/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಆರ್ ಎಸ್ ಎಸ್ ಒತ್ತಾಯ

Published

on

ಸುದ್ದಿದಿನ ಡೆಸ್ಕ್ | ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ದೆಹಲಿಯ ರಾಮ್​ ಲೀಲಾ ಮೈದಾನದಲ್ಲಿ ಭಾನುವಾರ ಬೃಹತ್​ ರ್ಯಾಲಿ ನಡೆಯಿತು. ಲೋಕಸಭಾ ಚುನಾವಣೆಗೂ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಬೇಕೆಂಬ ಒತ್ತಾಯ ಜೋರಾಗಿದೆ. ಅಯೋಧ್ಯಾ ವಿವಾದ ಸದ್ಯ ಸುಪ್ರೀಂ ಕೋರ್ಟ್​​ನಲ್ಲಿದ್ದು, ಮುಂದಿನ ಜನವರಿಯಲ್ಲಿ ನ್ಯಾಯಮೂರ್ತಿಗಳು ವಿಚಾರಣೆಗೆ ದಿನಾಂಕ ನಿಗದಿ ಮಾಡಲಿದ್ದಾರೆ.

ಆದ್ರೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಬೇಕು ಅಂತ ಬಲ ಪಂಥೀಯ ಸಂಘಟನೆಗಳು ಒತ್ತಾಯಿಸಿವೆ.ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕಾರಿ ಮುಖ್ಯಸ್ಥ ಸುರೇಶ್​ ಭಯ್ಯಾಜಿ ಜೋಷಿ, ವಿಹೆಚ್​ಪಿ ಅಂತರ್​​ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್​ ಕುಮಾರ್​, ವಿಹೆಚ್​ಪಿ ಅಧ್ಯಕ್ಷ ವಿಷ್ಣು ಸದಾಶಿವ ಸೇರಿದಂತೆ ಅನೇಕ ಸ್ವಾಮೀಜಿಗಳು ಭಾಗವಹಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version