರ್ 05 ರಂದು ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ “ಅನ್ನದಾತನಿಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ” ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ತಮಿಳುನಾಡಿನ ಎಲ್ಲಾ 36 ರೈತ ಸಂಘಟನೆಗಳೂ ಬೆಂಬಲಿಸಿದ್ದವು. ಅಲ್ಲದೆ, ಸಾವಿರಾರು ರೈತರು ಹಾಗೂ ಡಿಎಂಕೆ ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ಒಂದು ದಿನ ಉಪವಾಸ ಆಚರಿಸುವ ಮೂಲಕ ಗಾಂಧಿ ಮಾರ್ಗದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ್ದರು.
ಅಲ್ಲಿಂದ ಈವರೆಗೆ ತಮಿಳುನಾಡಿನಲ್ಲಿ ಪ್ರತಿದಿನ ಒಂದಲ್ಲಾ ಒಂದು ಜಿಲ್ಲೆಯಲ್ಲಿ ರೈತರು ಕೇಂದ್ರ ಸರ್ಕಾರವನ್ನು ವಿರೋಧಿಸಿ ನಿರಂತರವಾಗಿ ಹೋರಾಟವನ್ನು ನಡೆಸುತ್ತಲೇ ಇದ್ದಾರೆ. ಈ ಹೋರಾಟಗಳಲ್ಲೇ ಹೆಚ್ಚು ಗಮನ ಸೆಳೆದ ಹೋರಾಟವೆಂದರೆ ಡಿಸೆಂಬರ್ 11ರಂದು ರೈತರ ರಾಜಭವನ ಮುತ್ತಿಗೆ ಚಳುವಳಿ, ಡಿಸೆಂಬರ್ 15 ರಂದು ತಂಜಾವೂರು ಜಿಲ್ಲೆಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ್ಯಾಲಿ ಮತ್ತು ರೈಲ್ ರೋಖೋ ಚಳುವಳಿ.
ತಮಿಳುನಾಡಿನ 22 ಜಿಲ್ಲೆಗಳ ರೈತರು ಒಟ್ಟಾಗಿ ಡಿಸೆಂಬರ್ 11 ರಂದು ಚೆನ್ನೈನಲ್ಲಿರುವ ರಾಜಭವನಕ್ಕೆ ಮುತ್ತಿಗೆ ಹಾಕಿದ್ದರೆ, ಡಿಸೆಂಬರ್ 15 ರಂದು ತಂಜಾವೂರಿನ ಕಾವೇರಿ ಡೆಲ್ಟಾ ಭಾಗದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಿದ್ದರು. ಈ ರ್ಯಾಲಿಗೆ ಪೊಲೀಸರಿಂದ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ, ದಿಢೀರೆಂದಯ ಮಾರ್ಗ ಮಧ್ಯೆ ರ್ಯಾಲಿಯನ್ನು ತಡೆಯಲಾಗಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಒಂದಿಡೀ ದಿನ ತಂಜಾವೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನೇ ತಡೆದು ಪ್ರತಿಭಟಿಸಿದ್ದರು. ಅಲ್ಲದೆ, ಕೃಷಿ ಕಾನೂನನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈಲ್ ರೋಖೋ ಚಳುವಳಿಯನ್ನೂ ನಡೆಸಿದ್ದರು.
ಇದೇ ವೇಳೆ ತಮಿಳುನಾಡಿನ ರೈತ ಸಂರಕ್ಷಣಾ ಸಂಘದ ರೈತರ ಒಂದು ತಂಡ ದೆಹಲಿಗೆ ತೆರಳಿ ರೈತ ಹೋರಾಟದಲ್ಲಿ ಭಾಗವಹಿಸಿದ್ದರೆ, ಮತ್ತೊಂದೆಡೆ ತಮಿಳುನಾಡಿನ ತಿರುನಲ್ವೇಲಿ, ನಾಗಪಟ್ಟಣಂ ಜಿಲ್ಲೆಗಳಲ್ಲಿ ರೈತರು ನೇಗಿಲು ಹಿಡಿದು ಕೇಂದ್ರದ ವಿರುದ್ಧ ಹೋರಾಟ ನಡೆಸಿದ್ದರು. ಈ ವೇಳೆ ರೈತರ ಮೇಲೆ ಲಾಠಿ ಚಾರ್ಚ್ ಮಾಡಲಾಗಿತ್ತು. ಅಲ್ಲದೆ, 62 ಜನರನ್ನು ಒತ್ತಾಯಪೂರ್ವಕವಾಗಿ ಬಂಧಿಸಿ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು ಎಂಬುದು ಉಲ್ಲೇಖಾರ್ಹ.
ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು
ದೆಹಲಿ ರೈತ ಹೋರಾಟ ಮತ್ತು ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ರ್ಯಾಲಿಯನ್ನು ಬೆಂಬಲಿಸಿ ಮಹಾರಾಷ್ಟ್ರದ ರೈತರು ಸಹ ಜನವರಿ 26 ರಂದು ಮುಂಬೈ ಮಹಾನಗರದಲ್ಲಿ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ಈ ಮೂಲಕ ಕೇಂದ್ರದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಲು ವೇದಿಕೆ ಸಿದ್ದಪಡಿಸಿದ್ದಾರೆ.
ಇದರ ಭಾಗವಾಗಿ ಮಹಾರಾಷ್ಟ್ರದ 21 ಜಿಲ್ಲೆಗಳ ಲಕ್ಷಾಂತರ ರೈತರು ಕಳೆದ ಜನವರಿ 23 ರಂದು ನಾಸಿಕ್ನಿಂದ ಮುಂಬೈಗೆ ಪಾದಯಾತ್ರೆ ಹೊರಟಿದ್ದಾರೆ. ಈ ಯಾತ್ರೆ ಸೋಮವಾರ (ಜನವರಿ 25) ಮುಂಬೈ ಪ್ರವೇಶಿಸಲಿದೆ. ಅಲ್ಲದೆ, ಹೆಸರಾಂತ ಆಜಾದ್ ಮೈದಾನದಲ್ಲಿ ಮಹಾರಾಷ್ಟ್ರದ ಲಕ್ಷಾಂತರ ರೈತರು ಜಮಾಯಿಸಲಿದ್ದು, ದೆಹಲಿಯಲ್ಲಿ ಹೋರಾಟ ನಿರತ ರೈತರಿಗೆ ಬಲ ತುಂಬಲಿದ್ದಾರೆ. ಈ ಹೋರಾಟದಲ್ಲಿ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ಸಹ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಕೃಷಿ ಕಾಯ್ದೆಯನ್ನು ವಿರೋಧಿಸಿ ಈ ಪ್ರಮಾಣ ಸಂಖ್ಯೆಯಲ್ಲಿ ರೈತರು ಮುಂಬೈಗೆ ಲಗ್ಗೆ ಇಡುತ್ತಿರುವ ಕುರಿತು ದೇಶದ ಯಾವ ಸುದ್ದಿ ಮಾಧ್ಯಮಗಳೂ ಸಹ ಒಂದೈದು ನಿಮಿಷವೂ ಸಹ ಸುದ್ದಿ ಮಾಡದೆ ಇರುವುದು ದುರಂತವೇ ಸರಿ!
ಮಧ್ಯಪ್ರದೇಶದಲ್ಲಿ ರೈತರ ರ್ಯಾಲಿ ವಿರುದ್ಧ ಜಲಫಿರಂಗಿ ಬಳಸಿದ್ದ ಸರ್ಕಾರ
ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಿ ಮಧ್ಯಪ್ರದೇಶದ ಭೂಪಾಲ್ನಲ್ಲಿ ಕಾಂಗ್ರೆಸ್ ಪಕ್ಷ ಎರಡು ವಾರಗಳ ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಿತ್ತು. ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಈ ಹೋರಾಟದ ನೇತೃತ್ವವಹಿಸಿದ್ದರು.
ಜನವರಿ 23 ರಂ ಮಧ್ಯಾಹ್ನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಗರದ ಜವಾಹರ್ ಚೌಕ್ ಪ್ರದೇಶದಲ್ಲಿ ಒಟ್ಟುಗೂಡಿದ್ದರು. ಅಲ್ಲದೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು. ಆದರೆ, ಪೊಲೀಸರು ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಪರಿಣಾಮ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜಭವನವನ್ನು ಸಮೀಪಿಸುತ್ತಿದ್ದಂತೆ, ಅವರನ್ನು ನಿಯಂತ್ರಿಸಲು ಸಾಧ್ಯವಾಗದ ಪೊಲೀಸರು ಹೋರಾಟಗಾರರ ಮೇಲೆ ಅಶ್ರವಾಯು ದಾಳಿ, ಜಲಫಿರಂಗಿ ದಾಳಿ ನಡೆಸಿದ್ದಾರೆ.
ಪೊಲೀಸರ ಬಲ ಪ್ರಯೋಗದ ಮೂಲಕ ಮಧ್ಯಪ್ರದೇಶದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗಿತ್ತು. ಆದರೂ, ಸಹ ಇಂದಿಗೂ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರತಿನಿತ್ಯ ರೈತರು ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ.
ಕಲ್ಕತ್ತಾದ ರಾಜಭವನಕ್ಕೆ 40 ಸಾವಿರ ಜನ ಮೆರವಣಿಗೆ
ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ಜಾರಿಗೆ ತರುತ್ತಿದ್ದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕಾನೂನನ್ನು ಬಹಿರಂಗವಾಗಿ ಟೀಕಿಸಿದ್ದರು. ಅಲ್ಲದೆ ಅಲ್ಲಿನ ವಿಧಾನಸಭೆಯಲ್ಲಿ ಈ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದರು. ಆದರೆ, ದೆಹಲಿ ರೈತ ಹೋರಾಟಕ್ಕೆ ಬಲ ತುಂಬಲು ಮುಂದಾಗಿದ್ದ ಬಂಗಾಳದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಡಿಸೆಂಬರ್ 17 ರಂದು ಸುಮಾರು 40,000 ರೈತ ಹೋರಾಟಗಾರರ ಜೊತೆಗೆ ಕಲ್ಕತ್ತಾದ ರಾಜಭವನಕ್ಕೆ ಮೆರವಣಿಗೆ ಆಯೋಜಿಸಿತ್ತು. ಅಲ್ಲದೆ, ಜಿಲ್ಲಾವಾರು ಹೋರಾಟಗಳು ಪ್ರತಿನಿತ್ಯ ನಡೆಯುತ್ತಲೇ ಇದೆ.
ಈ ಹೋರಾಟವನ್ನು ಬಂಗಾಳದ ಇತಿಹಾಸದಲ್ಲಿ ನಡೆದ ಅತಿದೊಡ್ಡ ಹೋರಾಟ ಎಂದು ಬಣ್ಣಿಸಲಾಗುತ್ತಿದೆ. ಈ ಮೂಲಕ ರೈತರ ಪ್ರತಿಭಟನೆಯು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಸಂಘಟಕರು ತಿಳಿಸಿದ್ದರು.
ಕೇರಳದಲ್ಲೂ ರೈತ ಕಹಳೆ
ದೆಹಲಿಯ ಸಿಂಗು ಗಡಿಯಲ್ಲಿ ರೈತ ಹೋರಾಟ ಕಾವು ಪಡೆಯುತ್ತಿದ್ದಂತೆ ಕೇರಳದ ರೈತರು ಸಹ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದರು. ತಿರುವನಂತಪುರಂನಲ್ಲಿ ಜಂಟಿ ರೈತ ಪರಿಷತ್ ಆಯೋಜಿಸಿದ್ದ ಅನಿರ್ದಿಷ್ಟ ಪ್ರತಿಭಟನೆ ಇಂದಿಗೂ ಸಹ ಮುಂದುವರೆದಿದೆ. ಈ ಪ್ರತಿಭಟನೆಯಲ್ಲಿ 600 ರೈತ ಸಂಘಗಳು ಪಾಲ್ಗೊಂಡಿವೆ. ಅಲ್ಲದೆ ಸ್ವತಃ ಕೇರಳ ಸರ್ಕಾರ ಅಲ್ಲಿನ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳ ವಿರುದ್ಧ ನಿರ್ಣಯ ಜಾರಿಗೆ ತಂದಿದ್ದನ್ನು ಇಲ್ಲಿ ಸ್ಮರಿಸಬಹುದು.
ಆಂಧ್ರ ತೆಲಂಗಾಣದಲ್ಲೂ ಹೋರಾಟಕ್ಕಿಳಿದ ರೈತರು
ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ರೈತರನ್ನು ಮತ್ತಷ್ಟು ಶೋಷಿಸುತ್ತವೆ ಮತ್ತು ದೇಶದ ಆಹಾರ ಭದ್ರತೆಗೆ ಧಕ್ಕೆ ತರುವ ಕಪ್ಪು ಕಾನೂನುಗಳು ಎಂದು ವಿರೋಧಿಸಿರುವ ಆಂಧ್ರಪ್ರದೇಶದ “ಅಖಿಲಾ ರೈತ ಪೋರಾಟ ಸಮನ್ವಯ ಸಮಿತಿ” ಮುಂದಾಳತ್ವದಲ್ಲಿ ಆಂಧ್ರಪ್ರದೇಶದಲ್ಲೂ ರೈತ ಹೋರಾಟ ನಡೆಯುತ್ತಲೇ ಇದೆ.
ಕಳೆದ ವಾರ ಮಾಜಿ ಸಚಿವ ವಡ್ಡೆ ಶೋಭನದೀಶ್ವರ್ ರಾವ್ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಹೋರಾಟ ಆಯೋಜಿಸಲಾಗಿತ್ತು. ವೈ.ಕೇಶವ ರಾವ್, ಎಂ.ಸೂರ್ಯನಾರಾಯಣ, ವಿ.ಶ್ರೀನಿವಾಸ ರಾವ್, ಸಿ.ಎಚ್. ಬಾಬು ರಾವ್, ರವುಲಾ ವೆಂಕಯ್ಯ, ಯಲಮಂದ ರಾವ್, ಪಿ.ಜಮಲಯ, ವಿ.ವೆಂಕಟೇಶ್ವರಲು ಸೇರಿದಂತೆ ಆಂಧ್ರದ ಪ್ರಮುಖ ನಾಯಕರು ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ, ಈ ಹೋರಾಟದಲ್ಲಿ ಉದ್ವಿಗ್ನತೆ ಉಂಟಾದ ಪರಿಣಾಮ ಈ ಎಲ್ಲಾ ಹೋರಾಟಗಾರರನ್ನು ಬಂಧಿಸಲಾಗಿತ್ತು.
ಇದೇ ವೇಳೆ ತೆಲಂಗಾಣದ ರೈತರೂ ಸಹ ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಹೈದ್ರಾಬಾದ್ಗೆ ಆಗಮಿಸಿದ್ದ ರೈತರು ಹಾಗೂ ರೈತ ಮಹಿಳೆಯರು ದೊಡ್ಡ ಮಟ್ಟದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಅಲ್ಲದೆ, ಕಳೆದ ಎರಡು ತಿಂಗಳಲ್ಲಿ ಹಲವಾರು ಜಿಲ್ಲೆಗಳು ಹೋರಾಟಕ್ಕೆ ಸಾಕ್ಷಿಯಾಗಿವೆ.
ಬಿಜೆಪಿಗರಿಗೆ ನಿಷೇಧ ಹೇರಿದ ಉತ್ತರಪ್ರದೇಶ-ಹರಿಯಾಣ ಗ್ರಾಮಗಳು
ಕೇಂದ್ರದ ಕೃಷಿ ಕಾಯ್ದೆಯ ವಿರುದ್ದ ಪಂಜಾಬ್ ಮತ್ತು ಹರಿಯಾಣದಲ್ಲಿನ ಹೋರಾಟ ತಾರಕಕ್ಕೇರಿದೆ. ದೇಶದಾದ್ಯಂತ ವಿವಿಧೆಡೆ ಹೋರಾಟಗಳು ನಡೆಯುತ್ತಲೇ ಇದೆ. ಆದರೆ, ಇಡೀ ದೇಶದ ಹೋರಾಟ ಒಂದು ಬಗೆಯದ್ದಾದರೆ, ಹರಿಯಾಣದ 60 ಗ್ರಾಮಗಳು ಹಾಗೂ ಉತ್ತರ ಪ್ರದೇಶದ ಕೆಲ ಗ್ರಾಮಗಳ ಹೋರಾಟ ವಿಭಿನ್ನ ರೀತಿಯಲ್ಲಿ ಸಾಗಿದೆ.
ದೇಶದ ರೈತರು ದೆಹಲಿಯಲ್ಲಿ ತಮ್ಮ ಹೋರಾಟವನ್ನು ಆರಂಭಿಸುತ್ತಿದ್ದಂತೆ ಹರಿಯಾಣ ಹಾಗೂ ಉತ್ತರಪ್ರದೇಶದ ಅನೇಕ ಹಳ್ಳಿಗಳ ಜನ ತಮ್ಮ ಗ್ರಾಮಗಳಿಗೆ ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಜೆಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರವೇಶವನ್ನೇ ನಿಷೇಧಿಸಿದ್ದಾರೆ.
ರೈತ ವಿರೋಧಿ ಕಾನೂನನ್ನು ವಿರೋಧಿಸಿ ರಾಷ್ಟ್ರದಾದ್ಯಂತದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದ ಅನೇಕ ಗ್ರಾಮಗಳ ನಿವಾಸಿಗಳು ಬಿಜೆಪಿ-ಜೆಜೆಪಿಯ ಸಚಿವರು ಮತ್ತು ಶಾಸಕರನ್ನು ಬಹಿಷ್ಕರಿಸಿ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ.
ಈ ಬಗ್ಗೆ ರೈತರು ಗ್ರಾಮದ ವಿವಿಧ ಪ್ರವೇಶ ಕೇಂದ್ರಗಳಲ್ಲಿ ಹೋರ್ಡಿಂಗ್ಗಳನ್ನು ಹಾಕಿದ್ದು, ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.
ಭಾಗಶಃ ಬಾರತ ಇತಿಹಾಸದಲ್ಲಿ ಗ್ರಾಮದ ಪ್ರವೇಶದ್ವಾರವೊಂದರಲ್ಲಿ ಹೀಗೊಂದು ಬೋರ್ಡಿಂಗ್ ಹಾಕಿದ್ದ ಇತಿಹಾಸ ಈ ಹಿಂದೆಯೂ ಇಲ್ಲ, ಮುಂದೆಯೂ ಇರಲಿಕ್ಕಿಲ್ಲವೇನೋ? ಆದರೆ, ಈ ಎಲ್ಲಾ ಸಂಗತಿಗಳು ನಮಗೆ ನೀಡುವ ಒಂದೇ ಒಂದು ಸಂದೇಶವಿಷ್ಟೆ. ಇದು ಕೇವಲ ಪಂಜಾಬ್-ಹರಿಯಾಣ ರೈತರ ಹೋರಾಟವಷ್ಟೇ ಅಲ್ಲ. ಬದಲಿಗೆ ಇದು ಇಡೀ ದೇಶದ ರೈತ ಸಮುದಾಯದ ಹೋರಾಟ ಎಂಬುದೇ ಆಗಿದೆ.
ಪಂಜಾಬ್ ಹೋರಾಟವಲ್ಲ…ಇಡೀ ಬಾರತದ ರೈತ ಹೋರಾಟವೆನ್ನಿ..!
“ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ ವಿಶ್ವ ಪರಂಪರೆಯಲ್ಲಿ ರೈತರ ನಾಡು ಎಂದೇ ಖ್ಯಾತವಾಗಿರುವ ಭಾರತ ರೈತರ ಹಕ್ಕಿನ ಕಾರಣಕ್ಕೆ ಹಿಂದೆಂದೂ ಕಾರಣ ಐತಿಹಾಸಿಕ ಹೋರಾಟವೊಂದಕ್ಕೆ ಸಾಕ್ಷಿಯಾಗಿದೆ. ಹೊಸ ದಶಕವೊಂದು ರೈತ ಹೋರಾಟದೊಂದಿಗೆ ಉದಯಿಸಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಅಕ್ಷರಶಃ ರೈತರ ಪಾಲಿನ ಮರಣ ಶಾಸನ ಎಂಬುದು ರೈತರ ಆರೋಪ. ಹೀಗಾಗಿ ಈ ಕಾನೂನನ್ನು ಹಿಂಪಡೆಯಬೇಕು ಎಂದು ರೈತ ಸಮುದಾಯ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರೆ, ಈ ರೈತ ಹೋರಾಟ ತೀವ್ರತೆಯನ್ನು ಕಂಡಿದ್ದು ಕಳೆದ ವರ್ಷದ ನವೆಂಬರ್ ಅಂತ್ಯದಲ್ಲೇ. ರಾಷ್ಟ್ರ ರಾಜಧಾನಿಗೆ ಹತ್ತಿರದಲ್ಲೇ ಇರುವ ಪಂಜಾಬ್-ಹರಿಯಾಣ ರೈತರು ರಾಜಧಾನಿಗೆ ಲಗ್ಗೆ ಹಾಕಿ, ಇದೀಗ ದೆಹಲಿಯ ಹೊರವಲಯದಲ್ಲಿ ಬೀಡು ಬಿಟ್ಟಿದ್ದಾರೆ. ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಹಾಗಾದರೆ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟವೇ? ಈ ಹೋರಾಟಕ್ಕೆ ಬೇರೆ ರಾಜ್ಯದ ರೈತರ ಬೆಂಬಲ ಇಲ್ಲವೇ? ಎಂಬುದು ಪ್ರಶ್ನೆ. ಅಸಲಿಗೆ ಕೊರೋನಾ ಕಾರಣಕ್ಕೆ ದೇಶದ ನಾನಾ ಮೂಲೆಗಳಿಂದ ದೆಹಲಿಗೆ ತೆರಳಲಾಗದ ರೈತರು ತಮ್ಮ ರಾಜ್ಯದಲ್ಲೇ ಹಲವೆಡೆ ಉಗ್ರ ಹೋರಾಟಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ, ಇದು ಕೇವಲ ಪಂಜಾಬ್ ಹರಿಯಾಣ ರೈತರ ಹೋರಾಟವಷ್ಟೇ ಹೊರತು, ಇಡೀ ಭಾರತದ ಹೋರಾಟವಲ್ಲ ಎಂದು ಬಿಂಬಿಸುವಲ್ಲಿ ನಮ್ಮ ದೇಶದ ಮುಖ್ಯವಾಹಿನಿ ಮಾಧ್ಯಮಗಳು ಸಾಕಷ್ಟು ಶ್ರಮವಹಿಸಿವೆ. ಇದು ಮಾಧ್ಯಮಗಳು ರೈತರಿಗೆ ಎಸಗಿದ ದ್ರೋಹ ಎನ್ನಲು ಅಡ್ಡಿಯಿಲ್ಲ.
ಕೃಪೆ : mass media foundation, Delhi
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ4 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ1 day agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

