Connect with us

ದಿನದ ಸುದ್ದಿ

ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು: “ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ ವಿಶ್ವ ಪರಂಪರೆಯಲ್ಲಿ ರೈತರ ನಾಡು ಎಂದೇ ಖ್ಯಾತವಾಗಿರುವ ಭಾರತ ರೈತರ ಹಕ್ಕಿನ ಕಾರಣಕ್ಕೆ ಹಿಂದೆಂದೂ ಕಾರಣ ಐತಿಹಾಸಿಕ ಹೋರಾಟವೊಂದಕ್ಕೆ ಸಾಕ್ಷಿಯಾಗಿದೆ. ಹೊಸ ದಶಕವೊಂದು ರೈತ ಹೋರಾಟದೊಂದಿಗೆ ಉದಯಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಅಕ್ಷರಶಃ ರೈತರ ಪಾಲಿನ ಮರಣ ಶಾಸನ ಎಂಬುದು ರೈತರ ಆರೋಪ. ಹೀಗಾಗಿ ಈ ಕಾನೂನನ್ನು ಹಿಂಪಡೆಯಬೇಕು ಎಂದು ರೈತ ಸಮುದಾಯ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರೆ, ಈ ರೈತ ಹೋರಾಟ ತೀವ್ರತೆಯನ್ನು ಕಂಡಿದ್ದು ಕಳೆದ ವರ್ಷದ ನವೆಂಬರ್ ಅಂತ್ಯದಲ್ಲೇ. ರಾಷ್ಟ್ರ ರಾಜಧಾನಿಗೆ ಹತ್ತಿರದಲ್ಲೇ ಇರುವ ಪಂಜಾಬ್-ಹರಿಯಾಣ ರೈತರು ರಾಜಧಾನಿಗೆ ಲಗ್ಗೆ ಹಾಕಿ, ಇದೀಗ ದೆಹಲಿಯ ಹೊರವಲಯದಲ್ಲಿ ಬೀಡು ಬಿಟ್ಟಿದ್ದಾರೆ. ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಹಾಗಾದರೆ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟವೇ? ಈ ಹೋರಾಟಕ್ಕೆ ಬೇರೆ ರಾಜ್ಯದ ರೈತರ ಬೆಂಬಲ ಇಲ್ಲವೇ? ಎಂಬುದು ಪ್ರಶ್ನೆ. ಅಸಲಿಗೆ ಕೊರೋನಾ ಕಾರಣಕ್ಕೆ ದೇಶದ ನಾನಾ ಮೂಲೆಗಳಿಂದ ದೆಹಲಿಗೆ ತೆರಳಲಾಗದ ರೈತರು ತಮ್ಮ ರಾಜ್ಯದಲ್ಲೇ ಹಲವೆಡೆ ಉಗ್ರ ಹೋರಾಟಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ, ಇದು ಕೇವಲ ಪಂಜಾಬ್ ಹರಿಯಾಣ ರೈತರ ಹೋರಾಟವಷ್ಟೇ ಹೊರತು, ಇಡೀ ಭಾರತದ ಹೋರಾಟವಲ್ಲ ಎಂದು ಬಿಂಬಿಸುವಲ್ಲಿ ನಮ್ಮ ದೇಶದ ಮುಖ್ಯವಾಹಿನಿ ಮಾಧ್ಯಮಗಳು ಸಾಕಷ್ಟು ಶ್ರಮವಹಿಸಿವೆ. ಇದು ಮಾಧ್ಯಮಗಳು ರೈತರಿಗೆ ಎಸಗಿದ ದ್ರೋಹ ಎನ್ನಲು ಅಡ್ಡಿಯಿಲ್ಲ.

ಆದರೆ, ಹರಿವ ನದಿಗೆ ನೂರಾರು ತೊರೆ ಎಂಬಂತೆ ದೆಹಲಿ ರೈತ ಹೋರಾಟಕ್ಕೆ ಇಡೀ ದೇಶದ ರೈತರು ಸ್ಪಂದಿಸಿದ್ದಾರೆ. ತಾವಿದ್ದಲ್ಲಿಂದಲೇ ತಮ್ಮ ದನಿಗೂಡಿಸಿದ್ದಾರೆ ಎಂಬುದೇ ಕಟುವಾಸ್ತವ. ಹಾಗಾದರೆ, ಕಳೆದ ಎರಡು ತಿಂಗಳಲ್ಲಿ ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ ಭಾರತದಲ್ಲಿ ಯಾವ ಯಾವ ರಾಜ್ಯದಲ್ಲಿ ರೈತರು ಹೋರಾಟ ನಡೆಸಿದ್ದಾರೆ? ಹೋರಾಟದ ತೀವ್ರತೆ ಏನು? ಈ ಹೋರಾಟವನ್ನು ತಡೆಯಲು ಅಲ್ಲಿನ ಸರ್ಕಾರಗಳು ಕೈಗೊಂಡ ಕ್ರಮ ಏನು? ಎಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ದ್ರಾವಿಡ ನಾಡಿನಲ್ಲಿ ಮೊಳಗಿತ್ತು ರೈತ ಕಹಳೆ

ಕೇಂದ್ರ ಸರ್ಕಾರದ ಕೃಷಿ ಕಾನೂನನ್ನು ವಿರೋಧಿಸಿ ಪಂಜಾಬ್ ಹಾಗೂ ಹರಿಯಾಣ ರೈತರು ದೆಹಲಿ ಕಡೆ ಮುಖ ಮಾಡುತ್ತಿದ್ದಂತೆಯೇ ತಮಿಳುನಾಡಿನಲ್ಲೂ ರೈತರು ಹೋರಾಟದ ಕಣಕ್ಕೆ ಧುಮುಕಿದ್ದರು.

ನವೆಂಬರ್ ಅಂತ್ಯದಲ್ಲಿ ರೈತರು ದೆಹಲಿ ಕಡೆಗೆ ಹೊರಡುತ್ತಿದ್ದಂತೆ ತಮಿಳುನಾಡಿನ ಪ್ರಬಲ ವಿರೋಧ ಪಕ್ಷವಾದ ಡಿಎಂಕೆ ಕಳೆದ ವರ್ಷ ಡಿಸೆಂಬರ್ 05 ರಂದು ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ “ಅನ್ನದಾತನಿಗಾಗಿ ಒಂದು ದಿನದ ಉಪವಾಸ ಸತ್ಯಾಗ್ರಹ” ಎಂಬ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವನ್ನು ತಮಿಳುನಾಡಿನ ಎಲ್ಲಾ 36 ರೈತ ಸಂಘಟನೆಗಳೂ ಬೆಂಬಲಿಸಿದ್ದವು. ಅಲ್ಲದೆ, ಸಾವಿರಾರು ರೈತರು ಹಾಗೂ ಡಿಎಂಕೆ ಕಾರ್ಯಕರ್ತರು ಈ ಹೋರಾಟದಲ್ಲಿ ಪಾಲ್ಗೊಂಡು ಒಂದು ದಿನ ಉಪವಾಸ ಆಚರಿಸುವ ಮೂಲಕ ಗಾಂಧಿ ಮಾರ್ಗದಲ್ಲಿ ಹೋರಾಟದ ಕಿಚ್ಚು ಹಚ್ಚಿಸಿದ್ದರು.

ಅಲ್ಲಿಂದ ಈವರೆಗೆ ತಮಿಳುನಾಡಿನಲ್ಲಿ ಪ್ರತಿದಿನ ಒಂದಲ್ಲಾ ಒಂದು ಜಿಲ್ಲೆಯಲ್ಲಿ ರೈತರು ಕೇಂದ್ರ ಸರ್ಕಾರವನ್ನು ವಿರೋಧಿಸಿ ನಿರಂತರವಾಗಿ ಹೋರಾಟವನ್ನು ನಡೆಸುತ್ತಲೇ ಇದ್ದಾರೆ. ಈ ಹೋರಾಟಗಳಲ್ಲೇ ಹೆಚ್ಚು ಗಮನ ಸೆಳೆದ ಹೋರಾಟವೆಂದರೆ ಡಿಸೆಂಬರ್ 11ರಂದು ರೈತರ ರಾಜಭವನ ಮುತ್ತಿಗೆ ಚಳುವಳಿ, ಡಿಸೆಂಬರ್ 15 ರಂದು ತಂಜಾವೂರು ಜಿಲ್ಲೆಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ರ‍್ಯಾಲಿ ಮತ್ತು ರೈಲ್ ರೋಖೋ ಚಳುವಳಿ.

ತಮಿಳುನಾಡಿನ 22 ಜಿಲ್ಲೆಗಳ ರೈತರು ಒಟ್ಟಾಗಿ ಡಿಸೆಂಬರ್ 11 ರಂದು ಚೆನ್ನೈನಲ್ಲಿರುವ ರಾಜಭವನಕ್ಕೆ ಮುತ್ತಿಗೆ ಹಾಕಿದ್ದರೆ, ಡಿಸೆಂಬರ್ 15 ರಂದು ತಂಜಾವೂರಿನ ಕಾವೇರಿ ಡೆಲ್ಟಾ ಭಾಗದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಿದ್ದರು. ಈ ರ್ಯಾಲಿಗೆ ಪೊಲೀಸರಿಂದ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ, ದಿಢೀರೆಂದಯ ಮಾರ್ಗ ಮಧ್ಯೆ ರ್ಯಾಲಿಯನ್ನು ತಡೆಯಲಾಗಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಒಂದಿಡೀ ದಿನ ತಂಜಾವೂರು ಚೆನ್ನೈ ರಾಷ್ಟ್ರೀಯ ಹೆದ್ದಾರಿಯನ್ನೇ ತಡೆದು ಪ್ರತಿಭಟಿಸಿದ್ದರು. ಅಲ್ಲದೆ, ಕೃಷಿ ಕಾನೂನನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈಲ್ ರೋಖೋ ಚಳುವಳಿಯನ್ನೂ ನಡೆಸಿದ್ದರು.

ಇದೇ ವೇಳೆ ತಮಿಳುನಾಡಿನ ರೈತ ಸಂರಕ್ಷಣಾ ಸಂಘದ ರೈತರ ಒಂದು ತಂಡ ದೆಹಲಿಗೆ ತೆರಳಿ ರೈತ ಹೋರಾಟದಲ್ಲಿ ಭಾಗವಹಿಸಿದ್ದರೆ, ಮತ್ತೊಂದೆಡೆ ತಮಿಳುನಾಡಿನ ತಿರುನಲ್ವೇಲಿ, ನಾಗಪಟ್ಟಣಂ ಜಿಲ್ಲೆಗಳಲ್ಲಿ ರೈತರು ನೇಗಿಲು ಹಿಡಿದು ಕೇಂದ್ರದ ವಿರುದ್ಧ ಹೋರಾಟ ನಡೆಸಿದ್ದರು. ಈ ವೇಳೆ ರೈತರ ಮೇಲೆ ಲಾಠಿ ಚಾರ್ಚ್ ಮಾಡಲಾಗಿತ್ತು. ಅಲ್ಲದೆ, 62 ಜನರನ್ನು ಒತ್ತಾಯಪೂರ್ವಕವಾಗಿ ಬಂಧಿಸಿ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು ಎಂಬುದು ಉಲ್ಲೇಖಾರ್ಹ.

ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ದೆಹಲಿ ರೈತ ಹೋರಾಟ ಮತ್ತು ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಟ್ರ್ಯಾಕ್ಟರ್ ರ್ಯಾಲಿಯನ್ನು ಬೆಂಬಲಿಸಿ ಮಹಾರಾಷ್ಟ್ರದ ರೈತರು ಸಹ ಜನವರಿ 26 ರಂದು ಮುಂಬೈ ಮಹಾನಗರದಲ್ಲಿ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ಈ ಮೂಲಕ ಕೇಂದ್ರದ ವಿರುದ್ಧ ತಮ್ಮ ಅಸಮಾಧಾನವನ್ನು ಹೊರಹಾಕಲು ವೇದಿಕೆ ಸಿದ್ದಪಡಿಸಿದ್ದಾರೆ.

ಇದರ ಭಾಗವಾಗಿ ಮಹಾರಾಷ್ಟ್ರದ 21 ಜಿಲ್ಲೆಗಳ ಲಕ್ಷಾಂತರ ರೈತರು ಕಳೆದ ಜನವರಿ 23 ರಂದು ನಾಸಿಕ್ನಿಂದ ಮುಂಬೈಗೆ ಪಾದಯಾತ್ರೆ ಹೊರಟಿದ್ದಾರೆ. ಈ ಯಾತ್ರೆ ಸೋಮವಾರ (ಜನವರಿ 25) ಮುಂಬೈ ಪ್ರವೇಶಿಸಲಿದೆ. ಅಲ್ಲದೆ, ಹೆಸರಾಂತ ಆಜಾದ್ ಮೈದಾನದಲ್ಲಿ ಮಹಾರಾಷ್ಟ್ರದ ಲಕ್ಷಾಂತರ ರೈತರು ಜಮಾಯಿಸಲಿದ್ದು, ದೆಹಲಿಯಲ್ಲಿ ಹೋರಾಟ ನಿರತ ರೈತರಿಗೆ ಬಲ ತುಂಬಲಿದ್ದಾರೆ. ಈ ಹೋರಾಟದಲ್ಲಿ ಎನ್ಸಿಪಿ ಹಿರಿಯ ನಾಯಕ ಶರದ್ ಪವಾರ್ ಸಹ ಭಾಗವಹಿಸಲಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಕೃಷಿ ಕಾಯ್ದೆಯನ್ನು ವಿರೋಧಿಸಿ ಈ ಪ್ರಮಾಣ ಸಂಖ್ಯೆಯಲ್ಲಿ ರೈತರು ಮುಂಬೈಗೆ ಲಗ್ಗೆ ಇಡುತ್ತಿರುವ ಕುರಿತು ದೇಶದ ಯಾವ ಸುದ್ದಿ ಮಾಧ್ಯಮಗಳೂ ಸಹ ಒಂದೈದು ನಿಮಿಷವೂ ಸಹ ಸುದ್ದಿ ಮಾಡದೆ ಇರುವುದು ದುರಂತವೇ ಸರಿ!

ಮಧ್ಯಪ್ರದೇಶದಲ್ಲಿ ರೈತರ ರ್ಯಾಲಿ ವಿರುದ್ಧ ಜಲಫಿರಂಗಿ ಬಳಸಿದ್ದ ಸರ್ಕಾರ

ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಿ ಮಧ್ಯಪ್ರದೇಶದ ಭೂಪಾಲ್ನಲ್ಲಿ ಕಾಂಗ್ರೆಸ್ ಪಕ್ಷ ಎರಡು ವಾರಗಳ ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಿತ್ತು. ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಈ ಹೋರಾಟದ ನೇತೃತ್ವವಹಿಸಿದ್ದರು.

ಜನವರಿ 23 ರಂ ಮಧ್ಯಾಹ್ನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ನಗರದ ಜವಾಹರ್ ಚೌಕ್ ಪ್ರದೇಶದಲ್ಲಿ ಒಟ್ಟುಗೂಡಿದ್ದರು. ಅಲ್ಲದೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯೋಜಿಸಲಾಗಿತ್ತು. ಆದರೆ, ಪೊಲೀಸರು ಇದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಪರಿಣಾಮ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ರಾಜಭವನವನ್ನು ಸಮೀಪಿಸುತ್ತಿದ್ದಂತೆ, ಅವರನ್ನು ನಿಯಂತ್ರಿಸಲು ಸಾಧ್ಯವಾಗದ ಪೊಲೀಸರು ಹೋರಾಟಗಾರರ ಮೇಲೆ ಅಶ್ರವಾಯು ದಾಳಿ, ಜಲಫಿರಂಗಿ ದಾಳಿ ನಡೆಸಿದ್ದಾರೆ.

ಪೊಲೀಸರ ಬಲ ಪ್ರಯೋಗದ ಮೂಲಕ ಮಧ್ಯಪ್ರದೇಶದಲ್ಲಿ ರೈತರ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗಿತ್ತು. ಆದರೂ, ಸಹ ಇಂದಿಗೂ ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಪ್ರತಿನಿತ್ಯ ರೈತರು ಹೋರಾಟವನ್ನು ಮುಂದುವರೆಸುತ್ತಲೇ ಇದ್ದಾರೆ.

ಕಲ್ಕತ್ತಾದ ರಾಜಭವನಕ್ಕೆ 40 ಸಾವಿರ ಜನ ಮೆರವಣಿಗೆ

ಕೇಂದ್ರ ಸರ್ಕಾರ ಕೃಷಿ ಕಾನೂನನ್ನು ಜಾರಿಗೆ ತರುತ್ತಿದ್ದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕಾನೂನನ್ನು ಬಹಿರಂಗವಾಗಿ ಟೀಕಿಸಿದ್ದರು. ಅಲ್ಲದೆ ಅಲ್ಲಿನ ವಿಧಾನಸಭೆಯಲ್ಲಿ ಈ ಕಾನೂನುಗಳ ವಿರುದ್ಧ ನಿರ್ಣಯವನ್ನು ಮಂಡಿಸಿದ್ದರು. ಆದರೆ, ದೆಹಲಿ ರೈತ ಹೋರಾಟಕ್ಕೆ ಬಲ ತುಂಬಲು ಮುಂದಾಗಿದ್ದ ಬಂಗಾಳದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ಡಿಸೆಂಬರ್ 17 ರಂದು ಸುಮಾರು 40,000 ರೈತ ಹೋರಾಟಗಾರರ ಜೊತೆಗೆ ಕಲ್ಕತ್ತಾದ ರಾಜಭವನಕ್ಕೆ ಮೆರವಣಿಗೆ ಆಯೋಜಿಸಿತ್ತು. ಅಲ್ಲದೆ, ಜಿಲ್ಲಾವಾರು ಹೋರಾಟಗಳು ಪ್ರತಿನಿತ್ಯ ನಡೆಯುತ್ತಲೇ ಇದೆ.

ಈ ಹೋರಾಟವನ್ನು ಬಂಗಾಳದ ಇತಿಹಾಸದಲ್ಲಿ ನಡೆದ ಅತಿದೊಡ್ಡ ಹೋರಾಟ ಎಂದು ಬಣ್ಣಿಸಲಾಗುತ್ತಿದೆ. ಈ ಮೂಲಕ ರೈತರ ಪ್ರತಿಭಟನೆಯು ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಿಗೆ ಮಾತ್ರ ಸೀಮಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಸಂಘಟಕರು ತಿಳಿಸಿದ್ದರು.

ಕೇರಳದಲ್ಲೂ ರೈತ ಕಹಳೆ

ದೆಹಲಿಯ ಸಿಂಗು ಗಡಿಯಲ್ಲಿ ರೈತ ಹೋರಾಟ ಕಾವು ಪಡೆಯುತ್ತಿದ್ದಂತೆ ಕೇರಳದ ರೈತರು ಸಹ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದರು. ತಿರುವನಂತಪುರಂನಲ್ಲಿ ಜಂಟಿ ರೈತ ಪರಿಷತ್ ಆಯೋಜಿಸಿದ್ದ ಅನಿರ್ದಿಷ್ಟ ಪ್ರತಿಭಟನೆ ಇಂದಿಗೂ ಸಹ ಮುಂದುವರೆದಿದೆ. ಈ ಪ್ರತಿಭಟನೆಯಲ್ಲಿ 600 ರೈತ ಸಂಘಗಳು ಪಾಲ್ಗೊಂಡಿವೆ. ಅಲ್ಲದೆ ಸ್ವತಃ ಕೇರಳ ಸರ್ಕಾರ ಅಲ್ಲಿನ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಗಳ ವಿರುದ್ಧ ನಿರ್ಣಯ ಜಾರಿಗೆ ತಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ಆಂಧ್ರ ತೆಲಂಗಾಣದಲ್ಲೂ ಹೋರಾಟಕ್ಕಿಳಿದ ರೈತರು

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳು ರೈತರನ್ನು ಮತ್ತಷ್ಟು ಶೋಷಿಸುತ್ತವೆ ಮತ್ತು ದೇಶದ ಆಹಾರ ಭದ್ರತೆಗೆ ಧಕ್ಕೆ ತರುವ ಕಪ್ಪು ಕಾನೂನುಗಳು ಎಂದು ವಿರೋಧಿಸಿರುವ ಆಂಧ್ರಪ್ರದೇಶದ “ಅಖಿಲಾ ರೈತ ಪೋರಾಟ ಸಮನ್ವಯ ಸಮಿತಿ” ಮುಂದಾಳತ್ವದಲ್ಲಿ ಆಂಧ್ರಪ್ರದೇಶದಲ್ಲೂ ರೈತ ಹೋರಾಟ ನಡೆಯುತ್ತಲೇ ಇದೆ.

ಕಳೆದ ವಾರ ಮಾಜಿ ಸಚಿವ ವಡ್ಡೆ ಶೋಭನದೀಶ್ವರ್ ರಾವ್ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಹೋರಾಟ ಆಯೋಜಿಸಲಾಗಿತ್ತು. ವೈ.ಕೇಶವ ರಾವ್, ಎಂ.ಸೂರ್ಯನಾರಾಯಣ, ವಿ.ಶ್ರೀನಿವಾಸ ರಾವ್, ಸಿ.ಎಚ್. ಬಾಬು ರಾವ್, ರವುಲಾ ವೆಂಕಯ್ಯ, ಯಲಮಂದ ರಾವ್, ಪಿ.ಜಮಲಯ, ವಿ.ವೆಂಕಟೇಶ್ವರಲು ಸೇರಿದಂತೆ ಆಂಧ್ರದ ಪ್ರಮುಖ ನಾಯಕರು ಈ ಹೋರಾಟದಲ್ಲಿ ಭಾಗಿಯಾಗಿದ್ದರು. ಆದರೆ, ಈ ಹೋರಾಟದಲ್ಲಿ ಉದ್ವಿಗ್ನತೆ ಉಂಟಾದ ಪರಿಣಾಮ ಈ ಎಲ್ಲಾ ಹೋರಾಟಗಾರರನ್ನು ಬಂಧಿಸಲಾಗಿತ್ತು.

ಇದೇ ವೇಳೆ ತೆಲಂಗಾಣದ ರೈತರೂ ಸಹ ಒಗ್ಗಟ್ಟನ್ನು ಪ್ರದರ್ಶಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಹೈದ್ರಾಬಾದ್ಗೆ ಆಗಮಿಸಿದ್ದ ರೈತರು ಹಾಗೂ ರೈತ ಮಹಿಳೆಯರು ದೊಡ್ಡ ಮಟ್ಟದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದರು. ಅಲ್ಲದೆ, ಕಳೆದ ಎರಡು ತಿಂಗಳಲ್ಲಿ ಹಲವಾರು ಜಿಲ್ಲೆಗಳು ಹೋರಾಟಕ್ಕೆ ಸಾಕ್ಷಿಯಾಗಿವೆ.

ಬಿಜೆಪಿಗರಿಗೆ ನಿಷೇಧ ಹೇರಿದ ಉತ್ತರಪ್ರದೇಶ-ಹರಿಯಾಣ ಗ್ರಾಮಗಳು

ಕೇಂದ್ರದ ಕೃಷಿ ಕಾಯ್ದೆಯ ವಿರುದ್ದ ಪಂಜಾಬ್ ಮತ್ತು ಹರಿಯಾಣದಲ್ಲಿನ ಹೋರಾಟ ತಾರಕಕ್ಕೇರಿದೆ. ದೇಶದಾದ್ಯಂತ ವಿವಿಧೆಡೆ ಹೋರಾಟಗಳು ನಡೆಯುತ್ತಲೇ ಇದೆ. ಆದರೆ, ಇಡೀ ದೇಶದ ಹೋರಾಟ ಒಂದು ಬಗೆಯದ್ದಾದರೆ, ಹರಿಯಾಣದ 60 ಗ್ರಾಮಗಳು ಹಾಗೂ ಉತ್ತರ ಪ್ರದೇಶದ ಕೆಲ ಗ್ರಾಮಗಳ ಹೋರಾಟ ವಿಭಿನ್ನ ರೀತಿಯಲ್ಲಿ ಸಾಗಿದೆ.

ದೇಶದ ರೈತರು ದೆಹಲಿಯಲ್ಲಿ ತಮ್ಮ ಹೋರಾಟವನ್ನು ಆರಂಭಿಸುತ್ತಿದ್ದಂತೆ ಹರಿಯಾಣ ಹಾಗೂ ಉತ್ತರಪ್ರದೇಶದ ಅನೇಕ ಹಳ್ಳಿಗಳ ಜನ ತಮ್ಮ ಗ್ರಾಮಗಳಿಗೆ ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಜೆಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರವೇಶವನ್ನೇ ನಿಷೇಧಿಸಿದ್ದಾರೆ.

ರೈತ ವಿರೋಧಿ ಕಾನೂನನ್ನು ವಿರೋಧಿಸಿ ರಾಷ್ಟ್ರದಾದ್ಯಂತದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದ ಅನೇಕ ಗ್ರಾಮಗಳ ನಿವಾಸಿಗಳು ಬಿಜೆಪಿ-ಜೆಜೆಪಿಯ ಸಚಿವರು ಮತ್ತು ಶಾಸಕರನ್ನು ಬಹಿಷ್ಕರಿಸಿ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ.

ಈ ಬಗ್ಗೆ ರೈತರು ಗ್ರಾಮದ ವಿವಿಧ ಪ್ರವೇಶ ಕೇಂದ್ರಗಳಲ್ಲಿ ಹೋರ್ಡಿಂಗ್ಗಳನ್ನು ಹಾಕಿದ್ದು, ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಭಾಗಶಃ ಬಾರತ ಇತಿಹಾಸದಲ್ಲಿ ಗ್ರಾಮದ ಪ್ರವೇಶದ್ವಾರವೊಂದರಲ್ಲಿ ಹೀಗೊಂದು ಬೋರ್ಡಿಂಗ್ ಹಾಕಿದ್ದ ಇತಿಹಾಸ ಈ ಹಿಂದೆಯೂ ಇಲ್ಲ, ಮುಂದೆಯೂ ಇರಲಿಕ್ಕಿಲ್ಲವೇನೋ? ಆದರೆ, ಈ ಎಲ್ಲಾ ಸಂಗತಿಗಳು ನಮಗೆ ನೀಡುವ ಒಂದೇ ಒಂದು ಸಂದೇಶವಿಷ್ಟೆ. ಇದು ಕೇವಲ ಪಂಜಾಬ್-ಹರಿಯಾಣ ರೈತರ ಹೋರಾಟವಷ್ಟೇ ಅಲ್ಲ. ಬದಲಿಗೆ ಇದು ಇಡೀ ದೇಶದ ರೈತ ಸಮುದಾಯದ ಹೋರಾಟ ಎಂಬುದೇ ಆಗಿದೆ.

ಪಂಜಾಬ್ ಹೋರಾಟವಲ್ಲ…ಇಡೀ ಬಾರತದ ರೈತ ಹೋರಾಟವೆನ್ನಿ..!

“ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ” ಎಂಬುದು ನಮ್ಮ ನಡುವಿನ ಖ್ಯಾತ ನಾಣ್ನುಡಿ. ಆದರೆ, ನಮ್ಮನ್ನು ಆಳುವ ಪ್ರಭುತ್ವ ಈ ನಾಣ್ನುಡಿಯನ್ನು ಮರೆತು ಇದೀಗ ರೈತರಿಗೆ ದ್ರೋಹವೆಸಗಲು ಮುಂದಾಗಿದೆ. ಕೃಷಿಯನ್ನು ಕಾರ್ಪೋರೇಟ್ಗೊಳಿಸಲಾಗುತ್ತಿದೆ. ಪರಿಣಾಮ ವಿಶ್ವ ಪರಂಪರೆಯಲ್ಲಿ ರೈತರ ನಾಡು ಎಂದೇ ಖ್ಯಾತವಾಗಿರುವ ಭಾರತ ರೈತರ ಹಕ್ಕಿನ ಕಾರಣಕ್ಕೆ ಹಿಂದೆಂದೂ ಕಾರಣ ಐತಿಹಾಸಿಕ ಹೋರಾಟವೊಂದಕ್ಕೆ ಸಾಕ್ಷಿಯಾಗಿದೆ. ಹೊಸ ದಶಕವೊಂದು ರೈತ ಹೋರಾಟದೊಂದಿಗೆ ಉದಯಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆ ಅಕ್ಷರಶಃ ರೈತರ ಪಾಲಿನ ಮರಣ ಶಾಸನ ಎಂಬುದು ರೈತರ ಆರೋಪ. ಹೀಗಾಗಿ ಈ ಕಾನೂನನ್ನು ಹಿಂಪಡೆಯಬೇಕು ಎಂದು ರೈತ ಸಮುದಾಯ ಕಳೆದ ಒಂದು ವರ್ಷದಿಂದ ಹೋರಾಟ ನಡೆಸುತ್ತಿದೆ. ಆದರೆ, ಈ ರೈತ ಹೋರಾಟ ತೀವ್ರತೆಯನ್ನು ಕಂಡಿದ್ದು ಕಳೆದ ವರ್ಷದ ನವೆಂಬರ್ ಅಂತ್ಯದಲ್ಲೇ. ರಾಷ್ಟ್ರ ರಾಜಧಾನಿಗೆ ಹತ್ತಿರದಲ್ಲೇ ಇರುವ ಪಂಜಾಬ್-ಹರಿಯಾಣ ರೈತರು ರಾಜಧಾನಿಗೆ ಲಗ್ಗೆ ಹಾಕಿ, ಇದೀಗ ದೆಹಲಿಯ ಹೊರವಲಯದಲ್ಲಿ ಬೀಡು ಬಿಟ್ಟಿದ್ದಾರೆ. ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಹಾಗಾದರೆ ಇದು ಕೇವಲ ಪಂಜಾಬ್ ಮತ್ತು ಹರಿಯಾಣ ರೈತರ ಹೋರಾಟವೇ? ಈ ಹೋರಾಟಕ್ಕೆ ಬೇರೆ ರಾಜ್ಯದ ರೈತರ ಬೆಂಬಲ ಇಲ್ಲವೇ? ಎಂಬುದು ಪ್ರಶ್ನೆ. ಅಸಲಿಗೆ ಕೊರೋನಾ ಕಾರಣಕ್ಕೆ ದೇಶದ ನಾನಾ ಮೂಲೆಗಳಿಂದ ದೆಹಲಿಗೆ ತೆರಳಲಾಗದ ರೈತರು ತಮ್ಮ ರಾಜ್ಯದಲ್ಲೇ ಹಲವೆಡೆ ಉಗ್ರ ಹೋರಾಟಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ, ಇದು ಕೇವಲ ಪಂಜಾಬ್ ಹರಿಯಾಣ ರೈತರ ಹೋರಾಟವಷ್ಟೇ ಹೊರತು, ಇಡೀ ಭಾರತದ ಹೋರಾಟವಲ್ಲ ಎಂದು ಬಿಂಬಿಸುವಲ್ಲಿ ನಮ್ಮ ದೇಶದ ಮುಖ್ಯವಾಹಿನಿ ಮಾಧ್ಯಮಗಳು ಸಾಕಷ್ಟು ಶ್ರಮವಹಿಸಿವೆ. ಇದು ಮಾಧ್ಯಮಗಳು ರೈತರಿಗೆ ಎಸಗಿದ ದ್ರೋಹ ಎನ್ನಲು ಅಡ್ಡಿಯಿಲ್ಲ.

ಕೃಪೆ : mass media foundation, Delhi

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ದಿನದ ಸುದ್ದಿ

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

Published

on

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಗಂಭೀರ ಆರೋಪ ಮಾಡಿದೆ.

ಕೇವಲ 20 ವಿದ್ಯಾರ್ಥಿಗಳಿಂದ ಆರಂಭವಾದ ಈ ಸಂಸ್ಥೆಯು ಇಂದು ವಿವಿಐಎಸ್ ಶಾಲೆ, ಕೆಬಿಸಿ ಪಿಯು ಕಾಲೇಜು ಮತ್ತು ವಿವಿ ಪದವಿ ಕಾಲೇಜುಗಳನ್ನು ಹೊಂದಿದೆ. ಬಡ ಕೂಲಿ ಕಾರ್ಮಿಕರು ಮತ್ತು ವಲಸೆ ಕುಟುಂಬಗಳ 600ಕ್ಕೂ ಹೆಚ್ಚು ಮಕ್ಕಳು ಇಲ್ಲಿ ಕಡಿಮೆ ಶುಲ್ಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಆರಂಭಿಸಲು ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದ ಖಾಲಿ ಕಟ್ಟಡವನ್ನು 5 ವರ್ಷಗಳ ಅವಧಿಗೆ ಬಾಡಿಗೆಗೆ ಪಡೆಯಲಾಗಿತ್ತು. ವಿಠಲಗಿರಿಧಾಮದ ಮಠಾಧೀಶರಾದ ಶ್ರೀ ನಿರ್ಮಲಾನಂದ ಪುರಿ ಅವರು ಪ್ರತಿ ವರ್ಷ 5% ಬಾಡಿಗೆ ಹೆಚ್ಚಳದ ಷರತ್ತಿನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು.

ಸಂಸ್ಥೆಯ ಅಧ್ಯಕ್ಷರು ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ, ಖಾಲಿ ಇದ್ದ ದೊಡ್ಡ ಕೊಠಡಿಗಳಿಗೆ ವಿಭಜನೆ, ಬಾಗಿಲುಗಳನ್ನು ಅಳವಡಿಸಿ, ಫರ್ನಿಚರ್ ತುಂಬಿ ತರಗತಿಗಳನ್ನು ಆರಂಭಿಸಿದರು. ಕಳೆದ 7 ವರ್ಷಗಳಿಂದ ಈ ಕಟ್ಟಡದಲ್ಲಿಯೇ ತರಗತಿಗಳು ನಡೆಯುತ್ತಿದ್ದು, ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದೇ ಮಠದ ಮತ್ತೊಂದು ಭಾಗವನ್ನು “ಟಾಮ್ ಅಂಡ್ ಜೆರ್ರಿ” ವಿಶೇಷ ಮಕ್ಕಳ ಶಾಲೆಗೆ ಬಾಡಿಗೆಗೆ ನೀಡಲಾಗಿದೆ.

ಆದರೆ ಕಳೆದ 3 ವರ್ಷಗಳಿಂದ ಶ್ರೀ ನಿರ್ಮಲಾನಂದ ಪುರಿ ಮತ್ತು ಅವರ ಹಿಂಬಾಲಕರು ಶೈಕ್ಷಣಿಕ ವಾತಾವರಣಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕಾಲೇಜಿನ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳ ಪ್ರಯೋಗ, ಪರೀಕ್ಷಾ ಸಮಯದಲ್ಲಿ ಸ್ವಾಮೀಜಿಯ ಹಿಂಬಾಲಕರು ಕಾಲೇಜಿನ ಒಳಗೆ ನುಗ್ಗಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ಹರಡುವ ಮೂಲಕ ಸಂಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆಡಳಿತ ಮಂಡಳಿ ದೂರಿದೆ.

ಇದರ ಜೊತೆಗೆ ಇನ್ನೊಂದು ಗಂಭೀರ ಆರೋಪ ಕೇಳಿಬಂದಿದೆ. ವಿಠಲ ರುಕ್ಮಿಣಿ ಮಠದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಮೀನನ್ನು *”ಗೋಶಾಲೆ ಮತ್ತು ವೃದ್ಧಾಶ್ರಮ”*ಕ್ಕಾಗಿ ಮಂಜೂರು ಮಾಡಲಾಗಿದೆ. ಆದರೆ ಮಂಜೂರಾದ ಉದ್ದೇಶವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಈ ಜಮೀನನ್ನು ವಾಣಿಜ್ಯ ಉದ್ದೇಶಕ್ಕಾಗಿ ಹಂತಹಂತವಾಗಿ ಬಾಡಿಗೆಗೆ ನೀಡಲಾಗುತ್ತಿದೆ.

ಸಭಾಂಗಣದಲ್ಲಿದ್ದ ದೇವರ ಮೂರ್ತಿಯನ್ನು ಸಹ ಹಣಕ್ಕಾಗಿ ಬೇರೆ ಕಡೆಗೆ ವರ್ಗಾಯಿಸಿ ವಾಣಿಜ್ಯ ಉದ್ದೇಶಕ್ಕೆ ಬಳಸಲಾಗಿದೆ. ಸರ್ಕಾರವು ಈ ಜಾಗವನ್ನು ಗೋಶಾಲೆ ಮತ್ತು ವೃದ್ಧಾಶ್ರಮ ನಡೆಸುವುದಕ್ಕೆ ಮಂಜೂರು ಮಾಡಿದ್ದರೂ, ಇಲ್ಲಿ ಯಾವುದೇ ಗೋಶಾಲೆ ಅಥವಾ ವೃದ್ಧಾಶ್ರಮ ನಡೆಯುತ್ತಿಲ್ಲ. ಮಠದ ಆಸ್ತಿಯನ್ನು ಸ್ವಾಮೀಜಿ ಮತ್ತು ಅವರ ಹಿಂಬಾಲಕರು ಕಮರ್ಷಿಯಲ್ ಉದ್ದೇಶಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಆಡಳಿತ ಮಂಡಳಿಯ ಆರೋಪ.

ಈ ಬೆಳವಣಿಗೆಯಿಂದಾಗಿ ಕಾಲೇಜಿನಲ್ಲಿ ಓದುತ್ತಿರುವ ನೂರಾರು ಬಡ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದೆ. ಕಂದಾಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ತನಿಖೆ ನಡೆಸಿ ಮಠದ ಸ್ವಾಮೀಜಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಆಡಳಿತ ಮಂಡಳಿ ಮತ್ತಷ್ಟು ಆರೋಪಿಸಿರುವ ಪ್ರಕಾರ, ಮಠದ ಸ್ವಾಮೀಜಿ ಸಾರ್ವಜನಿಕವಾಗಿ “ಮಠದ ಆಸ್ತಿಯನ್ನು ಸರ್ಕಾರದಿಂದ 54 ಲಕ್ಷ ರೂ.ಗೆ ಖರೀದಿ ಮಾಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ. ಅವರ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಒಬ್ಬ ವೃದ್ಧ ಮಹಿಳೆಯನ್ನು ಮೋಸ ಮಾಡಿ ಸೈಟ್ ಕಬಳಿಕೆ ಮಾಡಿ ಬೇರೊಬ್ಬರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಒಬ್ಬ ವೈದ್ಯರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ನೀಡುವುದಾಗಿ ಹೇಳಿ 10 ಲಕ್ಷ ರೂ. ಟೋಕನ್ ಹಣ ಪಡೆದು, ಹಣ ಹಿಂತಿರುಗಿಸದೆ ಸಮಸ್ಯೆ ಮಾಡಿದ ಪ್ರಕರಣವೂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. “ಹಣಕ್ಕಾಗಿ ಕಾವಿ ಧರಿಸಿ ಸಮಾಜಕ್ಕೆ ನಾಚಿಕೆ ತರುವ ಕೆಲಸ ಮಾಡುತ್ತಿದ್ದಾರೆ” ಎಂದು ಆಡಳಿತ ಮಂಡಳಿ ಆರೋಪಿಸಿದೆ.

~ವರದಿ: ಪವನ್ ಕಲ್ಯಾಣ್ ಡಿ.ಜಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

Published

on

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸುಮಾರು ಆರು ಗಂಟೆಗಳ ಕಾಲ ನಡೆದ ಈ ಅತ್ಯಂತ ಸಂಕೀರ್ಣ ಶಸ್ತ್ರಚಿಕಿತ್ಸೆಯಲ್ಲಿ, ವೈದ್ಯರು ಟ್ಯೂಮರ್ (ಗಡ್ಡೆ) ಯನ್ನುಸಂಪೂರ್ಣವಾಗಿ ತೆಗೆದುಹಾಕುವುದರ ಜೊತೆಗೆ ಲಿವರ್ನ ಆರೋಗ್ಯಕರ ಭಾಗಗಳಿಗೆ ಯಾವುದೇ ಹಾನಿಯಾಗದಂತೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗ ಮೂಲದ ಈ ಮಹಿಳೆ, ಬೊಜ್ಜಿನ ಸಮಸ್ಯೆಯ ಜೊತೆಗೆ ಟೈಪ್-2 ಮಧುಮೇಹ ಮತ್ತು ಹೈಪೋಥೈರಾಯ್ಡಿಸಮ್ (ಥೈರಾಯ್ಡ್ ಸಮಸ್ಯೆ) ದಂತಹ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕಳೆದ ಎರಡು ತಿಂಗಳಿನಿಂದ ನಿರಂತರ ಹೊಟ್ಟೆನೋವು ಹಾಗೂ ಹಸಿವಾಗದಿರುವ ಸಮಸ್ಯೆಯಿಂದ ಅವರು ಒದ್ದಾಡುತ್ತಿದ್ದರು. ಇದಕ್ಕಾಗಿ ಸ್ಥಳೀಯ ಕ್ಲಿನಿಕ್ಗಳು ಮತ್ತು ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಅಲ್ಲಿನ ತಪಾಸಣೆಯಲ್ಲಿ ಅವರಿಗೆ ಲಿವರ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು.

ಸರಿಯಾದ ಚಿಕಿತ್ಸೆ ಸಿಗದೆ ಕಾಯಿಲೆ ಉಲ್ಬಣಗೊಂಡಿದ್ದಾಗ, ಅವರ ಪರಿಚಿತರೊಬ್ಬರು ದಾವಣಗೆರೆಯ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ಗೆ ಭೇಟಿ ನೀಡಿ, ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಆರ್.ಕೆ. ಹನುಮಂತ ನಾಯ್ಕ್ ಅವರನ್ನು ಸಂಪರ್ಕಿಸಲು ಸಲಹೆ ನೀಡಿದರು. ಮೊದಲ ತಪಾಸಣೆಯ ನಂತರ, ಮಹಿಳೆಯನ್ನು ಸ್ಕ್ಯಾನಿಂಗ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಈ ವೇಳೆ ಅವರ ಲಿವರ್ನ ಎಡಭಾಗದ (ಲೆಫ್ಟ್ ಲೋಬ್) ಆಳದಲ್ಲಿ ಗಡ್ಡೆಯೊಂದು ಬೆಳೆದಿರುವುದು ಕಂಡುಬಂತು. ಹೆಚ್ಚಿನ ಪರೀಕ್ಷೆಗಳ ನಂತರ ಇದು ‘ಇಂಟ್ರಾಹೆಪಾಟಿಕ್ ಚೋಲಾಂಜಿಯೋಕಾರ್ಸಿನೋಮ’ (intrahepatic cholangiocarcinoma) ಎಂಬ ಕಾಯಿಲೆ ಎಂದು ದೃಢಪಟ್ಟಿತು. ಈ ಹಿಂದೆಯೇ ಅವರಿಗೆ ಈ ಕಾಯಿಲೆ ಇರುವುದು ಪತ್ತೆಯಾಗಿದ್ದರೂ, ಶಸ್ತ್ರಚಿಕಿತ್ಸೆಯಲ್ಲಿನ ಸಂಕೀರ್ಣತೆಯ ಕಾರಣದಿಂದಾಗಿ ಹಿಂದಿನ ವೈದ್ಯರು ಅದನ್ನು ತೆಗೆದುಹಾಕಲು ಹಿಂದೇಟು ಹಾಕಿದ್ದರು.

ಸುಮಾರು 95 ಕೆ.ಜಿ ತೂಕವಿದ್ದ ಆ ಮಹಿಳೆ ಬೊಜ್ಜು ಮತ್ತು ಇತರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರಿಂದ, ಇಂತಹ ದೊಡ್ಡ ಶಸ್ತ್ರಚಿಕಿತ್ಸೆಗೆ ಒಳಪಡಿಸುವುದು ಅತ್ಯಂತ ಅಪಾಯಕಾರಿಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ, ಈ ರೋಗಿಯು ಶಸ್ತ್ರಚಿಕಿತ್ಸೆಯನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈದ್ಯರು ಹೃದಯ ಮತ್ತು ಶ್ವಾಸಕೋಶದ ವಿವರವಾದ ಪರೀಕ್ಷೆಗಳನ್ನು ನಡೆಸಿದರು.

ಈ ಸವಾಲಿನ ಪ್ರಕರಣವನ್ನು ಕೈಗೆತ್ತಿಕೊಂಡ ಡಾ. ಹನುಮಂತ ನಾಯ್ಕ್ ಮತ್ತು ಅವರ ತಂಡ, ಕ್ಯಾನ್ಸರ್ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದುಹಾಕಲು ಸುಮಾರು ಆರು ಗಂಟೆಗಳ ಕಾಲ ಶ್ರಮಿಸಿತು. ಇದರ ಜೊತೆಗೆ ಸಾಕಷ್ಟು ಆರೋಗ್ಯಕರ ಲಿವರ್ ಸರಿಯಾಗಿ ಕಾರ್ಯನಿರ್ವಹಿಸುವಂತೆಯೂ ನೋಡಿಕೊಂಡಿತು. ಈ ಶಸ್ತ್ರಚಿಕಿತ್ಸೆಯು ಪಿತ್ತಕೋಶದ (ಗಾಲ್ ಬ್ಲಾಡರ್) ಜೊತೆಗೆ ಲಿವರ್ನ II, III, IVa ಮತ್ತು IVb ಭಾಗಗಳನ್ನು ತೆಗೆದುಹಾಕುವ ದೊಡ್ಡ ಶಸ್ತ್ರಚಿಕಿತ್ಸೆಯನ್ನು (ಮೇಜರ್ ಲೆಫ್ಟ್ ಹೆಪಟೆಕ್ಟಮಿ) ಒಳಗೊಂಡಿತ್ತು. ಈ ಪ್ರಕ್ರಿಯೆಯಲ್ಲಿ ಮಧ್ಯದ ಹೆಪಾಟಿಕ್ ರಕ್ತನಾಳವನ್ನು ಅತ್ಯಂತ ಎಚ್ಚರಿಕೆಯಿಂದ ರಕ್ಷಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ಮಹಿಳೆಯು ಅತ್ಯಂತ ತ್ವರಿತವಾಗಿ ಚೇತರಿಸಿಕೊಂಡರು. ಶಸ್ತ್ರಚಿಕಿತ್ಸೆ ಮುಗಿದ ಆರು ಗಂಟೆಗಳಲ್ಲೇ ದ್ರವಾಹಾರ ಸೇವಿಸಲು ಆರಂಭಿಸಿದ ಅವರು, ಕ್ರಮೇಣ ಮೃದುವಾದ ಆಹಾರವನ್ನು ಸೇವಿಸುವ ಹಂತಕ್ಕೆ ತಲುಪಿದರು. ಅವರ ಆರೋಗ್ಯ ಸ್ಥಿರವಾಗಿದ್ದರಿಂದ ಕೇವಲ ಐದು ದಿನಗಳಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.

ಶಸ್ತ್ರಚಿಕಿತ್ಸೆ ಬಗ್ಗೆ ಮಾತನಾಡಿದ ಡಾ. ಆರ್. ಕೆ. ಹನುಮಂತ ನಾಯ್ಕ್, “ಟ್ಯೂಮರ್ನ ಗಾತ್ರ ಮತ್ತು ಅದು ಇದ್ದ ಜಾಗ, ಅದರ ಜೊತೆಗೆ ರೋಗಿಯ ಬೊಜ್ಜು ಮತ್ತು ಇತರ ವೈದ್ಯಕೀಯ ಸಮಸ್ಯೆಗಳಿಂದಾಗಿ ಇದು ತಾಂತ್ರಿಕವಾಗಿ ಅತ್ಯಂತ ಸವಾಲಿನ ಶಸ್ತ್ರಚಿಕಿತ್ಸೆಯಾಗಿತ್ತು. ಆರೋಗ್ಯಕರ ಲಿವರ್ ಅನ್ನು ಉಳಿಸಿಕೊಂಡು ಕ್ಯಾನ್ಸರ್ ಗಡ್ಡೆಯನ್ನು ಸಂಪೂರ್ಣವಾಗಿ ತೆಗೆದುಹಾಕುವುದು ನಮ್ಮ ಮೊದಲ ಆದ್ಯತೆಯಾಗಿತ್ತು. ಶಸ್ತ್ರಚಿಕಿತ್ಸೆಗೂ ಮುನ್ನ ಎಚ್ಚರಿಕೆಯ ಮೌಲ್ಯಮಾಪನ, ಶಸ್ತ್ರಚಿಕಿತ್ಸೆಯ ನಿಖರವಾದ ಯೋಜನೆ ಮತ್ತು ಶಸ್ತ್ರಚಿಕಿತ್ಸೆಯ ನಂತರದ ವ್ಯವಸ್ಥಿತ ಆರೈಕೆಯು ಈ ಯಶಸ್ಸಿಗೆ ಕಾರಣವಾಯಿತು” ಎಂದು ತಿಳಿಸಿದರು.

ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಕೇಂದ್ರದ ಫೆಸಿಲಿಟಿ ಡೈರೆಕ್ಟರ್ ಶ್ರೀ ಸುನಿಲ್ ಭಂಡಾರಿಗಲ್ ಮಾತನಾಡಿ, “ಹೆಚ್ಚಿನ ಅಪಾಯದಲ್ಲಿದ್ದ ರೋಗಿಗೆ ಇಂತಹ ಸಂಕೀರ್ಣವಾದ ಲಿವರ್ ಟ್ಯೂಮರ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿಭಾಯಿಸಿರುವುದು ನಮ್ಮ ಶಸ್ತ್ರಚಿಕಿತ್ಸಾ ತಂಡದ ಪರಿಣತಿ ಮತ್ತು ವಿವಿಧ ವಿಭಾಗಗಳ ವೈದ್ಯರ ಸಂಯೊಜನೆ ಆರೈಕೆಯ (multidisciplinary care) ಮಹತ್ವವನ್ನು ತೋರಿಸುತ್ತದೆ. ಸಂಕೀರ್ಣ ಆರೋಗ್ಯ ಸಮಸ್ಯೆಗಳಿಗೆ ಸುಧಾರಿತ, ಸಕಾಲಿಕ ಮತ್ತು ರೋಗಿ-ಕೇಂದ್ರಿತ ಚಿಕಿತ್ಸೆಯನ್ನು ಒದಗಿಸುವುದೇ ನಮ್ಮ ಪ್ರಮುಖ ಗುರಿಯಾಗಿದೆ” ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending