ದಿನದ ಸುದ್ದಿ
ಕಾನೂನುಗಳ ಕಾಮನಬಿಲ್ಲು ಡಾ. ಬಿ.ಆರ್. ಅಂಬೇಡ್ಕರ್

- ಡಾ. ಷಕೀಬ್ ಎಸ್ ಕಣದ್ಮನೆ ನವಿಲೇಹಾಳ್
ಭಾರದ ದೇಶದ ಜನಸಮುದಾಯದಲ್ಲಿ ಜಾತಿಪದ್ಧತಿ, ಬಡವ-ಬಲ್ಲಿದ, ಮೇಲು-ಕೀಳು, ಬಹುಸಂಖ್ಯಾತರು, ಅಲ್ಪಸಂಖ್ಯಾತರು ಎಂಬ ಪರಿಕಲ್ಪನೆಯ ಸಮಾಜದಲ್ಲಿ ಅತ್ಯಂತ ಹೀನಯಾ ಸ್ತಿತಿಯನ್ನು ತಳಸಮುದಾಯಗಳ ಜನತೆ ನಿತ್ಯ ಜೀವನದಲ್ಲಿ ಅನುಭವಿಸುತ್ತಿದ್ದರು ಇಂಥಾ ಪರಿಸ್ಥಿಯಲ್ಲಿ ಸಮಾನತೆ ಎಂಬ ಕಾನ್ಸೆಪ್ಟ್ ಅನ್ನು ಮೊಟ್ಟಬದಲಬಾರಿಗೆ ತಂದವರು ಡಾ. ಬಿ ಆರ್ ಅಂಬೇಡ್ಕರ್.
ಹೀಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸಮಾನತೆಯ ಪ್ರತೀಕವಾಗಿ ನೋಡಲಾಗುತ್ತದೆ ನಮ್ಮ ದೇಶದ ಸಂವಿಧಾನವನ್ನು ರೂಪಿಸುವಲ್ಲಿ ಭೀಮರಾವ್ ರಾಮ್ಜಿ ಅಂಬೇಡ್ಕರ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಕೆಳಜಾತಿಗಳು ಅಥವಾ ಅಸ್ಪೃಶ್ಯರ ವಿರುದ್ಧದ ತಾರತಮ್ಯವನ್ನು ನಿಷೇಧಿಸಿದರು ಮತ್ತು ನಮ್ಮ ದೇಶವಾಸಿಗಳಲ್ಲಿ ಸಮಾನತೆಯನ್ನು ಸ್ಥಾಪಿಸಲು ಹೋರಾಡಿದ ವ್ಯಕ್ತಿಯಾಗಿದ್ದಾರೆ.
ಸೌಹಾರ್ದ, ಸಮಾನತೆ, ಭ್ರಾತೃತ್ವ ಇರುವ ಸಮಾಜದಲ್ಲಿ ನಂಬಿಕೆ ಇದೆ ಎಂದು ಹೇಳಿದ ಮಹಾನ್ ಮಾನವತವಾದಿ. ಆದರೆ ನಮ್ಮ ದೇಶಕ್ಕಾಗಿ ಇಷ್ಟೆಲ್ಲಾ ಮಾಡಿದ ವ್ಯಕ್ತಿ ಆರಂಭದ ದಿನಗಳಲ್ಲಿ ತನ್ನ ಜಾತಿಯ ಬಗ್ಗೆ ಅನೇಕ ದೌರ್ಜನ್ಯಗಳನ್ನು ಅನುಭವಿಸಿದ್ದ. ಆಳವಾದ ಸಂಶೋಧನೆ ಮತ್ತು ಹಲವಾರು ಗುಣಮಟ್ಟದ ಪರಿಶೀಲನೆಗಳ ನಂತರ ವೇದಾಂತು ತಜ್ಞರು ಸ್ಥಾಪಿಸಿದ ನಮ್ಮ ದಂತಕಥೆ ಭೀಮ್ ರಾವ್ ಅಂಬೇಡ್ಕರ್ ಅವರ ವಿವರವಾದ ಪ್ರಯಾಣವನ್ನು ಕೆಳಗೆ ನೀಡಲಾಗಿದೆ.
ಭೀಮ್ ರಾವ್ ಅಂಬೇಡ್ಕರ್ ಅವರು ಶಿಕ್ಷಣ ತಜ್ಞ, ನ್ಯಾಯಶಾಸ್ತ್ರಜ್ಞ ಮತ್ತು ಸಾಮಾಜಿಕ-ರಾಜಕೀಯ ಸುಧಾರಕರಾಗಿ ಕೆಲಸ ಮಾಡಿದ್ದರಿಂದ ಬಹು ಪ್ರತಿಭೆಯನ್ನು ಹೊಂದಿರುವ ವ್ಯಕ್ತಿ. ಸ್ವತಂತ್ರ ಭಾರತದಲ್ಲಿ ವಿವಿಧ ರಂಗಗಳಲ್ಲಿ ಅವರ ಕೊಡುಗೆ ಅಮೂಲ್ಯವಾಗಿದೆ ಮತ್ತು ಅವರ ಸಾಧನೆಗಳ ಪಟ್ಟಿ ದೊಡ್ಡದಾಗಿದೆ. ಆದ್ದರಿಂದ ಡಾ ಭೀಮರಾವ್ ಅಂಬೇಡ್ಕರ್ ಅವರ ಬಗ್ಗೆ ಬರೆಯುವಾಗ ಅವರ ಜೀವನದ ಆಧಾರದ ಮೇಲೆ ಎಲ್ಲಾ ಮಾರ್ಗಗಳಿಂದ ವಿಷಯವನ್ನು ಸೇರಿಸುವುದು ಬುದ್ಧಿವಂತ ಹೆಜ್ಜೆಯಾಗಿದೆ.
ಡಾ ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರು 1891 ರ ಏಪ್ರಿಲ್ 14 ರಂದು ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೊವ್ ಎಂಬ ಹಳ್ಳಿಯಲ್ಲಿ ಜನಿಸಿದ ಡಾ ಭೀಮರಾವ್ ರಾಮ್ಜಿ ಅಂಬೇಡ್ಕರ್ ಅವರನ್ನು ಬಾಬಾಸಾಹೇಬ್ ಅಂಬೇಡ್ಕರ್ ಎಂದೂ ಕರೆಯಲಾಗುತ್ತಿತ್ತು. ಅವರ ತಂದೆ ರಾಮ್ಜಿ ಸಕ್ಪಾಲ್. ಭಾರತೀಯ ಸೇನೆಯಲ್ಲಿದ್ದು ದೇಶಕ್ಕಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಉತ್ತಮ ಕೆಲಸದಿಂದ ಸೇನೆಯಲ್ಲಿ ಸುಬೇದಾರ ಹುದ್ದೆಗೇರಿದರು.
ಅವರ ತಾಯಿಯ ಹೆಸರು ಭೀಮಾ ಬಾಯಿ. ಮೊದಲಿನಿಂದಲು ರಾಮ್ಜಿ ತಮ್ಮ ಮಕ್ಕಳನ್ನು ಅಧ್ಯಯನ ಮಾಡಲು ಮತ್ತು ಕಷ್ಟಪಟ್ಟು ದುಡಿಯಲು ಪ್ರೋತ್ಸಾಹಿಸಿದರು, ಇದರಿಂದಾಗಿ ಭೀಮರಾವ್ ಅಂಬೇಡ್ಕರ್ ಬಾಲ್ಯದಿಂದಲೂ ಅಧ್ಯಯನದ ಬಗ್ಗೆ ಒಲವು ಹೊಂದಿದ್ದರು. ಅವರು ಮಹಾರ್ ಜಾತಿಗೆ ಸೇರಿದವರಾಗಿದ್ದರು ಈ ಜಾತಿಗೆ ಸೇರಿದ ಜನರನ್ನು ಆ ಸಮಯದಲ್ಲಿ ಅಸ್ಪೃಶ್ಯರು ಎಂದು ಕರೆಯಲಾಗುತ್ತಿತ್ತು. ಅಸ್ಪೃಶ್ಯರ ಅರ್ಥವೇನೆಂದರೆ ಮೇಲ್ವರ್ಗದ ಯಾವುದೇ ವ್ಯಕ್ತಿಯನ್ನು ಕೆಳಜಾತಿಯ ಜನರು ಮುಟ್ಟಿದರೆ ಅದನ್ನು ಅಶುದ್ಧವೆಂದು ಪರಿಗಣಿಸಲಾಗುತ್ತದೆ.
ತಳಸಮುದಾಯದವರು ಯಾವುದಾದರು ವಸ್ತುವನ್ನು ಮುಟ್ಟಿದರೆ ಮೇಲ್ಜಾತಿಯ ಜನರು ಆ ವಸ್ತುಗಳನ್ನು ಬಳಸುತ್ತಿರಲಿಲ್ಲ. ಸಮಾಜದ ಹೀನ ಚಿಂತನೆಯಿಂದ ಕೆಳವರ್ಗದ ಮಕ್ಕಳು ಓದಲು ಶಾಲೆಗೆ ಹೋಗುವಂತಿರಲಿಲ್ಲ. ಅದೃಷ್ಟವಶಾತ್ ಸೇನೆಯಲ್ಲಿ ಕೆಲಸ ಮಾಡುತ್ತಿರುವ ಎಲ್ಲ ನೌಕರರ ಮಕ್ಕಳಿಗಾಗಿ ಸರ್ಕಾರ ವಿಶೇಷ ಶಾಲೆ ನಡೆಸಿದ್ದರಿಂದ ಬಿ.ಆರ್.ಅಂಬೇಡ್ಕರ್ ಅವರ ಆರಂಭಿಕ ಶಿಕ್ಷಣ ಸಾಧ್ಯವಾಯಿತು.
ಅಧ್ಯಯನದಲ್ಲಿ ಉತ್ತಮವಾಗಿದ್ದರೂ ಸಹ ಅಂಬೇಡ್ಕರ್ ಎಲ್ಲಾ ಕೆಳಜಾತಿಯ ಮಕ್ಕಳೊಂದಿಗೆ ತರಗತಿಯ ಹೊರಗೆ ಅಥವಾ ತರಗತಿಯ ಮೂಲೆಯಲ್ಲಿ ಕುಳಿತರು. ಅಲ್ಲಿನ ಶಿಕ್ಷಕರೂ ಅವರ ಕಡೆ ಗಮನ ಹರಿಸಲಿಲ್ಲ. ಈ ಮಕ್ಕಳಿಗೆ ನೀರು ಕುಡಿಯಲು ಮಡಿಕೆ ಮುಟ್ಟಲೂ ಬಿಡುತ್ತಿರಲಿಲ್ಲ. ಶಾಲೆಯ ಪ್ಯೂನ್ ದೂರದಿಂದಲೇ ಕೈಗೆ ನೀರು ಸುರಿಯುತ್ತಿದ್ದರು. ಪ್ಯೂನ್ ಇಲ್ಲದಿದ್ದಾಗ ಬಾಯಾರಿಕೆ ಇದ್ದರೂ ನೀರಿಲ್ಲದೆ ಪರದಾಡಬೇಕಾಗಿತ್ತು. ಹೀಗೆಲ್ಲ ಕಷ್ಟದ ಬದುಕನ್ನ ಉಂಡವರು ಅಂಬೇಡ್ಕರ್ರವರು.
1894 ರಲ್ಲಿ ರಾಮ್ಜಿ ಸಕ್ಪಾಲ್ ನಿವೃತ್ತರಾದ ನಂತರ ಅವರ ಇಡೀ ಕುಟುಂಬವು ಮಹಾರಾಷ್ಟ್ರದ ಸತಾರಾ ಎಂಬ ಸ್ಥಳಕ್ಕೆ ಸ್ಥಳಾಂತರಗೊಂಡಿತು, ಆದರೆ 2 ವರ್ಷಗಳ ನಂತರ ಅಂಬೇಡ್ಕರ್ ಅವರ ತಾಯಿ ನಿಧನರಾದರು. ಇದರ ನಂತರ ಅವರ ಚಿಕ್ಕಮ್ಮ ಕಷ್ಟದ ಸಂದರ್ಭಗಳಲ್ಲಿ ಅವನನ್ನು ನೋಡಿಕೊಂಡರು. ರಾಮ್ಜಿ ಸಕ್ಪಾಲ್ ಮತ್ತು ಅವರ ಪತ್ನಿ 14 ಮಕ್ಕಳನ್ನು ಹೊಂದಿದ್ದರು. ಸಹೋದರ ಸಹೋದರಿಯರಲ್ಲಿ ಮೂವರು ಪುತ್ರರು ಮತ್ತು ಮೂವರು ಪುತ್ರಿಯರು ಮಾತ್ರ ಕಷ್ಟಕರ ಪರಿಸ್ಥಿತಿಯಲ್ಲಿ ಬದುಕುಳಿದರು.
1897 ರಲ್ಲಿ ಮುಂದಿನ ಶಿಕ್ಷಣವನ್ನು ಮುಂದುವರಿಸಲು ಸಾಮಾಜಿಕ ತಾರತಮ್ಯವನ್ನು ನಿರ್ಲಕ್ಷಿಸುವಲ್ಲಿ ಡಾ ಅಂಬೇಡ್ಕರ್ ಯಶಸ್ವಿಯಾದವರು. ಅಂಬೇಡ್ಕರ್ ಅವರು ಮುಂಬೈನ ಪ್ರೌಢಶಾಲೆಗೆ ಪ್ರವೇಶ ಪಡೆದರು ಆ ಶಾಲೆಯಲ್ಲಿ ಪ್ರವೇಶ ಪಡೆದ ಮೊದಲ ಕೆಳಜಾತಿಯ ವಿದ್ಯಾರ್ಥಿ ಭೀಮರಾವ್ ಅಂಬೇಡ್ಕರ್ ಮಾತ್ರ ಎಂಬುದು ಅತ್ಯಂತ ಖುಷಿಯ ಸಂಗತಿ. 1907 ರಲ್ಲಿ ಅಂಬೇಡ್ಕರ್ ಅವರು ತಮ್ಮ ಪ್ರೌಢಶಾಲಾ ಪರೀಕ್ಷೆಯಲ್ಲಿ ಉತ್ತೀರ್ಣರಾದರು.
ಈ ಯಶಸ್ಸು ಅವರ ಜಾತಿಯ ಜನರಲ್ಲಿ ಸಂತೋಷದ ಅಲೆಯನ್ನು ಎಬ್ಬಿಸಿತು ಏಕೆಂದರೆ ಆ ಸಮಯದಲ್ಲಿ ಹೈಸ್ಕೂಲ್ ಪಾಸಾಗುವುದು ದೊಡ್ಡ ವಿಷಯವಾಗಿತ್ತು ಮತ್ತು ಅದನ್ನು ಸಾಧಿಸಲು ಅವರ ಸಮುದಾಯದಲ್ಲಿ ಒಬ್ಬರಾದರೂ ಇದ್ದಾರಲ್ಲ ಎನ್ನುವುದೇ ಒಂದು ಅದ್ಭುತವಾಗಿದೆ. ಆ ನಂತರ ಭೀಮರಾವ್ ಅಂಬೇಡ್ಕರ್ ಅವರು 1912 ರಲ್ಲಿ ಅರ್ಥಶಾಸ್ತ್ರ ಮತ್ತು ರಾಜ್ಯಶಾಸ್ತ್ರದಲ್ಲಿ ಪದವಿಗಳನ್ನು ಪಡೆದು ಅಧ್ಯಯನ ಕ್ಷೇತ್ರದ ಎಲ್ಲಾ ದಾಖಲೆಗಳನ್ನು ಮುರಿದರು.
1913 ರಲ್ಲಿ ಅವರು ಸ್ನಾತಕೋತ್ತರ ಪದವಿಗಾಗಿ ಅಮೇರಿಕಾಕ್ಕೆ ಹೋಗಿ ಅಲ್ಲಿ 1915 ರಲ್ಲಿ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅವರು M.A ಮಾಡಿ. ನಂತರದ ವರ್ಷದಲ್ಲಿ ಅವರ ಒಂದು ಸಂಶೋಧನೆಗಾಗಿ ಅವರಿಗೆ ಪಿಎಚ್ಡಿ ನೀಡಲಾಯಿತು. 1916 ರಲ್ಲಿ ಅವರು ಬ್ರಿಟಿಷ್ ಇಂಡಿಯಾದಲ್ಲಿ ಪ್ರಾಂತೀಯ ಹಣಕಾಸು ಎವಲ್ಯೂಷನ್ ಪುಸ್ತಕವನ್ನು ಪ್ರಕಟಿಸಿದರು. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಡಾಕ್ಟರೇಟ್ ಪದವಿಯೊಂದಿಗೆ 1916 ರಲ್ಲಿ ಲಂಡನ್ಗೆ ಹೋಗಿ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನಲ್ಲಿ ಕಾನೂನು ಅಧ್ಯಯನ ಮಾಡಿದರು ಮತ್ತು ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿಗೆ ಸೇರಿಕೊಂಡರು.
ಆದರೆ ಮುಂದಿನ ವರ್ಷದಲ್ಲಿ ಸ್ಕಾಲರ್ಶಿಪ್ ಹಣ ಖಾಲಿಯಾದ ಹಿನ್ನೆಲೆಯಲ್ಲಿ ಓದನ್ನು ಮಧ್ಯದಲ್ಲಿಯೇ ಬಿಟ್ಟು ಭಾರತಕ್ಕೆ ಮರಳಬೇಕಾಯಿತು. ನಂತರ ಅವರು ಭಾರತದಲ್ಲಿ ಕ್ಲೆರಿಕಲ್ ಉದ್ಯೋಗಗಳು ಮತ್ತು ಅಕೌಂಟೆಂಟ್ ಕೆಲಸಗಳಂತಹ ಹಲವಾರು ಕೆಲಸಗಳನ್ನು ಮಾಡಿದರು. ಇಲ್ಲಿ ಉಳಿದ ಹಣದ ಸಹಾಯದಿಂದ 1923 ರಲ್ಲಿ ಲಂಡನ್ಗೆ ಹಿಂತಿರುಗಿ ತಮ್ಮ ಸಂಶೋಧನೆಯನ್ನು ಪೂರ್ಣಗೊಳಿಸಿದರು. ವಿಶ್ವವಿದ್ಯಾನಿಲಯವು ಅವರಿಗೆ ಡಾಕ್ಟರ್ ಆಫ್ ಸೈನ್ಸ್ ಪದವಿಯನ್ನು ನೀಡಿ ಗೌರವಿಸಿತು. ಅಂದಿನಿಂದ ಅವರು ತಮ್ಮ ಉಳಿದ ಜೀವನವನ್ನು ಸಮಾಜ ಸೇವೆಯಲ್ಲಿ ಕಳೆದರು.
ಅವರು ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಅಭಿಯಾನಗಳಲ್ಲಿ ಭಾಗವಹಿಸಿ ದಲಿತರ ಸಾಮಾಜಿಕ ಸ್ವಾತಂತ್ರ್ಯಕ್ಕಾಗಿ ಅನೇಕ ಪುಸ್ತಕಗಳನ್ನು ಬರೆಯುವುದಲ್ಲದೆ ಮತ್ತು ಭಾರತವನ್ನು ಸ್ವತಂತ್ರ ರಾಷ್ಟ್ರವನ್ನಾಗಿ ಮಾಡಿದರು. 1926 ರಲ್ಲಿ ಅವರು ಮುಂಬೈ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರಾದರು. 13 ಅಕ್ಟೋಬರ್ 1935 ರಂದು, ಅಂಬೇಡ್ಕರ್ ಅವರನ್ನು ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲರನ್ನಾಗಿ ಮಾಡಲಾಯಿತು ಇಲ್ಲಿ 2 ವರ್ಷಗಳ ಕಾಲ ಈ ಹುದ್ದೆಯಲ್ಲಿ ಕೆಲಸ ಮಾಡಿದರು.
1936 ರಲ್ಲಿ ರಾಜಕಾರಣಿಯಾಗಿ ಹೊರಹೊಮ್ಮುತ್ತ ಅಂಬೇಡ್ಕರ್ ಸ್ವತಂತ್ರ ಕಾರ್ಮಿಕ ಪಕ್ಷವನ್ನು ಸ್ಥಾಪಿಸಿದರು ಅದು ನಂತರ ಕೇಂದ್ರ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿತು ಮತ್ತು 15 ಸ್ಥಾನಗಳನ್ನು ಗೆದ್ದಿತು. 1941 ಮತ್ತು 1945 ರ ನಡುವೆ ಅವರು ‘ಥಾಟ್ಸ್ ಇನ್ ಪಾಕಿಸ್ತಾನ್’ ನಂತಹ ಹಲವಾರು ಪುಸ್ತಕಗಳನ್ನು ಪ್ರಕಟಿಸಿದರು. ಈ ಪುಸ್ತಕದಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ದೇಶ ರಚಿಸಬೇಕೆಂಬ ಬೇಡಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಅಂಬೇಡ್ಕರರ ಭಾರತದ ದೃಷ್ಟಿಯೇ ಬೇರೆಯಾಗಿತ್ತು.
ಅವರು ಇಡೀ ದೇಶವನ್ನು ಒಡೆಯದಂತೆ ನೋಡಬೇಕೆಂದು ಬಯಸಿದ್ದರು ಅದಕ್ಕಾಗಿಯೇ ಅವರು ಭಾರತವನ್ನು ವಿಭಜಿಸಲು ಬಯಸುವ ನಾಯಕರ ನೀತಿಗಳನ್ನು ಕಟುವಾಗಿ ಟೀಕಿಸಿದರು. 15 ಆಗಸ್ಟ್ 1947 ರಂದು ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಅಂಬೇಡ್ಕರ್ ಮೊದಲ ಕಾನೂನು ಮಂತ್ರಿಯಾದರು ಮತ್ತು ಅವರ ಹದಗೆಟ್ಟ ಆರೋಗ್ಯದ ಹೊರತಾಗಿಯೂ ಅವರು ಭಾರತಕ್ಕೆ ಬಲವಾದ ಕಾನೂನನ್ನು ನೀಡಿದರು. ನಂತರ ಅವರ ಲಿಖಿತ ಸಂವಿಧಾನವು 26 ಜನವರಿ 1950 ರಂದು ಜಾರಿಗೆ ಬಂದಿತು ಮತ್ತು ಇದರ ಜೊತೆಗೆ ಭೀಮರಾವ್ ಅಂಬೇಡ್ಕರ್ ಅವರ ಅಭಿಪ್ರಾಯಗಳೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಸ್ಥಾಪಿಸಲಾಯಿತು.
ಎಲ್ಲದರ ನಂತರ ರಾಜಕೀಯ ಸಮಸ್ಯೆಗಳೊಂದಿಗೆ ಹೋರಾಡುತ್ತಿರುವಾಗ ಭೀಮರಾವ್ ಅಂಬೇಡ್ಕರ್ ಅವರ ಆರೋಗ್ಯವು ದಿನದಿಂದ ದಿನಕ್ಕೆ ಹದಗೆಟ್ಟಿತು 6 ಡಿಸೆಂಬರ್ 1956 ರಂದು ಅವರು ನಿಧನರಾದರು. ಅವರು ಸಮಾಜದ ಚಿಂತನೆಯನ್ನು ದೊಡ್ಡ ಮಟ್ಟದಲ್ಲಿ ಬದಲಾಯಿಸುವುದರ ಜೊತೆಗೆ ದಲಿತರು ಮತ್ತು ಮಹಿಳೆಯರಿಗೆ ಅವರ ಹಕ್ಕುಗಳನ್ನು ಪಡೆಯುವಂತೆ ಮಾಡಿದರು.
ಡಾ ಬಿ ಆರ್ ಅಂಬೇಡ್ಕರ್ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು
- ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯು ವಿಶ್ವದಲ್ಲಿ ವಾರ್ಷಿಕ ಉತ್ಸವವಾಗಿ ಆಚರಿಸಲಾಗುವ ಅತಿದೊಡ್ಡ ಜಯಂತಿಯಾಗಿದೆ ಎಂಬ ಅಂಶವನ್ನು ಇಲ್ಲಿ ಹೇಳಲು ನನಗೆ ಹೆಮ್ಮೆ ಮತ್ತು ಆಸಕ್ತಿದಾಯಕವಾಗಿದೆ.
- ಅವರನ್ನು ವಿಶ್ವದ ನಂಬರ್ 1 ವಿದ್ವಾಂಸರು ಎಂದು ಕರೆಯುತ್ತಾರೆ ಮತ್ತು ಅವರು ದಕ್ಷಿಣ ಏಷ್ಯಾ ಪ್ರದೇಶದ ಅರ್ಥಶಾಸ್ತ್ರ ವಿಷಯದಲ್ಲಿ ಪಿಎಚ್ಡಿ ಮಾಡಿದ ಮೊದಲ ವ್ಯಕ್ತಿಯಾಗಿದ್ದಾರೆ.
- “ಜೀವನವು ದೀರ್ಘವಾಗಿರುವುದಕ್ಕಿಂತ ಶ್ರೇಷ್ಠವಾಗಿರಬೇಕು” ಎಂಬ ಅಂಬೇಡ್ಕರ್ ಅವರ ಘೋಷಣೆಯು ಜಾಗತಿಕವಾಗಿ ಅನೇಕ ಜನರಿಗೆ ಸರಿಯಾದ ಮಾರ್ಗವನ್ನು ತೋರಿಸಿದೆ.
- ಡಾ.ಬಿ.ಆರ್. ಅಂಬೇಡ್ಕರ್ ಅವರು ಎಂಎಸ್ಸಿ, ಎಂಎ, ಪಿಎಚ್ಡಿ ಮತ್ತು ಇನ್ನೂ ಅನೇಕ ಉನ್ನತ ಪದವಿಗಳನ್ನು ಪೂರ್ಣಗೊಳಿಸಿದ ಕಾರಣ ಪ್ರಪಂಚದ ಜ್ಞಾನದ ಸಂಕೇತವೆಂದು ಪ್ರಸಿದ್ಧರಾಗಿದ್ದಾರೆ.
ಡಾ.ಬಿ.ಆರ್. ಅಂಬೇಡ್ಕರ್ (1891-1956) ಈ ಅವಧಿಯಲ್ಲಿ ಅವರು ಪಡೆದ ಪದವಿಗಳು
- B.A., M.A., M.Sc., D.Sc., Ph.D., L.L.D., ಡಿ.ಲಿಟ್., ಬ್ಯಾರಿಸ್ಟರ್-ಅಟ್-ಲಾ ಡಬ್ಲ್ಯೂ.
- B.A.(ಬಾಂಬೆ ವಿಶ್ವವಿದ್ಯಾಲಯ) ಬ್ಯಾಚುಲರ್ ಆಫ್ ಆರ್ಟ್ಸ್.
- MA.(ಕೊಲಂಬಿಯಾ ವಿಶ್ವವಿದ್ಯಾಲಯ) ಮಾಸ್ಟರ್ ಆರ್ಟ್ಸ್.
- M.Sc.( ಲಂಡನ್ ಸ್ಕೂಲ್ ಆಫ್ ಅರ್ಥಶಾಸ್ತ್ರ) ಮಾಸ್ಟರ್ ಸೈನ್ಸ್.
- ಪಿಎಚ್.ಡಿ. (ಕೊಲಂಬಿಯಾ ವಿಶ್ವವಿದ್ಯಾಲಯ) ನ ಡಾಕ್ಟರ್ ಆಫ್ ಫಿಲಾಸಫಿ.
- D.Sc.( ಲಂಡನ್ ಸ್ಕೂಲ್ ಆಫ್ ಅರ್ಥಶಾಸ್ತ್ರ) ಡಾಕ್ಟರ್ ಸೈನ್ಸ್.
- L.L.D.(ಕೊಲಂಬಿಯಾ ವಿಶ್ವವಿದ್ಯಾಲಯ) ನ ಡಾಕ್ಟರ್ ಆಫ್ ಲಾ.
- D.Litt.( ಉಸ್ಮಾನಿಯಾ ವಿಶ್ವವಿದ್ಯಾಲಯ) ನ ಡಾಕ್ಟರ್ ಆಫ್ ಲಿಟ್ರೆಚರ್.
- ಬ್ಯಾರಿಸ್ಟರ್-ಅಟ್-ಲಾ (ಗ್ರೇಸ್ ಇನ್, ಲಂಡನ್).
ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಬಾಬಾಸಾಹೇಬ್ ಅಂಬೇಡ್ಕರ್ ಎಂದೂ ಕರೆಯುತ್ತಾರೆ, ಅವರು ಶ್ರೇಷ್ಠ ರಾಜಕಾರಣಿ ಮತ್ತು ನ್ಯಾಯಶಾಸ್ತ್ರಜ್ಞರಾಗಿದ್ದರು. ಅವರು ತಮ್ಮ ಜೀವನದುದ್ದಕ್ಕೂ ಸಾಕಷ್ಟು ಹೋರಾಡಿ ತಳಸಮುದಾಯದ ಮತ್ತು ಸಮಾಜದ ಜನರಿಗೆ ಕಾನೂನುಗಳನ್ನು ಸೂಚಿಸಿದ ವ್ಯಕ್ತಿಯು ಭಾರತೀಯ ಸಂವಿಧಾನದ ಏಕೈಕ ಮುಖ್ಯ ಶಿಲ್ಪಿ ಎಂದು ಹೇಳಿಕೊಳ್ಳುವ ಹೆಮ್ಮೆ ಭಾರತೀಯರಾದ ನಮ್ಮೆಲ್ಲರಿಗೂ ಸಲ್ಲುವಂತೆ ಮಾಡಿಕೊಟ್ಟಿದ್ದಾರೆ.
131ನೆಯ ಭೀಮರಾವ್ ರಾಮ್ಜಿ ಅಂಬೇಡ್ಕರ್ ಜಯಂತಿಯ ಶುಭಾಷಯಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ

ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.
ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ
ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.
ಗ್ರಂಥಾಲಯಗಳಿಗೆ ಮಹತ್ವ
ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.
8 ನೇ ತರಗತಿವರೆಗೆ ವಿಸ್ತರಣೆ
ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9989346243

ದಿನದ ಸುದ್ದಿ
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:ಸವಿತಾ ಸಮಾಜ ಹಿಂದುಳಿದ ಸಮಾಜವಾಗಿದ್ದು, ಸಮಾಜವು ಸಂಘಟನೆಯಿಂದ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬೆಳೆಯಬೇಕು ಎಂದು ಶಾಸಕರಾದ ಕೆ.ಎಸ್.ಬಸವಂತಪ್ಪ ತಿಳಿಸಿದರು.
ಬುಧವಾರ(ಫೆ.5) ರಂದು ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸವಿತಾ ಮಹರ್ಷಿ ಜಯಂತಿ ಉದ್ಘಾಟಿಸಿ ಮಾತಾನಾಡಿದರು. ಸವಿತಾ ಸಮಾಜದ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು, ಆಗ ಮಾತ್ರ ಶ್ರೀಮಂತ, ಬಡವ, ಮೇಲು ಕೀಳು ಎಂಬ ಮನೋಭಾವನೆ ಬರಲು ಸಾಧ್ಯವಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿ ಇರಬೇಕು ಸಮಾಜದಲ್ಲಿ ಇರುವಂತಹ ತೊಡಕುಗಳನ್ನು ತೊರೆದು ನಡೆದರೆ ಮಾತ್ರ ಅಭಿವೃದ್ದಿ ಸಾಧಿಸುವುದಕ್ಕೆ ಸಾಧ್ಯವಾಗುತ್ತದೆ. ವೃತ್ತಿ ಬದುಕಿಗೆ ಅನುಕೂಲವಾಗಲು ಪರಿಕರಗಳ ಕಿಟ್ ನೀಡಲು ಮತ್ತು ಪಾಲಿಕೆಯಲ್ಲಿರುವ ಮಳಿಗೆಗಳನ್ನು ಇವರಿಗೆ ಕಡಿಮೆ ಬಾಡಿಕೆ ನೀಡಬೇಕು ಎಂದರು. ಹೊಂಡದ ಸರ್ಕಲ್ನಲ್ಲಿರುವ ಸಮುದಾಯದ ಭವನದ ಕಟ್ಟಡವನ್ನು ಪೂರ್ಣಗೊಳಿಸಲು ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಸವಿತಾ ಮಹರ್ಷಿಗಳು ಸಮಾಜಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಗಳನ್ನು ಆಚರಿಸುವ ಮೂಲಕ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಮಾರ್ಗದರ್ಶಿಯಾಗಿದೆ. ಸವಿತಾ ಸಮಾಜದ ಬಂಧುಗಳು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಹೇಳಿದರು.
ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.
ದೂಢಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಪಾಲಿಕೆ ಮಹಾಪೌರರಾದ ಚಮನ್ ಸಾಬ್ ಕೆ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ತಹಶೀಲ್ದಾರ್ ಅಶ್ವಥ್, ಸಂಘದ ಜಿಲ್ಲಾಧ್ಯಕ್ಷರಾದ ಬಾಲರಾಜ್, ವಕೀಲರಾದ ರಂಗಸ್ವಾಮಿ ಹಾಗೂ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ

ಸುದ್ದಿದಿನ,ದಾವಣಗೆರೆ: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್ಇಎಫ್ ವಿವಿಗೆ ನ್ಯಾಕ್ ಕಮಿಟಿಯಿಂದ ಎ++ ಗ್ರೇಡ್ ನೀಡುವಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.
ನ್ಯಾಕ್ ತಂಡದ ಅಧ್ಯಕ್ಷರು ಮತ್ತು ಜೆ ಎನ್ ಯು ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ.
ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮೇಲೆ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್ಪುರ, ಭೋಪಾಲ್, ಬಿಲಾಸ್ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್ಟಾಪ್ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ಸಿಬಿಐ ವಶಪಡಿಸಿಕೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಅಂತಾರಾಷ್ಟ್ರೀಯ, ನವೋದಯ ಮಟ್ಟದ ಉತ್ಕೃಷ್ಟ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗಬೇಕು: ಜಿ. ಬಿ. ವಿನಯ್ ಕುಮಾರ್
-
ದಿನದ ಸುದ್ದಿ6 days ago
ನ್ಯಾಕ್ ಗ್ರೇಡ್ ನೀಡಲು ಲಂಚ ಸ್ವೀಕಾರ ; ದಾವಣಗೆರೆ ವಿವಿ ಪ್ರಾಧ್ಯಾಪಕಿ ಬಂಧನ
-
ದಿನದ ಸುದ್ದಿ4 days ago
ಹಿಂದುಳಿದ ಸಮಾಜಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡೆದು ಸಂಘಟಿತರಾಗಲಿ: ಶಾಸಕ ಕೆ.ಎಸ್.ಬಸವಂತಪ್ಪ
-
ದಿನದ ಸುದ್ದಿ15 hours ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ