ದಿನದ ಸುದ್ದಿ
ಇಸ್ರೇಲಿನ ಸಂಪಾದಕರು ಮತ್ತು ಭಾರತದ ಸಂಪಾದಕರ ನಡುವಿನ ಐತಿಹಾಸಿಕ ಸಂವಾದವಿದು..!
- ಪ್ರಧಾನಿಯೇ ಒಂದು ಸಮುದಾಯವನ್ನು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಜನ ಸಮುದಾಯದ ಜವಾಬ್ದಾರಿಗಳು ಏನು? ಮುಸ್ಲೀಮರ ಮೇಲಿನ ದ್ವೇಷಕ್ಕಾಗಿ ಐ ಸ್ಟ್ಯಾಂಡ್ ವಿತ್ ಇಸ್ರೇಲ್ ಎನ್ನುವವರು ಇಸ್ರೇಲ್ ನ ಅತೀ ಹೆಚ್ಚು ಪ್ರಸರಣಾ ಸಂಖ್ಯೆ ಹೊಂದಿರುವ HAARETZ (ಭೂಮಿ) ಪತ್ರಿಕೆಯ ಸಂಪಾಕೀಯವನ್ನು ಓದಬೇಕು.
- ಸಂಪಾದಕೀಯ : ಅಲುಫ್ ಬೆನ್, ಪ್ರಧಾನ ಸಂಪಾಕರು, HAARETZ, ಅನುವಾದ : ನವೀನ್ ಸೂರಿಂಜೆ
ಕಳೆದ ಹಲವು ದಿನಗಳಿಂದ ಇಸ್ರೇಲ್ನಲ್ಲಿ ಅರಬ್ಬರು ಮತ್ತು ಯಹೂದಿಗಳ ನಡುವಿನ ನೋವಿನ ಘರ್ಷಣೆಯ ಉತ್ತುಂಗಕ್ಕೆ ಏರಿದೆ. ಇವೆಲ್ಲವನ್ನೂ ಹೊರತುಡಿಸಿ ಸಮಾಜದ ಗಣ್ಯರೂ ಸೇರಿದಂತೆ ಸಾವಿರಾರು ಅರಬ್ ಮತ್ತು ಯಹೂದಿ ನಾಗರಿಕರು ಇಸ್ರೇಲಿ ನಗರಗಳಲ್ಲಿ, ಹಳ್ಳಿಗಳಲ್ಲಿ ನಡೆಸಿದ ಜಂಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಅರಬರು, ಯಹೂದಿಗಳು ಎಂಬ ಯಾವ ವ್ಯತ್ಯಾಸವು ಇಸ್ರೇಲಿನ ಸಾಮಾನ್ಯ ಜನರ ಮಧ್ಯೆ ಇಲ್ಲ.
ಮುಸ್ಲೀಮರು ಮತ್ತು ಯಹೂದಿಗಳು ಜೊತೆಗೂಡಿ ನಡೆಸುತ್ತಿರುವ ಹತ್ತಾರು ಕಾರ್ಯಕ್ರಮಗಳ ವಿಶೇಷತೆಯೆಂದರೆ ಅವು “ಫಿರಂಗಿಗಳು ಘರ್ಜಿಸುತ್ತಿರುವಾಗಲೂ” ನಡೆಯುತ್ತಿವೆ ಎಂಬುದೇ ಆಗಿದೆ, ಗಲಭೆಗಳು ಮತ್ತು ಆಕ್ರಮಣಗಳು ಇಸ್ರೇಲ್ ದೇಶದ ಸಾಮಾನ್ಯಯಹೂದಿ-ಅರಬ್ ಸಮುದಾಯಗಳಲ್ಲಿ ಯಾವ ವ್ಯತ್ಯಾಸವನ್ನು ಮಾಡಕೂಡದು.
ಇದೊಂದೇ ನಮ್ಮ ಮುಂದಿರುವ ಅತೀ ದೊಡ್ಡ ಭರವಸೆಯಾಗಿದೆ. ಈ ಹಿಂದೆಯೂ ಇದೇ ರೀತಿ ಮುಸ್ಲಿಂ ಮತ್ತು ಯಹೂದಿಗಳ ಸೌಹಾರ್ಧ ಕಾರ್ಯಕ್ರಮಗಳು ನಡೆದಿತ್ತು. ಆ ಕಾರ್ಯಕ್ರಮಗಳು ಗಲಭೆಗಳ ನಂತರ ನಡೆದಿದ್ದರೆ ಈ ಬಾರಿ ಸಂಘರ್ಷಗಳು ಜಾರಿಯಲ್ಲಿರುವಂತೆಯೇ ಮುಸ್ಲಿಂ ಮತ್ತು ಯಹೂದಿ ಸೌಹಾರ್ಧ ಕಾರ್ಯಕ್ರಮಗಳೂ ಜಾರಿಯಲ್ಲಿದೆ.
ಹಾಗಾಗಿ, ಈ ಭಯಾನಕ ಘಟನಗಳು, ಸಾವು ನೋವುಗಳು, ಹತಾಶೆಯಿಂದ ಅಘಾತಕ್ಕೊಳಗಾಗಿರುವ ಇಸ್ರೇಲ್ನಲ್ಲಿ ಎಲ್ಲವೂ ಕಳೆದು ಹೋಗಿಲ್ಲ ಎಂಬ ಆಶಾಭಾವ ಮೂಡುತ್ತಿದೆ. ಸಂಘರ್ಷದ ಮಧ್ಯೆಯೇ ಹಲವು ಸಮಾಜಿಕ ಸಂಘಟನೆಗಳ ನೇತೃತ್ವದಲ್ಲಿ ಮುಸ್ಲಿಂ ಮತ್ತು ಯಹೂದಿಗಳ ಸಹ ಜೀವನ ನಡೆಸಲು ಬೇಕಾಗುವ ವಾತಾವರಣ ನಿರ್ಮಿಸುತ್ತಿರುವುದು ಸಮಾನತೆ ಮತ್ತು ಪರಸ್ಪರ ಗೌರವ ಹುಟ್ಟಿಸುವ ಮೊದಲ ಬೀಜಗಳೆಂದು ನಾವು ನೋಡಬಹುದು. ದೇಶದಲ್ಲಿ ಎಲ್ಲವೂ ಸರಿಯಿದ್ದಾಗ ಸೌಹಾರ್ದತೆಯಿಂದ ವಾಸಿಸುವುದು ದೊಡ್ಡ ವಿಚಾರವಲ್ಲ. ದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದಾಗಲೇ ಜನರ ಸೌಹಾರ್ಧ ಮನಸ್ಥಿತಿಯನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.
ಈ ದೇಶದ ಅಭಿವೃದ್ದಿಗೆ ಎಲ್ಲಾ ಸಮುದಾಯಗಳ ಕೊಡುಗೆಯಿದೆ. ಅರಬರು/ಮುಸ್ಲಿಮರು/ಯಹೂದಿಗಳು ಸೇರಿದಂತೆ ಸಮುದಾಯಗಳ ಅಭಿವೃದ್ದಿಯ ಕೊಡುಗೆಯಿಂದ ಇಸ್ರೇಲ್ ಗಟ್ಟಿಗೊಂಡಿದೆ. ಕೆಲ ಮಾನವ ಹಕ್ಕು ನಾಗರಿಕ ಸಂಘಟನೆಗಳು ಸೌಹಾರ್ದತೆಗಾಗಿ ಕೆಲಸ ಮಾಡಿದೆ. ಸಮ ಸಮಾಜಕ್ಕಾಗಿ ಕೆಲಸ ಮಾಡುವ ಅಂತಹ ಸಂಘಟನೆಗಳ ಕೆಲಸ ಫಲಿತಾಂಶ ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಷ್ಟೊಂದು ಸಂಘರ್ಷಗಳ ಮಧ್ಯೆಯೂ ನಮಗೂ ಅದಕ್ಕೂ ಯಾವ ಸಂಬಂಧವಿಲ್ಲ ಎಂಬಂತೆ ಸೌಹಾರ್ದಯುತವಾಗಿ ಬದುಕುವ ಇಸ್ರೇಲಿನ ಹಲವು ಪ್ರದೇಶಗಳು ಇದಕ್ಕೆ ನಿದರ್ಶನವಾಗಿದೆ. ಯಾರು ಏನೇ ಪ್ರಯತ್ನಪಟ್ಟರೂ ನಾವುಗಳು ಹಂಚಿಕೊಂಡು ಬದುಕುವುದನ್ನು ತಪ್ಪಿಸಲಾಗದು.
ಕೆಲವೇ ಕೆಲವು ತಿಂಗಳುಗಳ ಹಿಂದೆ ಹೊರಳಿ ನೋಡಿ, ದೇಶಾದ್ಯಂತದ ಅರಬ್-ಯಹೂದಿ ವೈದ್ಯಕೀಯ ತಂಡಗಳು ಕರೋನವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಾಗಿ ಹೋರಾಡಿದ್ದವು. ವೈರಸ್ ವಿರುದ್ಧ ಜನಸಮುದಾಯದ ಮಧ್ಯೆ ಸೌಹಾರ್ದಯುತವಾಗಿ ಕೆಲಸ ಮಾಡಿದ್ದನ್ನು ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಈಗ ಅದೇ ತಂಡಗಳು ಹಿಂಸಾಚಾರದ ವಿರುದ್ಧ ಮತ್ತು ಪರಸ್ಪರ ಸೌಹಾರ್ಧಕ್ಕಾಗಿ ಕರೆ ನೀಡುತ್ತಿದ್ದಾರೆ.
ಕೆಲವು ರಾಜಕಾರಣಿಗಳು, ಸಮುದಾಯದ ಮುಖಂಡರು ಮತ್ತು ಮಾಧ್ಯಮಗಳು ಜನರನ್ನು ಪ್ರಚೋದಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಇಂತಹ ಕಂದಕಗಳನ್ನು ಸೃಷ್ಟಿಸುವವರ ಮಧ್ಯೆ ಮಾನವ ಹಕ್ಕುಗಳ ಪರವಾಗಿನ ಕೆಲ ಅರಬ್ ಮತ್ತು ಯಹೂದಿ ರಾಜಕೀಯ ಮುಖಂಡರು ಸಮುದಾಯಗಳ ಮಧ್ಯೆ ಸಂವಾದವನ್ನು ನಡೆಸುತ್ತಿದ್ದಾರೆ. ಇದು ಮನುಷ್ಯರ ಮಧ್ಯೆ ಇರುವ ಜ್ವಾಲೆಗಳನ್ನು ತಣಿಸುತ್ತಿದೆ.
ಇಸ್ರೇಲಿನಲ್ಲಿ ಸಮುದಾಯಗಳ ಮಧ್ಯೆ ಇರುವ ಆಳವಾದ ಭಿನ್ನಾಭಿಪ್ರಾಯಗಳನ್ನು ಅಲ್ಲಗಳೆಯುವಂತಿಲ್ಲ. ಜೆರುಸಲೆಮ್, ಗಾಜಾ ಪಟ್ಟಿ ಮತ್ತು ಪಶ್ಚಿಮ ದಂಡೆಯಲ್ಲಿನ ಘಟನೆಗಳು ಅರಬ್ ಮತ್ತು ಯಹೂದಿ ಸಮುದಾಯಗಳ ಮಧ್ಯೆ ಇರುವ ಸಂಘರ್ಷವನ್ನೇ ಸೂಚಿಸುತ್ತದೆ. ಇದ್ಯಾವುದಕ್ಕೂ ಯುದ್ದ, ಗಲಭೆಗಳು ಪರಿಹಾರವಲ್ಲ. ಪರಸ್ಪರ ಮಾತುಕತೆಗಳೇ ಈ ಸಂಘರ್ಷಕ್ಕೆ ಇರುವ ಪರಿಹಾರ. ಪರಸ್ಪರ ಸೌಹಾರ್ಧ ಸಂಬಂಧಗಳೇ ಈಗಿರುವ ಇಸ್ರೇಲಿನ ದುಗುಡಯುಕ್ತ ವಾತಾವರಣಕ್ಕೆ ಏಕೈಕ ಪರಿಹಾರವಾಗಿದೆ.
ಇಸ್ರೇಲಿನಲ್ಲಿ ಅರಬ್ಬರು ಮತ್ತು ಯಹೂದಿಗಳು ಒಂದೇ ನಗರಗಳಲ್ಲಿ ಅಕ್ಕಪಕ್ಕದಲ್ಲೇ ವಾಸಿಸುತ್ತಾರೆ. ವಿಶೇಷವಾಗಿ ಅಪಾರ್ಟ್ಮೆಂಟ್ ಕಟ್ಟಡಗಳು ಮತ್ತು ಸೈಟುಗಳನ್ನು ಹಂಚಿಕೊಳ್ಳುವುದರಲ್ಲಿ ಈವರೆಗೂ ತಾರತಮ್ಯ ಮಾಡಿಲ್ಲ. ಆದರೆ ಕಳೆದ ಕೆಲ ದಿನಗಳು ಎರಡೂ ಜನಸಮುದಾಯಗಳು ಭಯ ಮತ್ತು ಅಪನಂಬಿಕೆಯ ವಾತಾವರಣದಲ್ಲಿ ಬದುಕುತ್ತಿದೆ.
ಇದು ಎಷ್ಟು ಅಪಾಯಕಾರಿ ಮತ್ತು ಜನರನ್ನು ಮಾನಸಿಕತೆಯ ಮೇಲೆ ಹೊಡೆತ ಬೀರುತ್ತೆ ಎಂಬುದನ್ನು ನಾವು ಅರ್ಥೈಸಿಕೊಳ್ಳಬೇಕು. ಅದಕ್ಕಾಗಿಯೇ ನೆರೆಹೊರೆಯವರನ್ನು, ಬೇರೆ ಬೇರೆ ಸಮುದಾಯಗಳನ್ನು ಒಂದುಗೂಡಿಸುವ ಕಾರ್ಯಚಟುವಟಿಕೆಗಳು ಇಸ್ರೇಲಿನ ಸಧ್ಯದ ಅವಶ್ಯಕತೆಯಾಗಿದೆ.
ಸೌಹಾರ್ದತೆಯನ್ನು ಹುಟ್ಟಿಸುವ ಮತ್ತು ಹರಡುವ ಈ ಮೌಲ್ಯಯುತ ಕೆಲಸವನ್ನು ಜನರೇ ಖುದ್ದಾಗಿ ಮಾಡಬೇಕಿದೆ. ಏಕೆಂದರೆ ದೇಶದ ಪ್ರಧಾನಿಯೇ ಒಂದು ಸಮುದಾಯವನ್ನು ಅಪರಾಧ ಮತ್ತು ಹಿಂಸಾಚಾರಕ್ಕೆ ಪ್ರಚೋದಿಸಿದಾಗ ಈ ನೆಲ ಮೂಲವೇ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಿದೆ.
- ಅಲುಫ್ ಬೆನ್ ಇಸ್ರೇಲ್ ನ ಖ್ಯಾತ ಪತ್ರಕರ್ತರು. ದೇಶದ ನಂಬರ್ 1 ಪತ್ರಿಕೆಯ ಪ್ರಧಾನ ಸಂಪಾದಕರಾಗಿರುವ ಅಲುಫ್ ಬೆನ್ ಚಿಕ್ಕಪ್ಪ ಗಾಜಾ ಪಟ್ಟಿಯಲ್ಲಿ ನಡೆದ ದಾಳಿಯ ವೇಳೆ ಮೃತರಾಗಿದ್ದಾರೆ. ಹಲವು ಪ್ರತಿಷ್ಟಿತ ಪತ್ರಿಕೆಯಲ್ಲಿ ಪ್ರಧಾನ ಸಂಪಾದಕರಾಗಿ ಕೆಲಸ ಮಾಡಿರುವ ಅಲುಫ್ ಬೆನ್ ಇಸ್ರೇಲ್ ನ ಎಲ್ಲಾ ಗಲಭೆ, ಯುದ್ದಗಳನ್ನು ಖುದ್ದು ವರದಿ ಮಾಡಿದ್ದಾರೆ. ಮಾನವ ಹಕ್ಕುಗಳು, ಸಮಾನತೆಯ ಪ್ರತಿಪಾದಕರಾಗಿರುವ ಅಲುಫ್ ಬೆನ್ ಬರಹಗಳ ಜಗತ್ತಿನ ಎಲ್ಲಾ ಕಡೆ ನಡೆಯುವ ದೌರ್ಜನ್ಯವನ್ನು ವಿರೋಧಿಸುತ್ತಾರೆ. ಅವರ ಸಂಪಾದಕೀಯವನ್ನು ಅವರ ಆಶಯಕ್ಕೆ ಕುಂದು ಬಾರದ ರೀತಿಯಲ್ಲಿ ಅನುವಾದ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243