Connect with us

ದಿನದ ಸುದ್ದಿ

ಟಿಪ್ಪು ಜಯಂತಿ ರದ್ದು | ಬಿಜೆಪಿ ನಾಯಕರು ಇತಿಹಾಸದ ಅರಿವಿಲ್ಲದ ಮೂಢರು : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು : ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ. ಟಿಪ್ಪು ಸುಲ್ತಾನ್ ಬ್ರಿಟೀಷರ ವಿರುದ್ಧ ಹೋರಾಡುತ್ತಲೇ ವೀರಮರಣ ಹೊಂದಿದ ಹುತಾತ್ಮ. ಕೋಮುವಾದವನ್ನೇ ತಲೆಯಲ್ಲಿ ತುಂಬಿಕೊಂಡಿರುವ ಬಿಜೆಪಿ ನಾಯಕರು ಇತಿಹಾಸದ ಅರಿವಿಲ್ಲದ ಮೂಢರು ಎಂದು ಮಾಜಿ‌ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಟಿಪ್ಪು ಸುಲ್ತಾನ್ ದೇಶದ ಮೊದಲ‌ ಸ್ವಾತಂತ್ರ್ಯ ಹೋರಾಟಗಾರ. ನಾಡಿಗಾಗಿ ಮಕ್ಕಳನ್ನೇ ಒತ್ತೆ ಇಟ್ಟ ಅಪ್ರತಿಮ ದೇಶಭಕ್ತ. ಸ್ವಾತಂತ್ರ್ಯ ಹೋರಾಟದಲ್ಲಿಯೇ ಭಾಗವಹಿಸದ ಸಂಘ ಪರಿವಾರಕ್ಕೆ ಇದೆಲ್ಲ ಅರ್ಥವಾಗುವ ವಿಷಯ ಅಲ್ಲ. ಟಿಪ್ಪು ಸುಲ್ತಾನ್ ಒಂದು ಧರ್ಮಕ್ಕೆ ಸೇರಿದವರಲ್ಲ. ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಇಡೀ ದೇಶಕ್ಕೆ ಸೇರಿರುವ ಆಸ್ತಿ. ಈ ಕಾರಣಕ್ಕಾಗಿಯೇ ಟಿಪ್ಪು ಜಯಂತಿ ಆಚರಣೆಯ ನಿರ್ಧಾರ ಕೈಗೊಂಡಿದ್ದೆ. ಜಾತಿ-ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆಯಲು ಹೊರಟಿರುವ ಬಿಜೆಪಿಯ ನಡೆ ಅನಿರೀಕ್ಷಿತವೇನಲ್ಲ‌ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿಂದೆ ಬಿ.ಎಸ್.ಯಡಿಯೂರಪ್ಪನವರು ಕೈಯಲ್ಲಿ ಕತ್ತಿ ಹಿಡಿದು ಟಿಪ್ಪು ವೇಷ ಹಾಕಿ ಕುಣಿದಾಡುತ್ತಾ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಈಗ ಸಂಘ ಪರಿವಾರವನ್ನು ಖುಷಿಪಡಿಸಲು ಟಿಪ್ಪು ಜಯಂತಿ ರದ್ದು ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್| 9980346243

ದಿನದ ಸುದ್ದಿ

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

Published

on

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ

  • ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ
  • ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ ನೀರು ಸರಬರಾಜು ಸ್ಥಗಿತದ ಆತಂಕ
  • 24 ಗಂಟೆ ಕುಡಿಯುವ ನೀರಿನ ಕನಸಿಗೆ ತಾತ್ಕಾಲಿಕ ಬ್ರೇಕ್
  • ದಿನಕ್ಕೆ 8 ಗಂಟೆಗೆ ಮಾತ್ರ ನೀರು ಪೂರೈಕೆ 

ಸುದ್ದಿದಿನ,ಹರಿಹರ: ಮುಂಗಾರು ಮಳೆ ಕೈಕೊಟ್ಟ ಬೆನ್ನಲ್ಲೇ ಜಿಲ್ಲೆಯ ಜೀವನಾಡಿ ತುಂಗಭದ್ರಾ ನದಿಯ ನೀರಿನ ಹರಿವು ಗಣನೀಯವಾಗಿ ಕುಸಿದಿದ್ದು, ಇದರ ನೇರ ಪರಿಣಾಮ ಹರಿಹರ ನಗರದ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಮೇಲೆ ಬಿದ್ದಿದೆ.

ನಗರದ ಜನತೆಗೆ 24 ಗಂಟೆಯೂ ಕುಡಿಯುವ ನೀರು ಪೂರೈಸುವ ಉದ್ದೇಶದಿಂದ ಜಾರಿಗೊಂಡಿರುವ ‘ಜಲಸಿರಿ’ ಯೋಜನೆಗೆ ಇದೀಗ ನೀರಿನ ಕೊರತೆಯ ಸವಾಲು ಎದುರಾಗಿದೆ. ನದಿಯಲ್ಲಿ ನೀರಿನ ಹರಿವು ಕನಿಷ್ಠ ಮಟ್ಟಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ ನಗರಸಭೆ ನೀರು ಪೂರೈಕೆಯ ಸಮಯವನ್ನು ಕಡಿತಗೊಳಿಸುವ ನಿರ್ಧಾರ ಕೈಗೊಂಡಿದೆ.

ಇನ್ನು ಮುಂದೆ ಬೆಳಿಗ್ಗೆ 6ರಿಂದ 10ರವರೆಗೆ ಹಾಗೂ ಸಂಜೆ 6ರಿಂದ ರಾತ್ರಿ 10ರವರೆಗೆ ಮಾತ್ರ ನಗರದಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದು ನಗರಸಭೆ ಪ್ರಕಟಿಸಿದೆ.

Visit:

http://Visit : www.suddidina.com

ಮಳೆ ಬರಬೇಕಿದ್ದ ಕಾಲದಲ್ಲಿ ನದಿ ಹರಿವು ಕುಸಿತ

ಸಾಮಾನ್ಯವಾಗಿ ಈ ಅವಧಿಯಲ್ಲಿ ಮುಂಗಾರು ಮಳೆಯಿಂದ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಬೇಕಿತ್ತು. ಆದರೆ ಮಳೆಯ ಕೊರತೆಯಿಂದಾಗಿ ನದಿಯ ನೀರಿನ ಮಟ್ಟವೇ ಕುಸಿದಿದೆ. ನದಿ ನೀರನ್ನೇ ಅವಲಂಬಿಸಿರುವ ಹರಿಹರ ನಗರದ ಕುಡಿಯುವ ನೀರಿನ ವ್ಯವಸ್ಥೆಗೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ನೀರಿನ ಮೂಲದಲ್ಲೇ ಲಭ್ಯತೆ ಕಡಿಮೆಯಾದರೆ, ಶುದ್ಧೀಕರಣ ಮತ್ತು ಪೂರೈಕೆ ವ್ಯವಸ್ಥೆ ಇದ್ದರೂ ನಗರಕ್ಕೆ ಅಗತ್ಯ ಪ್ರಮಾಣದ ನೀರು ತಲುಪಿಸುವುದು ಕಷ್ಟವಾಗುತ್ತದೆ. ಹೀಗಾಗಿ ‘ಜಲಸಿರಿ’ ಯೋಜನೆಯ 24 ಗಂಟೆಗಳ ನೀರು ಪೂರೈಕೆಯ ಗುರಿಗೆ ಸದ್ಯಕ್ಕೆ ಅಡ್ಡಿಯಾಗಿದೆ.

ಜಾಕ್‌ವೆಲ್ ಬಳಿ ನೀರಿಗಾಗಿ ತಾತ್ಕಾಲಿಕ ತಡೆ

ಹರಿಹರ ನಗರಕ್ಕೆ ನೀರು ಪೂರೈಸುವ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ರಾಣೆಬೆನ್ನೂರು ತಾಲೂಕಿನ ಕವಲತ್ತು ಗ್ರಾಮದ ನದಿ ದಡದಲ್ಲಿರುವ ಜಾಕ್‌ವೆಲ್ ಬಳಿ ನೀರಿನ ಪ್ರಮಾಣ ಆತಂಕಕಾರಿ ಮಟ್ಟಕ್ಕೆ ಇಳಿದಿದೆ. ಜಾಕ್‌ವೆಲ್‌ಗೆ ಅಗತ್ಯ ಪ್ರಮಾಣದ ನೀರು ಲಭ್ಯವಾಗುವಂತೆ ಮಾಡಲು ನಗರಸಭೆ ಇದೀಗ ತಾತ್ಕಾಲಿಕ ಕ್ರಮಕ್ಕೆ ಮುಂದಾಗಿದೆ. ಲಭ್ಯವಿರುವ ನೀರನ್ನು ಒಂದು ಕಡೆ ತಡೆದು ಸಂಗ್ರಹಿಸಿಕೊಳ್ಳುವ ಉದ್ದೇಶದಿಂದ ಜಾಕ್‌ವೆಲ್ ಬಳಿ ಕಲ್ಲಿನ ತಾತ್ಕಾಲಿಕ ಗೋಡೆ ನಿರ್ಮಿಸುವ ಕಾಮಗಾರಿ ಕೈಗೊಳ್ಳಲಾಗಿದೆ. ನದಿಯಲ್ಲಿ ಹರಿವು ಕಡಿಮೆಯಾಗಿರುವ ಸಂದರ್ಭದಲ್ಲಿ ಲಭ್ಯವಿರುವ ನೀರಿನ ಪ್ರತಿಯೊಂದು ಪ್ರಮಾಣವನ್ನೂ ಸಮರ್ಪಕವಾಗಿ ಬಳಸಿಕೊಳ್ಳುವ ಪ್ರಯತ್ನ ಇದಾಗಿದೆ.

ದಿನಕ್ಕೆ 8 ಗಂಟೆ ಮಾತ್ರ ನೀರು

ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನಗರಸಭೆ ನೀರು ಪೂರೈಕೆ ವೇಳಾಪಟ್ಟಿಯನ್ನು ಬದಲಿಸಿದ್ದು ಬೆಳಿಗ್ಗೆ 6 ರಿಂದ 10 ಗಂಟೆ ಹಾಗೂ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಅಂದರೆ ಒಟ್ಟು 8 ಗಂಟೆಗಳ ಕಾಲ ಮಾತ್ರ ನೀರು ಪೂರೈಕೆ ನಡೆಯಲಿದೆ. ಇದರೊಂದಿಗೆ ನಗರದ ಜನತೆ ನೀರನ್ನು ಮಿತವಾಗಿ ಬಳಸುವಂತೆ ನಗರಸಭೆ ಮನವಿ ಮಾಡಿದೆ. ಕುಡಿಯುವ ನೀರನ್ನು ಕಾಯಿಸಿ ಆರಿಸಿ ಬಳಸುವಂತೆ ಸಾರ್ವಜನಿಕರಿಗೆ ಸೂಚನೆಯನ್ನೂ ನೀಡಲಾಗಿದೆ.

ಮಳೆ ಮತ್ತಷ್ಟು ತಡವಾದರೆ ಏನಾಗಬಹುದು?

ಈಗಿರುವ ಸಮಸ್ಯೆ ತಾತ್ಕಾಲಿಕವಾಗಿ ನೀರು ಪೂರೈಕೆ ಸಮಯ ಕಡಿತಗೊಳಿಸುವ ಹಂತದಲ್ಲಿದೆ. ಆದರೆ ಇದೇ ಪರಿಸ್ಥಿತಿ ಮುಂದುವರಿದು ಮಳೆ ಮತ್ತಷ್ಟು ತಡವಾದರೆ ಸಮಸ್ಯೆ ಇನ್ನಷ್ಟು ಗಂಭೀರವಾಗುವ ಸಾಧ್ಯತೆಯಿದೆ. ನದಿಯಲ್ಲಿ ನೀರಿನ ಹರಿವು ಮತ್ತಷ್ಟು ಕುಸಿದರೆ ಜಾಕ್‌ವೆಲ್‌ಗೆ ಅಗತ್ಯ ಪ್ರಮಾಣದ ನೀರು ದೊರೆಯದೇ ಹೋಗಬಹುದು. ಅಂತಹ ಪರಿಸ್ಥಿತಿಯಲ್ಲಿ ನಗರಕ್ಕೆ ನೀರು ಪೂರೈಸುವುದೇ ಸವಾಲಾಗಬಹುದು. ಮಳೆ ವಿಳಂಬವಾದಷ್ಟೂ ನೀರಿನ ಬಿಕ್ಕಟ್ಟಿನ ಆತಂಕ ಹೆಚ್ಚಾಗಲಿದೆ. ಸಂಪೂರ್ಣ ನೀರು ಸರಬರಾಜು ಸ್ಥಗಿತಗೊಳ್ಳುವ ಪರಿಸ್ಥಿತಿ ಎದುರಾದರೆ ಹರಿಹರ ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗುವ ಸಾಧ್ಯತೆಯೂ ಇದೆ.

‘ಜಲಸಿರಿ’ ಮುಂದೆ ಹೊಸ ಸವಾಲು

24 ಗಂಟೆ ಕುಡಿಯುವ ನೀರು ಪೂರೈಸುವ ಯೋಜನೆ ನಗರದ ಜನರಿಗೆ ಅನುಕೂಲ ಕಲ್ಪಿಸುವ ಪ್ರಮುಖ ಮೂಲಸೌಕರ್ಯ ವ್ಯವಸ್ಥೆಯಾಗಿದೆ. ಆದರೆ ಯಾವುದೇ ನೀರು ಪೂರೈಕೆ ಯೋಜನೆಯ ಯಶಸ್ಸು ಅದರ ಮೂಲ ನೀರಿನ ಲಭ್ಯತೆಯ ಮೇಲೆಯೇ ಅವಲಂಬಿತವಾಗಿದೆ. ಇದೀಗ ತುಂಗಭದ್ರಾ ನದಿಯ ಹರಿವು ಕುಸಿದಿರುವುದು ‘ಜಲಸಿರಿ’ ಯೋಜನೆಯ ಮುಂದೆಯೂ ಪ್ರಕೃತಿ ಆಧಾರಿತ ಸವಾಲುಗಳನ್ನು ತೆರೆದಿಟ್ಟಿದೆ. ಯೋಜನೆ, ಪೈಪ್‌ಲೈನ್‌, ಪಂಪಿಂಗ್ ವ್ಯವಸ್ಥೆ ಮತ್ತು ಶುದ್ಧೀಕರಣ ಘಟಕಗಳಿದ್ದರೂ ಮೂಲದಲ್ಲೇ ನೀರು ಕಡಿಮೆಯಾದರೆ ನಗರಕ್ಕೆ ನೀರು ತಲುಪಿಸುವುದು ಕಷ್ಟ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಜನರ ಜವಾಬ್ದಾರಿಯೂ ಮುಖ್ಯ

ನೀರಿನ ಕೊರತೆಯ ಸಂದರ್ಭದಲ್ಲಿ ನಗರಸಭೆಯ ಕ್ರಮಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ನಿರ್ಣಾಯಕವಾಗಲಿದೆ. ಅಗತ್ಯಕ್ಕಿಂತ ಹೆಚ್ಚು ನೀರು ಬಳಸದೇ ಇರುವುದು, ನೀರು ಸೋರಿಕೆಯಾಗದಂತೆ ನೋಡಿಕೊಳ್ಳುವುದು ಹಾಗೂ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡದಿರುವುದು ಸದ್ಯದ ಪರಿಸ್ಥಿತಿಯಲ್ಲಿ ಅತ್ಯಂತ ಮುಖ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ನೀರಿನ ಬಳಕೆಯನ್ನು ನಿಯಂತ್ರಿಸುವ ಮೂಲಕ ಲಭ್ಯವಿರುವ ನೀರನ್ನು ಹೆಚ್ಚು ದಿನಗಳವರೆಗೆ ಬಳಸಿಕೊಳ್ಳಲು ಸಾಧ್ಯವಾಗಬಹುದು.

ತುಂಗಭದ್ರಾ ಮೇಲೆ ಕಣ್ಣು

ಹರಿಹರದ ಕುಡಿಯುವ ನೀರಿನ ಪರಿಸ್ಥಿತಿ ಇದೀಗ ಮುಂಗಾರು ಮಳೆಯೊಂದಿಗೆ ನೇರವಾಗಿ ಬೆಸೆದುಕೊಂಡಿದೆ. ಮಳೆ ಬಂದರೆ ನದಿಯ ಹರಿವು ಸುಧಾರಿಸಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ. ಆದರೆ ಮಳೆ ಮತ್ತಷ್ಟು ವಿಳಂಬವಾದರೆ? ಎಂಬ ಪ್ರಶ್ನೆಯೇ ಇದೀಗ ಹರಿಹರ ನಗರದ ಜನರ ಮುಂದಿರುವ ದೊಡ್ಡ ಆತಂಕ.

ನದಿ ಹರಿಯಬೇಕು, ಜಾಕ್‌ವೆಲ್‌ಗೆ ನೀರು ಬರಬೇಕು. ಆಗ ಮಾತ್ರ ‘ಜಲಸಿರಿ’ ಮತ್ತೆ 24 ಗಂಟೆ ಹರಿಯಲು ಸಾಧ್ಯ ಎಂಬುದು ಇದೀಗ ಜನರ ಪ್ರಾರ್ಥನೆಯಾಗಿದೆ.ಸದ್ಯಕ್ಕೆ ನೀರು ಪೂರೈಕೆ ಸಮಯ ಕಡಿತಗೊಳಿಸುವ ಮೂಲಕ ಪರಿಸ್ಥಿತಿಯನ್ನು ನಿರ್ವಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದೇ ಹರಿಹರದ ಕುಡಿಯುವ ನೀರಿನ ಸ್ಥಿತಿಯ ದಿಕ್ಕನ್ನು ನಿರ್ಧರಿಸಲಿದೆ.

ಮಳೆ ಕೊರತೆಯಿಂದ ತುಂಗಭದ್ರಾ ನದಿಯ ಹರಿವು ಕುಸಿದಿದ್ದು, ಹರಿಹರದ 24×7 ‘ಜಲಸಿರಿ’ ನೀರು ಪೂರೈಕೆ ವ್ಯವಸ್ಥೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಜಾಕ್‌ವೆಲ್ ಬಳಿ ತಾತ್ಕಾಲಿಕ ತಡೆ ನಿರ್ಮಿಸಿ ನೀರು ಸಂಗ್ರಹಿಸುವ ಪ್ರಯತ್ನ ನಡೆಯುತ್ತಿದ್ದು, ಮಳೆ ಮತ್ತಷ್ಟು ವಿಳಂಬವಾದರೆ ನಗರದ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರಗೊಳ್ಳುವ ಆತಂಕ ಎದುರಾಗಿದೆ.

Continue Reading

ದಿನದ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

Published

on

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ.

http://Visit : www.suddidina.com

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ದಿನದ ಸುದ್ದಿ

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

Published

on

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.

http://Visit : www.suddidina.com

ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

Continue Reading
Advertisement

Title

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ ‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ
ದಿನದ ಸುದ್ದಿ24 minutes ago

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ...

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ2 hours ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ2 hours ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ! ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!
ದಿನದ ಸುದ್ದಿ2 hours ago

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ....

ಅಂತರಂಗ2 days ago

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

~ ಯೋಗೇಶ್ ಮಾಸ್ಟರ್ ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು. ಈಗ...

ದಿನದ ಸುದ್ದಿ4 days ago

ವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ

ಸುದ್ದಿದಿನ,ಬೆಂಗಳೂರು:ಕೋಡಿಪಾಳ್ಯದಲ್ಲಿರುವ ವಿಶ್ವ ವೆಂಕಟೇಶ್ವರ ವಿದ್ಯಾಧಾನ ಕೇಂದ್ರದ ವಿರುದ್ಧ ಪಕ್ಕದಲ್ಲಿರುವ ವಿಠಲ ರುಕ್ಮಿಣಿ ಮಠದಿಂದ ಉದ್ದೇಶಪೂರ್ವಕವಾಗಿ ಕಿರುಕುಳ ನೀಡಿ ಸಂಸ್ಥೆಯ ಹೆಸರಿಗೆ ಧಕ್ಕೆ ತರುವ ಹುನ್ನಾರ ಕಳೆದ 3...

ದಿನದ ಸುದ್ದಿ6 days ago

ಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಸುದ್ದಿದಿನ,ದಾವಣಗೆರೆ: ಅಪರೂಪದ ಲಿವರ್ (ಯಕೃತ್ತಿನ) ಟ್ಯೂಮರ್ನಿಂದ ಬಳಲುತ್ತಿದ್ದ 56 ವರ್ಷದ ಮಹಿಳೆಗೆ ಇಲ್ಲಿನ ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ....

ಅಂತರಂಗ6 days ago

ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ

~ಯೋಗೇಶ್ ಮಾಸ್ಟರ್, ಚಿಂತಕರು ಆಪ್ತ ಸಮಾಲೋಚಕ ಮತ್ತು ಮನೋವೈದ್ಯ ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ...

ದಿನದ ಸುದ್ದಿ1 week ago

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ”...

ಅಂತರಂಗ1 week ago

ದಿಮಾಗಿ ನಕ್ಸಲ್-ನಗರ ನಕ್ಸಲ್

~ರಹಮತ್ ತರೀಕೆರೆ, ಚಿಂತಕರು ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ...

Trending