ದಿನದ ಸುದ್ದಿ
ಹೆಬ್ಬಾವಿನ ಹೊಟ್ಟೆಯಲ್ಲಿದ್ದ ಮಹಿಳೆ : ವೀಡಿಯೊ ನೋಡಿ..!

ಸುದ್ದಿದಿನ ಡೆಸ್ಕ್ : ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹೆಬ್ಬಾವು ನುಂಗಿದ್ದು, ಘಟನೆ ನಡೆದು ಕೆಲ ಹೊತ್ತಿನ ನಂತರ ನೋಡಿದ ಗ್ರಾಮಸ್ಥರು ಹೆಬ್ಬಾವನ್ನು ಕೊಂದು ಮಹಿಳೆ ದೇಹವನ್ನು ಹೊರ ತೆಗೆದಿದ್ದಾರೆ.
ಇಂಡೋನೇಷ್ಯಾದ ಮುನಾ ಐಸ್ಲ್ಯಾಂಡ್ ನ ಸುಲಾವೆಸಿ ಹತ್ತಿರದ ಪರ್ಸೀಪನ್ ಲಾಲಾ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಮಹಿಳೆ ವಾ ಟಿಬಾ ಎಂಬಾಕೆಯನ್ನು ಏಳು ಮೀಟರ್ ಉದ್ದದ (23 ಅಡಿ) ದೈತ್ಯ ಹೆಬ್ಬಾವೊಂದು ನುಂಗಿದೆ. ನಂತರ ಹೆಬ್ಬಾವಿನ ಹೊಟ್ಟೆ ಉಬ್ಬಿಕೊಂಡಿದ್ದನ್ನು ನೋಡಿದ ಪರ್ಸೀಪನ್ ಲಾಲಾ ಗ್ರಾಮದ ಸ್ಥಳೀಯರು ಅದರ ಹೊಟ್ಟೆ ತುಂಡರಸಿ ಮಹಿಳೆಯನ್ನು ಹೊರತೆಗೆದಿದ್ದಾರೆ. ಈ ಹೊತ್ತಿಗಾಗಲೇ ಮಹಿಳೆ ಮೃತಪಟ್ಟಿದ್ದಳು.
ಮಹಿಳೆ ಕೆಲಸ ಮಾಡುತ್ತಿದ್ದ ತೋಟದ ಹತ್ತಿರದಲ್ಲೇ ಬೃಹದಾಕಾರದ ಬಂಡೆಗಳು, ಗುಹೆ ಇದ್ದು, ಅದು ಹಾವುಗಳ ವಾಸಸ್ಥಾನವಾಗಿದೆ. ಹೆಬ್ಬಾವು ಮಹಿಳೆಯನ್ನು ನುಂಗಿದೆ ಎಂದು ಶಂಕಿಸಿದ ಸ್ಥಳೀಯರು ಅದರ ಹೊಟ್ಟೆ ಕತ್ತರಿಸಿದ್ದಾರೆ. ಆಗ ಮಹಿಳೆ ಮೃತ ದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ನಲ್ಲಿ ಆರು ಅಡಿ ಉದ್ದದ ಹೆಬ್ಬಾವುಗಳು ಪ್ರತಿದಿನವೂ ಕಾಣಿಸುವುದು ಸಾಮಾನ್ಯ. ಸಣ್ಣಪುಟ್ಟ ಪ್ರಾಣಿಗಳನ್ನು ಭೇಟಿಯಾಡುತ್ತವೆ. ಆದರೆ, ಮನುಷ್ಯರನ್ನು ನುಂಗಿರುಬುದು ಅಪರೂಪ. ಕಳೆದ ವರ್ಷ ಮಾರ್ಚ್ ನಲ್ಲಿ ಸಲೂಬಿರೊ ಗ್ರಾಮದಲ್ಲಿ ರೈತನೊಬ್ಬನನ್ನು ಹೆಬ್ಬಾವು ನುಂಗಿದ ಘಟನೆ ನಡೆದಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಹಾವೇರಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಸುದ್ದಿದಿನ,ಹಾವೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯಾಗಲು ಕಾರಣನಾದ ಹಾನಗಲ್ ತಾಲೂಕಿನ ಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ ರೂ.ಏಳು ಸಾವಿರ ದಂಡ ವಿಧಿಸಿ ಗುರುವಾರ ಹೆಚ್ಚುವರಿ ಜಿಲ್ಲಾ ವ ಸತ್ರ ಎಫ್.ಟಿ.ಎಸ್.ಸಿ.-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಕೆ.ಎಸ್.ಜ್ಯೋತಿಶ್ರೀ ಅವರು ತೀರ್ಪು ನೀಡಿದ್ದಾರೆ.
ಆರೋಪಿ ಸುನೀಲಗೌಡ ಮಹಾದೇವಗೌಡ ಪಾಟೀಲ ಈತನು ಅಪ್ರಾಪ್ತ ಬಾಕಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ ಅವಳ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಠಾಣೆಯ ಆರಕ್ಷಕ ವೃತ್ತ ನಿರೀಕ್ಷಕ ರೇವಪ್ಪ ಕಟ್ಟಿಮನಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದನ್ನೂ ಓದಿ | ಕವಿತೆ | ಕಾಮಧೇನು
ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ 10 ವರ್ಷಗಳ ಕಠಿಣ ಸಜೆ ಹಾಗೂ ರೂ.ಏಳು ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಭಾದಿತಳಿಗೆ ರೂ.ಐದು ಲಕ್ಷ ಪರಿಹಾರ ನೀಡಲು ಆದೇಶಿಸಿ ತೀರ್ಪು ನೀಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಮಂಡಿಸಿದ ಹೆಚ್ಚುವರಿ ಜಿಲ್ಲಾ ವ ಸತ್ರ ಎಫ್.ಟಿ.ಎಸ್.ಸಿ.-1(ಪೊಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ವಿನಾಯಕ ಎಸ್.ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋವಿಡ್-19 ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಜನ ಮಾಹಿತಿ ನೀಡ್ತಿಲ್ಲ ; ಲಸಿಕೆ ಹಾಕಿಸಿಕೊಳ್ಳೋಕೆ ಒಪ್ತಿಲ್ಲ..!

ಸುದ್ದಿದಿನ,ಬೆಂಗಳೂರು: ಕೊರೋನಾ ಎರಡನೇ ಅಲೆಯ ಆತಂಕದ ಮಧ್ಯೆ ಸಾರ್ವಜನಿಕರಿಗೆ ಕೋವಿಡ್-19 ವ್ಯಾಕ್ಸಿನ್ ವಿತರಣೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಹೈ ರಿಸ್ಕ್ ಕೇಸ್ ಮತ್ತೆ 50 ವರ್ಷ ಮೇಲ್ಪಟ್ಟವರ ಪಟ್ಟಿಯನ್ನು ಸಿದ್ಧಗೊಳಿಸಲು ಆರೋಗ್ಯ ಇಲಾಖೆಯು ಹರಸಾಹಸ ಪಡುತ್ತಿದೆ.
ಮನೆ ಮನೆಗಳ ಸರ್ವೇ ವೇಳೆ ಕೋವಿಡ್-19 ವ್ಯಾಕ್ಸಿನ್ ಡೇಟಾ ಎಂಟ್ರಿಗೆ ಸಾರ್ವಜನಿಕರು ಮಾಹಿತಿ ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಿಯಾದ ಮಾಹಿತಿ ಸಿಗದ ಆಶಾ ಕಾರ್ಯಕರ್ತೆಯರು ಆರೋಗ್ಯಾಧಿಕಾರಿಗಳ ಪರದಾಟವನ್ನು ಪಬ್ಲಿಕ್ ಕನ್ಮಡ ಖಾಸಗಿವಾಹಿನಿಯು ವರದಿ ಮಾಡಿದೆ.
ಸಾರ್ವಜನಿಕರಿಗೆ ಮಾರ್ಚ್ 1 ರಿಂದ ಕೊರೊನಾ ಲಸಿಕೆಯನ್ನು ವಿತರಿಸಲು ಆರೋಗ್ಯ ಇಲಾಖೆಯು ತಯಾರಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮತ್ತು ಹಲವು ಕಾಯಿಲೆಗಳಿಂದ ಬಳಲುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲು ಇಲಾಖೆ ನಿರ್ಧಾರ ಮಾಡಿದೆ.
ಸಾರ್ವಜನಿಕರು ಸರಿಯಾದ ಮಾಹಿತಿ ನೀಡ್ತಿಲ್ಲ
ರಾಜ್ಯದಲ್ಲಿ 50 ವರ್ಷ ಮೇಲ್ಪಟ್ಟವರು ಮತ್ತು ಹಲವು ಕಾಯಿಲೆಯಿಂದ ಬಳಲುತ್ತಿರುವ ಜನ ಎಷ್ಟಿದ್ದಾರೆ ? ಎಷ್ಟು ವ್ಯಾಕ್ಸಿನ್ ಕೊಡಬೇಕು? ಫಲಾನುಭವಿಗಳು ಎಷ್ಟು ಮಂದಿ ಆಗುತ್ತಾರೆ ಎಂದು ತಿಳಿಯಲು ಸರ್ಕಾರ ಸರ್ವೇ ನಡೆಸುತ್ತಿದೆ.
ಈ ಸರ್ವೇಯನ್ನು ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಸ್ವಯಂ ಸೇವಕರು ನಡೆಸುತ್ತಿದ್ದಾರೆ. ಆದರೆ ಸರ್ವೇ ವೇಳೆ ಸಾರ್ವಜನಿಕರು ಸರಿಯಾದ ಮಾಹಿತಿ ನೀಡುತ್ತಿಲ್ಲ. ಆರೋಗ್ಯ ಸಿಬ್ಬಂದಿ ಜೊತೆ ಶನಿವಾರ ಕನ್ನಡ ಸುದ್ದಿವಾಹಿನಿ ಸರ್ವೇಗೆ ಇಳಿದಾಗ ಅಲ್ಲಿನ ವಾಸ್ತವ ಬಯಲಾಗಿದೆ.
ಇದನ್ನೂ ಓದಿ | ಕೃಷಿ ಸಿಂಚಾಯಿ ಯೋಜನೆ | ಸಹಾಯಧನ ಪಡೆಯಲು ಅರ್ಜಿ ಆಹ್ವಾನ
ಪ್ಯಾಲೇಸ್ ಗುಟ್ಟಹಳ್ಳಿಯ ಜಟಕಾಸ್ಟಾಂಡ್ ವಸತಿ ಗೃಹದ ಸಂಕೀರ್ಣದ ಬಳಿ ಸುದ್ದಿವಾಹಿನಿ ಸರ್ವೇಗೆ ಇಳಿದಾಗ ಅಲ್ಲಿನ ಮನೆಯವರು ಸ್ಪಂದಿಸಿದ್ದಾರೆ. ಆರೋಗ್ಯ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. ವ್ಯಾಕ್ಸಿನ್ ತೆಗೆದುಕೊಳ್ಳೋದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿವಾಹಿನಿ ವರದಿ ಮಾಡಿದೆ.
ಬಾಂಧವ್ಯ ನಗರದಲ್ಲಿ ಸರ್ವೆಗೆ ಅಂತಾ ಒಂದು ಮನೆಗೆ ಸುದ್ದಿವಾಹಿನಿ ತಂಡ ತೆರಳಿದೆ ಅಲ್ಲಿನ ನಿವಾಸಿ ನಿಮಗೆ ಎಷ್ಟು ವಯಸ್ಸು ಎಂದರೆ ಅವರು ಒಂದು ಬಾರಿ 49 ವರ್ಷ ಎನ್ನುತ್ತಾರೆ. ಮತ್ತೊಮ್ಮೆ 51 ವರ್ಷ ಎನ್ನುತ್ತಾರೆ.
ಮನೆಯಲ್ಲಿಯೇ ಇದ್ದ ಅವರು ಆಧಾರ್ ಕಾರ್ಡ್ ವೋಟರ್ ಐಡಿ ಕೇಳಿದ್ರೆ ಇಲ್ಲ ಅಂತಾರೆ. ವ್ಯಾಕ್ಸಿನ್ ಮಾತ್ರ ತೆಗೆದುಕೊಳ್ಳುತ್ತೇವೆ ಎಂದು ಹೇಳುತ್ತಾರೆ. ಕೆಲವರು ನಾವು ಆರೋಗ್ಯವಾಗಿದ್ದು, ಲಸಿಕೆ ಬೇಡ ಅಂತ ಹೇಳುತ್ತಾರೆ ಎಂದು ವರದಿಯಲ್ಲಿ ಸುದ್ದಿವಾಹಿನಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಗರದ ಬಾರ್ & ರೆಸ್ಟೋರೆಂಟ್ಗಳ ಮೇಲೆ ತಂಬಾಕು ನಿಯಂತ್ರಣ ಅಧಿಕಾರಿಗಳ ದಾಳಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದ ಅಬಕಾರಿ ಇಲಾಖೆಯ ವಲಯ-01 ರ ಸಹಯೋಗದೊಂದಿಗೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸರ್ವೇಕ್ಷಣಾಧಿಕಾರಿ ಹಾಗೂ ಕಾರ್ಯಕ್ರಮಾಧಿಕಾರಿಂ ಡಾ.ರಾಘವನ್.ಜಿ.ಡಿ ಅವರನ್ನು ಒಳಗೊಂಡ ತಂಡ ಫೆ.25 ರಂದು ಬಾರ್ & ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದೆ.
30 ಕ್ಕಿಂತ ಹೆಚ್ಚು ಆಸನಗಳಿರುವ ಬಾರ್ & ರೆಸ್ಟೋರೆಂಟ್ಗಳಲ್ಲಿ ‘ನಿರ್ಧಿಷ್ಠ ಧೂಮಪಾನ ವಲಯವನ್ನು ಸ್ಥಾಪಿಸುವುದು ಹಾಗೂ ಬಾರ್ಗಳ ವ್ಯಾಪ್ತಿಯಲ್ಲಿ ಟೇಬಲ್ಗಳ ಮೇಲೆ ಬೆಂಕಿಪೊಟ್ಟಣ, ಲೈಟರ್, ಆ್ಯಶ್ಸ್ಟ್ರೇ ಮತ್ತು ಸಪ್ಲೇಯರ್ಸ ವತಿಯಿಂದ ಯಾವುದೇ ಸಿಗರೇಟು ಒದಗಿಸದಂತೆ ಮಾಲೀಕರು ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಬೇಕು ಅಲ್ಲದೆ ಎಲ್ಲಾ ರೆಸ್ಟೋರೆಂಟ್ಗಳಲ್ಲಿರುವ ಕೆಲಸಗಾರರು ಕಡ್ಡಾಯವಾಗಿ ಪ್ರತಿ 15 ದಿನಕ್ಕೊಮ್ಮೆ ಕೋವಿಡ್-19 ಪರೀಕ್ಷೆಯನ್ನು ಮಾಡಿಸಬೇಕೆಂದು ಸೂಚಿಸಿದರು.
ಇದನ್ನೂ ಓದಿ |“ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅತ್ಯಗತ್ಯ” ಕಾರ್ಯಗಾರ
ಕೋಟ್ಪಾ ಸೆಕ್ಷನ್-4 ರ ಅಡಿಯಲ್ಲಿ ನಿಯಮ ಉಲ್ಲಂಘನೆಯ 23 ಪ್ರಕರಣಗಳಿಗೆ ರೂ. 2300, ಸೆಕ್ಷನ್-6ಎ ಅಡಿಯಲ್ಲಿ 2 ಪ್ರಕರಣಕ್ಕೆ ರೂ. 200 ಸೇರಿದಂತೆ ಒಟ್ಟು 25 ಪ್ರಕರಣಗಳಿಗೆ 2500 ರೂ ದಂಡ ವಸೂಲಾಗಿದೆ ಎಂದರು.
ದಾಳಿಯಲ್ಲಿ ಅಬಕಾರಿ ನಿರೀಕ್ಷಕ ವಿನೋದ್.ಬಿ ಕಾಳಪ್ಪಗೋಳ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್.ಕೆ.ಪಿ, ಅಬಕಾರಿ ಇಲಾಖೆಯ ಸಬ್ಇನ್ಸ್ಪೆಕ್ಟರ್ ಶಂಕರಪ್ಪ, ಕಾನ್ಸ್ಟೇಬಲ್ ಶಿವರಾಜ್ ಪಾಟೀಲ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ವೀರ್ಯಾಣು ಬಲವೃದ್ಧಿಗೆ ಇಲ್ಲಿವೆ ಉಪಾಯಗಳು..!
-
ಅಂತರಂಗ6 days ago
ಅನಾಥರನ್ನಾಗಿಸದ ಅಂತಿಮ ಸಂಗಾತಿ
-
ದಿನದ ಸುದ್ದಿ6 days ago
ಸಿದ್ದರಾಮಯ್ಯ ರಾಮನ ವಿರೋಧಿ ಅಂತಾರೆ, ನನ್ನ ಹೆಸರಿನಲ್ಲೇ ರಾಮನಿದ್ದಾನೆ : ಸಿದ್ದರಾಮಯ್ಯ
-
ರಾಜಕೀಯ6 days ago
ಜನರನ್ನು ಕಷ್ಟಕ್ಕೆ ದೂಡಿ ಮೋದಿ ಸರ್ಕಾರ ಲಾಭಗಳಿಸುತ್ತಿದೆ : ಸೋನಿಯಾ ಗಾಂಧಿ ಕಿಡಿ
-
ಲೈಫ್ ಸ್ಟೈಲ್6 days ago
ಜಾನುವಾರುಗಳ ಲೋಹ ಕಾಯಿಲೆ
-
ದಿನದ ಸುದ್ದಿ5 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ7 days ago
ಮೋದಿಯವರ ನಿಜ ಬಣ್ಣ ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ : ಸಿದ್ದರಾಮಯ್ಯ
-
ಲೈಫ್ ಸ್ಟೈಲ್5 days ago
ಏನಿದು ? ಗಡಿಮಾರಿ..!