ದಿನದ ಸುದ್ದಿ
ಔಷಧ ತಯಾರಿಕಾ ಉದ್ಯಮಕ್ಕೆ ನೆರವಾಗುವ ಸಂಶೋಧನಾ ನೀತಿ ಜಾರಿಗೆ ಚಿಂತನೆ : ಮನ್ಸುಖ್ ಮಾಂಡವೀಯ

ಸುದ್ದಿದಿನ ಡೆಸ್ಕ್ : ಭಾರತೀಯ ಔಷಧ ಮತ್ತು ವೈದ್ಯಕೀಯ ಉಪಕರಣಗಳ ಸಮಾವೇಶದ 7ನೇ ಆವೃತ್ತಿ ಮುಂದಿನ ಸೋಮವಾರ ನವದೆಹಲಿಯಲ್ಲಿ ನಡೆಯಲಿದೆ.
ಮೂರು ದಿನಗಳ ಈ ಸಮಾವೇಶಕ್ಕೆ ವಿಷನ್ 2047-ಭವಿಷ್ಯಕ್ಕಾಗಿ ಪರಿವರ್ತನಾ ನೀಲನಕ್ಷೆ ಎಂಬುದು ಧ್ಯೇಯವಾಕ್ಯವಾಗಿದೆ. ಔಷಧ ತಯಾರಿಕಾ ಉದ್ಯಮ ಹಾಗೂ ವೈದ್ಯಕೀಯ ಉಪಕರಣಗಳ ತಯಾರಕರನ್ನು ಭಾಗೀದಾರರನ್ನು ಹಾಗೂ ಶಿಕ್ಷಣ ತಜ್ಞರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗಿದೆ.
ಮುಂದಿನ 25 ವರ್ಷಗಳಿಗೆ ಉದ್ಯಮದ ಬೆಳವಣಿಗೆಗೆ ಭವಿಷ್ಯದ ನೀಲನಕ್ಷೆ ರೂಪಿಸುವುದು ಈ ಉದ್ದೇಶದಲ್ಲಿ ಪ್ರಮುಖ ಅಂಶವಾಗಿದೆ.
ಸಮಾವೇಶ ಕುರಿತು ನವದೆಹಲಿಯಲ್ಲಿಂದು ಸುದ್ದಿಗಾರರಿಗೆ ತಿಳಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ, ಮುಂದಿನ 25ವರ್ಷಗಳಿಗೆ ಔಷಧಿ ಮತ್ತು ವೈದ್ಯಕೀಯ ಉಪಕರಣಗಳ ತಯಾರಿಕಾ ಉದ್ಯಮಗಳನ್ನು ಮುನ್ನಡೆಸುವ ಕುರಿತು ಭಾಗಿದಾರರು ಕಾರ್ಯ ತಂತ್ರರೂಪಿಸಲು ಈ ಸಮಾವೇಶ ಸಹಕಾರಿಯಾಗಲಿದೆ ಎಂದು ಹೇಳಿದರು.
ತಯಾರಿಕ ಉದ್ಯಮವನ್ನು ಸದೃಢಗೊಳಿಸುವ ಸಂಬಂಧ ಉದ್ಯಮಿದಾರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಿದ್ದಾರೆ. ಪೇಟೆಂಟ್ ಹೊಂದಿರುವ ಔಷಧ ತಯಾರಿಕಾ ಉದ್ಯಮಕ್ಕೆ ಸಹಕಾರಿಯಾಗುವ ಸಂಶೋಧನೆ ಮತ್ತು ಅನ್ವೇಷಣಾ ನೀತಿಯೊಂದನ್ನು ಸರ್ಕಾರ ಜಾರಿಗೆತರಲು ಈ ಸಮಾವೇಶ ನೆರವಾಗಲಿದೆ ಎಂದು ಸಚಿವರು ತಿಳಿಸಿದರು.
Addressed curtain-raiser press conference on the 7th edition of India Pharmaceutical & Medical Devices 2022, from 25th – 27th April.
We will engage with industry & academia to chalk the roadmap for Pharma & Medical Devices for the next 25 years.
📖 https://t.co/KnRM4lT8MK pic.twitter.com/ElbnG8fdtU
— Dr Mansukh Mandaviya (@mansukhmandviya) April 22, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ

-
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸಮುದಾಯದ ಭದ್ರ ಕೋಟೆಯಲ್ಲಿ ಬಹುದಿನದ ಕನಸು ನನಸಾಗಲಿಲ್ಲ
ಸಮುದಾಯಕ್ಕೆ ಸರ್ಮಪಣೆ ‘ಕೈ’ ಸಾಧನಾ ಸಮಾವೇಶ
ಸುದ್ದಿದಿನಡೆಸ್ಕ್:ಎರಡು ವರ್ಷ ಕಳೆದರೂ ರೈತರ ಜೀವನಾಡಿಯಾದ ವಿಜಯನಗರ ಜಿಲ್ಲೆಯ ಸಕ್ಕರೆ ಕಾರ್ಖಾನೆ ನಿರ್ಮಾಣ ಆಗದೇ ಇರೋದು ಜೊತೆಗೆ ತುಂಗಭದ್ರಾ ಜಲಾಶಯದ ಹೂಳು ಎತ್ತದೆ ಇರೋದು ದೊಡ್ಡ ದುರಂತವಾಗಿದೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸಕ್ಕರೆ ಕಾರ್ಖಾನೆ ಆರಂಭವಾಗಿಲ್ಲ ಎಂದು ಸಾರ್ವಜನಿಕರ ವಲಯದಲ್ಲಿ ವಿಜಯನಗರ ಜಿಲ್ಲೆಗೆ ಬಹಳ ಅನಾಯ್ಯವಾಗಿದೆ ಅನುದಾನ ಬಿಡುಗಡೆಯಲ್ಲಿ ಮತ್ತು ಸ್ವಪಕ್ಷದ ಮೇಲೆ ಅಸಮಾಧಾನ ವ್ಯಕ್ತ ಪಡಿಸಿದ ಶಾಸಕ ಗವಿಯಪ್ಪ
ಯಾವುದೇ ಅಭಿವೃದ್ಧಿ ಗಳನ್ನು ಕೈಗೊಳ್ಳದೇ, ಯೋಜನೆಗಳಿಗೆ ಶಿಲಾನ್ಯಾಸ ಮಾಡದೇ ವಿಜಯನಗರದ ಜಿಲ್ಲೆಯಲ್ಲಿ ಎರಡು ವರ್ಷದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ ಮಾಡುತ್ತಿದ್ದಾರೆ ಎನ್ನುವುದು ಸಾರ್ವಜನಿಕರಲ್ಲಿ ಚರ್ಚೆ ಆಗುತ್ತಿದೆ.
ಸ್ವಪಕ್ಷದ ವಿರುದ್ಧವೇ ಮುನಿಸಿಕೊಂಡ ಶಾಸಕ ಗವಿಯಪ್ಪ ಅವರು ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಭಾಗಿನ ಕಾರ್ಯಕ್ರಮದಲ್ಲಿ ಮುನಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗಿಯಾಗದೇ ವಾಪಾಸು ಹೋಗಿದ್ದರು. ಅವರ ಕಛೇರಿಯವರೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಕರೆಯಲು ಹೋದರೂ ಸಹ ಬರಲಿಲ್ಲ. ಇದರಿಂದ ಸಹ ಶಾಸಕರು ಸಿಎಂ ಮೇಲೆ ಮುನಿಸಿಕೊಂಡರು.
ಜಿಲ್ಲೆಯ ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಪತ್ರಿಕಾಗೋಷ್ಟಿಯಲ್ಲಿ ಶಾಸಕ ಗವಿಯಪ್ಪ ವಿರುದ್ಧ ಇವರು ಕ್ಷೇತ್ರಕ್ಕೆ ‘ಶಾಪ’ ಎಂದು ಹೇಳಿ, ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮತ್ತು ಕಾರ್ಯಕರ್ತರ ನಡುವೆ ಅಸಮಾಧಾನಗಳ ನಡುವೆ ಸ್ವಪಕ್ಷಗಳಿಂದ ಶಿರಾಜ್ ಶೇಖ್ ಮತ್ತು ಮಾಜಿ ಶಾಸಕ ಭೀಮಾನಾಯ್ಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಇವರಿಬ್ಬರ ನಡುವಿನ ಜಗಳ ಸಮಾಧಾನ ಮಾಡಲು ಕೆ.ಪಿ.ಸಿ.ಸಿ ಮಧ್ಯೆ ಪ್ರವೇಶ ಮಾಡಿ ಸಂಧಾನ ಮಾಡುವಲ್ಲಿ ವಿಫಲವಾಯಿತು.
ಸಾಧನೆ ಮತ್ತು ಸಮರ್ಪಣೆ ಇವುಗಳಲ್ಲಿ ಯಾವುದನ್ನು ಮಾಡುತ್ತಾರೋ ಅವರಲ್ಲಿಯೇ ಗೊಂದಲ ಇದೆ. ಯಾವುದು ಸಮರ್ಪಣೆ ?, ಯಾವುದು ಸಾಧನೆ ? ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡುವಲ್ಲಿ ತಾರತಮ್ಯ ಮಾಡಿ ಅವಳಿ ಜಿಲ್ಲೆಗೆ ಸಚಿವರನ್ನು ನೇಮಕ ಮಾಡದೇ ಕ್ಷೇತ್ರಕ್ಕೆ ಅನ್ಯಾಯ ಮಾಡಿದೆ ಎನ್ನುವುದು ಸಾರ್ವಜನಿಕರಲ್ಲಿ, ರಾಜಕೀಯದಲ್ಲಿ ಗೊಂದಲ ನಿರ್ಮಾಣ ಮಾಡಿದೆ.
ಜಿಲ್ಲೆಯಲ್ಲಿ ಶಾಸಕಾಂಗ ಮತ್ತು ಆಡಳಿತದಲ್ಲಿ ಒಂದೇ ಸಮುದಾಯದವರು ಇರೋದರಿಂದ ಅಭಿವೃದ್ಧಿ ಆಗುತ್ತಿಲ್ಲ. ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎನ್ನುವ ಮಾಹಿತಿಯನ್ನು ಈ ಕ್ಷೇತ್ರದ ಜನರಿಗೆ ತಿಳಿಸಲು ಈ ಸಮರ್ಪಣೆ ಕಾರ್ಯಕ್ರಮ ಮಾಡುತ್ತಿದ್ದಾರೆ.
ದಿವಂಗತ ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧೀ ಕಟ್ಟೆಯನ್ನು ನಾಲ್ಕು ದಿನಗಳಲ್ಲಿ ಅಭಿವೃದ್ಧಿ ಪಡಿಸಿರುವುದು ವಿಜಯನಗರ ಕ್ಷೇತ್ರದ ಜನರಿಗೆ ಹಾಗು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಗವಿಯಪ್ಪ ನೀಡುತ್ತಿರುವುದು ಬಹು ದೊಡ್ಡ ಕೊಡುಗೆ ಆಗಿದೆ.
ಇನ್ನು ಈ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಸಮರ್ಪಣೆ, ಸಾಧನ ಸಮಾವೇಶ ಮಾಡಿದರೆ ಶಾಸಕ ಗವಿಯಪ್ಪ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎನ್ನುವ ಹಿಂಬಾಲಕರ ನಿರೀಕ್ಷೆ ಸಹ ಇದೆ.
2025 ಮೇ 20 ರಂದು ನಡೆಯುವ ಜಿಲ್ಲೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ಸಾಧನ ಸಮಾವೇಶದಲ್ಲಿ ಎಷ್ಟೆಲ್ಲಾ ಗೊಂದಲದ ನಡುವೆ ಯಶಸ್ವಿಯಾಗುವುದೇ ಎಂದು ಸಾರ್ವಜನಿಕರ ವಲಯದಲ್ಲಿ ಚರ್ಚೆ ಆಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ಟಾಕ್ ಮಾರ್ಕೇಟ್ 17.75 ಲಕ್ಷ ವಂಚನೆ, ಒಬ್ಬನ ಬಂಧನ ; 5 ಲಕ್ಷ ಜಪ್ತಿ !

- ಗಿರೀಶ್ ಕುಮಾರ್,ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.
ಕು. ಲಕ್ಷ್ಮೀ ವಿ.ಎಸ್ ತಂದೆ ವಿ. ಟಿ ಸತ್ಯನಾರಾಯಣ ವಾಸ: ಬಳ್ಳಾರಿ ರವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಸಿಯಾದ ರಂಜಿತ ಎಂಬುವವರು ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ಹೇಳಿ ನಂಬಿಸಿ ಪಿರ್ಯಾದಿದಾರರಿಂದ ಹಣ ರೂ. 17,75,865 ಆನ್ಲೈನ್ ಮೂಲಕ ಹಾಕಿಸಿಕೊಂಡು ಮೋಸ ಮಾಡಿರುತ್ತಾನೆ. ಆದರೆ 5 ಲಕ್ಷ ಮಾತ್ರ ರಿಕವರಿ, ಉಳಿದ ಹಣ ಎಲ್ಲಿಗೆ ಹೋಗಿದೆ.
ಪೊಲೀಸ್ ಅಧೀಕ್ಷಕಿ ಡಾ: ಶೋಭಾರಾಣಿ ವಿ.ಜೆ ಅವರ ಬಳ್ಳಾರಿ ಮಾರ್ಗದರ್ಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ನೇತೃತ್ವದಲ್ಲಿ, ಬಳ್ಳಾರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್ಪಿ ಡಾ: ಸಂತೋಷ ಚೌವ್ಹಾಣ್ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಣೆ ಮಾಡಿಸಿ ತನಿಖೆ ಕೈಗೊಂಡು, ಪೊಲೀಸ್ ಸಬ್-ಇನ್ಸ್ಪೆಕ್ಟರ್ ವಲಿಬಾಷ ಮತ್ತು ಸಿಬ್ಬಂದಿಯ ತಿಪ್ಪೇರುದ್ರ ಎಎಸ್ಐ, ಸುರೇಶ, ಉಮಾಮಹೇಶ್ವರ, ಕೆ. ಯಲ್ಲೇಶ್, ಎನ್ ಚಂದ್ರಶೇಖರ ಅವರೊಂದಿಗೆ ಸೇರಿ ಆರೋಪಿ ರಂಜಿತ್ ಹೊಸಪೇಟೆ, ವಿಜಯನಗರ ಜಿಲ್ಲೆ ಪತ್ತೆಮಾಡಿ ಈತನನ್ನು ವಿಚಾರಣೆಗೊಳಪಡಿಸಿ ಆರೋಪಿತ ಪಡೆದಿದ್ದ ನಗದು ಹಣ ರೂಪಾಯಿ 5 ಲಕ್ಷ ಜಪ್ತು ಮಾಡಿದ್ದಾರೆ.
ಪೊಲೀಸ್ ಅಧೀಕ್ಷಕರು ಬಳ್ಳಾರಿ, ಈ ಕಾರ್ಯಚರಣೆ ಮಾಡಿದ ಬಳ್ಳಾರಿ ಸಿ.ಇ.ಎನ್. ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಶ್ಲಾಘಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆನ್ ಲೈನ್ ವೆಬ್ ಸೈಟ್ www.schooleducation.karnataka.gov.in
ಮೂಲಕ ಅರ್ಜಿ ಸಲ್ಲಿಸಲು ಮೇ.26 ಕೊನೆಯ ದಿನವಾಗಿರುತ್ತದೆ.
ಹುದ್ದೆಗಳ ವಿವರ
ಪ್ರಾಥಮಿಕ ಶಾಲಾ ಸಹಶಿಕ್ಷಕರು-ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು(ಸಿ.ಆರ್.ಪಿ), ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ತಾಂತ್ರಿಕ ಸಹಾಯಕರು(ಪ್ರಾಥಮಿಕ)
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಹಿರಿಯ ಮುಖ್ಯ ಶಿಕ್ಷಕರು-ಶಿಕ್ಷಣ ಸಂಯೋಜಕರು, ಪ್ರೌಢಶಾಲಾ ಸಹಶಿಕ್ಷಕರು- ಕ್ಷೇತ್ರ ಸಂಪನ್ಲೂಲ ವ್ಯಕ್ತಿ(ಬಿ.ಆರ್.ಪಿ), ಶಿಕ್ಷಣ ಸಂಯೋಜಕರು(ಪ್ರವಢ), ತಾಂತ್ರಿಕ ಸಹಾಯಕರು(ಪ್ರೌಢ) ಪ್ರೌಢಶಾಲಾ ಮುಖ್ಯ ಶಿಕ್ಷಕರು-ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ(ಬಿ.ಆರ್.ಪಿ), ಸಹಾಯಕ ಯೋಜನಾ ಸಮನ್ವಯಾಧಿಕಾರಿ(ಎ.ಪಿ.ಸಿ), ವಿಷಯ ಪರಿವೀಕ್ಷಕರು, ಸಹಾಯಕ ನಿರ್ದೇಶಕರು ಹುದ್ದೆಗಳು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ ದಾವಣಗೆರೆ ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ಕೊಟ್ರೇಶ್.ಜಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಅವಹೇಳನಕಾರಿ ಹೇಳಿಕೆ ; ಲೋಕಿಕೆರೆ ನಾಗರಾಜ್ ಕೂಡಲೇ ಕ್ಷಮೆ ಕೇಳಬೇಕು : ಸವಿತಾ ಹುಲ್ಲುಮನೆ ಗಣೇಶ್ ಆಗ್ರಹ
-
ದಿನದ ಸುದ್ದಿ3 days ago
ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ
-
ದಿನದ ಸುದ್ದಿ5 days ago
ಆಪರೇಷನ್ ಸಿಂದೂರ್ ಕಾರ್ಯಾಚರಣೆಯಲ್ಲಿ ನೂರು ಉಗ್ರಗಾಮಿಗಳು ಹತ : ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್
-
ದಿನದ ಸುದ್ದಿ4 days ago
ದಾವಣಗೆರೆ | ಮುಂಗಾರು ವಿಪತ್ತು ನಿರ್ವಹಣೆಗೆ ಸಿದ್ದತೆ, ಸಿಡಿಲಬ್ಬರ ಮುನ್ನೆಚ್ಚರಿಕೆಗೆ ಆಪ್ ಅಳವಡಿಸಿಕೊಳ್ಳಲು ಸಲಹೆ
-
ದಿನದ ಸುದ್ದಿ3 days ago
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ4 days ago
ದಾವಣಗೆರೆ | ಡಿ.ಇ.ಎಲ್.ಇಡಿ. ದಾಖಲಾತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಚನ್ನಗಿರಿ | ಇದೇ 15 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ3 days ago
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ