ದಿನದ ಸುದ್ದಿ
ಮಂಡ್ಯ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ
ಸುದ್ದಿದಿನ,ಮಂಡ್ಯ : ವಿಶ್ವ ವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಮಂಡ್ಯ ಜಿಲ್ಲೆಯ ಕಲೆಗೆ, ಸಂಸ್ಕøತಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಿಂಬಿಸುವ ಸ್ತಬ್ಧಚಿತ್ರಕ್ಕೆ ತೃತೀಯ ಬಹುಮಾನ ಲಭಿಸಿದೆ.
ಮಂಡ್ಯ ಜಿಲ್ಲೆಯ ಪ್ರಮುಖ ಆಕರ್ಷಣೆ 1932ರಲ್ಲಿ ನಿರ್ಮಾಣವಾದ ಕೃಷ್ಣರಾಜ ಸಾಗರ ಅಣೆಕಟ್ಟು ಸೇರಿದಂತೆ 1940ರಲ್ಲಿ 40 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾದ ಆರು ಚಿಕ್ಕ ಚಿಕ್ಕ ದ್ವೀಪ ಸಮೂಹ ಒಳಗೊಂಡತಹ ಕರ್ನಾಟಕ ರಾಜ್ಯದ ಅತಿದೊಡ್ಡ ರಂಗನತಿಟ್ಟು ಪಕ್ಷಿಧಾಮ ಹಾಗೂ ಮಂಡ್ಯ ಜಿಲ್ಲೆಯ ಕಲೆಗೆ, ಸಂಸ್ಕøತಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಯನ್ನು ಸ್ತಬ್ಧಚಿತ್ರದಲ್ಲಿ ಚಿತ್ರಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401