Connect with us

ದಿನದ ಸುದ್ದಿ

ಎನ್ಇಪಿ-2020ರ ಯಶಸ್ಸಿನಲ್ಲಿ ಗ್ರಂಥಪಾಲಕರ ಪಾತ್ರ ಮಹತ್ವದ್ದು : ಪ್ರೊ. ಪಿ ಎಸ್ ಯಡಪಡಿತ್ತಾಯ

Published

on

ಸುದ್ದಿದಿನ,ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ( Mangalore University) ಗ್ರಂಥಾಲಯ ( Library ) ಆಯೋಜಿಸಿರುವ “ಎನ್ಇಪಿ 2020 ಗಾಗಿ (NEP-2020) ಗ್ರಂಥಾಲಯಗಳ ಪರಿವರ್ತನೆ”ಎಂಬ ಐದು ದಿನಗಳ ಕಾರ್ಯಾಗಾರವನ್ನು (Workshop) ವಿಶ್ವವಿದ್ಯಾಲಯದ ಎಂಎನ್ ವಿಶ್ವನಾಥಯ್ಯ ಸಭಾಂಗಣದಲ್ಲಿ ಸೋಮವಾರ ಉದ್ಘಾಟಿಸಲಾಯಿತು.

ತಮ್ಮ ಉದ್ಘಾಟನಾ ಭಾಷಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ವಿ ಜಿ ತಳವಾರ ಅವರು ಎನ್ಇಪಿಯ ಪ್ರಾಮುಖ್ಯತೆ ವಿವರಿಸುತ್ತಾ, ಅಂತರಶಿಸ್ತೀಯ ಮತ್ತು ಬಹುಶಿಸ್ತೀಯ ಅಧ್ಯಯನಗಳು ಮತ್ತು ಸಂಶೋಧನೆಗಳಿಗೆ ಒತ್ತು ನೀಡಲಾಗುತ್ತದೆ, ಎಂದರು. ಸಂಶೋಧನೆ ಮತ್ತು ಶೈಕ್ಷಣಿಕ ಲೇಖನಗಳ ಪ್ರಚಾರದಲ್ಲಿ ಆನ್ಲೈನ್ ಡೇಟಾಬೇಸ್ಗಳು ಮತ್ತು ತೆರೆದ ಮೂಲಗಳ ಎಲೆಕ್ಟ್ರಾನಿಕ್ ಸಂಪನ್ಮೂಲಗಳು, ಸಂಶೋಧನೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಜ್ಞಾನದ ಕೇಂದ್ರಗಳು ಎಂದು ಗ್ರಂಥಪಾಲಕರಿಗೆ ತಿಳುವಳಿಕೆ ನೀಡಿದರು.

ಇದನ್ನೂ ಓದಿ |ಹದಡಿ ಕೆರೆ ಏರಿ ದುರಸ್ತಿಗೆ 1.70 ಕೋಟಿ ಮಂಜೂರು : ಸಚಿವ ಬೈರತಿ‌ ಬಸವರಾಜ್

ಗೌರವ ಅತಿಥಿ, ಮಂಗಳೂರು ವಿಶ್ವವಿದ್ಯಾನಿಲಯ ಗ್ರಂಥಾಲಯದ ನಿವೃತ್ತ ಗ್ರಂಥಪಾಲಕ ಡಾ.ಎಂ.ಕೆ.ಭಂಡಿ, ಗ್ರಂಥಾಲಯ ಸಂಪನ್ಮೂಲಗಳನ್ನು ನಿರ್ವಹಿಸುವ ಹೊಸ ಉಪಕರಣಗಳು, ತಂತ್ರಜ್ಞಾನಗಳು ಮತ್ತು ಕೌಶಲ್ಯಗಳನ್ನು ವಿವರಿಸಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ಎನ್ಇಪಿ-2020ರ ಯಶಸ್ಸಿನಲ್ಲಿ ಗ್ರಂಥಪಾಲಕರ ಪಾತ್ರ ಬಹುಮುಖ್ಯವಾಗಿದ್ದು, ಮಾಹಿತಿ ಪ್ರಸಾರದಲ್ಲಿ ಸೇತುವೆಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ, ಎಂದು ಅಭಿಪ್ರಾಯಪಟ್ಟರು. ಗ್ರಂಥಾಲಯ ಆಧುನೀಕರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಮಂಗಳೂರು ವಿಶ್ವವಿದ್ಯಾನಿಲಯದ ಗ್ರಂಥಾಲಯದ ಗ್ರಂಥಪಾಲಕ ಡಾ.ಪುರುಷೋತ್ತಮ ಗೌಡ ಎಂ ಸ್ವಾಗತಿಸಿ, ಎನ್ಇಪಿಯನ್ನು ಉತ್ತೇಜಿಸುವಲ್ಲಿ ಗ್ರಂಥಾಲಯಗಳ ಪಾತ್ರವನ್ನು ವಿವರಿಸಿದರು. ಡಾ.ಪ್ರೀತಿ ಕೀರ್ತಿ ಡಿʼಸೋಜಾ ಕಾರ್ಯಕ್ರಮ ನಿರೂಪಿಸಿ, ಸುಮಂಗಲಾ ಕೆ ಎಸ್ ವಂದಿಸಿದರು. 120 ಕ್ಕೂ ಹೆಚ್ಚು ಗ್ರಂಥಾಲಯ ವೃತ್ತಿಪರರು ಕಾರ್ಯಾಗಾರದಲ್ಲಿ ಭಾಗಿಯಾದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending