Connect with us

ನೆಲದನಿ

ಇಂದು ಧೈತ್ಯ ಪ್ರತಿಭೆ ಗಿರೀಶ್ ಮಾಚಳ್ಳಿಯವರ “ಬುದ್ಧಯಾನ” ನಾಟಕ ಪ್ರದರ್ಶನ

Published

on

ರಂಗಕರ್ಮಿ ಗಿರೀಶ್ ಮಾಚಳ್ಳಿ ನಮ್ಮ ನಡುವಿನ ಅದ್ಭುತ ಧೈತ್ಯ ಪ್ರತಿಭೆ. ತಮ್ಮ ನಾಟಕಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರವರ ಬರಹಗಳನ್ನು ಮತ್ತು ಚಿಂತನೆಗಳನ್ನು ಅವರು ನೀಡುತ್ತಾ ಬಂದಿದ್ದಾರೆ. ಚಾರ್ವಾಕ ಕಲ್ಚರಲ್ ಅಂಡ್ ಸೋಷಿಯಲ್ ಎಂಬ ಟ್ರಸ್ಟ್ ಎಂಬ ಸಂಸ್ಥೆ ಸ್ಥಾಪಿಸಿರುವ ಅವರು ಅದರ ಮೂಲಕ “ಬುದ್ಧನೆಡೆಗೆ”, “ಆರ್ಯದ್ರಾವಿಡ”, “ಎಂಪ್ಲಾಯೀಸ್”… ಹೀಗೆ ವೈವಿಧ್ಯಮಯ ರಂಗ ಪ್ರಯೋಗ ನಡೆಸಿದ್ದಾರೆ.

ಅದರಲ್ಲೂ ಆರ್ಯದ್ರಾವೀಡ ನಾಟಕ ಸತತ 10 ಗಂಟೆಗಳ ಸುದೀರ್ಘ ನಾಟಕವಾಗಿದ್ದು ಅದರ ಮೂಲಕ ಮಾಚಳ್ಳಿಯವರು ಭಾರತದ ಇತಿಹಾಸವನ್ನು ಅಂಬೇಡ್ಕರ್ ರವರು ನೋಡಿರುವ ಮಾದರಿಯಲ್ಲಿ ನೋಡಿ ಅದನ್ನು ರಂಗರೂಪಕ್ಕೆ ಇಳಿಸಿ ಯಶಸ್ಸು ಕಂಡವರು. ಹೇಗೆಂದರೆ ಆರ್ಯದ್ರಾವಿಡ ನಾಟಕ 10 ಗಂಟೆಯ ತನ್ನ ಪ್ರದರ್ಶನದಲ್ಲಿ ಒಂದೇ ಸ್ಥಳದಲ್ಲಿ ಮೂರು ಬೇರೆ ಬೇರೆ ವೇದಿಕೆಯಲ್ಲಿ ಇತಿಹಾಸದ ಮೂರು ಕಾಲಘಟ್ಟವನ್ನು ಪ್ರತಿನಿಧಿಸಿತು! ಅಂತಹ ಅದ್ಭುತ ರಂಗಪರಿಕಲ್ಪನೆ ಅವರದು.

ಈ ಹಿನ್ನೆಲೆಯಲ್ಲಿ ಇಂತಹ ವೈವಿದ್ಯತೆಯ ನಾಟಕದ ವಸ್ತು, ಅದನ್ನು ಸಿದ್ಧಗೊಳೀಸುವ, ಕತೆ, ಚಿತ್ರಕತೆ, ಪರಿಕಲ್ಪನೆ, ಪೂರಕ ರಂಗಸಜ್ಜಿಕೆ, ಅದಕ್ಕೆ ತಕ್ಕ ಹಿನ್ನೆಲೆ ಸಂಗೀತ… ಇದನ್ನೆಲ್ಲ ಗಿರೀಶ್ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ. ಆದರೆ ಪ್ರತಿಭಾವಂತರಿಗೆ ಇಂತಹದ್ದು ಏನೇನು ಅಲ್ಲ. ಏಕೆಂದರೆ ಏನಾದರೂ ಸಾಧಿಸಬೇಕು ಎಂಬ ಛಲ ಮಾಚಳ್ಳಿಯವರಿಗಿದೆ.

ದುರಂತವೆಂದರೆ ಯಥಾಪ್ರಕಾರ ಜಾತಿರೋಗ ಪೀಡಿತ ಮುಖ್ಯ ವಾಹಿನಿ ಮಾಧ್ಯಮಗಳು ಇಂತಹ ಪ್ರತಿಭೆಗಳಿಗೆ ನಾ ಕಂಡಂತೆ ಬರೆದದ್ದು, ಪ್ರಚಾರ ನೀಡಿದ್ದು ತೀರಾ ಕಡಿಮೆ. ಇಲ್ಲವೇ ಇಲ್ಲ ಎನ್ನುವಷ್ಟು. ಈ ನಿಟ್ಟಿನಲ್ಲಿ ನಮಗೆ ಸೋಷಿಯಲ್ ಮೀಡಿಯಾ ಒಂದು ಮುಕ್ತ ಯುಕ್ತ ಮಾಧ್ಯಮವಾಗಿ ಕಾಣುವುದೇ ಈ ಕಾರಣಕ್ಕೆ! ಅದೇನೆ ಇರಲಿ, ಇಂದು ಮೈಸೂರಿನ ಕಲಾಮಂದಿರದಲ್ಲಿ ಸಂಜೆ 5ಕ್ಕೆ ಗಿರೀಶ್ ಮಾಚಳ್ಳಿಯವರ ರಚನೆ ಮತ್ತು ನಿರ್ದೇಶನದ “ಬುದ್ಧಯಾನ” ನಾಟಕದ ಪ್ರದರ್ಶನವಿದೆ (ಸುದೀರ್ಘ 6 ಗಂಟೆಗಳ ಪ್ರದರ್ಶನ).

ಬಾಬಾಸಾಹೇಬ್ ಅಂಬೇಡ್ಕರ್ ರವರ ಬೌದ್ಧ ಚಿಂತನೆಯ ಮಹತ್ವಾಕಾಂಕ್ಷಿ ಕೃತಿ “ಬುದ್ಧ ಅಂಡ್ ಹಿಸ್ ಧಮ್ಮ”ದ ರಂಗರೂಪವಿದು. ತ್ರಿಪಿಟಕಗಳ 78 ಸಂಪುಟಗಳನ್ನು ಓದಿ ಬರೆದಿರುವ, ಭಾರತೀಯ ಬೌದ್ಧರ ಪಾಲಿನ ಬೈಬಲ್ ಎಂದೇ ಖ್ಯಾತಿ ಪಡೆದಿರುವ ಅಂಬೇಡ್ಕರರ ಈ ಬೃಹತ್ ಕೃತಿಯನ್ನು ಮಾಚಳ್ಳಿಯವರು ಅದ್ಹೇಗೆ ರಂಗರೂಪಕ್ಕಿಳೀಸಿದ್ದಾರೆ? ಕುತೂಹಲವಿದ್ದರೆ ಬಂದು ನಾಟಕ ವೀಕ್ಷಿಸಿ. ಅಕಸ್ಮಾತ್ ಮಿಸ್ ಮಾಡಿಕೊಂಡರೂ ಕೊರಗುವುದು ಬೇಡ. ಬರುವ ಭಾನುವಾರ ಅಂದರೆ 28-4-19 ಸಂಜೆ 5ಕ್ಕೆ ಮತ್ತೊಮ್ಮೆ ಇದೇ ಕಲಾಮಂದಿರದಲ್ಲಿ ಮತ್ತೊಂದು ಪ್ರದರ್ಶನ ಕಾಣಲಿದೆ ಅಂದಾದರು ಬಂದು ವೀಕ್ಷಿಸಿ. ಆ ಮೂಲಕ ಗಿರೀಶ್ ಮಾಚಳ್ಳಿ ಎಂಬ ಅದ್ಭುತ ಪ್ರತಿಭೆಯ ಧೀಶಕ್ತಿಯನ್ನು ಕಣ್ತುಂಬಿಕೊಳ್ಳಿ.

ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading
Advertisement

Title

ದಿನದ ಸುದ್ದಿ2 days ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ2 days ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ3 days ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ3 days ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ3 days ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ3 days ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ3 days ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

ದಿನದ ಸುದ್ದಿ3 days ago

ಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ

ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಮತ್ತು ಪರಿಹಾರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪಸಮಿತಿ...

ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ ನಿವೃತ್ತ ನೌಕರರ ಸಂಘದಿಂದ ತೀಕ್ಷ್ಣ ಅಂಧ ಮಕ್ಕಳ ಶಾಲೆಗೆ ಸಂಗೀತ ವಾದ್ಯಗಳ ಕೊಡುಗೆ; ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವುದು ಸಮಾಜದ ಕರ್ತವ್ಯ
ದಿನದ ಸುದ್ದಿ3 days ago

ವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್

ಸುದ್ದಿದಿನ,ಚಿತ್ರದುರ್ಗ: ದೈವಿಕ ಕೊರತೆ ಹಾಗೂ ವಿಕಲಚೇತನ ಹೊಂದಿರುವ ಮಕ್ಕಳು ದೇವರ ಮಕ್ಕಳೆಂದೇ ಪರಿಗಣಿಸಲ್ಪಡುತ್ತಾರೆ. ಅಂತಹ ಮಕ್ಕಳಿಗೆ ಪ್ರೀತಿ, ವಾತ್ಸಲ್ಯ ನೀಡುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಿ, ಸ್ವಾವಲಂಬಿ...

ದಿನದ ಸುದ್ದಿ3 days ago

ಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ

ಸುದ್ದಿದಿನ,ಚಿತ್ರದುರ್ಗ: ಜಿಲ್ಲೆಯ ಬಹುದಿನಗಳ ನೀರಾವರಿ ಕನಸಾಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನೀರು ಚಿತ್ರದುರ್ಗ ಜಿಲ್ಲೆಗೆ ಹರಿದುಬಂದಿರುವುದು ರೈತರಲ್ಲಿ ಹೊಸ ಭರವಸೆ ಮೂಡಿಸಿದೆ. ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ನೀರಾವರಿ...

Trending