ದಿನದ ಸುದ್ದಿ
ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಆರ್ ಎಸ್ ಎಸ್ ಒತ್ತಾಯ
ಸುದ್ದಿದಿನ ಡೆಸ್ಕ್ | ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾನುವಾರ ಬೃಹತ್ ರ್ಯಾಲಿ ನಡೆಯಿತು. ಲೋಕಸಭಾ ಚುನಾವಣೆಗೂ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಹೊರಡಿಸಬೇಕೆಂಬ ಒತ್ತಾಯ ಜೋರಾಗಿದೆ. ಅಯೋಧ್ಯಾ ವಿವಾದ ಸದ್ಯ ಸುಪ್ರೀಂ ಕೋರ್ಟ್ನಲ್ಲಿದ್ದು, ಮುಂದಿನ ಜನವರಿಯಲ್ಲಿ ನ್ಯಾಯಮೂರ್ತಿಗಳು ವಿಚಾರಣೆಗೆ ದಿನಾಂಕ ನಿಗದಿ ಮಾಡಲಿದ್ದಾರೆ.
As the VHP today organised a rally at the historic Ramlila Maidan in Delhi to mount pressure on the Centre for early construction of Ram temple in Ayodhya, the RJD termed the gathering as "Adharmik Sabha"
Read @ANI Story | https://t.co/a5zrnkWMAX pic.twitter.com/2X9mmMH7Pr
— ANI Digital (@ani_digital) December 9, 2018
ಆದ್ರೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಬೇಕು ಅಂತ ಬಲ ಪಂಥೀಯ ಸಂಘಟನೆಗಳು ಒತ್ತಾಯಿಸಿವೆ.ರ್ಯಾಲಿಯಲ್ಲಿ ಆರ್ ಎಸ್ ಎಸ್ ಕಾರ್ಯಕಾರಿ ಮುಖ್ಯಸ್ಥ ಸುರೇಶ್ ಭಯ್ಯಾಜಿ ಜೋಷಿ, ವಿಹೆಚ್ಪಿ ಅಂತರ್ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಅಲೋಕ್ ಕುಮಾರ್, ವಿಹೆಚ್ಪಿ ಅಧ್ಯಕ್ಷ ವಿಷ್ಣು ಸದಾಶಿವ ಸೇರಿದಂತೆ ಅನೇಕ ಸ್ವಾಮೀಜಿಗಳು ಭಾಗವಹಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401