ದಿನದ ಸುದ್ದಿ
ಸಾವಿರ ರೂ. ಹೊಸ ನೋಟಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ?
![](https://suddidina.com/wp-content/uploads/2018/07/Udayamati-suddidina.jpg)
ಸುದ್ದಿದಿನ ಡೆಸ್ಕ್: ಹೊಸದಾಗಿ ಬಿಡುಗಡೆಯಾಗಲಿರುವ ಸಾವಿರ ರೂ.ನೋಟುಗಳಲ್ಲಿ ಗುಜರಾತ್ ರಾಣಿ ಉದಯಮತಿ ಇತಿಹಾಸ ಇದೆ ಎನ್ನುವ ವಿಷಯ ಈಗ ಜಾಅಲತಾಣಗಳಲ್ಲಿ ಹರಿದಾಡುತ್ತಿವೆ.
ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿರೋ 100 ರ ಹೊಸ ನೋಟಿಗೂ.. ಗುಜರಾತ್ನ ರಾಣಿಗೂ, ಪ್ರಧಾನಿ ಮೋದಿಗೂ ಒಂದು ಲಿಂಕ್ ಇದೆ. ಅದೇನಪ್ಪಾ ಅಂದ್ರೆ ರಿಲೀಸ್ ಆಗಲಿರೋ ಹೊಸ 100 ರ ನೋಟಿನಲ್ಲಿ ಗುಜರಾತ್ ರಾಣಿಯ ಇತಿಹಾಸವನ್ನ ಸಾರುವ ರಾಣಿ ಕಿ ವಾವ್ ಚಿತ್ರವನ್ನ ಸೇರಿಸಿದೆ.
ಈ ರಾಣಿ ಕಿ ವಾವ್ ಗುಜರಾತ್ನ ಪಠಾಣ್ನಲ್ಲಿರೋ ಪಾರಂಪರಿಕ ಸ್ಥಳ. ಯುನ್ಸ್ಕೋನ ವಿಶ್ವ ಪ್ರಸಿದ್ದ ಪಾರಂಪರಿಕ ಸ್ಥಳಗಳ ಪೈಕಿ ಇದೂ ಒಂದು.. ಈ ರಾಣಿ ಕಿ ವಿವಾ ತಲೆ ಕೆಳಗಾದ ದೇವಸ್ಥಾನವೂ ಹೌದು ಹಾಗೂ ಜಲ ಶೇಖರಣೆ ಮಾಡುವ ಮೆಟ್ಟಿಲಿನ ಬಾವಿಯೂ ಕೂಡ.. ನಿಜಕ್ಕೂ ಇದರ ನಿರ್ಮಾಣ ಅಚ್ಚರಿ ಆಗುತ್ತೆ. ಇಂತಹ ಒಂದು ಸ್ಮಾರಕವನ್ನ ನಿರ್ಮಿಸಿದ ಆ ರಾಣಿಯ ಹೆಸರು ಉದಯಮತಿ.
11 ನೇ ಶತಮಾನದಲ್ಲಿ ಚೌಲುಕ್ಯ ಸಾಮ್ರಾಜ್ಯದ ಭೀಮ ಮಹಾರಾಜನ ನೆನಪಿಗಾಗಿ ರಾಣಿ ಉದಯಮತಿ ಮತ್ತು ಮಗ ಕರ್ಣ ಈ ದೇವಾಲಯದ ಬಾವಿಯನ್ನ ನಿರ್ಮಿಸಿದ್ರು.. ಈ ದೇವಾಲಯದ ಪಕ್ಕದಲ್ಲೇ ಸರಸ್ವತಿ ನದಿ ಹರೀತಿರೋದ್ರಿಂದ ಅಲ್ಲಿನ ನೀರನ್ನ ಇಲ್ಲಿ ಶೇಖರಣೆ ಮಾಡಲಾಗ್ತಿತ್ತು.. ಈ ದೇವಾಲಯದಲ್ಲಿ ವಿಷ್ಣು, ರಾಮ, ಕೃಷ್ಣ, ನರಸಿಂಹ, ವಾಮನ ವರಾಹಿ ದೇವರುಗಳು ಸೇರಿದಂತೆ ಅನೇಕ ಶಿಲಾಕೃತಿಗಳನ್ನ ಕೆತ್ತಲಾಗಿದೆ.. ಏಳು ಗ್ಯಾಲರಿಗಳಲ್ಲಿ ಸುಮಾರು 800 ಕಲಾಕೃತಿಗಳಿರೋ ಈ ರಾಣಿ ಕಿ ವಾವ್ ಇವತ್ತಿಗೂ ತನ್ನ ಸೌಂದರ್ಯವನ್ನ ಕೆಡಿಸಿಕೊಳ್ಳದೇ ಪ್ರವಾಸಿಗರನ್ನ ಆಕರ್ಷಿಸುತ್ತಿದೆ..
ಸದ್ಯ ಈ ರಾಣಿ ಕಿ ವಾವ್ ಭಾರತದ ಮೆಟ್ಟಿಲಿನ ಭಾವಿ ಎಂದೇ ಖ್ಯಾತವಾಗಿದೆ. ಇದರ ತಳದಲ್ಲೊಂದು ಸುರಂಗಕ್ಕೆ ಬಾಗಿಲಿದ್ದು ಇಲ್ಲಿಂದ ಹೊರ ನಡೆದರೆ 30 ಕಿ.ಮೀ ದೂರದ ಸಿದ್ದಾಪುರಕ್ಕೆ ಸಂಪರ್ಕ ಕಲ್ಪಿಸುತ್ತದೆ.. ಇನ್ನು ಈ ದೇವಾಲಯದ ಸುತ್ತ ಮುತ್ತ 50-60 ವರ್ಷಗಳ ಹಿಂದೆ ಆಯುರ್ವೇದ ಔಷಧಿಗೆ ಸಂಬಂಧಿಸಿದ ಗಿಡಗಳಿದ್ದವಂತೆ. ಇದರ ಪರಿಣಾಮವೋ ಏನೋ ಈ ಬಾವಿಯಲ್ಲಿನ ನೀರು ಇಂದಿಗೂ ಔಷಧಿಯಾಗಿ ಬಳಸಲಾಗ್ತಿದ್ಯಂತೆ. ಜ್ವರ ಸೇರಿದಂತೆ ಹಲವಾರು ರೋಗಗಳಿಗೆ ಈ ಬಾವಿಯ ನೀರು ಮದ್ದಂತೆ..
ರಾಣಿ ಉದಯಮತಿ ತನ್ನ ಪತಿಗಾಗಿ ನಿರ್ಮಿಸಿದ ಈ ದೇವಾಲಯದ ಬಾವಿ ಮೋದಿ ಮನಸ್ಸನ್ನ ಸೂರೆಗೊಂಡಿದೆ. ಹಾಗಾಗಿ ಇದನ್ನ 2016 ರಲ್ಲಿ ಮೋದಿ ಅವರು ಸ್ವಚ್ಚ ಪಾರಂಪರಿಕ ತಾಣ ಎಂದು ಘೋಷಿಸಿದ್ದಾರೆ. ಅಷ್ಟೇ ಅಲ್ಲ ಮಹೇಶ ಬಾಬು ನಟಿಸಿರೋ ತೆಲಗಿನ ದೂಕುಡು ಚಿತ್ರದ ಶೂಟಿಂಗ್ ಕೂಡ ಇಲ್ಲೇ ನಡೆದಿದೆ. ಇದೀಗ ಮೋದಿ ಬಿಡುಗೆಡೆ ಮಾಡಲಿರೋ 100ರ ನೋಟಿನಲ್ಲೂ ಸ್ಥಾನ ಪಡೆದಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ7 days ago
ಮಕ್ಕಳಿಗೆ ದೈನಂದಿನ ಆಹಾರದಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಸೇರಿಸಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ .ಪಿ ಗಡಾದ್ ಸಲಹೆ
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ4 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!