Connect with us

ಲೈಫ್ ಸ್ಟೈಲ್

ತುರ್ತು ಪರಿಸ್ಥಿತಿಯಲ್ಲಿ ಸಹಾಯದ ಹಸ್ತ ಚಾಚಿದರೆ‌ ಜೀವ ಉಳಿಸಿದ ಪುಣ್ಯ ನಿಮ್ಮದು !

Published

on

ನಾವು ದಿನನಿತ್ಯದ ಜೀವನದಲ್ಲಿ ಒಂದಲ್ಲ ಒಂದು ತುರ್ತುಸ್ಥಿತಿಯನ್ನು ನೋಡಿರುತ್ತೇವೆ. ಇದ್ದಕ್ಕಿದ್ದಂತೆ ನಿಶ್ಯಕ್ತಿಯಿಂದ ಕುಸಿದು ಬೀಳುವುದು, ರಸ್ತೆ ಅಪಘಾತಗಳು, ಬೆಂಕಿ ಅವಘಡಗಳು, ಎದೆನೋವು, ಉಸಿರಾಟದ ತೊಂದರೆ, ಕೈ ಕಾಲುಗಳು ಸೆಳೆತಕ್ಕೊಳಗಾಗುವುದು ಅಥವಾ ಸ್ವಾಧೀನ ಕಳೆದುಕೊಳ್ಳುವುದು, ಹಾವು ಕಡಿತ ಹೀಗೆ ಅನೇಕ ಘಟನೆಗಳ್ನು ನಮ್ಮಕಣ್ಣೆದುರಿಗೇ ನಡೆಯುತ್ತಿದ್ದರೂ ಕೆಲವೊಮ್ಮೆ ಏನು ಮಾಡಬೇಕೆಂದು ತೋಚದೇ ಹಾಗೇ ನಿಂತುಬಿಡುವುದು ಸಾಮಾನ್ಯ. ಆದರೆ ಆ ತುರ್ತು ಸ್ಥಿತಿಯಲ್ಲಿ ಸಮಯ ಮೀರಿ ಜೀವಕ್ಕೇ ಅಪಾಯ ಉಂಟಾಗಬಹುದು. ಸಮಯ ತನ್ನ ಗುರಿ ಸಾಧಿಸಿಕೊಳ್ಳುವ ಮುನ್ನವೇ ನಾವು ಸ್ವಲ್ಪಜಾಣತನದಿಂದ ವರ್ತಿಸಿದರೆ ಆ ವ್ಯಕ್ತಿಯ ಜೀವಿತಾವಧಿಗೆ ಮರುಹುಟ್ಟು ನೀಡಿದಂತಾಗುತ್ತದೆ.

ತುರ್ತುಸ್ಥಿತಿಯ ನಿರ್ವಹಣೆಯಲ್ಲಿ ಕ್ರಮವಾಗಿ ವಾಯು ನಾಳ, ಉಸಿರಾಟ ಹಾಗೂ ರಕ್ತ ಸಂಚಲನೆ (A= AIRWAY, B=BREATHING, C=CIRCULATION) ಎಂಬ ಮೂರು ಅಂಶಗಳು ಮುಖ್ಯವಾಗುತ್ತವೆ. ಯಾವುದೇ ತುರ್ತುಸ್ಥಿತಿಯಲ್ಲಿ ಮೊಟ್ಟಮೊದಲು ಈ ಮೂರು ಅಂಶಗಳ ಪರೀಕ್ಷೆಯನ್ನು ಮೊದಲು ಮಾಡಬೇಕಾಗುತ್ತದೆ. ಬದಲಾಗಿ ಕೆಲವೊಂದು ಸಂದರ್ಭಗಳಲ್ಲಿ  (ಉದಾ:ವಿಪರೀತ ರಕ್ತಸ್ರಾವ) ರಕ್ತ ಸಂಚಲನೆ, ಉಸಿರಾಟ ನಂತರ ವಾಯುನಾಳ ಎಂಬ ಕ್ರಮವಾಗಿ ಪರೀಕ್ಷಿಸಬೇಕಾಗುತ್ತದೆ. ನಂತರವಷ್ಟೇ ಆ ನಿರ್ಧಿಷ್ಟ ಸಂದರ್ಭಾನುಸಾರ ಚಿಕಿತ್ಸೆ ನೀಡಬೇಕಾಗುತ್ತದೆ. ಈಗ ನಿರ್ಧಿಷ್ಟ ಸಂದರ್ಭಗಳಲ್ಲಿ ಏನು ಮಾಡಬೇಕೆಂದು ತಿಳಿದುಕೊಳ್ಳೋಣ.

ನಿಶ್ಯಕ್ತಿಯಿಂದ ಕುಸಿದು ಬೀಳುವುದು

  1. ಈ ತರಹದ ಘಟನೆಗಳು ಸಾಮಾನ್ಯವಾಗಿ ರಕ್ತದಲ್ಲಿ ಕಾರ್ಬೊಹೈಡ್ರೇಟ್ ಅಂಶ ಅಥವಾ ರಕ್ತದೊತ್ತಡ ಕಡಿಮೆಯಾದರೆ ಉಂಟಾಗುತ್ತವೆ. ಈ ರೀತಿ ಸಂಭವಿಸಿದಲ್ಲಿ ವ್ಯಕ್ತಿಯ ಕೈಯಲ್ಲಿ ನಾಡಿಮಿಡಿತವನ್ನು ಪರೀಕ್ಷಿಸಬೇಕು.
  2. ತಕ್ಷಣವೇ ವ್ಯಕ್ತಿಯನ್ನು ಮಲಗಿಸಿ ಎರಡೂ ಕಾಲುಗಳನ್ನು ದೇಹಭಾಗಕ್ಕಿಂತ ಮೇಲ್ಮಟ್ಟಕ್ಕೆ ಇರಿಸಿಕೊಳ್ಳಬೇಕು
    ಸಕ್ಕರೆ ಅಥವಾ ಅಲ್ಲೇ ಹತ್ತಿರದಲ್ಲಿ ಯಾರಾದರೂ ಬಳಿ ಚಾಕೋಲೇಟ್‍ ಇದ್ದಲ್ಲಿತಿನ್ನಿಸಬೇಕು
    ವ್ಯಕ್ತಿಗೆ ಸಾಕೆನಿಸುವಷ್ಟು ನೀರುಕುಡಿಸಬೇಕು

ಉಸಿರಾಟದ ತೊಂದರೆ

  1. ಉಸಿರಾಟದ ತೊಂದರೆ ಹೊಗೆ ಅಥವಾ ಧೂಳಿನಿಂದ ಸಂಭವಿಸಿದ್ದರೆ ವ್ಯಕ್ತಿಯನ್ನುತಕ್ಷಣ ಆ ಸ್ಥಳದಿಂದ ಶುಭ್ರ ಗಾಳಿಯೆಡೆಗೆ ಕರೆದೊಯ್ಯಬೇಕು.
  2. ಅಸ್ತಮಾಎಂಬಿತ್ಯಾದಿ ಅಲರ್ಜಿಯಿಂದ ಸಂಭವಿಸಿದ್ದರೆ ವ್ಯಕ್ತಿಯನ್ನು ಮಲಗಿಸಿ ದೇಹದ ಮೇಲ್ಭಾಗವನ್ನುಎತ್ತರದ ಭಂಗಿಯಲ್ಲಿಅಂದರೆ 45ಡಿಗ್ರಿ ಕೋನದಲ್ಲಿ ಮಲಗಿಸಬೇಕು
  3. ಉಸಿರಾಟ ದೀರ್ಘವಾಗಿ ತೆಗೆದುಕೊಳ್ಳಲು ಸೂಚಿಸಬೇಕು

ಎದೆನೋವು

  1. ವ್ಯಕ್ತಿಯನ್ನು 45ಡಿಗ್ರಿ ಕೋನದಲ್ಲಿ ಮಲಗಿಸಬೇಕು
  2. ವ್ಯಕ್ತಿಯ ನಾಡಿಮಿಡಿತವನ್ನು ಪರೀಕ್ಷಿಸಬೇಕು.
  3. ದೀರ್ಘ ಉಸಿರಾಟವನ್ನು ಪ್ರೋತ್ಸಾಹಿಸಬೇಕು
  4. ನೀರು ಕುಡಿಸಬೇಕು (ಅನ್ನನಾಳದಲ್ಲಿ ಯಾವುದೇ ವಸ್ತು ಸಿಲುಕಿಕೊಂಡರೆ ನೀರು ಕುಡಿಸುವಂತಿಲ್ಲ)
  5. ಇದ್ಯಾವುದಕ್ಕೂ ಎದೆನೋವು ಕಡಿಮೆಯಾಗದಿದ್ದರೆ ತಕ್ಷಣವೇ ವೈದ್ಯರ ಸಮಾಲೋಚನೆ ಪಡೆಯಬೇಕು

ರಸ್ತೆ ಅಪಘಾತಗಳು

  1. ಮೊದಲು ವ್ಯಕ್ತಿಯನ್ನು ಮಲಗಿಸಿ ರಕ್ತಸ್ರಾವದ ಜಾಗಕ್ಕೆ ಒಂದು ಬಟ್ಟೆಯನ್ನು ಬಿಗಿಯಾಗಿಕಟ್ಟಬೇಕು
  2. ಕುತ್ತಿಗೆಗೆ ಪೆಟ್ಟಾದಲ್ಲಿ ವ್ಯಕ್ತಿಯನ್ನು ಸಮತಟ್ಟಾಗಿ ಮಲಗಿಸಿ, ವ್ಯಕ್ತಿಯು ತಲೆಯನ್ನು ಅತ್ತಿತ್ತತಿರುಗದಂತೆ ಹಿಡಿದುಕೊಳ್ಳಬೇಕು
  3. ತಲೆಗೆ ಪೆಟ್ಟುಉಂಟಾದಲ್ಲಿ ವ್ಯಕ್ತಿಯನ್ನು ಕೂರಿಸಿ ಯಾವುದೇ ತಡವಿಲ್ಲದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಬೇಕು
  4. ಕೈಕಾಲುಗಳು ಪೆಟ್ಟಾದಲ್ಲಿದೇಹದ ಭಾರವನ್ನು ಊರದೇ ಅದೇ ಜಾಗಕ್ಕೆ ಮರದತುಂಡು ಅಥವಾ ರಟ್ಟನ್ನು ಕಟ್ಟಿಕೊಂಡು ಹಾಗೆಯೇ ಆಸ್ಪತ್ರೆಗೆ ಕರೆದೊಯ್ಯಬೇಕು.

ಬೆಂಕಿ ಅವಘಡಗಳು

  1. ಮೊದಲು ಬೆಂಕಿಯನ್ನು ನಂದಿಸಿ ವ್ಯಕ್ತಿಯನ್ನು ಆ ಸ್ಥಳದಿಂದ ಪಾರು ಮಾಡಬೇಕು
  2. ವಾಯುನಾಳ ಅಥವಾ ಉಸಿರಾಟದ ತೊಂದರೆಯಿದ್ದಲ್ಲಿ ವ್ಯಕ್ತಿಯನ್ನು ಶುಭ್ರಗಾಳಿಯಲ್ಲಿ ಕರೆದೊಯ್ಯಬೇಕು
  3. ಬೆಂಕಿ ಅವಘಡಗಳ ಸಂದರ್ಭದಲ್ಲಿ ಆ ವ್ಯಕ್ತಿಯ ಉಳಿವು ದೇಹದ ಎಷ್ಟು ಶೇಕಡಾ ಭಾಗ ಸುಟ್ಟುಹೋಗಿದೆ ಎಂಬುದನ್ನು ಅವಲಂಬಿಸಿರುತ್ತದೆ

ಕೈಕಾಲುಗಳು ಸೆಳೆತಕ್ಕೊಳಗಾಗುವುದು

  1. ವ್ಯಕ್ತಿಯನ್ನು ಎಡ ಮಗ್ಗುಲಲ್ಲಿ ಮಲಗಿಸಬೇಕು
  2. ವ್ಯಕ್ತಿಯ ಬಾಯಲ್ಲಿ ಕರ್ಚಿಫ್ ಅಥವಾ ಬಟ್ಟೆಯನ್ನು ಇಡಬೇಕು
  3. ಯಾವುದೇ ಕಾರಣಕ್ಕೂ ನೀರನ್ನು ಕುಡಿಸಬಾರದು

ಹಾವು ಕಡಿತ

  1. ಹಾವು ಕಡಿದಜಾಗಕ್ಕೆ ಏನನ್ನೂ ಹಚ್ಚಬಾರದು
  2. ಬಾಯಿಂದ ಆ ಜಾಗದ ರಕ್ತವನ್ನು ಹೊರಹಾಕಲು ಪ್ರಯತ್ನಿಸಬಾರದು
  3. ಹಾವು ಕಡಿದಜಾಗದ ಹತ್ತಿರದ ಭಾಗಕ್ಕೆ ತುಂಬಾ ಬಿಗಿಯೂ ಸಡಿಲವೂ  ಅಲ್ಲದೇ ದಾರವನ್ನು ಅಥವಾ ಕರ್ಚಿಫ್‍ನನ್ನು ಕಟ್ಟಬೇಕು
  4. ವ್ಯಕ್ತಿಗೆಯಾವುದೇ ತೊಂದರೆಗಳು ಶುರುವಾಗುವ ಮೊದಲೇ ಅವನನ್ನು ಆಸ್ಪತ್ರೆಗೆ ಕರೆದು ಹೋಗುವುದು ಒಳಿತು.

ಇದನ್ನು ಓದಿ: ರಕ್ತದಾನ-ಜೀವದಾನ

ರಕ್ತಸ್ರಾವ

  1. ರಕ್ತಸ್ರಾವವನ್ನು ನಿಲ್ಲಿಸಿ ಅಲ್ಲಿಗೊಂದು ಬಟ್ಟೆಯನ್ನು ಕಟ್ಟಬೇಕು
  2. ಮೂಗಿನಿಂದರಕ್ತ ಸೋರಿದರೆತಕ್ಷಣ ಮೂಗನ್ನುಗಟ್ಟಿಯಾಗಿ ಸ್ವಲ್ಪ ನಿಮಿಷಗಳ ಕಾಲ ಹಿಡಿದುಕೊಳ್ಳಬೇಕು
  3. ವಿಪರೀತರಕ್ತಸ್ರಾವವಾಗಿದ್ದರೆ ವ್ಯಕ್ತಿಯ ಕಾಲುಗಳನ್ನು ದೇಹದ ಭಾಗದಿಂದ ಮೇಲ್ಭಾಗದಲ್ಲಿ ಹಿಡಿದುತಕ್ಷಣಆಸ್ಪತ್ರೆಗೆಕರೆದೊಯ್ಯಬೇಕು
  4. ಯಾವುದೇ ಸಂದರ್ಭಗಳಲ್ಲಿ ವ್ಯಕ್ತಿಯ ನಾಡಿಮಿಡಿತದ ಕೊಂಚವೂ ಇಲ್ಲದೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ತಕ್ಷಣವೇ ಕಾರ್ಡಿಯೋಪಲ್ಮೊನರಿ ರಿಸಸಿಟೇಷನ್ (CPR) ಮಾಡಬೇಕಾಗುತ್ತದೆ. CPR ಅಂದರೆ ನಿಂತುಹೋಗುತ್ತಿರುವ ಹೃದಯ ಮತ್ತು ಶ್ವಾಸಕೋಶಗಳ ಕಾರ್ಯವನ್ನು ಪುನರುಜ್ಜೀವನ ಗೊಳಿಸುವುದು. ಇದರಲ್ಲಿನಾಡಿಮಿಡಿತ ಮತ್ತು ಸ್ವಾಭಾವಿಕ ಉಸಿರಾಟ ಮರುಕಳಿಸುವವರೆಗೂ 30:2 ಅನುಪಾತದಲ್ಲಿ ಕ್ರಮವಾಗಿ ಎದೆ ಒತ್ತುವುದು ಹಾಗೂ ಬಾಯಲ್ಲಿ ಗಾಳಿ ಊದುವುದು ಮಾಡಬೇಕಾಗುತ್ತದೆ. ವಾಹನ ಸಿಕ್ಕ ನಂತರ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. CPRನ್ನು ವೈದ್ಯಕೀಯರಲ್ಲದ ವ್ಯಕ್ತಿಗಳೂ ಕೂಡ ಮಾಡಬಹುದು.

ಈ ಮೇಲಿನ ಎಲ್ಲಾ ಪ್ರಥಮ ಚಿಕಿತ್ಸೆಗಳು ಕೇವಲ ಆಯಾ ಸಂದರ್ಭಗಳಿಗಷ್ಟೇ ಸೀಮಿತವಾಗಿರುತ್ತವೆ ಮತ್ತು ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ವೈದ್ಯರನ್ನು ಭೇಟಿ ಮಾಡಬೇಕಾಗುತ್ತದೆ.

 English summary: Tips for emergency healthcare in Kannada. First aid tips in Kannada

ಡಾ.ಸಂತೋಷ್ ಕೆ.ಬಿ. ದಾವಣಗೆರೆಯಲ್ಲಿ ಎಂ.ಬಿ.ಬಿ.ಎಸ್. ಪದವಿ ಮುಗಿಸಿ ಸದ್ಯ ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯ ವೃತ್ತಿಯ ಜತೆಗೆ ಬರವಣಿಗೆಯಲ್ಲೂ ಆಸಕ್ತಿ ಹೊಂದಿರುವ ಇವರು, 'ಕವಲೊಡೆದ ನದಿ' ಎಂಬ ಕವನ ಸಂಕಲನ ಹೊರತಂದಿದ್ದಾರೆ. ಅದಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇವರಿಂದ ಪ್ರೋತ್ಸಾಹಧನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಇವರಿಂದ ನಾ.ಕು.ದತ್ತಿ ಪ್ರಶಸ್ತಿ ಲಭಿಸಿವೆ. ಮೊ: 8971256894

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.

ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ22 minutes ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ14 hours ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ15 hours ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ7 days ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 weeks ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

Trending