ರಾಜಕೀಯ
ಸಿಎಂ ಸಿದ್ದು ಮನೆಯಲ್ಲಿ ಆವರಿಸಿದ ನೀರವ ಮೌನ
ಸುದ್ದಿದಿನ,ಬೆಂಗಳೂರು : ಕರ್ನಾಟಕದಲ್ಲಿ ಕಮಲ ಅರಳುತ್ತಿರುವುದು ಬಹುತೇಕ ಖಚಿತವಾದಂತಾಗಿದೆ.ಈ ಫಲಿತಾಂಶ ಹಿನ್ನೆಲೆಯಲ್ಲಿ ಯಾವ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಮನೆಗೆ ಇದುವರೆಗೂ ಆಗಮಿಸಿಲ್ಲ.ಸಿಎಂ ಸಿದ್ದರಾಮಯ್ಯ ಅವರು ಕೂಡ ಮನೆಯಿಂದ ಹೊರಗೆ ಮನೆಯೊಳಗೇ ಕುಳಿತಿದ್ದಾರೆ.
ಮತ ಎಣಿಕೆ ಆರಂಭದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿತ್ತು. ಕಾಂಗ್ರೆಸ್ ಗೆ ಭಾರಿ ಹಿನ್ನಡೆಯನ್ನು ಅನುಭವಿಸುತ್ತಿದ್ದು, ಈ ಮಟ್ಟಕ್ಕೆ ಪಕ್ಷದ ಕುಸಿತವನ್ನು ಕನಸಲ್ಲೂ ನಿರೀಕ್ಷಿಸದ ಸಿಎಂ ಸಿದ್ದರಾಮಯ್ಯ ಅವರ ಮನೆ ಮುಂದೆ ನಿರವ ಮೌನ ಆವರಿಸಿದೆ. ಬಿಜೆಪಿ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಮುನ್ನಡೆಯುತ್ತಲಿದೆ. ಕಾರಣ ಕಾಂಗ್ರೆಸ್ ಪಕ್ಷವು ಸೋಲುವುದು ಬಹುತೇಕ ಖಚಿತವಾದಂತಾಗಿದೆ.