Connect with us

ಕ್ರೀಡೆ

ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು

Published

on

ಈಗಿನ ಪ್ರಮುಖ ಸುದ್ದಿಮುಖ್ಯಾಂಶಗಳು

  1. ಪ್ರಧಾನಮಂತ್ರಿ ನರೇಂದ್ರ ಮೋದಿ ಡೆನ್ಮಾರ್ಕ್ ಮತ್ತು ಫ್ರಾನ್ಸ್ ಸೇರಿದಂತೆ ಮೂರು ಯುರೋಪಿಯನ್ ರಾಷ್ಟ್ರಗಳಿಗೆ ತಮ್ಮ ಅಧಿಕೃತ ಭೇಟಿಯ ಮೊದಲ ಚರಣದಲ್ಲಿಂದು ಮುಂಜಾನೆ ಜರ್ಮನಿಗೆ ತಲುಪಿದ್ದಾರೆ. ಈ ವರ್ಷದ ತಮ್ಮ ಮೊದಲ ವಿದೇಶ ಭೇಟಿಯಲ್ಲಿ, ಪ್ರಧಾನಿ ಅವರು ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಮಟ್ಟದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
  2. ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಉನ್ನತ ಶಿಕ್ಷಣ ಖಾತೆ ಸಚಿವ ಡಾಕ್ಟರ್ ಸಿ.ಎನ್.ಅಶ್ವತ ನಾರಾಯಣ ಪರಿಶೀಲಿಸಿದರು. ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ 5 ಸಾವಿರ ಮಂದಿ ಭಾಗವಹಿಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ ಶಾ ವಿಶ್ವವಿದ್ಯಾಲಯವನ್ನು ಅಧಿಕೃತವಾಗಿ ಉದ್ಘಾಟಿಸಿ, ಶೈಕ್ಷಣಿಕ ಸಮುಚ್ಛಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವಿಶ್ವವಿದ್ಯಾಲಯವನ್ನು ಜಾಗತಿಕ ಗುಣಮಟ್ಟದ ಸಂಸ್ಥೆಯನ್ನಾಗಿ ಅಭಿವೃದ್ಧಿ ಪಡಿಸುವುದು ಸರ್ಕಾರದ ಗುರಿ ಎಂದು ಅವರು ಹೇಳಿದರು.
  3. ತೆಲಂಗಾಣದಾದ್ಯಂತ ಬಿಸಿಗಾಳಿಯ ಪ್ರಕೋಪ ಸೃಷ್ಠಿಯಾಗಿದ್ದು, ಆ ರಾಜ್ಯದ ಉತ್ತರ ಭಾಗದಲ್ಲಿ ಬಿಸಿಗಾಳಿಯ ತ್ರೀವ್ರತೆ ಅಧಿಕವಾಗಿದೆ. ಹವಾಮಾನ ಇಲಾಖೆ ಅಧಿಕಾರಿಗಳು ಮುಂದಿನ ಐದು ದಿನಗಳ ಎಚ್ಚರಿಕೆಯನ್ನು ನೀಡಿದ್ದಾರೆ.
  4. ದೆಹಲಿಯಲ್ಲಿ ಹೊಸದಾಗಿ ನಿನ್ನೆ1485 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಮೊನ್ನೆಗೆ ಹೋಲಿಸಿದರೆ ಪ್ರಕರಣಗಳು ಕೊಂಚ ಇಳಿಕೆಯಾಗಿದೆ. ಮೊನ್ನೆ 1520 ಪ್ರಕರಣಗಳು ವರಿದಯಾಗಿದ್ದು, ಯಾವುದೇ ಸಾವು ಸಂಭವಿಸಿರಲಿಲ್ಲ. ಸದ್ಯಕ್ಕೆ ದೇಶದ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ4.89 ರಷ್ಟಿದೆ. ಕೋವಿಡ್ ಸಂಬಂಧಿ ಸಾವಿನ ಪ್ರಮಾಣ ಶೇ1.39 ರಷ್ಟಿದೆ.
  5. 33 ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.
  6. ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೊ ಇಂಡಿಯಾ ಯೂನಿರ್ವಸಿಟಿ ಕ್ರೀಡಾಕೂಟದ ಮಹಿಳೆಯರ ಹೆಪ್ಟಾಥ್ಲಾನ್ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಅಕ್ಷತಾ 5.44 ಮೀಟರ್ ಉದ್ದ ಜಿಗಿದು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಮಹಿಳೆಯರ 200ಮೀಟರ್ ಓಟದ ಸ್ಪರ್ಧೆಯಲ್ಲಿ ಜೈನ್ ವಿಶ್ವವಿದ್ಯಾಲಯದ ಪ್ರಿಯಾ ಮೋಹನ್ 23.90 ಸೆಕೆಂಡುಗಳಲ್ಲಿ ಮೊದಲಿಗರಾಗಿ ಗುರಿ ತಲುಪಿ ಬಂಗಾರ ಪದಕ ಗೆದ್ದಿಕೊಂಡಿದ್ದಾರೆ. ಇದರೊಂದಿಗೆ ಪ್ರಿಯಾ ಮೋಹನ್ ಎರಡು ಚಿನ್ನ ಗೆದ್ದಂತಾಗಿದೆ.
  7. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣ ಮಿತ್ರ ಏಕೀಕೃತ ಎಸ್‌ಸಿ,ಎಸ್‌ಟಿ ದಿನದ 24 ಗಂಟೆಯು ಸಹಾಯವಾಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿಂದು ಚಾಲನೆ ನೀಡಿದರು. ಈ ವೇಳೆ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಬಿ.ಶ್ರೀರಾಮುಲು ಉಪಸ್ಥಿತರಿದ್ದರು.
  8. ಇಂದು ಖ್ಯಾತ ಚಲನಚಿತ್ರ ನಿರ್ದೇಶಕ ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ. ಮೇ 3, 1921ರಂದು ಜನಿಸಿದ ರೇ ಅವರನ್ನು ಜಗತ್ತು ಕಂಡ ಅತ್ಯುತ್ತಮ ಚಲನಚಿತ್ರ ನಿರ್ದೇಶಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಸತ್ಯಜಿತ್ ರೇ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರಿಗೆ ಗೌರವ ಸಲ್ಲಿಸಲು ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ವಿವಿಧ ಚಟುವಟಿಕೆಗಳನ್ನು ಆರಂಭಿಸಿದೆ.
  9. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 3 ಸಾವಿರದ 157ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 19ಸಾವಿರದ 500 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು ಮಾಹಿತಿ ನೀಡಿದೆ.
  10. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 4ಲಕ್ಷ 2 ಸಾವಿರದ 170 ಕೋವಿಡ್ ಲಸಿಕಾ ಡೋಸ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಇದುವರೆಗೆ ನೀಡಲಾದ ಲಸಿಕಾ ಡೋಸ್ ಗಳ ಸಂಖ್ಯೆ 189 ಕೋಟಿ 23 ಲಕ್ಷದ 98ಸಾವಿರದ 347 ಕ್ಕೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
  11. ಮುಂಬೈ ಷೇರು ಮಾರುಕಟ್ಟೆಯಲ್ಲಿಂದು ಷೇರು ಸಂವೇದಿ ಸೂಚ್ಯಕ್ ಸೆನ್ಸೆಕ್ಸ್ 648 ಇಳಿಕೆ ಕಂಡು 56 ಸಾವಿರದ 403೪ ರಲ್ಲಿ ವಹಿವಾಟು ಆರಂಭಿಸಿದೆ. ಹಾಗೆಯೇ, ರಾಷ್ಟ್ರೀಯ ಸಂವೇದಿ ಸೂಚ್ಯಂಕ ನಿಫ್ಟಿ ಸಹ 185ಅಂಕ ಇಳಿಕೆ ಕಂಡು 16ಸಾವಿರದ 917ರಲ್ಲಿ ವಹಿವಾಟು ನಡೆಸಿದೆ.
  12. ವಿದೇಶಿ ವಿನಮಯ ಮಾರುಕಟ್ಟೆಯಲ್ಲಿ ಅಮೆರಿಕ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 6 ಪೈಸೆ ಬಲವರ್ಧನೆಗೊಂಡು, ಪ್ರತಿ ಡಾಲರ್ ಬೆಲೆ 76 ರೂಪಾಯಿ 44ಪೈಸೆಯಷ್ಟಿದೆ.
  13. 33ನೇ ಬಾರಿ ಪ್ರಶಸ್ತಿ ಮೇಲೆ ಕಣ್ಣಿಟ್ಟಿರುವ ಪಶ್ಚಿಮ ಬಂಗಾಳ ಫುಟ್ಬಾಲ್ ತಂಡ 75ನೇ ಸಂತೋಷ್ ಟ್ರೋಫಿ ರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಇಂದು ಆತಿಥೇಯ ಕೇರಳ ತಂಡವನ್ನು ಎದುರಿಸಲಿದೆ. ಮಂಜೇರಿಯ ಪಯ್ಯನಾಡು ಕ್ರೀಡಾಂಗಣದಲ್ಲಿ ರಾತ್ರಿ 8 ಗಂಟೆಗೆ ಈ ಪಂದ್ಯ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending