Connect with us

ಬಹಿರಂಗ

ಟಿಪ್ಪು ದೇಶ ಭಕ್ತನಲ್ಲವೆ..?

Published

on

  • ವಿ.ಎಸ್. ಬಾಬು

ಭಾರತದ ಮನುವಾದಿಗಳು ಶತ ಶತಮಾನಗಳಿಂದ ಮಾಡುತ್ತಿರುವ ಯಡವಟ್ಟುಗಳಿಂದ ಸಾವಿರಾರು ಬಹುಜನ ಪರಾಕ್ರಮಿಗಳು, ಇತಿಹಾಸಕಾರರು, ದೊರೆಗಳು ಮುಂತಾದವರು ಕಾಲಗರ್ಭದಲ್ಲಿ ನಾಮಾವಶೇಷವಾಗಿ ಹೋಗಿದ್ದಾರೆ. ಅವರಿಗೆ ನ್ಯಾಯಸಮ್ಮತವಾಗಿ ಸಿಗಬೇಕಾದ ಮನ್ನಣೆ, ಗೌರವಗಳು ಸಿಗದಂತಾಗಿವೆ. ಅಂಥವುಗಳಲ್ಲಿ ಮಹಾನ್ ಪರಾಕ್ರಮಿ, ದೇಶಪ್ರೇಮಿ, ಮೈಸೂರು ಹುಲಿ ಟಿಪ್ಪುಸುಲ್ತಾನ್ ಒಬ್ಬರು.

ಭಾರತದ ಅಂಟು ಜಾಡ್ಯಗಳಾದ ವಿ.ಹೆಚ್.ಪಿ., ಭಜರಂಗದಳ ಮುಂತಾದವು ಟಿಪ್ಪೂ ಒಬ್ಬ ಮಾತಾಂಧ, ದುಷ್ಟ ಕ್ರೂರಿ ಎಂದೆಲ್ಲಾ ಹೇಳಿ ಉದ್ದೇಶಪೂರ್ವಕವಾಗಿ ಸುಳ್ಳ ಸುದ್ದಿಗಳನ್ನು ಹುಟ್ಟಿಸಿ ಈತನಿಗೆ ಇತಿಹಾಸದಲ್ಲಿ ನೀಡಬೇಕಾದ ಸ್ಥಾನಮಾನ ನೀಡದೆ ಅಗೌರವದಿಂದ ಕಂಡಿವೆ. ಟಿಪ್ಪೂ ಕೇವಲ ಒಬ್ಬ ಅವೈದಿಕ ಎಂಬ ಏಕೈಕ ಕಾರಣಕ್ಕಾಗಿ ಅವನನ್ನು ವಿರೋಧಿಸಲಾಗಿದೆ. ಬಹುಜನರಾದ ನಾವು ಟಿಪ್ಪೂವನ್ನು ಗೌರವಿಸಿ, ಬಹುಜನ ಮಕ್ಕಳಿಗೆ ಆತನ ಇತಿಹಾಸವನ್ನು ತಿಳಿಸಬೇಕಾಗದೆ. ಏಕೆಂದರೆ ಸಾಮಾಜಿಕ ಪರಿವರ್ತನೆಯ ಚಳುವಳಿಯಲ್ಲಿ ಟಿಪ್ಪುವಿನದು ಸಿಂಹಪಾಲಿದೆ.

ಮೊದಲನೆಯದಾಗಿ ಮಲಬಾರಿನಲ್ಲಿ ದಲಿತರು ಮತ್ತು ಹಿಂದುಳಿದ ಮಹಿಳೆಯರು ಅಂದು ಮೇಲು ಹೊದಿಕೆಯನ್ನು ಹಾಕುವಂತಿರಲಿಲ್ಲ ಪುರೋಹಿತಶಾಹಿ ವ್ಯವಸ್ಥೆ ಅದನ್ನು ಕಡ್ಡಾಯ ಮಾಡಿತ್ತು. ಅವರನ್ನು ಕೀಳಾಗಿ ಕಾಣುತ್ತಿದ್ದ ಸಂದರ್ಭದಲ್ಲಿ ಟಿಪ್ಪು ಒಂದು ರಾಜಾಜ್ಞೆ ಹೊರಡಿಸಿ. ಪುರೋಹಿತಶಾಹಿ ಮಠಕ್ಕೆ ಎಚ್ಚರಿಸಿ ಅನಿಷ್ಟ ಪದ್ಧತಿಯನ್ನು ನಿಲ್ಲಿಸದಿದ್ದರೆ ಉಗ್ರಶಿಕ್ಷೆಗೆ ಗುರಿಯಾಗಬೇಕಾಗುತ್ತದೆಂದು ಹೇಳಿ ಮಠಾಧಿಪತಿಗಳಿಗೆ ಛೀಮಾರಿ ಹಾಕಿದ್ದ! ಯಾರೊಬ್ಬರೂ ಬೆತ್ತಲೆ, ಅರೆಬೆತ್ತಲೆ ಇರಬಾರದೆಂದು ಎಲ್ಲರೂ ವಸ್ತ್ರಗಳನ್ನು ಕಡ್ಡಾಯವಾಗಿ ಹಾಕಬೇಕೆಂದೂ ಕಟ್ಟಪ್ಪಣೆ ಹೊರಡಿಸಿ, ನಾಗರಿಕ ಸಮಾಜದ ಲಕ್ಷಣಗಳನ್ನು ವಿವರಿಸಿದ್ದ! ಆದ್ದರಿಂದ ಮಲಬಾರಿನ ಮನುವಾದಿಗಳು ಟಿಪ್ಪುವಿನ ಮೇಲೆ ದ್ವೇಷ ಸಾಧಿಸುತ್ತಿದ್ದರು.

ಮತ್ತೊಂದು ಅನಿಷ್ಟ ಪದ್ಧತಿಯಾದ ಮದ್ಯಪಾನವನ್ನು ತನ್ನ ರಾಜ್ಯದಲ್ಲಿ ಬಹಿಷ್ಕರಿಸಿಲ್ಲದೆ ತನ್ನ ಆಪ್ತ ಕಾರ್ಯದರ್ಶಿಗೆ ಕಾಗದ ಬರೆದು ನಾನು ಜನರಿಗೆ ಮದ್ಯವನ್ನು ಕುಡಿಸಿ ಬೊಕ್ಕಸವನ್ನು ತುಂಬಿಕೊಂಡು ರಾಜನಾಗಿರುವುದಕ್ಕಿಂತ ವಿಷ ಕುಡಿದು ಸಾಯುವುದು ಲೇಸು. ಇಡೀ ಸಮಾಜ ನನಗೆ ಪ್ರಜ್ಞಾವಂತ ಸಮಾಜವಾಗಬೇಕು. ಹಾಗೇನಾದರೂ ನಾನು ಜನರಿಗೆ ಹೆಂಡ ಕುಡಿಸಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದೇ ಅವಶ್ಯವಾದರೆ ಅಂತಹ ಕುರ್ಚಿ ನನಗೆ ಬೇಕಿಲ್ಲ. ಅಂತಹ ದೊರೆ ಪಟ್ಟ ನನಗೆ ಬೇಡ” ಎಂದು ಹೇಳಿ ರಾಜ್ಯಾದ್ಯಂತ ಇರುವ ಈಚಲು ಮರಗಳನ್ನು ಕಡಿಸಲು ಆಜ್ಞೆ ಮಾಡಿದ್ದ! ಅಬಕಾರಿಯಿಂದಲೇ ಸರ್ಕಾರ ನಡೆಸಲು ಸಾಧ್ಯ ಎಂದು ಹೇಳುವ ಇಂದಿನ ಹೊಣೆಗೇಡಿ ಸರ್ಕಾರಗಳಿಗೆ ಟಿಪ್ಪುವಿನ ಮಾತು ಕಿವಿಗೆ ಕಾದ ಸೀಸ ಹಾಕಿದಂತಾಗುತ್ತದೆ.!

ಮಕ್ಕಳ ಮಾರಾಟ ನಿಷೇಧ ಜೀತ ಪದ್ಧತಿ ನಿರ್ಮೂಲನೆ, ಜೂಜು ಮತ್ತು ತಂಬಾಕು ಸೇವನೆಯ ವಿರುದ್ದ ದೊಡ್ಡ ಸಮರ ಸಾರಿದ್ದ ಟಿಪ್ಪು, ತನ್ನ 17 ವರ್ಷಗಳ ಆಡಳಿತದಲ್ಲಿ ಜನರು ರಾಜಕೀಯವಾಗಿ, ಸಾಮಾಜಿಕವಾಗಿ ಆರ್ಥಿಕವಾಗಿ ಸ್ವಾತಂತ್ರ್ಯ ಹೊಂದುವುದರ ಜೊತೆಗೆ ಅಜ್ಞಾನ, ಮೂಢನಂಬಿಕೆಗಳಿಂದಲೂ ಮುಕ್ತಿ ಹೊಂದಬೇಕೆಂದು ಬಯಸಿದ್ದ.

ಟಿಪ್ಪು ಕಂದಾಯ ಹಾಗೂ ಇನಾಂ ಪದ್ಧತಿಯಲ್ಲಿ ತಂದ ಕೆಲವು ಅಮೂಲಾಗ್ರ ಬದಲಾವಣೆಗಳಿಂದಾಗಿ ಹಿಂದೂ ಧರ್ಮದ ಮೇಲ್ವರ್ಗದ ಕೋಪಕ್ಕೆ ತುತ್ತಾಗಿ ಇವನೊಬ್ಬ ದುಷ್ಟರಾಜನಂತೆ ಚಿತ್ರಿಸಲ್ಪಟ್ಟ! ಕಂದಾಯವನ್ನು ಮಧ್ಯಸ್ಥಿಕೆಗಾರರಾದ ಸಾಹುಕಾರದಿಂದ ಕೊಡಿಸಿ ಅದಕ್ಕಾಗಿ ಅವರಿಗೆ ಕಮಿಷನ್ ಕೊಡಲಾಗುತ್ತಿತ್ತು. ಇದು ಗ್ರಾಮಸ್ಥರನ್ನು ಶೋಷಣೆ ಮಾಡಲು ವಿಪುಲ ಅವಕಾಶ ಮಾಡಿಕೊಟ್ಟಿತ್ತು. ಇದನ್ನು ತಪ್ಪಿಸಿ ಬದಲಿಗೆ ಕಂದಾಯದ ಅಧಿಕಾರಿಗಳನ್ನು ನೇಮಕ ಮಾಡಿದನು. ಇದರ ಜೊತೆಗೆ ಅಧಿಕೃತವಲ್ಲದ ಇನಾಂ ಜಮೀನುಗಳನ್ನು ಹಿಂದಕ್ಕೆ ಪಡೆದು, ಅಧಿಕಾರಿಗಳಿಗೆ ಸಂಬಳವಾಗಿ ಜಹಗೀರುಗಳನ್ನು ಕೊಡುವುದನ್ನು ತಪ್ಪಿಸಿ ನಗದು ಹಣ ನೀಡಬೇಕೆಂದು ನೀಡಬೇಕೆಂದು ಆಜ್ಞೆ ಹೊರಡಿಸಿದನು.

ಇದರಿಂದ ಕಂದಾಯ ವಸೂಲಿ ಮಾಡುತ್ತಿದ್ದ ಸಾಹಾಕಾರರು, ವೇದಾಂತ ಶಿಖಾಮಣಿ, ವೇದಬ್ರಹ್ಮ, ಆ ಬ್ರಹ್ಮ, ಈ ಬ್ರಹ್ಮ ಎಂಬ ಬಿರುದು ಬಾವಲಿಗಳನ್ನು ರಾಜರಿಂದ ಪಡೆದಿದ್ದವರು ಮತ್ತು ಅದಕ್ಕಾಗಿ ಅಗ್ರಹಾರಗಳು, ಜಹಗೀರುಗಳನ್ನು ಪಡೆದು ತಿಂದು ತೇಗಿ ತ್ರಿಮತಗಳಲ್ಲಿ ಶ್ರೇಷ್ಟ ಮತ ಯಾವುದು? ಎಂಬ ಒಣ ಚರ್ಚೆಗಳಲ್ಲಿ ಕಾಲಹರಣ ಮಾಡುತ್ತಾ ರಾಜ್ಯದ ಆದಾಯವನ್ನು ನುಂಗಿ ನೀರು ಕುಡಿದಿದ್ದವರು ತಮ್ಮ ಆದಾಯ ಮೂಲಗಳನ್ನು ಕಳೆದುಕೊಂಡರು ಮತ್ತು ಅಂತಹ ಜನರನ್ನು ಹದ್ದುಬಸ್ತಿನಲ್ಲಿಟ್ಟ ಟಿಪ್ಪು ಅವರ ಸೊಕ್ಕು ಮುರಿದಿದ್ದ. ಮುಂದೆ ಇವರ ಸಂತತಿಯವರೇ ಟಿಪ್ಪುವಿನ ಬಗ್ಗೆ ಅಪಪ್ರಚಾರಕ್ಕೆ ಇಳಿದಿದ್ದು.

ಇದೇ ಸಂದರ್ಭದಲ್ಲಿ ಕೊಡಗಿನಲ್ಲಿ ವಾಸವಾಗಿದ್ದ ಎರವರು, ಹೊಲೆಯರು ಮತ್ತು ಮಲಬಾರಿನ ಅಂತ್ಯಜರು ನಂಬೂದಿರಿ ಬ್ರಾಹ್ಮಣರ ಮತ್ತು ಇತರ ಹಿಂದೂಗಳ ಕೀಳು ದೃಷ್ಟಿಗೆ ತುತ್ತಾಗಿ ಧಾರ್ಮಿಕವಾಗಿ ಸಾಮಾಜಿಕವಾಗಿ ತೀವ್ರ ಶೋಷಣೆಗಳಿಗೆ ಒಳಪಟ್ಟಿದ್ದರು. ಇದರಿಂದ ರೋಸಿಹೋಗಿದ್ದ ಆ ಜನತೆ ಟಿಪ್ಪುವಿನ ಆಡಳಿತ ವೈಖರಿ ಕಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿದರು. ಇದನ್ನು ಸಹಿಸದ ಹಿಂದೂಗಳು ಟಿಪ್ಪುವಿನ ವ್ಯಕ್ತಿತ್ವಕ್ಕೆ ಮಸಿ ಬಳಿದು ಅವನನ್ನು ಮತಾಂಧ ಎಂದರು.

ಈತನ ಆಡಳಿತದಲ್ಲಿ ತಂದ ನಿತ್ಯ ಜೀವನದಲ್ಲಿ ನಾಣ್ಯಗಳ ಚಲಾವಣೆ, ಕ್ಯಾಲೆಂಡರ್, ತೂಕ ಮತ್ತು ಅಳತೆ, ಹಣಕಾಸು ಬ್ಯಾಂಕಿಂಗ್ ಮುಂತಾದ ಬದಲಾವಣೆಗಳಿಂದ ಆಡಳಿತದಲ್ಲಿ ಹೊಸ ಗಾಳಿ ಬೀಸುವಂತೆ ಮಾಡಿತು. ಮುಂದೆ ನಾಲ್ವಡಿಯವರಿಂದ ಸಾಕಾರಗೊಂಡ ಕಾವೇರಿಗೆ ಅಡ್ಡಲಾಗಿ ಕಟ್ಟಬೇಕೆಂಬ ಅಣೆಕಟ್ಟಿನ ರೂಪುರೇಷೆಯ ಕಲ್ಪನೆ, ಸಹಕಾರಿ ಬ್ಯಾಂಕಿನ ಆರಂಭ, ಮೈಸೂರು ನೌಕಾಪಡೆಯ ಸ್ಥಾಪನೆ ದರ್-ಲಾಲ್-ಉಮೂರ್ ಎಂದು ಕರೆಯಲ್ಪಡುವ ತಾಂತ್ರಿಕ ವಿಶ್ವವಿದ್ಯಾಲಯ ಹೀಗೆ ಆಡಳಿತಾತ್ಮಕವಾದ ಪ್ರಯೋಗಗಳಿಂದ ಕೂಡಿದ್ದ ಇವನ ರಾಜ್ಯಭಾರ “ಸರ್ಕಾರ್ …… ಬಾದ್” ಎಂದು ಹೆಸರು ಪಡೆಯಿತು.

ಶ್ರೀರಂಗ ಪಟ್ಟಣದ ಪಶ್ಚಿಮಕ್ಕೆ ಕಾವೇರಿ ನದಿಗೆ ಅಡ್ಡಲಾಗಿ 70 ಅಡಿ ಎತ್ತರದ ಅಣೆಕಟ್ಟನ್ನು ನಿರ್ಮಿಸಿದ್ದಲ್ಲಿ ಮೈಸೂರಿನ ತಲಕಾಡಿನ ಬಳಿ ಮುಡುಕುತೊರೆ ಎಂಬಲ್ಲಿ ಕಾವೇರಿ ನದಿಗೆ ಅಣೆಕಟ್ಟುಯೊಂದನ್ನು ಕಟ್ಟಿ ಆ ಪ್ರದೇಶವನ್ನೆಲ್ಲಾ ನೀರಾವರಿಗೆ ಅಳವಡಿಸಿದ ಕೀರ್ತಿ ಟಿಪ್ಪುವಿನದು.

ಈ ಆಧುನಿಕ ಕಾಲದ ಮಾರುಕಟ್ಟೆ ನಿಯಂತ್ರಣ ವ್ಯವಸ್ಥೆಯನ್ನು ಆ ಮಧ್ಯಕಾಲದಲ್ಲೇ ಜಾರಿಗೆ ತಂದು ಟಿಪ್ಪು ಬಹಳಷ್ಟು ವಸ್ತುಗಳನ್ನು ಅಂದರೆ ಬಂಗಾರದ ಅದಿರು, ಗಂಧದ ಮರ, ಲೋಹ ಆನೆ, ತೆಂಗಿನಕಾಯಿ, ಕರಿಮೆಣಸು ಹಾಗೂ ಬೆಲೆಬಾಳುವ ಮರ ಇವುಗಳನ್ನು ರಾಷ್ಟ್ರೀಕರಿಸಿದ್ದನು. ತಪ್ಪು ಮಾಡಿದ ವ್ಯಕ್ತಿಗೆ ಶಿಕ್ಷೆ ವಿಧಿಸುವ ಬದಲು ತನ್ನ ಗ್ರಾಮದ ಬಳಿ ಮಾವಿನ ಗಿಡಗಳನ್ನು ಮತ್ತು ಹಲಸಿನ ಗಿಡಗಳನ್ನು ನೆಡತಕ್ಕದ್ದು ಮತ್ತು ಆ ಗಿಡಗಳು ಮೂರು ದೇರಾಗಳ ಎತ್ತರ ಬೆಳೆಯುವವರೆಗೂ ಅಪರಾಧಿ ಆ ಗಿಡಗಳಿಗೆ ನೀರುಣಿಸ ತಕ್ಕದ್ದು ಮತ್ತು ಸಂರಕ್ಷಿಸತಕ್ಕದ್ದು ಎಂಬ ದಂಡನೆ ವಿಧಿಸುವ ಮೂಲಕ ತನ್ನ ರಾಜ್ಯದಲ್ಲೆಲ್ಲ ಹಸಿರು ಪರಿಸರಿಸುವಂತೆ ಮಾಡಿದ!

ಮೈಸೂರು ರಾಜ್ಯಕ್ಕೆ ಮೊಟ್ಟ ಮೊದಲ ಬಾರಿಗೆ ರೇಷ್ಮೆಯನ್ನು ಪರಿಚಯಿಸಿದ ಕೀರ್ತಿ ಟಿಪ್ಪುವಿನದಾಗಿದೆ. ರೇಷ್ಮೆ ಬೆಳೆಯ ಬಗ್ಗೆ ಅಪಾರ ಜ್ಞಾನ ಹೊಂದಿದ್ದ ಟಿಪ್ಪು ತನ್ನ ರಾಜ್ಯದಲ್ಲಿ ಉತೃಷ್ಟ ರೇಷ್ಮೆ ತಯಾರಿಕೆಗೆ ಹೆಸರಾಗಿದ್ದ. ಹಾಗೆಯೇ ಇವನ ನಿರಂತರ ಕಾಳಜಿಯಿಂದ ಅಂದು ಮೈಸೂರು ಪ್ರಾಂತ್ಯದಲ್ಲಿ 318 ರೇಷ್ಮೆ ಉತ್ಪಾದನಾ ಕುಟುಂಬಗಳಿದ್ದವು.

ತುಂಬಾ ಅಪರೂಪದ ಸಸ್ಯ ತಳಿಗಳನ್ನು ಸಂರಕ್ಷಿಸಲೆಂದೇ ಲಾಲ್‌ಬಾಗ್ ತೋಟವನ್ನು ಕೇವಲ ಮನೋಲ್ಲಾಸಕ್ಕಾಗಿ ಎಂದು ಭಾವಿಸದೆ ಪ್ರಪಂಚದ ಅತಿ ದೊಡ್ಡ ಪ್ರಯೋಗ ಶಾಲೆಯನ್ನಾಗಿ ಪರಿವರ್ತಿಸಿದ್ದ!

ಕನ್ನಡ, ಪರ್ಷಿಯನ್, ಫ್ರೆಂಚ್, ತೆಲುಗು, ತಮಿಳು ಭಾಷೆಯ ಮೇಲೆ ಅಗಾಧವಾದ ಜ್ಞಾನ ಹೊಂದಿದ್ದ ಟಿಪ್ಪು, ಬೃಹತ್ ಗಾತ್ರದ ಗ್ರಂಥಭಂಡಾರವನ್ನು ಹೊಂದಿದ್ದ. ‘ಟಿಪ್ಪುವಿನ ಕನಸುಗಳು’ ಎಂಬ 38 ಲೇಖನಗಳು, ಫಾತುರ್ ಮುಜಾಹಿದ್ದೀನ್ (ಸೈನಿಕನ ವಿಜಯ), ಭೂಕಂದಾಯ ಕಾಯಿದೆ, ವಾಣಿಜ್ಯ ಕಾಯಿದೆಗಳ ಬಗ್ಗೆ ಪುಸ್ತಕಗಳನ್ನು ಬರೆದು ಪ್ರೌಢ ಲೇಖಕನೆನಿಸಿಕೊಂಡಿದ್ದ ಟಿಪ್ಪು ತನ್ನ ಅರಮನೆಯ ಮುಂದೆ ಸ್ವಾತಂತ್ರ್ಯದ ಸಂಕೇತವಾಗಿ ಸಂಪಿಗೆ ಮರವೊಂದನ್ನು ನೆಟ್ಟು ತನ್ನನ್ನು ತಾನು ಕೇವಲ ನಾಗರಿಕ ಟಿಪ್ಪು ಎಂದು ಕರೆದುಕೊಂಡ!

ಅದಿಯಿಲ್ಲದ ಅತ್ಯವಿಲ್ಲದ ಸನಾತನಿಗಳಿಗೆ ರೀಲು ಬಿಡುವುದೇ ಚರಿತ್ರೆಯಾಗಿರುವಾಗ ಬಹುಜನರು ಏನನ್ನು ತಾನೆ ಕಲಿಯಲು ಸಾಧ್ಯ? ಈಗಲಾದರೂ ನಾವು ಅಧ್ಯಯನವನ್ನು ಗಂಭೀರವಾಗಿ ಪರಿಗಣಿಸಿ ಈ ವೈದಿಕರು ಬಿಟ್ಟಿರುವ ರೀಲುಗಳ ಬಣ್ಣವನ್ನು ಬಯಲು ಮಾಡಬೇಕಿದೆ!.

ಪ್ರಪಂಚದ ಇತಿಹಾಸ ಪುಟಗಳನ್ನು ಅವಲೋಕಿಸಿದಾಗ ತನ್ನ ಸ್ವಾಭಿಮಾನದ ಉಳಿವಿಗಾಗಿ ತನ್ನ ಕರುಳ ಬಳ್ಳಿಗಳನ್ನೇ ಒತ್ತೆಯಿಟ್ಟು ದಾಖಲೆ ಮತ್ತೆಲ್ಲೂ ಇಲ್ಲ. ತನ್ನ ಆತ್ಮಗೌರವದ ಮುಂದೆ ಎಂತಹ ಕಠಿಣ ಸಂದರ್ಭಗಳನ್ನು ಎದುರಿಸುವ ತಾಕತ್ತು ಹೊಂದಿದ್ದ ಟಿಪ್ಪುವನ್ನು ಈ ದೇಶದ ವೈದಿಕರು ಬೇಕೆಂತಲೆ ಇತಿಹಾಸದ ಪುಟಗಳಲ್ಲಿ ಕಡೆಗಣಿಸಿದ್ದಾರೆ. ಮೈಸೂರಿನ ಇತಿಹಾಸವನ್ನು ಭಿನ್ನವಾಗಿ ಬರೆದ ಟಿಪ್ಪುವಿಗೆ ಬಹುಜನರಾದ ನಾವು ನಮ್ಮ ಬಹುಜನ ಇತಿಹಾಸದಲ್ಲಿ ಅಗ್ರಸ್ಥಾನ ಕೊಡಬೇಕು.

ಯಾಕೆಂದರೆ ಈ ಸನಾತನಿಗಳು ಯಾರನ್ನೂ ವೈಭವೀಕರಿಸಿ ಹೊಗಳಿ ಮೇಲಕ್ಕೆ ಕೂರಿಸಿದ್ದಾರೆ ಅವರೆಲ್ಲರ ಮೇಲೆ ನಮಗೆ ಗುಮಾನಿಯಿದೆ! ಬಾಬಾ ಸಾಹೇಬರು ಒಂದು ಕಡೆ “If a Hindu Says ‘yes’ we should say ‘No’ When they asy ‘No’ we should say yes” ಎಂದು ಹೇಳಿದ್ದಾರೆ. ಈ ಮಾತು ಇಷ್ಟೊಂದು ವಿಶಾಲ ವ್ಯಾಪ್ತಿಯಲ್ಲಿ ಅರ್ಥೈಸುತ್ತದೆ ಎಂಬ ಕಲ್ಪನೆಯೇ ನಮಗಿರಲಿಲ್ಲ! ಇರಲಿ, ಕಾಲ ಇನ್ನೂ ಮಿಂಚಿಲ್ಲ !

ಇತಿಹಾಸಕಾರರಾದ ಕಿರ್ಕ್, ಪ್ಯಾಟ್ರಿಕ್, ವಿಲ್ಸ್ ಮುಂತಾದವರು ಟಿಪ್ಪುವನ್ನು ತಪ್ಪಾಗಿ ಅರ್ಥೈಸಿದ್ದಾರೆ. ಇವರೆಲ್ಲಾ ಅಂಗ್ಲ ವೈದಿಕರು, ಇದಕ್ಕೆ ಇಲ್ಲಿನ ವೈದಿಕರು, ಮಸಾಲೆ ಸೇರಿಸಿ ಟಿಪ್ಪುವನ್ನು ಖಳನಾಯಕನನ್ನಾಗಿ ಚಿತ್ರಿಸಿದ್ದಾರೆ. ಟಿಪ್ಪುವಿನಿಂದ ಮೈಸೂರು ಯುದ್ಧಗಳಲ್ಲಿ ಸೋತು ಸೆರೆಸಿಕ್ಕ ಬೈಲಿ. ಬ್ರೆಟ್‌ವೈಟ್ ಮುಂತಾದವರು ಇಲ್ಲಿನ ವಿದ್ವಾಂಸರಿಗೆ ತಪ್ಪು ಸುದ್ದಿಗಳನ್ನು ಫೀಡ್ ಮಾಡಿ ಸತ್ಯವನ್ನು ಮುಚ್ಚಿ ಹಾಕಿದ್ದಾರೆ. ಆದ್ದರಿಂದಲೇ ಬಾಬಾಸಾಹೇಬರು “ನಮ್ಮ ಇತಿಹಾಸವನ್ನು ನಾವೇ ಬರೆಯಬೇಕು” ಎಂದು ಹೇಳಿದ್ದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading

Trending