Connect with us

ದಿನದ ಸುದ್ದಿ

ನಗದುರಹಿತ ವಹಿವಾಟಿಗೆ ಆದ್ಯತೆ ನೀಡುವಂತೆ ಮನ್ ಕಿ ಬಾತ್‌ನಲ್ಲಿ ಯುವ ಪೀಳಿಗೆಗೆ ಪ್ರಧಾನಿ ಕರೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಭಾರತದಲ್ಲಿ ಡಿಜಿಟಲ್ ಪಾವತಿಯತ್ತ ಜನರು ಒಲವು ತೋರುತ್ತಿರುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತೃಪ್ತಿ ವ್ಯಕ್ತಪಡಿಸಿದ್ದಾರೆ.

ಆಕಾಶವಾಣಿಯ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ಯುಪಿಐ ಬಹುಬೇಗ ದೇಶದ ಆರ್ಥಿಕತೆಯ ಭಾಗವಾಗಿದೆ. ಮೂಲೆಮೂಲೆಯ ಹಳ್ಳಿಗಳು ಹಾಗೂ ಸಣ್ಣ ಪಟ್ಟಣಗಳ ಜನರು ಯುಪಿಐ ಮೂಲಕ ವ್ಯವಹರಿಸುತ್ತಿದ್ದು ಪ್ರತಿದಿನ ದೇಶದಲ್ಲಿ 20 ಸಾವಿರ ಕೋಟಿ ರೂಪಾಯಿ ಮೌಲ್ಯದ ವಹಿವಾಟು ಡಿಜಿಟಲ್ ರೂಪದಲ್ಲಿ ನಡೆಯುತ್ತಿದೆ.

ಮಾರ್ಚ್ ತಿಂಗಳಲ್ಲಿ ಯುಪಿಐ ವಹಿವಾಟು 10 ಲಕ್ಷ ಕೋಟಿ ರೂಪಾಯಿ ಗಡಿ ತಲುಪಿತ್ತು ಎಂದು ಹೇಳಿದರು. ಯುವಜನತೆ ನಗದುರಹಿತ ವಹಿವಾಟಿಗೆ ಆದ್ಯತೆ ನೀಡುವಂತೆ ಅವರು ಸಲಹೆ ನೀಡಿದರು.

ಫಿನ್ ಟೆನ್ ಸಂಬಂಧಿತ ಅನೇಕ ಹೊಸ ಸ್ಟಾರ್ಟ್ ಅಪ್ ಗಳು ಕೂಡ ದೇಶದಲ್ಲಿ ಕಾರ್ಯಾರಂಭ ಮಾಡಿವೆ. ದೆಹಲಿಯಲ್ಲಿ ಒಂದು ದಿನ ನಗದು ಬಳಸದೇ ಇಡೀ ದಿನದ ಖರ್ಚನ್ನು ಡಿಜಿಟಲ್ ಪಾವತಿ ಮೂಲವೇ ಮಾಡಿದ ಸಾಗರಿಕ ಮತ್ತು ಪ್ರೇಕ್ಷಾ ಅವರ ಪ್ರಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಉದಾಹರಣೆ ನೀಡಿದರು.

ಗಜಿಯಾಬಾದ್‌ನ ಆನಂದಿತಾ ತ್ರಿಪಾಠಿ ಈಶಾನ್ಯ ಭಾರತದ ಮೂಲೆ ಮೂಲೆಗಳಲ್ಲೂ ಡಿಜಿಟಲ್ ಸೌಲಭ್ಯ ಪಡೆದ ಬಗ್ಗೆ ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿಯೂ ಅವರು ಹೇಳಿದರು.

ತಂತ್ರಜ್ಞಾನದಿಂದ ಸಾಮಾನ್ಯ ಜನರ ಜೀವನದಲ್ಲೂ ಸುಧಾರಣೆ ಸಾಧ್ಯವಾಗುತ್ತಿದೆ ಎಂದು ಹೇಳಿದ ಅವರು, ದಿವ್ಯಾಂಗರಿಗೆ ತಂತ್ರಜ್ಞಾನ ವರದಾನವಾಗಿ ಪರಿಣಮಿಸಿದ್ದು ಅವರು ಹೊಸ ಎತ್ತರಕ್ಕೆ ಏರಲು ನೆರವಾಗಿದೆ ಎಂದರು.

ದಿವ್ಯಾಂಗರಿಗೆ ಸಂಪನ್ಮೂಲಗಳು ಮತ್ತು ಮೂಲಸೌಕರ್ಯ ಸುಲಭವಾಗಿ ಸಿಗುವಂತಾಗಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಅನೇಕ ಸ್ಟಾರ್ಟ್ ಅಪ್ ಗಳು ಮತ್ತು ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರೇರಣಾದಾಯಕ ಕೆಲಸಗಳನ್ನು ಮಾಡುತ್ತಿವೆ. ದಿವ್ಯಾಂಗ ಕ್ರೀಡಾಪಟುಗಳಿಗೆ ಇನ್ನಷ್ಟು ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.

ಜಲಸಂರಕ್ಷಣೆಯ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನೀರಿನ ಲಭ್ಯತೆ ಅಥವಾ ಅಭಾವದಿಂದ ದೇಶದ ಪ್ರಗತಿ ಮತ್ತು ಗತಿಯನ್ನು ನಿರ್ಧರಿಸಲಾಗುತ್ತದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲೂ 75ಅಮೃತ ಸರೋವರನ್ನು ನಿರ್ಮಿಸಲು ಸೂಚಿಸಲಾಗಿದೆ ಎಂದರು.

ನೀರು ಜೀವನಾಧಾರ ಮತ್ತು ಅತಿದೊಡ್ಡ ಸಂಪನ್ಮೂಲ ಎಂಬ ಬಗ್ಗೆ ಶಾಸನಗಳ ಉಲ್ಲೇಖ ನೀಡಿ, ವೇದ-ಪುರಾಣಗಳಲ್ಲಿ ಜಲಸಂರಕ್ಷಣೆ ಮತ್ತು ಕೆರೆಗಳ ನಿರ್ಮಾಣವನ್ನು ಸಾಮಾಜಿಕ ಮತ್ತು ಆಧ್ಯಾತ್ಮಿಕ ಕರ್ತವ್ಯ ಎಂಬುದಾಗಿ ವಿವರಿಸಲಾಗಿದೆ ಎಂದು ಅವರು ಹೇಳಿದರು.

ವಾಲ್ಮೀಕಿ ರಾಮಾಯಣದಲ್ಲಿ ಜಲಸಂರಕ್ಷಣೆಗೆ ಮತ್ತು ನೀರಿನ ಮೂಲಗಳನ್ನು ಸಂಪರ್ಕಿಸಲು ವಿಶೇಷ ಒತ್ತು ನೀಡಲಾಗಿತ್ತು. ಇಂಡಸ್-ಸರಸ್ವತಿ, ಹರಪ್ಪ ನಾಗರಿಕತೆಯ ಕಾಲಘಟ್ಟದಲ್ಲೂ ಅಂತರ್ ಸಂಪರ್ಕಿತ ನೀರಿನ ವ್ಯವಸ್ಥೆ ಇತ್ತು ಎಂದು ಅವರು ತಿಳಿಸಿದರು.

ದೇಶದ ಹೊಸ ಪ್ರಧಾನಮಂತ್ರಿ ಸಂಗ್ರಹಾಲಯ ಜನರಲ್ಲಿ ಕುತೂಹಲ ತರಿಸಿದ್ದು ಅನೇಕ ತಿಳಿಯದ ವಿಚಾರಗಳನ್ನು ಅರಿತ ಬಗ್ಗೆ ಬಂದ ಪತ್ರಗಳೇ ಇದ್ದಕ್ಕೆ ಸಾಕ್ಷಿ ಎಂದು ಪ್ರಧಾನಿ ಹೇಳಿದರು.

ಈ ಸಂಗ್ರಹಾಲಯದ ಬಗೆಗಿನ ರಸಪ್ರಶ್ನೆಗೆ ನಮೋ ಆಪ್ ಅಥವಾ ಹ್ಯಾಷ್ ಟ್ಯಾಗ್ ಮ್ಯೂಸಿಯಂ ಕ್ವಿಜ್ ಮೂಲಕ ಉತ್ತರ ಹಂಚಿಕೊಳ್ಳುವಂತೆ ಅವರು ಸಲಹೆ ನೀಡಿದರು. ಮೇ ೧೮ ರಂದು ಅಂತಾರಾಷ್ಟ್ರೀಯ ಸಂಗ್ರಹಾಲಯ ದಿನ ಆಚರಿಸಲಾಗುತ್ತದೆ. ಜನರು ಸ್ಥಳೀಯ ಮ್ಯೂಸಿಯಂಗಳಿಗೆ ಭೇಟಿ ನೀಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಧಾನಿ ಕೋರಿದರು.

ಗಣಿತದ ಬಗ್ಗೆಯೂ ಮನ್ ಕಿ ಬಾತ್ ನಲ್ಲಿ ಅವರು ಪ್ರಸ್ತಾಪಿಸಿದರು. ಕೋಲ್ಕತಾದ ಗೌರವ್ ಟೆಕರೀವಾಲ್ ಅವರೊಂದಿಗೆ ಮಾತನಾಡಿದರು. ವೈದಿಕ ಗಣಿತದ ಕೀರ್ತಿ ಭಾರತಿ ಕೃಷ್ಣ ತೀರ್ಥ ಮಹಾರಾಜ್ ಅವರಿಗೆ ಸಲ್ಲುತ್ತದೆ ಎಂದು ಗೌರವ್ ತಿಳಿಸಿದರು.

ಭಾರತಿಕೃಷ್ಣ ತೀರ್ಥ ಮಹಾರಾಜ್ ನೀಡಿದ16ಸೂತ್ರಗಳ ಮೂಲಕ ಕ್ಲಿಷ್ಟಕರ ಗಣಿತ ಸಮಸ್ಯೆಗಳನ್ನು ಸುಲಭವಾಗಿ ಪರಿಹರಿಸಬಹುದು ಎಂದು ಹೇಳಿದರು.
ಮುಂಬರುವ ಈದ್, ಅಕ್ಷಯ ತದಿಗೆ, ಪರಶುರಾಮ ಜಯಂತಿ, ಬುದ್ಧ ಪೂರ್ಣಿಮಾ ಪ್ರಯುಕ್ತ ಪ್ರಧಾನಿ ಜೊತೆಗೆ ಶುಭ ಕೋರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending