Connect with us

ದಿನದ ಸುದ್ದಿ

ಜ.30 ರಂದು ದಾವಣಗೆರೆ ವಿವಿ ಯಲ್ಲಿ ರಂಗ ವಿಮರ್ಶಾ ಕಮ್ಮಟ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಪತ್ರಕರ್ತರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಹಾಗೂ ಆಸಕ್ತ ಬರಹಗಾರರಿಗಾಗಿ ರಂಗ ವಿಮರ್ಶಾ ಕಮ್ಮಟವನ್ನು ಜ.30 ರಂದು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ದಾವಣಗೆರೆ ವಿಶ್ವವಿದ್ಯಾನಿಲಯ, ಶಿವಗಂಗೋತ್ರಿ, ಜಿಲ್ಲಾ ವರದಿಗಾರರ ಕೂಟ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ಜ.30 ರ ಬೆಳಿಗ್ಗೆ 10.30 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ.ಬಿ.ಎ ಸಭಾಂಗಣದಲ್ಲಿ ರಂಗ ವಿಮರ್ಶಾ ಕಮ್ಮಟವನ್ನು ಏರ್ಪಡಿಸಲಾಗಿದೆ.

ಬೆಳಿಗ್ಗೆ 10.30 ಕ್ಕೆ ಒಂದನೇ ಗೋಷ್ಟಿಯಲ್ಲಿ ಲಿಖಿತ ಪಠ್ಯ-ರಂಗ ಪಠ್ಯ ಮತ್ತು ವಿಮರ್ಶೆಯ ಹಾದಿ ವಿಷಯ ಕುರಿತು ರಂಗತಜ್ಞರು, ಸಿನೆಮಾ ನಿರ್ದೇಶಕರು ಹಾಗೂ ರಂಗ ವಿಮರ್ಶಾ ಕಮ್ಮಟದ ನಿರ್ದೇಶಕರಾದ ಬಿ.ಸುರೇಶ್ ವಿಷಯ ಮಂಡನೆ ಮಾಡುವರು. ಹಿರಿಯ ಸಾಹಿತಿಗಳು ಮತ್ತು ದಾವಣಗೆರೆ ನಗರವಾಣಿ ಪತ್ರಿಕೆಯ ಸಹ ಸಂಪಾದಕರಾದ ಬಿ.ಎನ್.ಮಲ್ಲೇಶ್, ಟಿವಿ9 ಜಿಲ್ಲಾ ವರದಿಗಾರರಾದ ಬಸವರಾಜ ದೊಡ್ಡಮನಿ, ಸಂಯುಕ್ತ ಕರ್ನಾಟಕ ದಾವಣಗೆರೆ ಬ್ಯೂರೋ ಮುಖ್ಯಸ್ಥರಾದ ಮಂಜುನಾಥ ಗೌರಕ್ಕಳವರ್, ವಿಜಯ ಕರ್ನಾಟಕ ಉಪ ಸಂಪಾದಕ ಯಳನಾಡು ಮಂಜುನಾಥ, ರಂಗವೈಭವದ ಉಪಸಂಪಾದಕ ಬಸವರಾಜ್ ಐರಣಿ, ಆ.ವಿ.ಎವಿಕೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅನುರಾಧ ಬಕ್ಕಪ್ಪ ಸಂವಾದದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12.30 ಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಎಸ್.ವಿ.ಹಲಸೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಭೀಮಸೇನ.ಆರ್ ಅಧ್ಯಕ್ಷತೆ ವಹಿಸುವರು. ರಂಗತಜ್ಞರು ಹಾಗೂ ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ಜಿ.ಎಂ.ಆರ್.ಆರಾಧ್ಯ, ವಾರ್ತಾಧಿಕಾರಿ ಅಶೋಕಕುಮಾರ್.ಡಿ, ರಂಗಸಮಾಜದ ಸದಸ್ಯರಾದ ಪ್ರಭುದೇವ ಕಪ್ಪಗಲ್ಲು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.30 ಕ್ಕೆ ಎರಡನೇ ಗೋಷ್ಟಿಯಲ್ಲಿ ನೀನಾಸಮ್ ತಿರುಗಾಟ 2018 ಇವರಿಂದ ಆಶ್ಚರ್ಯ ಚೂಡಾಮಣಿ ನಾಟಕದ ವಿಡಿಯೋ ಪ್ರದರ್ಶನವಿರುತ್ತದೆ. ಹಾಗೂ ಪ್ರದರ್ಶನದ ದೃಶ್ಯ ಭಾಷೆ ಮತ್ತು ಮೌಲ್ಯ ನಿಗದಿಪಡಿಸುವ ಬಗೆ ಕುರಿತು ರಂಗತಜ್ಞರು, ಸಿನೆಮಾ ನಿರ್ದೇಶಕರು ಹಾಗೂ ರಂಗ ವಿಮರ್ಶಾ ಕಮ್ಮಟದ ನಿರ್ದೇಶಕರಾದ ಬಿ.ಸುರೇಶ್ ವಿಷಯ ಮಂಡನೆ ಮಾಡುವರು. ಪ್ರಜಾವಾಣಿ ಬ್ಯೂರೋ ಮುಖ್ಯಸ್ಥ ವಿಶಾಖ.ಎನ್, , ಕನ್ನಡಪ್ರಭ ಪತ್ರಿಕೆಯ ಜಿಲ್ಲಾ ಪ್ರಧಾನ ವರದಿಗಾರ ನಾಗರಾಜ್ ಬಡದಾಳ್, ಏಷಿಯಾನೆಟ್ ಸುರ್ವಣ 24*7 ಜಿಲ್ಲಾ ವರದಿಗಾರ ಡಾ.ವರದರಾಜ್, ದಾವಿವಿ ಸ್ನಾತಕೋತ್ತರ ಕೇಂದ್ರದ ಸಂಯೋಜನಾಧಿಕಾರಿ ವಿಶ್ವನಾಥ್.ಹೆಚ್, ಕಥೆಗಾರ್ತಿ ಬಿ.ಟಿ.ಜಾಹ್ನವಿ, ರಂಗಕರ್ಮಿ ಸಿದ್ದರಾಜ.ಎಸ್.ಎಸ್ ಸಂವಾದದಲ್ಲಿ ಪಾಲ್ಗೊಳ್ಳುವರು.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭವಿದ್ದು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಬಸವರಾಜ ಬಣಕಾರ ಸಮಾರೋಪ ನುಡಿ ನುಡಿವರು. ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷರಾದ ಪ್ರೊ.ಭೀಮಸೇನ.ಆರ್ ಅಧ್ಯಕ್ಷತೆ ವಹಿಸುವರು. ಲೇಖಕರು-ಹಿರಿಯ ಪತ್ರಕರ್ತರಾದ ಬಾ.ಮ.ಬಸವರಾಜಯ್ಯ ಪ್ರಮಾಣ ಪತ್ರ ವಿತರಣೆ ಮಾಡುವರು. ದಾವಣಗೆರೆ ವಿವಿ ಸಿಂಡಿಕೇಟ್ ಸದಸ್ಯರಾದ ವಿಜಯಲಕ್ಷ್ಮಿ ಹಿರೇಮಠ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ವೀರಪ್ಪ ಎಂ.ಭಾವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending