ದಿನದ ಸುದ್ದಿ
ಟಿಪ್ಪು ಜಯಂತಿ ಯಶಸ್ವಿಗೊಳಿಸಲು ಸರ್ಕಾರದಿಂದ ಭಾರಿ ಸಿದ್ಧತೆ

ಸುದ್ದಿದಿನ,ಬೆಂಗಳೂರು : ನವೆಂಬರ್ 10ರಂದು ಸಂಜೆ 6.30ಕ್ಕೆ ವಿಧಾನಸೌದದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರದಿಂದ ಟಿಪ್ಪು ದಿನಾಚರಣೆಗೆ ಪ್ಲಾನ್ ನಡೆದಿದ್ದು, ನಿನ್ನೆ ಟಿಪ್ಪು ಜಯಂತಿ ಬಗ್ಗೆ ನಡೆದ ಸಭೆಯ ನಂತರ ಸಿಎಂ ಜೊತೆ ಚರ್ಚಿಸಿ ಮುಸ್ಲಿಂ ಗುರುವಿಗೆ ಆಹ್ವಾನ ನೀಡಲಾಗಿದೆ.
ಕರ್ನಾಟಕ ಹಜರತ್ ಮೌಲಾನಾ ಸಘೀರ್ ಅಹಮದ್ ನ ಮುಸ್ಲಿಂ ಗುರುಗಳಾದ ಆಮೀರ್ ಇ ಶಾರಿಯತ್ ರವರನ್ನ ಕಾರ್ಯಕ್ರಮಕ್ಕೆ ಸಚಿವೆ ಜಯಮಾಲಾ ಮತ್ತು ಸಚಿವ ಜಮೀರ್ ಅಹಮದ್ ಇಬ್ಬರು ಶಾರಿಯತ್ ರವರ ಮನೆಗೆ ತೆರಳಿ ಸರ್ಕಾರದ ವತಿಯಿಂದ ಆಯೋಜಿಸುತ್ತಿರುವ ಟಿಪ್ಪುಜಯಂತಿಗೆ ಆಹ್ವಾನ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಜಯಮಾಲ, ಜಮೀರ್ ಅಹಮದ್ ಖಾನ್, ಶಾಸಕ ರೋಷನ್ ಬೇಗ್ ಸೇರಿದಂತೆ ಸರ್ಕಾರದ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಲಜ್ಜೆಗೆಟ್ಟ ರಾಜಕಾರಣಕ್ಕೆ ಕರ್ನಾಟಕವೇ ತವರು..!

- ನಾ ದಿವಾಕರ
ಮೂರು ನಾಲ್ಕು ದಶಕಗಳ ಹಿಂದೆ ಉತ್ತರ ಭಾರತದ ಹಲವು ರಾಜ್ಯಗಳು ‘ ಆಯಾರಾಂ ಗಯಾರಾಂ ’ ಪಕ್ಷಾಂತರ ರಾಜಕಾರಣದಿಂದ ಕಲುಷಿತಗೊಂಡು ಕಂಗೆಟ್ಟಿದ್ದ ಸಂದರ್ಭದಲ್ಲಿ ಕರ್ನಾಟಕ ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿತ್ತು. ಅಧಿಕಾರಸ್ಥ ರಾಜಕಾರಣಿಗಳ ಉತ್ತರದಾಯಿತ್ವದ ಪ್ರಜ್ಞೆ ಮತ್ತು ಕೊಂಚ ಮಟ್ಟಿನ ಪ್ರಾಮಾಣಿಕತೆ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆ ಸೃಷ್ಟಿಸಿತ್ತು.
ಪಕ್ಷಾಂತರ, ಭಿನ್ನಮತೀಯ ರಾಜಕಾರಣ, ಪಕ್ಷಭೇದ ಮತ್ತು ಹೊಸ ಪಕ್ಷಗಳ ಸ್ಥಾಪನೆ ಇವೆಲ್ಲದರ ನಡುವೆಯೇ ರಾಜ್ಯದಲ್ಲಿ, ಅಧಿಕಾರ ಪೀಠದಲ್ಲಿರುವವರು ‘ ನೈತಿಕ ಹೊಣೆ ’ ಎನ್ನುವ ಪದಗಳ ಅರ್ಥವನ್ನು ಬಲ್ಲವರಾಗಿದ್ದರು. ಅಪವಾದಗಳಿಂದ ಮುಕ್ತವಾದ ರಾಜಕಾರಣ ಅಸಾಧ್ಯವೇ ಆದರೂ ತಮ್ಮ ಮೇಲಿನ ಅಪವಾದಗಳನ್ನು ಸ್ವೀಕರಿಸಿ, ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವ ಒಂದು ಪರಂಪರೆಗೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಸಾಕ್ಷಿಯಾಗಿದ್ದರು.
ಅಬ್ದುಲ್ ನಜೀರ್ ಸಾಬ್ ಅವರಂತಹ ನಿಸ್ಪೃಹ, ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿಯೊಬ್ಬರು ಈ ನೆಲದ ಮೇಲೆ ಓಡಾಡಿದ್ದರು ಎನ್ನುವುದು ಹೆಮ್ಮೆಯ ವಿಚಾರ. ಆದರೆ ಇಂತಹ ಒಂದು ವ್ಯಕ್ತಿತ್ವ ಕೇವಲ ಮೂರು ನಾಲ್ಕು ದಶಕಗಳ ಒಳಗೆ ಪ್ರಾಚೀನ ಶಿಲಾಶಾಸನದಂತೆ ಕಾಣುತ್ತಿರುವುದು ದುರಂತ.
ನಜೀರ್ ಸಾಬ್ ಮೂರು ನಾಲ್ಕು ಪೀಳಿಗೆಯ ರಾಜಕಾರಣಿಗಳಿಗೆ ಪ್ರೇರಣೆಯಾಗಬೇಕಿತ್ತು, ಸ್ಪೂರ್ತಿಯಾಗಬೇಕಿತ್ತು. ಆದರೆ ಅವರ ಒಡನಾಟದಲ್ಲಿದ್ದವರೂ ಇಂದು ಭ್ರಷ್ಟ ಮಾರ್ಗಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ, ನವ ಉದಾರವಾದದ ಕಾರ್ಪೋರೇಟ್ ರಾಜಕಾರಣ ನಮ್ಮ ದೇಶದ ರಾಜಕೀಯ ವಾತಾವರಣವನ್ನು ಎಷ್ಟು ಕಲುಷಿತಗೊಳಿಸಿದೆ ಎಂದು ಅರ್ಥವಾಗುತ್ತದೆ.
ಭಾರತದ ರಾಜಕಾರಣದಲ್ಲಿ ಪ್ರಾಮಾಣಿಕತೆ ಮತ್ತು ಸತ್ಯಸಂಧತೆಯೂ ಇತ್ತು ಎನ್ನುವುದು ಬಹುಶಃ ಮುಂದಿನ ಪೀಳಿಗೆಗೆ ಪುರಾಣ ಕಥನದಂತೆ ಕಾಣುತ್ತದೆ. ನಿಜ, ದೇಶ ಬದಲಾಗಿದೆ, ಜನರೂ ಬದಲಾಗಿದ್ದಾರೆ, ಹಾಗೆಯೇ ರಾಜಕಾರಣಿಗಳೂ ಬದಲಾಗಿದ್ದಾರೆ. ಆದರೆ ರಾಜಕೀಯ ರಂಗದಲ್ಲಿ ಉಂಟಾಗಿರುವ ಬದಲಾವಣೆ ದೇಶವನ್ನು ವಿನಾಶದತ್ತ ಕೊಂಡೊಯ್ಯುವಂತೆ ಕಾಣುತ್ತಿದೆ.
ಪಂಚಾಯತ್ ವ್ಯವಸ್ಥೆಗೆ ಒಂದು ಸ್ಪಷ್ಟ ಕಾಯಕಲ್ಪ ನೀಡಿದ ಕರ್ನಾಟಕದಲ್ಲಿ ನಾವು ಗ್ರಾಮ ಪಂಚಾಯತ್ ಸ್ಥಾನಗಳು ಹರಾಜಾಗುತ್ತಿರುವುದನ್ನು ಇತ್ತೀಚೆಗಷ್ಟೇ ನೋಡಿದ್ದೇವೆ. ಜನಪ್ರತಿನಿಧಿ ಎನ್ನುವ ಪದ ಅಧಿಕಾರ ಕೇಂದ್ರಗಳಲ್ಲಿ ತಮ್ಮ ಅಸ್ತಿತ್ವವನ್ನು ಕಳೆದುಕೊಂಡು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿರುವ ಒಂದು ವಿಕೃತ ಪರಂಪರೆಗೆ ಕರ್ನಾಟಕವೇ ಪ್ರಧಾನ ಭೂಮಿಕೆಯಾಗಿರುವುದು ವಿಪರ್ಯಾಸ ಎನಿಸಿದರೂ ಸತ್ಯ.
ತತ್ವ, ಸಿದ್ಧಾಂತ ಮತ್ತು ಜನಸೇವೆ ಈ ಮೂರೂ ಉದಾತ್ತ ಚಿಂತನೆಗಳಿಗೆ ಎಂದೋ ತಿಲಾಂಜಲಿ ಕೊಟ್ಟಿರುವ ರಾಜ್ಯ ರಾಜಕಾರಣದಲ್ಲಿ ಇಂದು ಉಳಿದಿರುವುದು ಅಧಿಕಾರ ರಾಜಕಾರಣ ಮಾತ್ರ ಎನ್ನುವುದೂ ಅಷ್ಟೇ ಸತ್ಯ. ಏಕೆಂದರೆ ನವ ಉದಾರವಾದ ಮತ್ತು ಹಣಕಾಸು ಬಂಡವಾಳ ಊರ್ಜಿತವಾಗಲು ಬೇಕಿರುವುದು ಒಂದು ಪ್ರಬಲ ಸರ್ಕಾರ ಮತ್ತು ಶಿಥಿಲ ವಿರೋಧ.
ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಇದನ್ನು ಸಾಧಿಸಲಾಗಿದೆ. ಹಾಗಾಗಿಯೇ ರಾಜ್ಯದ ರೈತರ ಪಾಲಿಗೆ ಮರಣಶಾಸನವಾಗಲಿರುವ ಕೃಷಿ ಮಸೂದೆ, ಎಪಿಎಂಸಿ ಕಾಯ್ದೆಯ ತಿದ್ದುಪಡಿ, ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ಕಾಯ್ದೆಗಳ ವಿರುದ್ಧ ಒಂದು ಪ್ರಬಲ ರಾಜಕೀಯ ಹೋರಾಟ ರೂಪುಗೊಳ್ಳುತ್ತಿಲ್ಲ.
ಗೋಮಾಂಸ ಸೇವನೆಯ ಹಕ್ಕು ಬಾಧ್ಯತೆಗಳನ್ನು ಕುರಿತು ನಡೆಯುತ್ತಿರುವಷ್ಟು ರಾಜಕೀಯ ಚರ್ಚೆಗಳು, ವಾಗ್ವಾದಗಳು, ಗೋ ಹತ್ಯೆ ನಿಷೇಧದಿಂದ ರೈತಾಪಿಯ ಮೇಲೆ ಉಂಟಾಗುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ನಡೆಯುತ್ತಿಲ್ಲ ಎನ್ನುವುದನ್ನೂ ಗಮನಿಸಬೇಕಿದೆ.
ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಯಿಂದ ಕೃಷಿ ಭೂಮಿ ಉದ್ಯಮಿಗಳ ವಶವಾಗುವ ಅಪಾಯವನ್ನು ರೈತ ಸಂಘಟನೆಗಳು ಗ್ರಹಿಸಿವೆಯಾದರೂ, ರಾಜ್ಯದ ವಿರೋಧ ಪಕ್ಷಗಳು ಒಂದು ಸ್ಪಷ್ಟ ನಿಲುವು ತಳೆಯುವಲ್ಲಿ ವಿಫಲವಾಗಿವೆ. ಮಣ್ಣಿನ ಮಕ್ಕಳ ಪಕ್ಷ ಎಂಬ ಹೆಗ್ಗಳಿಕೆಯೊಂದಿಗೇ ತನ್ನ ಅಸ್ತಿತ್ವ ಉಳಿಸಿಕೊಂಡಿರುವ ಜಾತ್ಯತೀತ ಜನತಾ ದಳ ಭೂ ಸ್ವಾಧೀನ ಕಾಯ್ದೆಯ ತಿದ್ದುಪಡಿಗೆ ಬೆಂಬಲ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗಳ ಬಗ್ಗೆ ಮೌನ ವಹಿಸಿದೆ.
ಈ ನಡುವೆಯೇ ಕರ್ನಾಟಕದ ರಾಜಕಾರಣ ಅಕ್ಷರಶಃ ಹರಾಜು ಮಾರುಕಟ್ಟೆಯಂತಾಗಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಇತ್ತೀಚಿನ ಕೆಲವು ಬೆಳವಣಿಗೆಗಳು ಈ ಮಾರುಕಟ್ಟೆ ರಾಜಕಾರಣವನ್ನು ನಡುಬೀದಿಯಲ್ಲಿ ಬೆತ್ತಲಾಗಿ ನಿಲ್ಲಿಸಿಬಿಟ್ಟಿದೆ.
2008ರ ನಂತರದಲ್ಲಿ ನವ ಉದಾರವಾದಿ ಮಾರುಕಟ್ಟೆ ವ್ಯವಸ್ಥೆ ಜಾಗತಿಕ ಮಟ್ಟದಲ್ಲಿ ಎದುರಿಸಿದ ಬಿಕ್ಕಟ್ಟಿಗೂ, ಭಾರತದ ರಾಜಕಾರಣದಲ್ಲಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳ ನೇರ ಪಾಲ್ಗೊಳ್ಳುವಿಕೆಗೂ ನೇರ ಸಂಬಂಧ ಇರುವುದನ್ನು ಈ ಮಾರುಕಟ್ಟೆ ರಾಜಕಾರಣದಲ್ಲಿ ಗುರುತಿಸಬಹುದು. ಪಕ್ಷಾಂತರ ನಿಷೇಧ ಕಾಯ್ದೆ ಮತ್ತು ಸಾಂವಿಧಾನಿಕ ನಿಯಮ, ಬದ್ಧತೆಗಳನ್ನು ಗಾಳಿಗೆ ತೂರಿ ರಾಜಕೀಯ ಪಕ್ಷಗಳು ಶಾಸಕರನ್ನು ಖರೀದಿಸಲು ಮುಂದಾಗಿದ್ದೂ ಸಹ ಈ ಬಿಕ್ಕಟ್ಟಿನ ನಂತರದಲ್ಲೇ ಎನ್ನುವುದನ್ನೂ ಗಮನಿಸಬೇಕು.
ಜನಸಾಮಾನ್ಯರು ಸುಸ್ಥಿರ ಸರ್ಕಾರ ಬಯಸುತ್ತಾರೆ, ಸುಭದ್ರ ಆಡಳಿತ ಅಪೇಕ್ಷಿಸುತ್ತಾರೆ ಆದರೆ ಒಂದೇ ಪಕ್ಷದ ಸ್ಪಷ್ಟ ಬಹುಮತದ ರಾಜಕೀಯ ಅಧಿಕಾರ ಜನಾಭಿಪ್ರಾಯದ ಒತ್ತಾಸೆಯಲ್ಲ. ಇದು ಮಾರುಕಟ್ಟೆಯ ಅನಿವಾರ್ಯತೆ. ಈ ಅನಿವಾರ್ಯತೆಯನ್ನು ಜನಾಭಿಪ್ರಾಯವಾಗಿ ರೂಪಿಸುವ ಹೊಣೆಯನ್ನು ಕಾರ್ಪೋರೇಟ್ ನಿಯಂತ್ರಿತ ಸುದ್ದಿ ಮಾಧ್ಯಮಗಳು ವಹಿಸಿಕೊಂಡಿವೆ.
ಇದರ ಪರಿಣಾಮ, ಕರ್ನಾಟಕದಲ್ಲಿ ‘ ಅನರ್ಹರ ರಾಜಕಾರಣ ’ ಎನ್ನುವ ಹೊಸ ಪರಿಕಲ್ಪನೆ ಹುಟ್ಟಿಕೊಂಡಿದೆ. ಒಂದು ಪಕ್ಷದಿಂದ ಆಯ್ಕೆಯಾಗಿ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಅನರ್ಹ ಪಟ್ಟ ಪಡೆದು, ಅನರ್ಹರಾಗಿಯೇ ಮತ್ತೊಂದು ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಅಧಿಕಾರ ಪೀಠಕ್ಕೆ ಸನಿಹವಾಗುವ ಒಂದು ಅನಿಷ್ಟ ಪರಂಪರೆಗೆ ರಾಜ್ಯದ ಹಲವು ಅನುಭವಿ ರಾಜಕಾರಣಿಗಳೇ ಸ್ಪಷ್ಟ ಬುನಾದಿ ಹಾಕಿರುವುದು ದುರಂತವಾದರೂ ಸತ್ಯ. ಈ ಬೆಳವಣಿಗೆಯ ಹಿಂದೆ ಮಾರುಕಟ್ಟೆಯ ಶಕ್ತಿ ಇರುವುದನ್ನು ನಿರ್ಲಕ್ಷಿಸಲಾಗುವುದಿಲ್ಲ.
ಈ ನಡುವೆಯೇ ರಾಜ್ಯದ ಲಜ್ಜೆಗೆಟ್ಟ ರಾಜಕಾರಣ ಪರಾಕಾಷ್ಠೆ ತಲುಪಿದೆ. 17 ಮಂದಿ ಅನರ್ಹ ಶಾಸಕರ ಬಲದಿಂದ ಸರ್ಕಾರ ರಚಿಸಿದ ಬಿಜೆಪಿ ಮತ್ತು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಅಸ್ಮಿತೆಗಳನ್ನೂ ಮಾರಿಕೊಂಡು ಬಿಕರಿಯಾಗಿರುವ ಶಾಸಕರು ರಾಜ್ಯ ಶಾಸನಸಭೆಯನ್ನು ತರಕಾರಿ ಮಾರುಕಟ್ಟೆಯಂತೆ ಬಳಸುತ್ತಿದ್ದಾರೆ. ಸಚಿವ ಪದವಿ, ನಿಗಮ ಮಂಡಲಿ ಅಧ್ಯಕ್ಷ ಪದವಿ ಇಲ್ಲದೆ ಹೋದರೆ ಈ ಜನ ನಾಯಕರ ಜನಸೇವೆಯೇ ಸ್ಥಗಿತವಾಗಿಬಿಡುತ್ತದೆ.
‘ಜನಸೇವೆಯೇ ಜನಾರ್ಧನ ಸೇವೆ’ ಎನ್ನುವ ಘೋಷವಾಕ್ಯ ಎಂದೋ ಮೂಲೆಗೆ ಸೇರಿದ್ದು ಇಂದು ಧನಾರ್ಜನೆಯೇ ಜನಸೇವೆಯ ಗುರಿಯಾಗಿರುವುದು ಸ್ಪಷ್ಟ. ಗ್ರಾಮಪಂಚಾಯತ್ ಮಟ್ಟದಲ್ಲಿ ಸ್ಥಾನಗಳೇ ಹರಾಜು ಹಾಕಲ್ಪಟ್ಟರೆ, ರಾಜ್ಯ ಸರ್ಕಾರದಲ್ಲಿ ಸಚಿವ ಪದವಿ ಹರಾಜು ಹಾಕಲಾಗುತ್ತಿದೆ. ಒಂದು ರಹಸ್ಯ ಸಿ ಡಿ ಇಡೀ ರಾಜ್ಯ ರಾಜಕಾರಣವನ್ನು ಬೆತ್ತಲಾಗಿಸುತ್ತಿದೆ. ಶಾಸಕರನ್ನು ಖುಲ್ಲಂಖುಲ್ಲಾ ಖರೀದಿಸುವ ಪ್ರಕ್ರಿಯೆಗೆ ಆಪರೇಷನ್ ಕಮಲ ಹೆಸರಿನಲ್ಲಿ ಚಾಲನೆ ನೀಡಿದ ಬಿಜೆಪಿಯ ನಾಯಕತ್ವ ಇಂದಿನ ಹದಗೆಟ್ಟ ಪರಿಸ್ಥಿಗೆ ಸಂಪೂರ್ಣ ಹೊಣೆ ಹೊರಬೇಕಿದೆ.
17 ಶಾಸಕರನ್ನು ಬಿಜೆಪಿಗೆ ತರಲು ನೂತನ ಸಚಿವ ಯೋಗೇಶ್ವರ್ 9 ಕೋಟಿ ರೂ ಸಾಲ ಮಾಡಿದ್ದಾರೆ ಎಂದು ಮತ್ತೋರ್ವ ಮಾಜಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅಂದರೆ ಈ ಶಾಸಕರ ನಿಷ್ಠೆಯನ್ನು ಖರೀದಿಸಲು ಹಣಕಾಸು ವ್ಯವಹಾರ ನಡೆದಿದೆ ಎನ್ನುವುದು ಸ್ಪಷ್ಟವಾಗುತ್ತದೆ. 9 ಕೋಟಿ ರೂ ಸಾಲ ಮಾಡುವ ವ್ಯಕ್ತಿ 90 ಕೋಟಿ ರೂ ಖರ್ಚು ಮಾಡುವ ಸಾಮರ್ಥ್ಯ ಹೊಂದಿರುತ್ತಾನೆ.
ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರು ನಿಷ್ಠೆಯಿಂದ ಪವಿತ್ರ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿ ಶಾಸನಸಭೆಗೆ ಕಳುಹಿಸುವ ಶಾಸಕರು ಈ ರೀತಿ ಬಿಕರಿಯಾಗುವುದೇ ಪ್ರಜಾತಂತ್ರ ಮೌಲ್ಯಗಳಿಗೆ ಅಪಚಾರ ಎಸಗಿದಂತಲ್ಲವೇ ? ಈ ಕನಿಷ್ಠ ಪ್ರಜ್ಞೆ ರಾಜಕಾರಣಿಗಳಲ್ಲಿ ಇರುವುದಿಲ್ಲ ಏಕೆಂದರೆ ಅವರ ದೃಷ್ಟಿ ಅಧಿಕಾರ ಪೀಠದ ಮೇಲಿರುತ್ತದೆ. ಆದರೆ ಪ್ರಜ್ಞಾವಂತ ನಾಗರಿಕರಲ್ಲಿ ಈ ಪ್ರಜ್ಞೆ ಇರಬೇಕಲ್ಲವೇ ?
ಮುಖ್ಯಮಂತ್ರಿ ಯಡಿಯೂರಪ್ಪ ಬ್ಲಾಕ್ಮೇಲ್ ರಾಜಕಾರಣಕ್ಕೆ ಬಲಿಯಾಗಿದ್ದಾರೆ ಎಂದು ನಿರೂಪಿಸಲು ತಮ್ಮ ಬಳಿ ಇರುವ ರಹಸ್ಯ ಸಿ ಡಿ ಒಂದನ್ನು ಗುರಾಣಿಯಂತೆ ಬಳಸುತ್ತಿರುವ ಬಸನಗೌಡ ಪಾಟಿಲ್ ಯತ್ನಾಳ್ ಅವರಿಗೆ ಸಂವಿಧಾನ ಮತ್ತು ಸಾಂವಿಧಾನಿಕ ಮೌಲ್ಯಗಳ ಬಗ್ಗೆ ಕಿಂಚಿತ್ತಾದರೂ ಗೌರವ ಇದ್ದಿದ್ದಲ್ಲಿ ಈ.
ಸಿ ಡಿಯನ್ನು ಎಂದೋ ಸಾರ್ವಜನಿಕರ ಮುಂದೆ ಬಹಿರಂಗಪಡಿಸುತ್ತಿದ್ದರು. ತಮ್ಮ ಸ್ವಾರ್ಥ ಸಾಧನೆಗೆ ‘ಯಾರೂ ನೋಡಲಾಗದಂತಹ’ ಸಿ ಡಿ ಒಂದನ್ನು ಅಸ್ತ್ರವನ್ನಾಗಿ ಬಳಸುವುದು ಹೊಲಸು ರಾಜಕಾರಣವಲ್ಲವೇ ? ಒಂದು ವೇಳೆ ಯತ್ನಾಳ್ ಅವರ ಬೇಡಿಕೆಗಳು ಈಡೇರಿದರೆ ಈ
ಸಿ ಡಿಯಲ್ಲಿ ಇರಬಹುದಾದ ಅವ್ಯವಹಾರಗಳ ದಾಖಲೆಗಳು ಶಾಶ್ವತವಾಗಿ ಭೂಗತವಾಗಿಬಿಡುತ್ತವೆ ಅಲ್ಲವೇ ?
ಸಿ ಡಿ ರಾಜಕಾರಣ, ರೆಸಾರ್ಟ್ ರಾಜಕಾರಣ ಮತ್ತು ಬ್ಲಾಕ್ಮೇಲ್ ರಾಜಕಾರಣ ಈ ಮೂರೂ ವಿದ್ಯಮಾನಗಳ ಹಿಂದೆ ಕಾರ್ಪೋರೇಟ್ ಬಂಡವಾಳ, ಕರಾಳ ದಂಧೆಯ ಕಪ್ಪುಹಣ ಮತ್ತು ಮಾರುಕಟ್ಟೆ ಮಾಫಿಯಾದ ಛಾಯೆ ಇರುವುದನ್ನು ಗಮನಿಸದೆ ಹೋದರೆ ಬಹುಶಃ ಮುಂದಿನ ದಿನಗಳಲ್ಲಿ ಚುನಾವಣೆಗಳೇ ಒಂದು ಹಾಸ್ಯ ಪ್ರಹಸನವಾಗಿಬಿಡುತ್ತದೆ. ಇಡೀ ಪ್ರಜಾತಂತ್ರ ವ್ಯವಸ್ಥೆಯನ್ನು ಮಾರುಕಟ್ಟೆ ಶಕ್ತಿಗಳು ಆಕ್ರಮಿಸುತ್ತವೆ.
ಜನರು ಜನಪ್ರತಿನಿಧಿಗಳಿಗೆ ಮತ ನೀಡಿದರೆ, ಧನಿಕರು ಧನಪ್ರತಿನಿಧಿಗಳನ್ನು ಶಾಸನ ಸಭೆಗಳಿಗೆ ಕಳಿಸುತ್ತಾರೆ. ಏಕಂದರೆ ಹಣಕಾಸು ಬಂಡವಾಳಿಗರ ಹೂಡಿಕೆಗೆ ವಂದಿಮಾಗಧರ ಬೃಹತ್ ಪಡೆಯ ಅವಶ್ಯಕತೆ ಇರುತ್ತದೆ. ಕೇಂದ್ರ ಸರ್ಕಾರದ ಕೃಷಿ ಮಸೂದೆಗಳು ಇದಕ್ಕೊಂದು ಸ್ಪಷ್ಟ ಉದಾಹರಣೆ. 101 ರೈತರ ಸಾವಿಗೆ ಕನಿಷ್ಠ ಅನುಕಂಪ ತೋರುವುದಕ್ಕೂ ಮುಂದಾಗದ ನರೇಂದ್ರ ಮೋದಿ ಸರ್ಕಾರ ಮಾರುಕಟ್ಟೆ ಶಕ್ತಿಗಳ ಕಬಂಧ ಬಾಹುಗಳಲ್ಲಿ ಸಿಲುಕುವ ಒಂದು ಚುನಾಯಿತ ಸರ್ಕಾರ ಹೇಗಿರುತ್ತದೆ ಎನ್ನುವುದನ್ನು ನಿರೂಪಿಸಿದೆ.
ಈ ಹಿನ್ನೆಲೆಯಲ್ಲೇ ಕರ್ನಾಟಕದ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಬೇಕಿದೆ. ಮೊದಲು ಶಾಸಕರಲ್ಲಿ ಎರಡೇ ಪ್ರಭೇದಗಳಿದ್ದವು. ಹಾಲಿ ಮತ್ತು ಮಾಜಿ. ಈಗ ಅರ್ಹ-ಅನರ್ಹ, ಸಂತೃಪ್ತ-ಅತೃಪ್ತ, ಮೂಲ-ವಲಸಿಗ ಹೀಗೆ ಹಲವು ಪ್ರಭೇದಗಳು ಹುಟ್ಟಿಕೊಂಡಿವೆ.
ಈ ಗೊಂದಲದ ನಡುವೆ ‘ ಪ್ರಾಮಾಣಿಕ ಶಾಸಕ ’ ರ ಸಂತತಿಯೇ ನಶಿಸುತ್ತಿದೆ. ‘ ಜನಪರ ಕಾಳಜಿ ’ ಮತ್ತು ‘ ಜನ ಸೇವೆ ’ ಎಂಬ ಪರಿಕಲ್ಪನೆಗಳು ಹರಾಜು ಮಾರುಕಟ್ಟೆಯಲ್ಲಿ ಬಿಕರಿಯಾಗುವ ಕಚ್ಚಾ ವಸ್ತುಗಳಾಗಿದ್ದು, ಇವೆರಡರ ಪರಿವೆಯೇ ಇಲ್ಲದ ನಾಯಕರಿಗೆ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಬೆಲೆ ನಿಗದಿಯಾಗುತ್ತದೆ. 17 ಶಾಸಕರನ್ನು ಒಂದುಗೂಡಿಸಲು 9 ಕೋಟಿ ರೂ ಖರ್ಚು ಮಾಡುವ ಒಂದು ವ್ಯವಸ್ಥೆಗೆ ಇದೂ ಒಂದು ಕಾರಣ.
ಕೆಂಗಲ್ ಹನುಮಂತಯ್ಯನವರಿಂದ ಜೆ ಹೆಚ್ ಪಟೇಲ್ ವರೆಗಿನ ಒಂದು ರಾಜಕೀಯ ಪರಂಪರೆ ಪ್ರಾಚೀನ ವ್ಯವಸ್ಥೆಯ ಪಳೆಯುಳಿಕೆಯಂತೆ ಕಂಡುಬಂದರೆ, ಈ ಅಧಃಪತನದ ಹಿಂದೆ ಮಾರುಕಟ್ಟೆ ಬಂಡವಾಳ ಮತ್ತು ಅಧಿಕಾರ ರಾಜಕಾರಣದ ಹಂಬಲ ಪ್ರಬಲ ಶಕ್ತಿಗಳಾಗಿ ಕಂಡುಬರುತ್ತವೆ.
ಈ ನಡುವೆ ರಾಜ್ಯ ರಾಜಕಾರಣದಲ್ಲಿ ಸದಾ ಕೇಳಿಬರುತ್ತಿದ್ದ ಮೌಲ್ಯ, ತತ್ವ , ಸಿದ್ಧಾಂತ ಮತ್ತು ಸಾಂವಿಧಾನಿಕ ಬದ್ಧತೆ ಮುಂತಾದ ಪದಗಳು ಇತಿಹಾಸದ ಕಸದಬುಟ್ಟಿ ಸೇರಿಬಿಟ್ಟಿವೆ. ಈ ಹೊಲಸು ರಾಜಕಾರಣಕ್ಕೆ ಕರ್ನಾಟಕವೇ ತವರು ಎನ್ನುವುದು ಚರಿತ್ರೆಯ ದೊಡ್ಡ ದುರಂತ. ಆದರೆ ಇದು ವಾಸ್ತವ.
ಈ ಪರಿಸ್ಥಿತಿಗೆ ಯಾರು ಕಾರಣ ? ಪ್ರಜ್ಞೆ ಕಳೆದುಕೊಂಡಿರುವ ನಾಗರಿಕರೋ ಸ್ವಂತಿಕೆ ಕಳೆದುಕೊಂಡಿರುವ ರಾಜಕಾರಣಿಗಳೋ ? ನಜೀರ್ ಸಾಬ್ ಕೇಳ್ತಿದಾರೆ, ಉತ್ತರ ಕೊಡಿ !
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾರಾಯಣ ಗೌಡರು ಯಾರು..? ಅಂದ ಸಚಿವ ಡಾ.ಸುಧಾಕರ್ ಕ್ಷಮೆಯಾಚಿಸಲೇ ಬೇಕು

- ದಿವ್ಯಶ್ರೀ.ವಿ, ಬೆಂಗಳೂರು
ತನ್ನ ಬದುಕಿನಲ್ಲಿ ಕಿಂಚಿತ್ತು ಸ್ವಾರ್ಥವಿಲ್ಲದೆ ನಮ್ಮ ನಾಡಿಗೋಸ್ಕರ ಕನ್ನಡಿಗರಿಗೋಸ್ಕರ ತಮ್ಮ ಬದುಕನ್ನು ಮುಡುಪಾಗಿಟ್ಟಿರುವ ಕೆಚ್ಚೆದೆಯ ಕನ್ನಡಿಗ ಎಂದರೆ ನಾರಾಯಣ ಗೌಡರು.
ಇವರೆಂದರೆ ಪುಟ್ಟ ಪುಟ್ಟ ಮಕ್ಕಳು ಕೂಡ ಗೊತ್ತು ಎನ್ನುತ್ತಾರೆ ಆದರೆ ಬೇಸರದ ಸ್ಥಿತಿ ಏನೆಂದರೆ ನಮ್ಮ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರಿಗೆ ಮಾತ್ರ ನಮ್ಮ ಗೌಡ್ರು ಯಾರೆಂದು ಗೊತ್ತಿಲ್ಲ ಎನ್ನುವ ಮಾತು ನಿಜಕ್ಕೂ ಖಂಡನೀಯ.
ನಮ್ಮ ಕರ್ನಾಟಕದಲ್ಲಷ್ಟೇ ಅಲ್ಲದೆ ಇತರ ರಾಜ್ಯ ಮತ್ತು ದೇಶಗಳಿಗೆ ನಮ್ಮ ಗೌಡರು ಪರಿಚಯ ಅಂತಹುದರಲ್ಲಿ ನಮ್ಮ ರಾಜ್ಯದ ಸಚಿವರಿಗೆ ಗೊತ್ತಿಲ್ಲ ಎನ್ನುವುದು ಮೂರ್ಖತನ ಪರಮಾವಧಿ. ಇವರ ಹೇಳಿಕೆಯಿಂದ ಎಲ್ಲಾ ಕನ್ನಡಿಗರಿಗೆ ಕಾಡುವ ಪ್ರಶ್ನೆ ಎಂದರೆ ನಮ್ಮ ಸಚಿವರಾದ ಡಾ. ಸುಧಾಕರ್ ಅವರು ನಿಜಕ್ಕು ಕನ್ನಡಿಗರ ಎನ್ನುವುದು!
ಲಿಂಕ್ ಮೇಲೆ ಕ್ಲಿಕ್ ಮಾಡಿ
https://www.facebook.com/tv5kannadatv/videos/119132520071641/
ಅಂದು ಬಾಗೇಪಲ್ಲಿಯಲ್ಲಿ ಜನರಿಗೆ ಕುಡಿಯುವ ನೀರಿನ ಕೊರತೆಯಾಗಿತ್ತು. ಬಾಗೇಪಲ್ಲಿ ಜನರಿಗೋಸ್ಕರ ಕುಡಿಯುವ ನೀರಿಗಾಗಿ ಚಿತ್ರಾವತಿ ನದಿಗೊಂದು ಅಣೆಕಟ್ಟು ನಿರ್ಮಿಸಲು ಅಂದಿನ ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಅಂದು ಆಂಧ್ರಪ್ರದೇಶದ ಸರ್ಕಾರ ಈ ಯೋಜನೆಗೆ ಕಿರುಕುಳ ಕೊಡಲು ಆರಂಭಿಸುತ್ತಾರೆ.
ಆದುದರಿಂದ ಬಾಗೇಪಲ್ಲಿಯಲ್ಲಾದರೂ ಅಣೆಕಟ್ಟು ಕಟ್ಟಲು ಪ್ರಾರಂಭಿಸುತ್ತಾರೆ. ಆದರೆ ಅಂದು ಬಂದಂತಹ ಬೆದರಿಕೆಯ ಮಾತುಗಳು ತೊಂದರೆಗಳನ್ನು ಎದುರಿಸಲು ಯಾರೊಬ್ಬರೂ ಮುಂದಾಗಲಿಲ್ಲ ಆಗಿದ್ದು ನಮ್ಮ ಗೌಡರು ಮಾತ್ರ.ಅಂದು ಎಂತಹ ಬೆದರಿಕೆ ಬಂದರು ಹೆದರದೆ ನೇರವಾಗಿ ಸ್ವೀಕರಿಸಿದ್ದು ಹೆಮ್ಮೆಯ ಕನ್ನಡಿಗ ನಾರಾಯಣಗೌಡರು.
ಯಾರ ಮಾತಿಗೂ ಅವರು ಹೆದರದೆ ಬಾಗೇಪಲ್ಲಿಯ ಅಣೆಕಟ್ಟು ನಿರ್ಮಾಣದ ಪರವಾಗಿ ತೀವ್ರ ಸ್ವರೂಪದ ಹೋರಾಟ ನಡೆಸಿದರು. ಬೆಂಗಳೂರಿನ ಕೆಂಪೇಗೌಡ ಪ್ರತಿಮೆಯಿಂದ ಬಾಗೇಪಲ್ಲಿಗೆ ತಮ್ಮ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಹೋರಾಟ ನಡೆಸಿದರು ಅಂದು ಹೊರಟ ಅತ್ಯಂತ ಯಶಸ್ವಿಯಾಗಿ ನಡೆಯಿತು. ಮತ್ತು ಯಾವುದೇ ತೊಂದರೆ ಇಲ್ಲದೆ ಹಣೆಕಟ್ಟು ಕೂಡ ನಿರ್ಮಾಣವಾಯಿತು.
ಸಾವಿರಾರು ಜನರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ನಮ್ಮ ಗೌಡರು ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಣೆಕಟ್ಟಿನ ಮೊದಲ ಬಾಗಿನ ಪೂಜೆಯನ್ನು ನಮ್ಮ ಗೌಡರ ಕೈಯಿಂದ ನೆರವೇರಿದೆ ಇದೆಲ್ಲವೂ ಡಾ.ಸುಧಾಕರ್ ಅವರು ರಾಜಕೀಯಕ್ಕೆ ಬರುವ ಮುಂಚೆಯೇ ಆಗಿರುವ ಘಟನೆ.
ಚಿಕ್ಕಬಳ್ಳಾಪುರದಲ್ಲಿ ಹುಟ್ಟಿದ ನಮ್ಮ ಸಚಿವರಿಗೆ ಯಾರಿಗೋಸ್ಕರ ಯಾರು ಏನು ಮಾಡಿದರು ಎಷ್ಟು ಸಹಾಯ ಮಾಡಿದರು ಎಂದು ಪ್ರಜ್ಞೆಯಿಲ್ಲ. ತಮ್ಮಊರಲ್ಲಿ ಅಣೆಕಟ್ಟೆ ಗಾಗಿ ಹೋರಾಡಿದ ವ್ಯಕ್ತಿಯ ಹೆಸರು ಕೂಡ ಗೊತ್ತಿಲ್ಲ ಎಂದರೆ ಇವರೆಂತಹ ಸಚಿವರು ತಮ್ಮ ಊರಿನ ಬಗ್ಗೆ ಗೊತ್ತಿಲ್ಲ ಇನ್ನೂ ರಾಜ್ಯಕ್ಕೆ ಏನು ಮಾಡುವರು ಎನ್ನುವುದು ಯಕ್ಷಪ್ರಶ್ನೆಯಾಗಿದೆ. ನಮ್ಮ ಸಚಿವರು ಈ ಹೇಳಿಕೆಗೆ ಕನ್ನಡಿಗರ ಮುಂದೆ ಮುಖ್ಯವಾಗಿ ಕರವೇ ಕಾರ್ಯಕರ್ತರ ಮುಂದೆ ಕ್ಷಮೆಯನ್ನು ಯಾಚಿಸಲೇಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ7 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ3 days ago
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ