ದಿನದ ಸುದ್ದಿ
ಇಂದು ಕೊಡಗಿಗೆ ನಿರ್ಮಲಾ ಸೀತಾರಾಮನ್
ಸುದ್ದಿದಿನ ಡಸ್ಕ್: ಕೊಡಗು ನೆರೆ ಪರಿಸ್ಥಿತಿಯನ್ನು ಅವಲೋಕಿಸುವ ಸಲುವಾಗಿ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಅವರು ಇಂದು ಕೊಡವ ನಾಡಿಗೆ ಭೇಟಿ ನೀಡುತ್ತಿದ್ದಾರೆ.
ಗುರವಾರ ರಾತ್ರಿಯೇ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣ ತಲುಪಿದ ಸಚಿವೆಯನ್ನು ಸಂಸದ ಪ್ರತಾಪ್ ಸಿಂಹ, ಬಿಜೆಪಿ ನಾಯಕ ಎಚ್.ವಿ ರಾಜೀವ್ ಅವರು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ಶುಕ್ರವಾರ ಕೊಡಗಿಗೆ ಭೇಟಿ ನೀಡಲಿರುವ ಅವರು ನೆರೆ ಪರಸ್ಥಿತಿ, ಭೂಕುಸಿತ ಜತೆಗೆ ನಿರಾಶ್ರಿತರ ಕೇಂದ್ರದಲ್ಲಿರುವ ಪರಿಸ್ಥಿತಿಯನ್ನು ಅವಲೋಕಿಸಲಿದ್ದಾರೆ.