ದಿನದ ಸುದ್ದಿ
ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2021/02/ptilakshmidevi_suddidina.jpg&description=ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2021/02/ptilakshmidevi_suddidina.jpg&description=ಡಿಜಿಟಲ್ ಮಾಧ್ಯಮದಿಂದ ಲಾಭದಷ್ಟೇ ಅಪಾಯವೂ ಇದೆ : ಪಿಟಿಐ ಸುದ್ದಿ ಸಂಸ್ಥೆ ಪ್ರತಿನಿಧಿ ಎ. ಲಕ್ಷ್ಮೀದೇವಿ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದಲ್ಲಿ ಪಿಟಿಐ ಸುದ್ದಿಸಂಸ್ಥೆಯ ನವದೆಹಲಿಯ ವಿಶೇಷ ಪ್ರತಿನಿಧಿ ಎ. ಲಕ್ಷ್ಮೀದೇವಿ ಮಾತಾನಾಡಿದರು.
ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಗುರುವಾರ ಏರ್ಪಡಿಸಿದ್ದ ಮಾಧ್ಯಮ ಮಂಥನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚು ಅವಕಾಶಗಳಿವೆ. ತಮ್ಮ ಸಮಸ್ಯೆಗಳನ್ನೇ ಸವಾಲು ಎಂದುಕೊಂಡು ವೃತ್ತಿಯಲ್ಲಿ ಬೆಳೆಯಬೇಕು.
ಲಭ್ಯವಿರುವ ಸಂಪನ್ಮೂಲಗಳೇ ವೃತ್ತಿಯಲ್ಲಿ ಬೆಳೆಯಲು ದಾರಿಯಾಗಬೇಕು ಎಂದು ನುಡಿದರು. ಪತ್ರಕರ್ತರಿಗೆ ಭಾಷೆ ಮುಖ್ಯ. ಯಾವ ಪದವನ್ನು ಹೇಗೆ ಬಳಸಿದರೆ ಯಾವ ಅರ್ಥ ಕೊಡುತ್ತದೆ ಎಂಬುದರ ಅರಿವು ಇರಬೇಕು. ಅಲ್ಲದೆ ಮೌಲ್ಯಯುತವಾದ ವೃತ್ತಿ ವ್ಯಕ್ತಿತ್ವಕ್ಕೆ ಗೌರವ ತಂದುಕೊಂಡುತ್ತದೆ ಎಂದು ತಿಳಿಸಿದರು.
ಪೈಪೋಟಿ ಮಾಧ್ಯಮ ಕ್ಷೇತ್ರಕ್ಕೂ ಹೊರತಾಗಿಲ್ಲ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಸ್ತಿತ್ವ ಕಂಡುಕೊಳ್ಳಲು ವೃತ್ತಿಪರ ಕೌಶಲ, ಅಗತ್ಯವಿರುವ ಜ್ಞಾನದ ಅರಿವು ಅತ್ಯವಶ್ಯ ಎಂದು ಪಿಟಿಐ ಸುದ್ದಿ ಸಂಸ್ಥೆಯ ನವದೆಹಲಿಯ ವಿಶೇಷ ವರದಿಗಾರ್ತಿ ಎ. ಲಕ್ಷ್ಮೀದೇವಿ ಅಭಿಪ್ರಾಯಪಟ್ಟರು.
ಸ್ಪರ್ಧಾತ್ಮಕ ಜಗತ್ತಿನ ಎಲ್ಲ ಕ್ಷೇತ್ರಗಳಲ್ಲೂ ಪೈಪೋಟಿ ಇದ್ದೇ ಇದೆ. ಅದರ ನಡುವೆ ನಮ್ಮನ್ನು ಕಾಪಾಡುವುದು ನಮ್ಮಲ್ಲಿರುವ ವೃತ್ತಿಪರತೆ, ತಾಂತ್ರಿಕ ಮತ್ತು ವೃತ್ತಿ ಕೌಶಲಗಳು. ಪತ್ರಕರ್ತರಿಗೆ ಓದುವ, ಬರೆಯುವ ಮತ್ತು ನಿರರ್ಗಳವಾಗಿ ಮಾತನಾಡುವ ಕೌಶಲ ಅನಿವಾರ್ಯ. ವಿಷಯದ ಆಳವಾದ ಅಧ್ಯಯನ, ಕಲಿಯುವ ಕುತೂಹಲ ಮತ್ತು ಬರೆಯುವ ಶೈಲಿಗಳು ಮುಖ್ಯವಾಗುತ್ತವೆ ಎಂದು ಹೇಳಿದರು.
ಇದನ್ನೂ ಓದಿ | ಜನರಿಗೆ ತಮ್ಮ ಕೆಲಸಗಳಾಗುವ ಭರವಸೆ
15 ದಿನಕ್ಕೊಮ್ಮೆ ಜನಸ್ಪಂದನ : ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ | ಜನಸ್ಪಂದನದ ಕಂಪ್ಲೀಟ್ ಡೀಟೆಲ್ಸ್ ; ಮಿಸ್ ಮಾಡ್ದೆ ಓದಿ
ಪತ್ರಕರ್ತರಿಗೆ ಪ್ರಸ್ತುತ ಸಂದರ್ಭದಲ್ಲಿ ವೃತ್ತಿಯಲ್ಲಿ ಹಲವಾರು ಸವಾಲುಗಳಿವೆ. ಅವುಗಳನ್ನು ಹಿಮ್ಮೆಟ್ಟಿಸಿ, ತಮ್ಮತನ ಗುರುತಿಸಿಕೊಳ್ಳಲೂ ಅವಕಾಶಗಳಿವೆ. ಪತ್ರಕರ್ತರಿಗೆ ಭವಿಷ್ಯದಲ್ಲಿ ಯಾವುದೇ ಮಾಧ್ಯಮ ಅನಿವಾರ್ಯವಲ್ಲ ಎಂಬುದನ್ನು ಅರ್ಥಮಾಡಿಕೊಂಡು ಪರ್ಯಾಯ ಮಾರ್ಗಗಳತ್ತ ಯೋಚನೆ ಮಾಡಬೇಕು. ಇಂಟರ್ನೆಟ್ ಇಲ್ಲದ ಸನ್ನಿವೇಶದಲ್ಲೂ ಕೆಲಸ ಮಾಡುವ, ನೆಲೆ ಕಂಡುಕೊಳ್ಳುವ ಮಾರ್ಗಗಳನ್ನು ಅರಿಯುವುದು ಅತ್ಯವಶ್ಯ ಎಂದರು.
ಪತ್ರಿಕಾ ವೃತ್ತಿಯಲ್ಲಿ ಮೌಲ್ಯಗಳಿಗೆ ಹೆಚ್ಚು ಮನ್ನಣೆ ಇದೆ. ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ಅರಿತು ಸುದ್ದಿ ಮಾಡುವ ವಿವೇಚನೆಯನ್ನು ಬೆಳೆಸಿಕೊಳ್ಳಬೇಕು. ಮನಸ್ಸಿಗೆ ತೋಚಿದ್ದನ್ನು ಬರೆಯುವ ಪ್ರವೃತ್ತಿಯಿಂದ ಪತ್ರಿಕೋದ್ಯಮಕ್ಕೆ ಕಳಂಕ ಬರುತ್ತಿದೆ. ಮುಂದಿನ ಪೀಳಿಗೆಗೆ ವೃತ್ತಿಯ ಒಳ್ಳೆಯ ಮೌಲ್ಯಗಳನ್ನು ತಿಳಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
‘ಪ್ರಸ್ತುತ ಜಾಗತಿಕ ವಿದ್ಯಮಾನಗಳನ್ನು ಗಮನಿಸಿದರೆ ಯಾವುದೇ ಮಾಧ್ಯಮವೂ ಜನಪರವಾಗಿಲ್ಲ. ಡಿಜಿಟಲ್ ಮಾಧ್ಯಮ ಸದ್ಯ ಹೆಚ್ಚು ಪ್ರಚಲಿತದಲ್ಲಿದೆ. ಅದರಿಂದ ಆಗುವ ಲಾಭದಷ್ಟೇ ಅಪಾಯವೂ ಇದೆ ಎಂಬುದನ್ನು ಅರಿಯಬೇಕು’ ಎಂದರು.
‘ತಂತ್ರಜ್ಞಾನದ ದೈತ್ಯ ಶಕ್ತಿಗಳು ವೈಯಕ್ತಿಕ ದಾಖಲೆಗಳನ್ನು ಸಂಗ್ರಹಿಸಿ ಇಟ್ಟುಕೊಂಡಿದ್ದು, ಅವು ಯಾವ ರೀತಿಯ ಸವಾಲನ್ನು ಸೃಷ್ಟಿಸುತ್ತವೆ. ಅವೂ ಸಹ ಮತ್ತೊಂದು ರೀತಿಯ ಈಸ್ಟ್ ಇಂಡಿಯ ಕಂಪನಿ ರೀತಿಯಲ್ಲಿ ದೇಶವನ್ನು ಆಳಬಲ್ಲವು ಎಂಬುದನ್ನು ಆಲೋಚಿಸಬೇಕು. ಇಲ್ಲವಾದರೆ ಪ್ರತಿಯೊಬ್ಬರೂ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ’ ಎಂದು ಆತಂಕ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಕಲಿಕೆಗೆ ಆಸಕ್ತಿವಹಿಸಬೇಕು. ಉದ್ಯೋಗಕ್ಕೆ ಅಗತ್ಯವಿರುವ, ಭವಿಷ್ಯಕ್ಕೆ ದಾರಿಯಾಗುವ ಮಾರ್ಗವನ್ನು ಆಯ್ಕೆ ಮಾಡಿಕೊಂಡಾಗ ಅದಕ್ಕೆ ಪೂರಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಭಾಷಾ ಜ್ಞಾನ, ಬರವಣಿಗೆ ಜ್ಞಾನಕ್ಕೆ ಗಮನ ನೀಡಬೇಕು ಎಂದು ತಿಳಿಸಿದರು.
ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ, ಭಾಷೆ, ಅಧ್ಯಯನಶೀಲತೆ ಮತ್ತು ವೃತ್ತಿಪರತೆ ಯಾವುದೇ ಕೆಲಸಕ್ಕೂ ಮುಖ್ಯವಾಗಿ ಬೇಕು. ಇದಕ್ಕೆ ಪತ್ರಿಕೋದ್ಯಮ ಕ್ಷೇತ್ರ ಹೊರತಾಗಿಲ್ಲ. ಓದುವ, ಬರೆಯುವ ಹವ್ಯಾಸ ರೂಢಿಸಿಕೊಂಡು, ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಂಡು ವೃತ್ತಿಯಲ್ಲಿ ಬೆಳೆಯಬೇಕು ಎಂದು ಸಲಹೆ ನೀಡಿದರು.
ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ ಅವರು ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಹಿಂಜರಿಕೆಯ ಜಡತ್ವ ಸ್ವಭಾವವನ್ನು ಬಿಟ್ಟು ವೃತ್ತಿಯಲ್ಲಿ ಭದ್ರಗೊಳ್ಳಲು ಮುಂದಾಗಬೇಕು ಎಂದು ಹೇಳಿದರು. ಶಿಕ್ಷಣ ನಿಕಾಯದ ಡೀನ್ ಡಾ. ಕೆ.ವೆಂಕಟೇಶ್ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕರಾದ ಎಂ. ವಿನಯ್, ಡಾ. ಚಂದ್ರಕಲಾ, ವೆಂಕಟೇಶ್, ಲಾವಣ್ಯ, ಗಂಗಾಧರ್ ಡಾ. ವೆಂಕಟೇಶ್, ಕುಲಪತಿ ಪ್ರೊ. ಶರಣಪ್ಪ ವಿ ಹಲಸೆ, ಕುಲಸಚಿವೆ ಪ್ರೊ. ಗಾಯತ್ರಿ ದೇವರಾಜ್, ಸಿಂಡಿಕೇಟ್ ಸದಸ್ಯೆ ವಿಜಯಲಕ್ಷ್ಮಿ ಹಿರೇಮಠ, ಪತ್ರಿಕೋದ್ಯಮ ವಿಭಾಗದ ಅಧ್ಯಕ್ಷ ಶಿವಕುಮಾರ ಕಣಸೋಗಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ22 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ22 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

