Connect with us

ದಿನದ ಸುದ್ದಿ

ಇಸ್ರೇಲಿನ ಸಂಪಾದಕರು ಮತ್ತು ಭಾರತದ ಸಂಪಾದಕರ ನಡುವಿನ ಐತಿಹಾಸಿಕ ಸಂವಾದವಿದು..!

Published

on

ಮೇ 12, 2021 ರಂದು ಇಸ್ರೇಲಿ ಯುದ್ಧ ವಿಮಾನಗಳು ಪ್ಯಾಲೇಸ್ಟಿನಿಯನ್ ಸಮುದಾಯಗಳ ಮೇಲೆ ಬಾಂಬ್ ದಾಳಿ ನಡೆಸುತ್ತಿದ್ದಂತೆ ಗಾಜಾ ನಗರದಲ್ಲಿ ಕಟ್ಟಡಗಳು ಸುಟ್ಟು ಉರಿಯುತ್ತಿರುವದು. ಚಿತ್ರ | Mahmud Hams/AFP via Getty Images


  • ಪ್ರಧಾನಿಯೇ ಒಂದು ಸಮುದಾಯವನ್ನು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಜನ ಸಮುದಾಯದ ಜವಾಬ್ದಾರಿಗಳು ಏನು? ಮುಸ್ಲೀಮರ ಮೇಲಿನ ದ್ವೇಷಕ್ಕಾಗಿ ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎನ್ನುವವರು ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆಯ ಸಂಪಾಕೀಯವನ್ನು ಓದಬೇಕು.

  • ಸಂಪಾದಕೀಯ : ಅಲುಫ್ ಬೆನ್, ಪ್ರಧಾನ ಸಂಪಾಕರು, HAARETZ, ಅನುವಾದ : ನವೀನ್ ಸೂರಿಂಜೆ

ಕಳೆದ ಹಲವು ದಿನಗಳಿಂದ ಇಸ್ರೇಲ್ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ.

ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ, ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು.

ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ಧ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ಧ ಕಾರ್ಯಕ್ರಮಗಳೂ ಜಾರಿಯಲ್ಲಿದೆ.

ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ಧ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.

ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.

ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.

ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.

ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ.

ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.

ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ‌.


  • ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

Published

on

ಪಾಕ್‌ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ

ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.

ಹೈಲೈಟ್ಸ್

  • ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಶಂಕಿತ ಡ್ರೋನ್ ಹಾರಾಟ
  • 🇵🇰 ಡ್ರೋನ್ ಪಾಕಿಸ್ತಾನದ ದಿಕ್ಕಿಗೆ ವಾಪಸ್ ತೆರಳಿದ ಶಂಕೆ
  • ಡ್ರೋನ್‌ನಿಂದ ವಸ್ತುಗಳನ್ನು ಕೆಳಗೆ ಹಾಕಲಾಗಿದೆಯೇ ಎಂದು ಶೋಧ
  • ಉಧಂಪುರ, ಕಥುವಾ, ರಾಜೌರಿಯಲ್ಲಿ ಜಂಟಿ ಸರ್ಚ್ ಆಪರೇಷನ್
  • ಶಸ್ತ್ರಸಜ್ಜಿತ ವ್ಯಕ್ತಿಗಳ ಮಾಹಿತಿ ಹಿನ್ನೆಲೆ ರಾಜೌರಿಯಲ್ಲೂ ಹೈ ಅಲರ್ಟ್

http://Visit : www.suddidina.com

ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್

ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.

3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ

ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.

ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.

ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ

ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಯಲ್ಲಿ ಹೆಚ್ಚಿದ ಕಣ್ಗಾವಲು

ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

Continue Reading

ದಿನದ ಸುದ್ದಿ

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್

Published

on

medical-college-hostel-canteen-food-safety-inspection-karnataka
ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆಹಾರ ಸುರಕ್ಷತಾ ಇಲಾಖೆ: ಅವಧಿ ಮೀರಿದ ರವೆ, ಹಾಲು ಜಪ್ತಿ

ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಹಾರ ಸುರಕ್ಷತಾ ಇಲಾಖೆ ವಿಶೇಷ ಪರಿಶೀಲನೆ ನಡೆಸಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 34 ಕ್ಯಾಂಟೀನ್‌ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಆಹಾರ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ 5 ಕ್ಯಾಂಟೀನ್‌ಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಹೈಲೈಟ್ಸ್

  • ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ 34 ಹಾಸ್ಟೆಲ್ ಕ್ಯಾಂಟೀನ್‌ಗಳ ಪರಿಶೀಲನೆ
  • ಲೋಪದೋಷ ಕಂಡುಬಂದ 5 ಕ್ಯಾಂಟೀನ್‌ಗಳಿಗೆ ನೋಟಿಸ್
  • ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್ ನಿಯಮ ಉಲ್ಲಂಘನೆ
  • 07 ಕೆ.ಜಿ. ಅವಧಿ ಮೀರಿದ ರವೆ, 08 ಲೀಟರ್ ಹಾಲು ಜಪ್ತಿ
  • ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ಧತೆ

http://Visit : www.suddidina.com

ಕ್ಯಾಂಟೀನ್‌ಗಳಲ್ಲಿ ಆಹಾರ ಸುರಕ್ಷತೆಗೆ ಒತ್ತು

ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್‌ಗಳಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಕ್ಯಾಂಟೀನ್ ಆಹಾರವನ್ನೇ ಅವಲಂಬಿಸಿರುತ್ತಾರೆ. ಹೀಗಾಗಿ ಆಹಾರದ ಗುಣಮಟ್ಟ, ಅಡುಗೆಮನೆಯ ಸ್ವಚ್ಛತೆ, ಆಹಾರ ಪದಾರ್ಥಗಳ ಸಂಗ್ರಹಣೆ, ಲೇಬಲಿಂಗ್ ಹಾಗೂ ಅವಧಿ ಪರಿಶೀಲನೆ ಅತ್ಯಂತ ಮಹತ್ವದ್ದಾಗಿದೆ.

ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ವಿವಿಧ ವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್‌ಗಳನ್ನು ಪರಿಶೀಲಿಸಿ, ಆಹಾರ ತಯಾರಿಕೆಯಿಂದ ಹಿಡಿದು ಪದಾರ್ಥಗಳ ಸಂಗ್ರಹಣೆವರೆಗೆ ಹಲವು ಅಂಶಗಳನ್ನು ಪರಿಶೀಲಿಸಿದ್ದಾರೆ. ನಿಯಮ ಪಾಲನೆಯಲ್ಲಿ ವ್ಯತ್ಯಾಸ ಕಂಡುಬಂದ ಕ್ಯಾಂಟೀನ್‌ಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.

ಅವಧಿ ಮೀರಿದ ರವೆ, ಹಾಲು ಪತ್ತೆ

ಪರಿಶೀಲನೆ ವೇಳೆ ಒಂದು ಕ್ಯಾಂಟೀನ್‌ನಲ್ಲಿ ಲೇಬಲಿಂಗ್‌ಗೆ ಸಂಬಂಧಿಸಿದ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಇದೇ ವೇಳೆ ಅಡುಗೆ ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ 07 ಕೆ.ಜಿ. ಅವಧಿ ಮೀರಿದ ರವೆ ಹಾಗೂ 08 ಲೀಟರ್ ಅವಧಿ ಮೀರಿದ ಹಾಲು ಪತ್ತೆಯಾಗಿದೆ.

ವಿದ್ಯಾರ್ಥಿಗಳ ಸೇವನೆಗೆ ಬಳಸುವ ಆಹಾರ ಪದಾರ್ಥಗಳು ಅವಧಿ ಮೀರಿದ ಬಳಿಕವೂ ಅಡುಗೆಮನೆಯಲ್ಲಿ ಸಂಗ್ರಹಿಸಿರುವುದು ಗಂಭೀರ ಲೋಪವಾಗಿದೆ. ಅಧಿಕಾರಿಗಳು ಈ ಪದಾರ್ಥಗಳನ್ನು ತಕ್ಷಣ ಜಪ್ತಿ ಮಾಡಿಕೊಂಡಿದ್ದು, ಸಂಬಂಧಿತ ಕ್ಯಾಂಟೀನ್ ವಿರುದ್ಧ ಮುಂದಿನ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ

ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವ ಸಂಬಂಧಿತ ಆಹಾರ ಉದ್ದಿಮೆದಾರರ ವಿರುದ್ಧ ಅನ್ವಯವಾಗುವ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಮಾನದಂಡಗಳ ಕಾಯ್ದೆ ಹಾಗೂ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ.

ಈ ಪ್ರಕರಣಗಳನ್ನು ಸಕ್ಷಮ ಪ್ರಾಧಿಕಾರವಾದ ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಆಯುಕ್ತ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯಕ್ಕೆ ಆದ್ಯತೆ

ವೈದ್ಯಕೀಯ ವಿದ್ಯಾರ್ಥಿಗಳು ಆರೋಗ್ಯ ಕ್ಷೇತ್ರದ ಭವಿಷ್ಯದ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಅವರ ಹಾಸ್ಟೆಲ್ ಆಹಾರದ ಗುಣಮಟ್ಟದ ಬಗ್ಗೆ ಇಲಾಖೆ ಹೆಚ್ಚಿನ ನಿಗಾ ವಹಿಸಿರುವುದು ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲೂ ಇಂತಹ ಪರಿಶೀಲನೆಗಳು ಮುಂದುವರಿಯುವ ಸಾಧ್ಯತೆ ಇದ್ದು, ಕ್ಯಾಂಟೀನ್ ನಿರ್ವಹಣೆ ಮಾಡುವವರು ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ.

Continue Reading

ದಿನದ ಸುದ್ದಿ

ಪ್ರಮುಖ 8 ಕ್ಲಬ್‌ಗಳ ಮೇಲೆ ದಿಢೀರ್ ದಾಳಿ; ನಿಯಮ ಉಲ್ಲಂಘನೆಗೆ ನೋಟಿಸ್

Published

on

bengaluru-clubs-food-safety-raid-cockroaches-expired-food-found
ಬೆಂಗಳೂರು ಕ್ಲಬ್‌ಗಳಲ್ಲಿ ಆಹಾರ ಸುರಕ್ಷತೆ ಶಾಕ್: ಜಿರಳೆ, ಹುಳು, ಅವಧಿ ಮೀರಿದ ಆಹಾರ ಪತ್ತೆ!

ಸುದ್ದಿದಿನ,ಬೆಂಗಳೂರು: ನಗರದ ಪ್ರತಿಷ್ಠಿತ ಕ್ಲಬ್‌ಗಳಲ್ಲಿಯೂ ಆಹಾರ ಸುರಕ್ಷತೆ ಮತ್ತು ನೈರ್ಮಲ್ಯ ನಿಯಮಗಳ ಉಲ್ಲಂಘನೆ ಕಂಡುಬಂದಿರುವುದು ಆತಂಕ ಮೂಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ 8 ಕ್ಲಬ್‌ಗಳ ಮೇಲೆ ಮಂಗಳವಾರ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿವೆ. ಆಹಾರ ಸಂಗ್ರಹಣಾ ಸ್ಥಳದಲ್ಲಿ ಅಶುಚಿತ್ವ, ಜಿರಳೆ ಹಾಗೂ ಇತರೆ ಕೀಟಗಳ ಹಾವಳಿ, ಅಸಮರ್ಪಕ ಆಹಾರ ಸಂಗ್ರಹಣೆ ಮತ್ತು ಅವಧಿ ಮೀರಿದ ಪದಾರ್ಥಗಳು ಪತ್ತೆಯಾಗಿವೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮಗಳು-2011ರ ಅನ್ವಯ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿತ್ತು. ಬೌರಿಂಗ್ ಕ್ಲಬ್, ಸೆಂಚುರಿ ಕ್ಲಬ್, ಕೆಎಸ್‌ಸಿಎ ಕ್ಲಬ್, ಕ್ಯಾಥೋಲಿಕ್ ಕ್ಲಬ್, ಟೆನ್ನಿಸ್ ಕ್ಲಬ್, ವಿಜಯನಗರ ಕ್ಲಬ್, ಮಹಾಲಕ್ಷ್ಮಿ ಲೇಔಟ್ ಕ್ಲಬ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.

http://Visit : www.suddidina.com

ಬೇಳೆಕಾಳಿನಲ್ಲಿ ಹುಳು, ದಾಸ್ತಾನು ಕೇಂದ್ರದಲ್ಲಿ ಜಿರಳೆ

ಬೌರಿಂಗ್ ಕ್ಲಬ್‌ನಲ್ಲಿ ಬೇಳೆಕಾಳುಗಳಲ್ಲಿ ಹುಳುಗಳು ಕಂಡುಬಂದಿದ್ದು, ದಾಸ್ತಾನು ಕೇಂದ್ರದಲ್ಲಿ ಅಶುಚಿತ್ವ ಹಾಗೂ ಜಿರಳೆಗಳಿರುವುದು ಪತ್ತೆಯಾಗಿದೆ. ಸೆಂಚುರಿ ಕ್ಲಬ್‌ನಲ್ಲಿಯೂ ಕೀಟಗಳ ಹಾವಳಿ ಮತ್ತು ನೈರ್ಮಲ್ಯದ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಕ್ಲಬ್‌ಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.

ಕೆಎಸ್‌ಸಿಎ ಕ್ಲಬ್‌ನಲ್ಲೂ ಹಲವು ಲೋಪ

ಕೆಎಸ್‌ಸಿಎ ಕ್ಲಬ್‌ನಲ್ಲಿ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆ, ಆಹಾರ ಪೊಟ್ಟಣಗಳ ಲೇಬಲಿಂಗ್ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿವೆ. ಅಸಮರ್ಪಕ ಒಳಚರಂಡಿ ವ್ಯವಸ್ಥೆ, ಶೀತಲೀಕರಣ ಘಟಕದಲ್ಲಿನ ಅನೈರ್ಮಲ್ಯ ಹಾಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಆಹಾರವನ್ನು ಪ್ರತ್ಯೇಕವಾಗಿ ಸಂಗ್ರಹಿಸದಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ಪಾತ್ರೆ ತೊಳೆಯಲು ಬಿಸಿನೀರಿನ ವ್ಯವಸ್ಥೆಯ ಕೊರತೆಯೂ ಕಂಡುಬಂದಿದೆ.

ಅವಧಿ ಮೀರಿದ ಅಣಬೆ ಪತ್ತೆ

ಕ್ಯಾಥೋಲಿಕ್ ಕ್ಲಬ್‌ನಲ್ಲಿ ಅವಧಿ ಮೀರಿದ 10 ಪ್ಯಾಕೇಟ್ ಅಣಬೆಗಳು ಪತ್ತೆಯಾಗಿವೆ. ಆಹಾರ ಪದಾರ್ಥಗಳ ಮೇಲೆ ಅಗತ್ಯ ಲೇಬಲ್‌ಗಳಿಲ್ಲದಿರುವುದು ಹಾಗೂ ಸ್ವಚ್ಛತೆಯ ಕೊರತೆಯ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಟೆನ್ನಿಸ್ ಕ್ಲಬ್‌ನಲ್ಲಿ ಆಹಾರ ನಿರ್ವಹಣಾ ಸಿಬ್ಬಂದಿ ವೈದ್ಯಕೀಯ ಪ್ರಮಾಣಪತ್ರ ಹೊಂದಿರದಿರುವುದು ಕಂಡುಬಂದಿದೆ.

ವಿಜಯನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಲಬ್‌ಗಳಲ್ಲಿಯೂ ಆಹಾರ ಪದಾರ್ಥಗಳ ಅವಧಿ ಕುರಿತ ಲೇಬಲಿಂಗ್ ಕೊರತೆ ಹಾಗೂ ಸ್ವಚ್ಛತೆ-ನೈರ್ಮಲ್ಯದ ಸಮಸ್ಯೆಗಳು ಪತ್ತೆಯಾಗಿವೆ.

ಹೋಟೆಲ್‌ಗಳಿಗೂ ಕಟ್ಟುನಿಟ್ಟಿನ ಸೂಚನೆ

ಕ್ಲಬ್‌ಗಳ ಜೊತೆಗೆ ಹೋಟೆಲ್‌ಗಳು ಹಾಗೂ ಇತರೆ ಆಹಾರ ಉದ್ಯಮಗಳಲ್ಲಿನ ಲೋಪಗಳ ಬಗ್ಗೆಯೂ ಇಲಾಖೆ ಗಮನಹರಿಸಿದೆ. ಮುಂದಿನ 15 ದಿನಗಳಲ್ಲಿ ಹೋಟೆಲ್ ಅಸೋಸಿಯೇಷನ್, ರೆಸ್ಟೋರೆಂಟ್ ಅಸೋಸಿಯೇಷನ್ ಮತ್ತು ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಅಡುಗೆಮನೆ ನಿರ್ವಹಣೆ, ಆಹಾರ ತಯಾರಿ ಮತ್ತು ನೈರ್ಮಲ್ಯ ಕುರಿತು ಮಾರ್ಗಸೂಚಿ ಹಾಗೂ ತರಬೇತಿ ನೀಡುವ ಚಿಂತನೆಯೂ ಇದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

Continue Reading

Trending