Connect with us

ಬಹಿರಂಗ

ಟಿಪ್ಪು ದೇಶ ಭಕ್ತನಲ್ಲವೆ..?

Published

on

  • ವಿ.ಎಸ್. ಬಾಬು

ಭಾರತದ ಮನುವಾದಿಗಳು ಶತ ಶತಮಾನಗಳಿಂದ ಮಾಡುತ್ತಿರುವ ಯಡವಟ್ಟುಗಳಿಂದ ಸಾವಿರಾರು ಬಹುಜನ ಪರಾಕ್ರಮಿಗಳು, ಇತಿಹಾಸಕಾರರು, ದೊರೆಗಳು ಮುಂತಾದವರು ಕಾಲಗರ್ಭದಲ್ಲಿ ನಾಮಾವಶೇಷವಾಗಿ ಹೋಗಿದ್ದಾರೆ. ಅವರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಮನ್ನಣೆ, ಗೌರವಗಳು ಸಿಗದಂತಾಗಿವೆ. ಅಂಥವುಗಳಲ್ಲಿ ಮಹಾನ್ ಪರಾಕ್ರಮಿ, ದೇಶಪ್ರೇಮಿ, ಮೈಸೂರು ಹುಲಿ ಟಿಪ್ಪುಸುಲ್ತಾನ್ ಒಬ್ಬರು.

ಭಾರತದ ಅಂಟು ಜಾಡ್ಯಗಳಾದ ವಿ.ಹೆಚ್.ಪಿ., ಭಜರಂಗದಳ ಮುಂತಾದವು ಟಿಪ್ಪೂ ಒಬ್ಬ ಮಾತಾಂಧ, ದುಷ್ಟ ಕ್ರೂರಿ ಎಂದೆಲ್ಲಾ ಹೇಳಿ ಉದ್ದೇಶಪೂರ್ವಕವಾಗಿ ಸುಳ್ಳ ಸುದ್ದಿಗಳನ್ನು ಹುಟ್ಟಿಸಿ ಈತನಿಗೆ ಇತಿಹಾಸದಲ್ಲಿ ನೀಡಬೇಕಾದ ಸ್ಥಾನಮಾನ ನೀಡದೆ ಅಗೌರವದಿಂದ ಕಂಡಿವೆ. ಟಿಪ್ಪೂ ಕೇವಲ ಒಬ್ಬ ಅವೈದಿಕ ಎಂಬ ಏಕೈಕ ಕಾರಣಕ್ಕಾಗಿ ಅವನನ್ನು ವಿರೋಧಿಸಲಾಗಿದೆ. ಬಹುಜನರಾದ ನಾವು ಟಿಪ್ಪೂವನ್ನು ಗೌರವಿಸಿ, ಬಹುಜನ ಮಕ್ಕಳಿಗೆ ಆತನ ಇತಿಹಾಸವನ್ನು ತಿಳಿಸಬೇಕಾಗದೆ. ಏಕೆಂದರೆ ಸಾಮಾಜಿಕ ಪರಿವರ್ತನೆಯ ಚಳುವಳಿಯಲ್ಲಿ ಟಿಪ್ಪುವಿನದು ಸಿಂಹಪಾಲಿದೆ.

ಮೊದಲನೆಯದಾಗಿ ಮಲಬಾರಿನಲ್ಲಿ ದಲಿತರು ಮತ್ತು ಹಿಂದುಳಿದ ಮಹಿಳೆಯರು ಅಂದು ಮೇಲು ಹೊದಿಕೆಯನ್ನು ಹಾಕುವಂತಿರಲಿಲ್ಲ ಪುರೋಹಿತಶಾಹಿ ವ್ಯವಸ್ಥೆ ಅದನ್ನು ಕಡ್ಡಾಯ ಮಾಡಿತ್ತು. ಅವರನ್ನು ಕೀಳಾಗಿ ಕಾಣುತ್ತಿದ್ದ ಸಂದರ್ಭದಲ್ಲಿ ಟಿಪ್ಪು ಒಂದು ರಾಜಾಜ್ಞೆ ಹೊರಡಿಸಿ. ಪುರೋಹಿತಶಾಹಿ ಮಠಕ್ಕೆ ಎಚ್ಚರಿಸಿ ಅನಿಷ್ಟ ಪದ್ಧತಿಯನ್ನು ನಿಲ್ಲಿಸದಿದ್ದರೆ ಉಗ್ರಶಿಕ್ಷೆಗೆ ಗುರಿಯಾಗಬೇಕಾಗುತ್ತದೆಂದು ಹೇಳಿ ಮಠಾಧಿಪತಿಗಳಿಗೆ ಛೀಮಾರಿ ಹಾಕಿದ್ದ! ಯಾರೊಬ್ಬರೂ ಬೆತ್ತಲೆ, ಅರೆಬೆತ್ತಲೆ ಇರಬಾರದೆಂದು ಎಲ್ಲರೂ ವಸ್ತ್ರಗಳನ್ನು ಕಡ್ಡಾಯವಾಗಿ ಹಾಕಬೇಕೆಂದೂ ಕಟ್ಟಪ್ಪಣೆ ಹೊರಡಿಸಿ, ನಾಗರಿಕ ಸಮಾಜದ ಲಕ್ಷಣಗಳನ್ನು ವಿವರಿಸಿದ್ದ! ಆದ್ದರಿಂದ ಮಲಬಾರಿನ ಮನುವಾದಿಗಳು ಟಿಪ್ಪುವಿನ ಮೇಲೆ ದ್ವೇಷ ಸಾಧಿಸುತ್ತಿದ್ದರು.

ಮತ್ತೊಂದು ಅನಿಷ್ಟ ಪದ್ಧತಿಯಾದ ಮದ್ಯಪಾನವನ್ನು ತನ್ನ ರಾಜ್ಯದಲ್ಲಿ ಬಹಿಷ್ಕರಿಸಿಲ್ಲದೆ ತನ್ನ ಆಪ್ತ ಕಾರ್ಯದರ್ಶಿಗೆ ಕಾಗದ ಬರೆದು ನಾನು ಜನರಿಗೆ ಮದ್ಯವನ್ನು ಕುಡಿಸಿ ಬೊಕ್ಕಸವನ್ನು ತುಂಬಿಕೊಂಡು ರಾಜನಾಗಿರುವುದಕ್ಕಿಂತ ವಿಷ ಕುಡಿದು ಸಾಯುವುದು ಲೇಸು. ಇಡೀ ಸಮಾಜ ನನಗೆ ಪ್ರಜ್ಞಾವಂತ ಸಮಾಜವಾಗಬೇಕು. ಹಾಗೇನಾದರೂ ನಾನು ಜನರಿಗೆ ಹೆಂಡ ಕುಡಿಸಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದೇ ಅವಶ್ಯವಾದರೆ ಅಂತಹ ಕುರ್ಚಿ ನನಗೆ ಬೇಕಿಲ್ಲ. ಅಂತಹ ದೊರೆ ಪಟ್ಟ ನನಗೆ ಬೇಡ” ಎಂದು ಹೇಳಿ ರಾಜ್ಯಾದ್ಯಂತ ಇರುವ ಈಚಲು ಮರಗಳನ್ನು ಕಡಿಸಲು ಆಜ್ಞೆ ಮಾಡಿದ್ದ! ಅಬಕಾರಿಯಿಂದಲೇ ಸರ್ಕಾರ ನಡೆಸಲು ಸಾಧ್ಯ ಎಂದು ಹೇಳುವ ಇಂದಿನ ಹೊಣೆಗೇಡಿ ಸರ್ಕಾರಗಳಿಗೆ ಟಿಪ್ಪುವಿನ ಮಾತು ಕಿವಿಗೆ ಕಾದ ಸೀಸ ಹಾಕಿದಂತಾಗುತ್ತದೆ.!

ಮಕ್ಕಳ ಮಾರಾಟ ನಿಷೇಧ ಜೀತ ಪದ್ಧತಿ ನಿರ್ಮೂಲನೆ, ಜೂಜು ಮತ್ತು ತಂಬಾಕು ಸೇವನೆಯ ವಿರುದ್ದ ದೊಡ್ಡ ಸಮರ ಸಾರಿದ್ದ ಟಿಪ್ಪು, ತನ್ನ 17 ವರ್ಷಗಳ ಆಡಳಿತದಲ್ಲಿ ಜನರು ರಾಜಕೀಯವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಸ್ವಾತಂತ್ರ್ಯ ಹೊಂದುವುದರ ಜೊತೆಗೆ ಅಜ್ಞಾನ, ಮೂಢನಂಬಿಕೆಗಳಿಂದಲೂ ಮುಕ್ತಿ ಹೊಂದಬೇಕೆಂದು ಬಯಸಿದ್ದ.

ಟಿಪ್ಪು ಕಂದಾಯ ಹಾಗೂ ಇನಾಂ ಪದ್ಧತಿಯಲ್ಲಿ ತಂದ ಕೆಲವು ಅಮೂಲಾಗ್ರ ಬದಲಾವಣೆಗಳಿಂದಾಗಿ ಹಿಂದೂ ಧರ್ಮದ ಮೇಲ್ವರ್ಗದ ಕೋಪಕ್ಕೆ ತುತ್ತಾಗಿ ಇವನೊಬ್ಬ ದುಷ್ಟರಾಜನಂತೆ ಚಿತ್ರಿಸಲ್ಪಟ್ಟ! ಕಂದಾಯವನ್ನು ಮಧ್ಯಸ್ಥಿಕೆಗಾರರಾದ ಸಾಹುಕಾರದಿಂದ ಕೊಡಿಸಿ ಅದಕ್ಕಾಗಿ ಅವರಿಗೆ ಕಮಿಷನ್ ಕೊಡಲಾಗುತ್ತಿತ್ತು. ಇದು ಗ್ರಾಮಸ್ಥರನ್ನು ಶೋಷಣೆ ಮಾಡಲು ವಿಪುಲ ಅವಕಾಶ ಮಾಡಿಕೊಟ್ಟಿತ್ತು. ಇದನ್ನು ತಪ್ಪಿಸಿ ಬದಲಿಗೆ ಕಂದಾಯದ ಅಧಿಕಾರಿಗಳನ್ನು ನೇಮಕ ಮಾಡಿದನು. ಇದರ ಜೊತೆಗೆ ಅಧಿಕೃತವಲ್ಲದ ಇನಾಂ ಜಮೀನುಗಳನ್ನು ಹಿಂದಕ್ಕೆ ಪಡೆದು, ಅಧಿಕಾರಿಗಳಿಗೆ ಸಂಬಳವಾಗಿ ಜಹಗೀರುಗಳನ್ನು ಕೊಡುವುದನ್ನು ತಪ್ಪಿಸಿ ನಗದು ಹಣ ನೀಡಬೇಕೆಂದು ನೀಡಬೇಕೆಂದು ಆಜ್ಞೆ ಹೊರಡಿಸಿದನು.

ಇದರಿಂದ ಕಂದಾಯ ವಸೂಲಿ ಮಾಡುತ್ತಿದ್ದ ಸಾಹಾಕಾರರು, ವೇದಾಂತ ಶಿಖಾಮಣಿ, ವೇದಬ್ರಹ್ಮ, ಆ ಬ್ರಹ್ಮ, ಈ ಬ್ರಹ್ಮ ಎಂಬ ಬಿರುದು ಬಾವಲಿಗಳನ್ನು ರಾಜರಿಂದ ಪಡೆದಿದ್ದವರು ಮತ್ತು ಅದಕ್ಕಾಗಿ ಅಗ್ರಹಾರಗಳು, ಜಹಗೀರುಗಳನ್ನು ಪಡೆದು ತಿಂದು ತೇಗಿ ತ್ರಿಮತಗಳಲ್ಲಿ ಶ್ರೇಷ್ಟ ಮತ ಯಾವುದು? ಎಂಬ ಒಣ ಚರ್ಚೆಗಳಲ್ಲಿ ಕಾಲಹರಣ ಮಾಡುತ್ತಾ ರಾಜ್ಯದ ಆದಾಯವನ್ನು ನುಂಗಿ ನೀರು ಕುಡಿದಿದ್ದವರು ತಮ್ಮ ಆದಾಯ ಮೂಲಗಳನ್ನು ಕಳೆದುಕೊಂಡರು ಮತ್ತು ಅಂತಹ ಜನರನ್ನು ಹದ್ದುಬಸ್ತಿನಲ್ಲಿಟ್ಟ ಟಿಪ್ಪು ಅವರ ಸೊಕ್ಕು ಮುರಿದಿದ್ದ. ಮುಂದೆ ಇವರ ಸಂತತಿಯವರೇ ಟಿಪ್ಪುವಿನ ಬಗ್ಗೆ ಅಪಪ್ರಚಾರಕ್ಕೆ ಇಳಿದಿದ್ದು.

ಇದೇ ಸಂದರ್ಭದಲ್ಲಿ ಕೊಡಗಿನಲ್ಲಿ ವಾಸವಾಗಿದ್ದ ಎರವರು, ಹೊಲೆಯರು ಮತ್ತು ಮಲಬಾರಿನ ಅಂತ್ಯಜರು ನಂಬೂದಿರಿ ಬ್ರಾಹ್ಮಣರ ಮತ್ತು ಇತರ ಹಿಂದೂಗಳ ಕೀಳು ದೃಷ್ಟಿಗೆ ತುತ್ತಾಗಿ ಧಾರ್ಮಿಕವಾಗಿ ಸಾಮಾಜಿಕವಾಗಿ ತೀವ್ರ ಶೋಷಣೆಗಳಿಗೆ ಒಳಪಟ್ಟಿದ್ದರು. ಇದರಿಂದ ರೋಸಿಹೋಗಿದ್ದ ಆ ಜನತೆ ಟಿಪ್ಪುವಿನ ಆಡಳಿತ ವೈಖರಿ ಕಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿದರು. ಇದನ್ನು ಸಹಿಸದ ಹಿಂದೂಗಳು ಟಿಪ್ಪುವಿನ ವ್ಯಕ್ತಿತ್ವಕ್ಕೆ ಮಸಿ ಬಳಿದು ಅವನನ್ನು ಮತಾಂಧ ಎಂದರು.

ಈತನ ಆಡಳಿತದಲ್ಲಿ ತಂದ ನಿತ್ಯ ಜೀವನದಲ್ಲಿ ನಾಣ್ಯಗಳ ಚಲಾವಣೆ, ಕ್ಯಾಲೆಂಡರ್, ತೂಕ ಮತ್ತು ಅಳತೆ, ಹಣಕಾಸು ಬ್ಯಾಂಕಿಂಗ್ ಮುಂತಾದ ಬದಲಾವಣೆಗಳಿಂದ ಆಡಳಿತದಲ್ಲಿ ಹೊಸ ಗಾಳಿ ಬೀಸುವಂತೆ ಮಾಡಿತು. ಮುಂದೆ ನಾಲ್ವಡಿಯವರಿಂದ ಸಾಕಾರಗೊಂಡ ಕಾವೇರಿಗೆ ಅಡ್ಡಲಾಗಿ ಕಟ್ಟಬೇಕೆಂಬ ಅಣೆಕಟ್ಟಿನ ರೂಪುರೇಷೆಯ ಕಲ್ಪನೆ, ಸಹಕಾರಿ ಬ್ಯಾಂಕಿನ ಆರಂಭ, ಮೈಸೂರು ನೌಕಾಪಡೆಯ ಸ್ಥಾಪನೆ ದರ್-ಲಾಲ್-ಉಮೂರ್ ಎಂದು ಕರೆಯಲ್ಪಡುವ ತಾಂತ್ರಿಕ ವಿಶ್ವವಿದ್ಯಾಲಯ ಹೀಗೆ ಆಡಳಿತಾತ್ಮಕವಾದ ಪ್ರಯೋಗಗಳಿಂದ ಕೂಡಿದ್ದ ಇವನ ರಾಜ್ಯಭಾರ “ಸರ್ಕಾರ್ …… ಬಾದ್” ಎಂದು ಹೆಸರು ಪಡೆಯಿತು.

ಶ್ರೀರಂಗ ಪಟ್ಟಣದ ಪಶ್ಚಿಮಕ್ಕೆ ಕಾವೇರಿ ನದಿಗೆ ಅಡ್ಡಲಾಗಿ 70 ಅಡಿ ಎತ್ತರದ ಅಣೆಕಟ್ಟನ್ನು ನಿರ್ಮಿಸಿದ್ದಲ್ಲಿ ಮೈಸೂರಿನ ತಲಕಾಡಿನ ಬಳಿ ಮುಡುಕುತೊರೆ ಎಂಬಲ್ಲಿ ಕಾವೇರಿ ನದಿಗೆ ಅಣೆಕಟ್ಟುಯೊಂದನ್ನು ಕಟ್ಟಿ ಆ ಪ್ರದೇಶವನ್ನೆಲ್ಲಾ ನೀರಾವರಿಗೆ ಅಳವಡಿಸಿದ ಕೀರ್ತಿ ಟಿಪ್ಪುವಿನದು.

ಈ ಆಧುನಿಕ ಕಾಲದ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯನ್ನು ಆ ಮಧ್ಯಕಾಲದಲ್ಲೇ ಜಾರಿಗೆ ತಂದು ಟಿಪ್ಪು ಬಹಳಷ್ಟು ವಸ್ತುಗಳನ್ನು ಅಂದರೆ ಬಂಗಾರದ ಅದಿರು, ಗಂಧದ ಮರ, ಲೋಹ ಆನೆ, ತೆಂಗಿನಕಾಯಿ, ಕರಿಮೆಣಸು ಹಾಗೂ ಬೆಲೆಬಾಳುವ ಮರ ಇವುಗಳನ್ನು ರಾಷ್ಟ್ರೀಕರಿಸಿದ್ದನು. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ವಿಧಿಸುವ ಬದಲು ತನ್ನ ಗ್ರಾಮದ ಬಳಿ ಮಾವಿನ ಗಿಡಗಳನ್ನು ಮತ್ತು ಹಲಸಿನ ಗಿಡಗಳನ್ನು ನೆಡತಕ್ಕದ್ದು ಮತ್ತು ಆ ಗಿಡಗಳು ಮೂರು ದೇರಾಗಳ ಎತ್ತರ ಬೆಳೆಯುವವರೆಗೂ ಅಪರಾಧಿ ಆ ಗಿಡಗಳಿಗೆ ನೀರುಣಿಸ ತಕ್ಕದ್ದು ಮತ್ತು ಸಂರಕ್ಷಿಸತಕ್ಕದ್ದು ಎಂಬ ದಂಡನೆ ವಿಧಿಸುವ ಮೂಲಕ ತನ್ನ ರಾಜ್ಯದಲ್ಲೆಲ್ಲ ಹಸಿರು ಪರಿಸರಿಸುವಂತೆ ಮಾಡಿದ!

ಮೈಸೂರು ರಾಜ್ಯಕ್ಕೆ ಮೊಟ್ಟ ಮೊದಲ ಬಾರಿಗೆ ರೇಷ್ಮೆಯನ್ನು ಪರಿಚಯಿಸಿದ ಕೀರ್ತಿ ಟಿಪ್ಪುವಿನದಾಗಿದೆ. ರೇಷ್ಮೆ ಬೆಳೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಟಿಪ್ಪು ತನ್ನ ರಾಜ್ಯದಲ್ಲಿ ಉತೃಷ್ಟ ರೇಷ್ಮೆ ತಯಾರಿಕೆಗೆ ಹೆಸರಾಗಿದ್ದ. ಹಾಗೆಯೇ ಇವನ ನಿರಂತರ ಕಾಳಜಿಯಿಂದ ಅಂದು ಮೈಸೂರು ಪ್ರಾಂತ್ಯದಲ್ಲಿ 318 ರೇಷ್ಮೆ ಉತ್ಪಾದನಾ ಕುಟುಂಬಗಳಿದ್ದವು.

ತುಂಬಾ ಅಪರೂಪದ ಸಸ್ಯ ತಳಿಗಳನ್ನು ಸಂರಕ್ಷಿಸಲೆಂದೇ ಲಾಲ್‌ಬಾಗ್ ತೋಟವನ್ನು ಕೇವಲ ಮನೋಲ್ಲಾಸಕ್ಕಾಗಿ ಎಂದು ಭಾವಿಸದೆ ಪ್ರಪಂಚದ ಅತಿ ದೊಡ್ಡ ಪ್ರಯೋಗ ಶಾಲೆಯನ್ನಾಗಿ ಪರಿವರ್ತಿಸಿದ್ದ!

ಕನ್ನಡ, ಪರ್ಷಿಯನ್, ಫ್ರೆಂಚ್, ತೆಲುಗು, ತಮಿಳು ಭಾಷೆಯ ಮೇಲೆ ಅಗಾಧವಾದ ಜ್ಞಾನ ಹೊಂದಿದ್ದ ಟಿಪ್ಪು, ಬೃಹತ್ ಗಾತ್ರದ ಗ್ರಂಥಭಂಡಾರವನ್ನು ಹೊಂದಿದ್ದ. ‘ಟಿಪ್ಪುವಿನ ಕನಸುಗಳು’ ಎಂಬ 38 ಲೇಖನಗಳು, ಫಾತುರ್ ಮುಜಾಹಿದ್ದೀನ್ (ಸೈನಿಕನ ವಿಜಯ), ಭೂಕಂದಾಯ ಕಾಯಿದೆ, ವಾಣಿಜ್ಯ ಕಾಯಿದೆಗಳ ಬಗ್ಗೆ ಪುಸ್ತಕಗಳನ್ನು ಬರೆದು ಪ್ರೌಢ ಲೇಖಕನೆನಿಸಿಕೊಂಡಿದ್ದ ಟಿಪ್ಪು ತನ್ನ ಅರಮನೆಯ ಮುಂದೆ ಸ್ವಾತಂತ್ರ್ಯದ ಸಂಕೇತವಾಗಿ ಸಂಪಿಗೆ ಮರವೊಂದನ್ನು ನೆಟ್ಟು ತನ್ನನ್ನು ತಾನು ಕೇವಲ ನಾಗರಿಕ ಟಿಪ್ಪು ಎಂದು ಕರೆದುಕೊಂಡ!

ಅದಿಯಿಲ್ಲದ ಅತ್ಯವಿಲ್ಲದ ಸನಾತನಿಗಳಿಗೆ ರೀಲು ಬಿಡುವುದೇ ಚರಿತ್ರೆಯಾಗಿರುವಾಗ ಬಹುಜನರು ಏನನ್ನು ತಾನೆ ಕಲಿಯಲು ಸಾಧ್ಯ? ಈಗಲಾದರೂ ನಾವು ಅಧ್ಯಯನವನ್ನು ಗಂಭೀರವಾಗಿ ಪರಿಗಣಿಸಿ ಈ ವೈದಿಕರು ಬಿಟ್ಟಿರುವ ರೀಲುಗಳ ಬಣ್ಣವನ್ನು ಬಯಲು ಮಾಡಬೇಕಿದೆ!.

ಪ್ರಪಂಚದ ಇತಿಹಾಸ ಪುಟಗಳನ್ನು ಅವಲೋಕಿಸಿದಾಗ ತನ್ನ ಸ್ವಾಭಿಮಾನದ ಉಳಿವಿಗಾಗಿ ತನ್ನ ಕರುಳ ಬಳ್ಳಿಗಳನ್ನೇ ಒತ್ತೆಯಿಟ್ಟು ದಾಖಲೆ ಮತ್ತೆಲ್ಲೂ ಇಲ್ಲ. ತನ್ನ ಆತ್ಮಗೌರವದ ಮುಂದೆ ಎಂತಹ ಕಠಿಣ ಸಂದರ್ಭಗಳನ್ನು ಎದುರಿಸುವ ತಾಕತ್ತು ಹೊಂದಿದ್ದ ಟಿಪ್ಪುವನ್ನು ಈ ದೇಶದ ವೈದಿಕರು ಬೇಕೆಂತಲೆ ಇತಿಹಾಸದ ಪುಟಗಳಲ್ಲಿ ಕಡೆಗಣಿಸಿದ್ದಾರೆ. ಮೈಸೂರಿನ ಇತಿಹಾಸವನ್ನು ಭಿನ್ನವಾಗಿ ಬರೆದ ಟಿಪ್ಪುವಿಗೆ ಬಹುಜನರಾದ ನಾವು ನಮ್ಮ ಬಹುಜನ ಇತಿಹಾಸದಲ್ಲಿ ಅಗ್ರಸ್ಥಾನ ಕೊಡಬೇಕು.

ಯಾಕೆಂದರೆ ಈ ಸನಾತನಿಗಳು ಯಾರನ್ನೂ ವೈಭವೀಕರಿಸಿ ಹೊಗಳಿ ಮೇಲಕ್ಕೆ ಕೂರಿಸಿದ್ದಾರೆ ಅವರೆಲ್ಲರ ಮೇಲೆ ನಮಗೆ ಗುಮಾನಿಯಿದೆ! ಬಾಬಾ ಸಾಹೇಬರು ಒಂದು ಕಡೆ “If a Hindu Says ‘yes’ we should say ‘No’ When they asy ‘No’ we should say yes” ಎಂದು ಹೇಳಿದ್ದಾರೆ. ಈ ಮಾತು ಇಷ್ಟೊಂದು ವಿಶಾಲ ವ್ಯಾಪ್ತಿಯಲ್ಲಿ ಅರ್ಥೈಸುತ್ತದೆ ಎಂಬ ಕಲ್ಪನೆಯೇ ನಮಗಿರಲಿಲ್ಲ! ಇರಲಿ, ಕಾಲ ಇನ್ನೂ ಮಿಂಚಿಲ್ಲ !

ಇತಿಹಾಸಕಾರರಾದ ಕಿರ್ಕ್, ಪ್ಯಾಟ್ರಿಕ್, ವಿಲ್ಸ್ ಮುಂತಾದವರು ಟಿಪ್ಪುವನ್ನು ತಪ್ಪಾಗಿ ಅರ್ಥೈಸಿದ್ದಾರೆ. ಇವರೆಲ್ಲಾ ಅಂಗ್ಲ ವೈದಿಕರು, ಇದಕ್ಕೆ ಇಲ್ಲಿನ ವೈದಿಕರು, ಮಸಾಲೆ ಸೇರಿಸಿ ಟಿಪ್ಪುವನ್ನು ಖಳನಾಯಕನನ್ನಾಗಿ ಚಿತ್ರಿಸಿದ್ದಾರೆ. ಟಿಪ್ಪುವಿನಿಂದ ಮೈಸೂರು ಯುದ್ಧಗಳಲ್ಲಿ ಸೋತು ಸೆರೆಸಿಕ್ಕ ಬೈಲಿ. ಬ್ರೆಟ್‌ವೈಟ್ ಮುಂತಾದವರು ಇಲ್ಲಿನ ವಿದ್ವಾಂಸರಿಗೆ ತಪ್ಪು ಸುದ್ದಿಗಳನ್ನು ಫೀಡ್ ಮಾಡಿ ಸತ್ಯವನ್ನು ಮುಚ್ಚಿ ಹಾಕಿದ್ದಾರೆ. ಆದ್ದರಿಂದಲೇ ಬಾಬಾಸಾಹೇಬರು “ನಮ್ಮ ಇತಿಹಾಸವನ್ನು ನಾವೇ ಬರೆಯಬೇಕು” ಎಂದು ಹೇಳಿದ್ದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending