Connect with us

ದಿನದ ಸುದ್ದಿ

ಇಂದು “ಮುದ್ರಕರ ದಿನಾಚರಣೆ” ; ಮುದ್ರಣವಿಲ್ಲದೆ ಹೋಗಿದ್ದರೆ..?

Published

on

  • ಸ್ವ್ಯಾನ್ ಕೃಷ್ಣಮೂರ್ತಿ,ಮುದ್ರಕರು,ಬೆಂಗಳೂರು

ಜ್ಞಾನದ ಬ್ಯಾಂಕಿನಲ್ಲಿ ಠೇವಣಿ ಇರುತ್ತಿರಲಿಲ್ಲ. ಪ್ರಪಂಚದೊಡನೆ ಸಂಪರ್ಕ ಸಲೀಸಾಗುತ್ತಿರಲಿಲ್ಲ. ಆರ್ಥಿಕ ರಾಜಕೀಯ ಸಾಂಸ್ಕೃತಿಕ ಸಂಚಲನ ಇರುತ್ತಿರಲಿಲ್ಲ. ಪತ್ರಿಕೆಗಳಲ್ಲಿ ರೋಚಕ ಸುದ್ದಿಗಳ ಅವತಾರಗಳು ಅನಾವರಣವಾಗುತ್ತಿರಲಿಲ್ಲ. ದೈನಂದಿನ ಘಟನೆಗಳು ದಾಖಲಾಗಲು ಕ್ಯೂ ನಿಲ್ಲಬೇಕಾಗುತ್ತಿತ್ತು. ಜಾಹಿರಾತು ಜಗತ್ತು ನಿಷ್ಕ್ರೀಯವಾಗಿರುತ್ತಿತ್ತು.

ಮನುಷ್ಯನಿಗೆ ನೀರು, ಗಾಳಿ, ಅಗ್ನಿ, ಆಕಾಶ, ಭೂಮಿಗಳೆಂಬ ಪಂಚಭೂತಗಳ ನಂತರದ ಸ್ಥಾನದಲ್ಲಿ 6ನೇ ಅವಶ್ಯಕತೆಯಾಗಿ ಮುದ್ರಣ ಎಂಬುದು ಇಂದಿನ ದೈನಂದಿನ ಬದುಕಿಗೆ ಅತ್ಯಂತ ಅನಿವಾರ್ಯ ಎಂದೆನಿಸುತ್ತದೆ. ಮುದ್ರಣರಹಿತ ಪ್ರಪಂಚ ಹೇಗಿರಬಹುದಿತ್ತೆಂಬುದನ್ನು ಊಹಿಸಿಕೊಂಡು ನೋಡಿದಾಗ ಮುದ್ರಣದ ಮಹತ್ವ ಅರಿವಾಗುತ್ತದೆ. ಮನುಷ್ಯ ಉಪಯೋಗಿಸುವ ಪ್ರತಿ ವಸ್ತುಗಳು ಒಂದಲ್ಲವೊಂದು ರೀತಿಯ ಮುದ್ರಣವನ್ನು ಅವಲಂಬಿಸಿರುತ್ತವೆ.

ಮುದ್ರಣದ ಮಹತ್ವ

ಶ್ರೀ ಎಂ. ಎ. ರಾಮಾನುಜಯ್ಯಂಗಾರ್ ವಿರಚಿತ ಒಂದು ಪ್ರಬಂಧದಲ್ಲಿ ಮುದ್ರಣದ ಮಹತ್ವವನ್ನು ಒಂದು ರೂಪಕದಿಂದ ಮನಂಬುಗುವಂತೆ ಬಣ್ಣಿಸಲಾಗಿದೆ.

ಲೇಖನಿಯು ಸದಾಕಾಲ ಗೋಳಾಡುತ್ತಿತ್ತಂತೆ.! “ಅಯ್ಯೋ ನನ್ನ ಜೀವಾಶ್ರಯ(ಎಂದರೆ ಹಸ್ತ ಪ್ರತಿ)ವನ್ನೇ ಮುಟ್ಟಿದರೆ ಸಾಯುವ ಗೆದ್ದಲು ಹುಳುವೂ ತಿಂದುಬಿಡುವುದು. ಬಡಿದರೆ ಚದುರುವ ನೀರು ತಾರಿಸಿಬಿಡುವುದು. ಉರುಬಿದರೆ ನಂದುವ ದೀಪವು ಸುಟ್ಟು ಬಿಡುವುದು. ನಾನು ಇಷ್ಟು ಉಪಕಾರಿ ಆದರೂ ನನ್ನ ಬಾಳು ಇಷ್ಟೇ. ನನ್ನನ್ನು ಕಾಪಾಡುವವರಿಲ್ಲ”.

ಇದನ್ನೂ ಓದಿ | ಮೌಲಾನಾ ಆಜಾದ್ ಆಂಗ್ಲ ಮಾದರಿ
ಶಾಲೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅದನ್ನು ಕೇಳಿ ಅನುತಾಪಬಟ್ಟು ಅಚ್ಚು (ಮುದ್ರಣ) ಹೀಗೆ ಹೇಳಿತಂತೆ “ಏಕೆ ಈ ಗೋಳು ? ರಾಜನನ್ನು ಭಟರು ಕಾಪಾಡುವಂತೆ ನಿನಗೆ ಸದೃಶರಾದ ಹೊಸ ಹೊಸ ಭಟರನ್ನು ಸೃಷ್ಟಿಸಿ ಕಾಪಾಡುತ್ತಿರುವೆನು. ಒಬ್ಬ ಭಟನು ಸತ್ತರೆ ಅನೇಕ ಭಟರು ನಿನಗೆ ಬೆಂಬಲವಾಗಿ ನಿಂತೇ ಇರುವರು. ಈ ಭಟರಿಂದ ಪ್ರಪಂಚವೆಲ್ಲಾ ನಿನ್ನ ರಾಜ್ಯವಾಗಿ ಆಗುವುದು. ಅವರು ಜ್ಞಾನದ ಬೆಳಕು ಬೀಳುವ ಕಡೆಯಲ್ಲೆಲ್ಲ ನಿನ್ನ ಪ್ರಾಬಲ್ಯವನ್ನು ಹೊಗಳುತ್ತಾ ಬರುವರು. ನಿನ್ನ ಆಜ್ಞೆಗೆ ಎಲ್ಲೂ ತಡೆಯಿಲ್ಲದಂತೆ ಆಗುವುದು”.

ಮುದ್ರಣ ಕ್ಷೇತ್ರಕ್ಕೆ ಮಹತ್ವದ ತಿರುವನ್ನು ಕೊಟ್ಟು, ಮುದ್ರಣ ಲೋಕದ ಪಿತಾಮಹ ವೆನಿಸಿಕೊಂಡ *ಗುಟೆನ್ ಬರ್ಗ್* ಅವರ ಸ್ಮರಣಾರ್ಥ ವಿಶ್ವದ ಅತಿದೊಡ್ಡ ಮುದ್ರಣಕಾರರ ಸಂಘವಾದ ‘ ಆಲ್ ಇಂಡಿಯಾ ಫೆಡರೇಷನ್ ಆಫ್ ಮಾಸ್ಟರ್ ಪ್ರಿಂಟರ್ಸ್ ‘(All India Federation of Master Printers – AIFMP) ಸಂಸ್ಥೆಯು ಫೆಬ್ರವರಿ 24 ರಂದು ‘ಮುದ್ರಕರ ದಿನ’ ವೆಂದು ಘೋಷಿಸಿ ಪ್ರತಿವರ್ಷ ಅಂದು ಮುದ್ರಕರ ದಿನಾಚರಣೆಯನ್ನು ಆಚರಿಸುತ್ತಾ ಬರುತ್ತಿದೆ.

ಮುದ್ರಣಲೋಕದ ಪಿತಾಮಹಾ ‘ಗುಟೆನ್ ಬರ್ಗ್’

1454ರಲ್ಲಿ ಜರ್ಮನಿಯ ಅಕ್ಕಸಾಲಿಗ (ಗೋಲ್ಡ್ ಸ್ಮಿತ್) ಗುಟೆನ್‌ಬರ್ಗ್ ಎಂಬಾತ ನಿರಂತರ ಅಧ್ಯಯನ, ಪ್ರಾತ್ಯಕ್ಷಿಕೆ ಮಾಡಿ ಕಡಿಮೆ ಸಮಯದಲ್ಲಿ ಹೆಚ್ಚಿನ ಉತ್ಪತ್ತಿಯನ್ನು ಮಾಡಲು ಅನುಕೂಲವಾಗುವಂತೆ ಬಿಡಿ ಅಕ್ಷರಗಳ ಮೊಳೆಗಳನ್ನು (Moveable Types) ಹಾಗೂ ಆ ಮೊಳೆಗಳಿಗೆ ಹೊಂದುವಂತಹ ಮುದ್ರಣ ಯಂತ್ರವನ್ನು ಕಂಡುಹಿಡಿದು ಮುದ್ರಣ ಲೋಕದ ಪಿತಾಮಹಾ ಎನ್ನಿಸಿಕೊಂಡರು.

1456ರಲ್ಲಿ ಗುಟೆನ್‌ಬರ್ಗ್ ಮೊಟ್ಟಮೊದಲ ಬೈಬಲನ್ನು ಮುದ್ರಿಸಿದರು. ಮುಂದೆ ಮುದ್ರಣ ಕಲೆಯು ಫ್ರಾನ್ಸ್, ಇಟಲಿ, ಪೋರ್ಚುಗಲ್, ಹಾಲೆಂಡ್, ಇಂಗ್ಲೆಂಡ್ ಮುಂತಾದ ರಾಷ್ಟ್ರಗಳಲ್ಲಿ ಅತ್ಯಂತ ಭರದಿಂದ ಹಬ್ಬಿತು.

ಅಲ್ಲಿಯವರೆಗೆ ಕೇವಲ ರಾಜ ಮಹಾರಾಜರ ಮತ್ತು ಸಿರಿವಂತರ ಸ್ವತ್ತಾಗಿದ್ದ ಜ್ಞಾನಾರ್ಜನೆಯೂ, ಗ್ರಂಥರಚನೆಯೂ ಮುಂದೆ ಸಾರ್ವತ್ರಿಕವಾಗಿ ಜನಸಾಮಾನ್ಯರಿಗೂ ದೊರೆಯುವಂತಾಯಿತು. ಅಲ್ಲಿಂದ ಪ್ರಾರಂಭವಾದ ಮುದ್ರಣ ಕಲೆಯ ನವನವೀನ ಆವಿಷ್ಕಾರಗಳು ಒಂದರ ಮೇಲೊಂದು ಎಂಬಂತೆ ಸೃಷ್ಟಿಯಾದವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.

ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

Published

on

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.

ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.

ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್‍ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.

ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.

ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.

ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್‍ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್‍ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್‍ಗೆ ಪಡೆಯಲಾಯಿತು.

ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.

ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್‍ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್‍ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending