Connect with us

ದಿನದ ಸುದ್ದಿ

ತೊಂಬತ್ತರ ದಶಕದ ದುರಂತಗಳು..!

Published

on

  • ಸುರೇಶ ಎನ್ ಶಿಕಾರಿಪುರ

ವತ್ತು ವಿಶ್ವ ಗುಬ್ಬಿಗಳ ದಿನಾಚರಣೆ… ಜಗತ್ತಿನಲ್ಲಿ ದಿನಕ್ಕೊಂದು ದಿನಾಚರಣೆ ಇದ್ದೇ ಇರುತ್ತದೆ… ಸಾವಿರಾರು ವರ್ಷ ಕಾಲದಿಂದ ಮನುಷ್ಯನ ಜೊತೆ ಜೊತೆಗೇ ಗುಬ್ಬಿಗಳು ಜೀವಿಸುತ್ತಾ ಬಂದಿವೆ.

ಅವನು‌ ಮನೆ ಕಟ್ಟಿದಲ್ಲೇ ತಾವೂ ಮನೆ ಕಟ್ಟಿ ಅವನ ಸಂಸಾರದ ಜೊತೆಗೇ ತಾವೂ ಸಂಸಾರ ಹೂಡಿ ಪ್ರೇಮ ಪ್ರಣಯ ಸಂಸಾರ ಪಾಠ ಹೇಳುತ್ತ ಜಗತ್ತಿನ ಎಲ್ಲಾ ಜಾನಪದದ ಕತೆ ಕಾವ್ಯ ಮಹಾ ಕಾವ್ಯ ಗಾದೆ ಒಗಟುಗಳಲ್ಲಿ ರೂಪಕ ಉಪಮೆ ಪ್ರತಿಮೆಗಳಾಗಿ ಸ್ಥಾನಪಡೆದು ಮನುಷ್ಯ ಬದುಕಿನ ಅವಿಭಾಜ್ಯ ಅಂಗಗಳಾಗಿ.

ನಮ್ಮ ಮಕ್ಕಳು ಅತ್ತ ಗೋಲಿ ಬುಗುರಿ ಲಗೋರಿ ಆಡುತ್ತಿದ್ದರೆ ಇತ್ತ ಗುಂಪು ಗೂಡಿ ಕುಪ್ಪಳಿಸುತ್ತಾ ಚಿಂವ್ ಚೀಂವ್ ಚಿಟಾಂವ್ ಎಂದು ಗುಬ್ಬಲೆಬ್ಬಿಸಿ ಆಡುತ್ತಾ ಕಸಕಡ್ಡಿ ಕಾಳುಕಡಿ ಹೆಕ್ಕುತ್ತಾ ಬದುಕಿನ ಭಾಗವಾಗಿ ಜೀವಿಸುತ್ತಿದ್ದ ಗುಬ್ಬಿಗಳು ಜಾಗತೀಕರಣ ಪ್ರವೇಷವಾದ ತೊಂಬತ್ತರ ದಶಕದಲ್ಲಿ ಇದ್ದಕ್ಕಿದ್ದಂತೆ ಮಂಗಳ ಮಾಯವಾಗತೊಡಗಿದವು.

ಒಂದೋ ನಾವು ಪಾರಂಪರಿಕ ಮನೆ ಕಟ್ಟಡಗಳ ವಾಸ್ತು ಬದಲಾಯಿಸಿ ಪಾಶ್ಚಾತ್ಯ ಮಾದರಿಯ ತಾರಸಿ ಮನೆ ಬೃಹತ್ ಕಟ್ಟಡಗಳ ನಿರ್ಮಾಣದಲ್ಲಿ ತೊಡಗಿದ್ದು. ಮತ್ತೊಂದು ಮೊಬೈಲ್ ಮತ್ತಿತರೆ ಅಂತರ್ಜಾಲದ ಎಲೆಕ್ಟ್ರಾನಿಕ್ ಅಲೆಗಳು ವಾತಾವರಣದಲ್ಲಿ ಟ್ರಾಫಿಕ್ ಜಾಮ್ ಮಾಡಲು ಆರಂಭಿಸಿದ್ದು.

ಇದೆಲ್ಲದಕ್ಕಿಂತ ಮುಖ್ಯವಾದ ಮತ್ತೊಂದು ಸಂಗತಿ ಕೃಷಿ ಸಂಸ್ಕೃತಿ ಮಾರ್ಪಾಡಾಗಿ ಕಾಳು ಕಡಿ ಒಕ್ಕುವ ಪದ್ಧತಿಯಲ್ಲಿ ಬದಲಾವಣೆ ಕಣಜಗಳಿಲ್ಲದ ಮನೆಗಳು, ಕಮರ್ಷಿಯಲ್ ಬೆಳೆಗಳು ಇವೆಲ್ಲದರ ಜೊತೆಗೆ ಕಾಳು ಕಡಿ ಬಿದ್ದಿರುತ್ತಿದ್ದ ಮನೆಯ ಮುಂದಿನ ಕಸದ ಗುಡ್ಡೆಗೆ ಗುಳಿಗೆ ಟಾನಿಕ್ಕು ಸಿರಪ್ ಪೇಷ್ಟ್ ಗಾಜಿ‌ನ ಚೂರು ಬೀಳ ತೊಡಗಿದುದು.

ನಾವು ಬಳಸುವ ಮೈ ಸೋಪು ಶಾಂಪು ಬಟ್ಟೆ ಸೋಪು ಬ್ಲೀಚಿಂಗ್ ಪೌಡರ್, ಪೆನೋಯಿಲ್, ಮನೆಗಳಿಗೆ ಸಿಪಡಿಸುವ ಬಣ್ಣ, ಚರಂಡಿಗೆ ಹಾಕುತ್ತಿದ್ದ ಡಿಡಿಟಿ ಪೌಡರ್ ಎಲ್ಲವೂ ಬೆರೆತ ನೀರನ್ನೇ ಅವು ಕುಡಿಯಬೇಕಾದುದರಿಂದ ಅವುಗಳ ಜೀವದ ಮೇಲೆ ನೂರಾರು ಬಗೆಯ ಮಾರಣಾಂತಿಕ ಪರಿಣಾಮಗಳಾಗಿ ಅವುಗಳ ಸಂತತಿ ದಿಡೀರನೆ ಇಳಿಮುಖವಾಯಿತು.

ಬಹುಷಃ ಯಾವ ಪ್ರಾಣಿ ಅಥವಾ ಪಕ್ಷಿಯ ಜಗತ್ತಿನಿಂದ ಕಣ್ಮರೆಯಾದಾಗಲೂ ಜಗತ್ತು ಅಷ್ಟೊಂದು ಕಳವಳಗೊಂಡಿತ್ತೋ ಇಲ್ಲವೋ ಕಾಣೆ. ಗುಬ್ಬಿಗಳು ಕಣ್ಮರೆಯಾಗ ತೊಡಗಿದ ಕೂಡಲೇ ಎಲ್ಲೆಡೆಯಲ್ಲೂ ಜನ ಮನ ಮಿಡಿಯಿತು. ಗುಬ್ಬಿಗಳ ರಕ್ಷಣೆಗಾಗಿ ಪರಿಸರವಾದಿಗಳು ಪರಿಸರ ಪ್ರೇಮಿಗಳು ಪಕ್ಷಿ ಪ್ರೇಮಿಗಳು ಛಾಯಾಗ್ರಾಹಕರು ಎಲ್ಲರೂ ದನಿ ಎತ್ತಿದರು. ಹೋರಾಟ ಜರುಗಿದವು, ಲೇಖನಗಳು ಸಾಕ್ಷ್ಯಚಿತ್ರಗಳು ಚಿಂತನಮಂಥನಗಳು ರಾಷ್ಟ್ರೀಯ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಜರುಗಿದವು.

ಅನೇಕ ಸಂಸ್ಥೆಗಳು ಸಚಿವಾಲಯಗಳು ಗುಬ್ಬಿಗಳ ದಿಢೀರ್ ಕಣ್ಮರೆಯ ಕುರಿತು ಸಮೀಕ್ಷೆ ಸಂಶೋಧನೆ ಅಧ್ಯಯನಗಳ ಮೂಲಕ ವರದಿಗಳನ್ನು ಸಿದ್ದಪಡಿಸಿದರು. ಹೀಗೆ ಜಗತ್ತಿನ ದನಿ ಒಂದಾಗಿ ಗುಬ್ಬಿಗಳ ರಕ್ಷಣೆಗೆ ಮುಂದಾಯಿತು. ಅದರ ಪರಿಣಾಮವೇ ಪ್ರತಿವರ್ಷ ಗುಬ್ಬಿಗಳ ರಕ್ಷಣೆಗಾಗಿ ಜಗತ್ತಿಗೆ ಅರಿವು ಮೂಡಿಸಲು ಮಾರ್ಚ್ 20 ವಿಶ್ವ ಗುಬ್ಬಿಗಳ ದಿನಾಚರಣೆ ಆಚರಿಸಲಾಗುತ್ತಿದೆ.

ಗುಬ್ಬಿಗಳು ಮಾತ್ರವಲ್ಲ ತೊಂಬತ್ತರ ದಶಕ ಅನೇಕ ಜೀವಿಗಳನ್ನು ನುಂಗಿ ನೀರು ಕುಡಿದ ದಶಕ. ಅದು ನಿಲ್ಲದೇ ಕಾಡ್ಗಿಚ್ಚಿನಂತೆ ಮುಂದುವರೆದೇ ಇದೆ. ಪರಿಸರದ ಜಾಡಮಾಲಿಗಳು ಎಂದೇ ಕರೆಯಲಾಗುವ ರಣಹದ್ದು (Indian valture)ಗಳೂ ಡೈಕ್ಲೊಫೆನಾಕ್ ಸೋಡಿಯಂ ಎಂಬ ಲಸಿಕೆ ಚುಚ್ಚಿದ್ದ ಸತ್ತ ದನಗಳನ್ನು ತಿಂದು ಈಗ ಎಲ್ಲೆಲ್ಲೂ ಕಾಣಸಿಗದಂತೆ ನಾಶವಾದವು.

ರಾಮನಗರ ಜಿಲ್ಲೆಯಲ್ಲಿ ಒಂದು ರಣಹದ್ದು ಧಾಮವಿದೆ ಬಿಟ್ಟರೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಬೆರಳೆಣಿಕೆಯ ರಣಹದ್ದುಗಳು ಕಾಣಸಿಗುತ್ತವೆ. ಸತ್ತವರಿಗೆ ಮೂರು ದಿನದ ಕೂಳು ಹಾಕಿದರೆ ಬಂದು ಕೂಳು ತಿನ್ನಲು ಕಾಗೆಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಕಾಗೆಗಳ ಬದಲಿಗೆ ಉಣ್ಣೆಗೊರವಗಳು ಕೂಳು ಮುಟ್ಟಿದರೆ ತೃಪ್ತಿಪಟ್ಟುಕೊಳ್ಳಬೇಕಾದ ಸ್ಥಿತಿ ಬಂದಿದೆ. ಅಷ್ಟೇ ಅಲ್ಲ ರಣಹದ್ದುಗಳು ಕಣ್ಮರೆಯಾದದ್ದರಿಂದ ಪಾರ್ಸಿಗಳು ತಮ್ಮ ಶವಸಂಸ್ಕಾರ ಪದ್ಧತಿಯನ್ನೇ ಬದಲಾಯಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ.

ಇದನ್ನೂ ಓದಿ | ಮಾರ್ಚ್ 20 ಗುಬ್ಬಿ ದಿನ ವಿಶೇಷ |ಚೀಂವ್ ಚೀಂವ್ ಗುಬ್ಬಚ್ಚಿಯ ನೆನೆಯುವ ಸಮಯ

ಶವಸಂಸ್ಕಾರದ ಬಗ್ಗೆ ಅವರಲ್ಲಿ ಗಂಭೀರ ಚಿಂತನೆ ನಡೆದಿದೆ. ಹೀಗೆ ನಾವು ಬದುಕುತ್ತಿರುವ ಈ ಕಾಲಘಟ್ಟ ತುಂಬ ವಿನಾಶಕಾರಿಯಾದುದು. ನೀರು ಗಾಳಿ ಆಹಾರ ಮಣ್ಣು ಎಲ್ಲದರಲ್ಲೂ ರಾಸಾಯನಿಕ ತುಂಬಿದ್ದರಿಂದಲೋ ಏನೋ ನಮ್ಮ ಮೈಯ್ಯಿಗೂ ಆ ವಿಷ ಸೇರಿ ಮನಸ್ಸೂ ವಿಷವೇ ಆಗಿ ಎಲ್ಲರೂ ವಿಷಕಂಠರಲ್ಲ, ವಿಷಘಾತುಕರಾಗಿದ್ದೇವೆ.

ದೇವರು ಧರ್ಮದಾಚೆಗೆ ನಾವು ಬದುಕಲು ಬೇಕಾದ ನಮ್ಮ ಹೊರತೂ ಇರುವ ಅಗಾಧ ಜೀವಜಗತ್ತನ್ನು ಇನ್ನಿಲ್ಲದಂತೆ ಅಲಕ್ಷಿಸಿದ್ದೇವೆ. ಹಕ್ಕಿಗಳಿಗಾಗಿ ಮನೆಯ ಮಹಡಿಯ ಮೇಲೆ ಒಂದಿಷ್ಟು ನೀರು ಒಂದಷ್ಟು ಕಾಳುಕಡಿ ಇಡಲಾರದ ಮಟ್ಟಿಗೆ, ಮನೆಯ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡಿಕೊಳ್ಳಲಾರದ ಮಟ್ಟಿಗೆ ಬೇಜವಾಬ್ದಾರಿಗಳಾಗಿದ್ದೇವೆ.

ನಾವು ತಲೆ ಎತ್ತಿ ನೋಡಿದರೆ ಆಕಾಶದ ನೇಲಿಯಲ್ಲಿ ಅರಳೆ ತುಪ್ಪಳದಂತಹಾ ಬಿಳಿಮೋಡದ ತಳದಲ್ಲಿ ಗಿರಕಿಹೊಡೆಯುತ್ತಿದ್ದ ರಣಹದ್ದು ಒಂದಗುಳ ಕಂಡರೆ ತನ್ನ ಬಳಗವನೆಲ್ಲವ ಕರೆದು ಶೂನ್ಯಸಂಪಾದನೆಯ ಪಾಠ ಹೇಳಿ ಸಮಾನವಾಗಿ ಹಂಚಿಕೊಂಡು ತಿನ್ನಿರಿ ಎಂಬ ಸಮತಾವಾದದ ಪಾಠ ಒಗ್ಗಟ್ಟಿ‌ನ ಪಾಠ ತನ್ನವರು ನೊಂದರೆ ಸತ್ತರೆ ನಾವು ಹೇಗೆ ಮಿಡಿಯಬೇಕೆಂಬ ಸಂಬಂಧದ ಪಾಠ ಹೇಳಿಕೊಡುತ್ತಿದ್ದ ಕಾಗೆಗಳು ಮರೆಯಾಗುತ್ತಿವೆ.

ನಮ್ಮನ್ನು ನಂಬುತ್ತಾ ನಮ್ಮ ಮನೆಯ ಮಕ್ಕಳೇ ಆಗಿ ನಮ್ಮೊಡನೆ ಬಾಳುತ್ತಿದ್ದ ಗುಬಚ್ಚಿಗಳ ಬದುಕು ಅಪ್ಪಚ್ಚಿಯಾಗಿದೆ. ಇನ್ನೇನುಳಿಯಲಿದೆ ಈ ಜಗತ್ತಿನಲ್ಲಿ. ಮನುಷ್ಯತ್ವವೇ ಮರೆಯಾಗುತ್ತಿರುವಾಗ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.

ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.

ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.

ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.

ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.

ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending