ಸಿನಿ ಸುದ್ದಿ
ಡಾ.ರಾಜ್ ನನ್ನ ಪಾಲಿಗೆ ‘ನನ್ನ ಕಾಡಿನವರು’ : ಸಿದ್ದರಾಮಯ್ಯ ಸ್ಮರಣೆ
ಸುದ್ದಿದಿನ ಡೆಸ್ಕ್ : ಇಂದು (ಏಪ್ರಿಲ್ 24) ನಟಸಾರ್ವಭೌಮ, ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬದ ದಿನ. ಅಭಿಮಾನಿಗಳೇ ನನ್ನ ದೇವರು ಎಂದು ಕರೆದ ಈ ಸರಳ, ಮಾನವೀಯ ನಟ. ಇವರ ಹುಟ್ಟು ಹಬ್ಬವನ್ನು ರಾಜ್ಯ ಸರ್ಕಾರ ನಡೆಸುತ್ತಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕನ್ನಡದ ಅನರ್ಘ್ಯ ರತ್ನ ಎಲ್ಲವೂ ಆಗಿರುವ ಡಾ.ರಾಜಕುಮಾರ್ ಅವರು ನನ್ನ ಪಾಲಿಗೆ ‘ನನ್ನ ಕಾಡಿನವರು’. ಅವರ ನಾಡು ನುಡಿಯ ಬಗೆಗಿನ ಪ್ರೀತಿ- ಬದ್ಧತೆ ನನಗೆ ಸದಾ ಸ್ಪೂರ್ತಿ. ರಾಜ್ ಕುಮಾರ್ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಸ್ಮರಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ನಟಸಾರ್ವಭೌಮ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಕನ್ನಡದ ಅನರ್ಘ್ಯ ರತ್ನ ಎಲ್ಲವೂ ಆಗಿರುವ ಡಾ.ರಾಜಕುಮಾರ್ ಅವರು ನನ್ನ ಪಾಲಿಗೆ 'ನನ್ನ ಕಾಡಿನವರು'.
ಅವರ ನಾಡು ನುಡಿಯ ಬಗೆಗಿನ ಪ್ರೀತಿ- ಬದ್ಧತೆ ನನಗೆ ಸದಾ ಸ್ಪೂರ್ತಿ. ರಾಜ್ ಕುಮಾರ್ ಜನ್ಮದಿನದ ಸಂದರ್ಭದಲ್ಲಿ ಅವರನ್ನು ಗೌರವದಿಂದ ಸ್ಮರಿಸುತ್ತೇನೆ.@INCKarnataka #DrRajkumar pic.twitter.com/q93iRD09PN— Siddaramaiah (@siddaramaiah) April 24, 2019
ಸುದ್ದಿದಿನ.ಕಾಂ|ವಾಟ್ಸಾಪ್|9980346243