Connect with us

ದಿನದ ಸುದ್ದಿ

ಮೊಣಕಾಲ್ಮೂರು | ಪರಿಶಿಷ್ಟ ಪಂಗಡದ ಪಟ್ಟಿಯಿಂದ ‘ನಾಯಕ’ ಪದ ಕೈಬಿಟ್ಟಿರುವುದನ್ನು ವಿರೋಧಿಸಿ ನಾಳೆ ಪ್ರತಿಭಟನೆ

Published

on

ಸುದ್ದಿದಿನ, ಚಿತ್ರದುರ್ಗ (ಮೊಣಕಾಲ್ಮೂರು) : ಪರಿಶಿಷ್ಟ ಪಂಗಡದ ಪಟ್ಟಿಯಿಂದ ಕೈಬಿಟ್ಟಿರುವ “ನಾಯಕ’ ಪದವನ್ನು ಕೂಡಲೇ ನಾಡ ಕಛೇರಿ ಕೇಂದ್ರದ ಅಂತರ್ಜಾಲದಲ್ಲಿ ಸೇರಿಸಿ “ನಾಯಕ” (ಪರಿಶಿಷ್ಟ ಪಂಗಡ) ಪ್ರಮಾಣ ಪತ್ರ ನೀಡಲು ಸರ್ಕಾರವನ್ನು ಒತ್ತಾಯಿಸಿ ನಾಳೆ ಮಂಗಳವಾರ ಮೊಣಕಾಲ್ಮೂರು ತಹಶೀಲ್ದಾರರ ಕಛೇರಿ ಮುಂದೆ ಮ್ಯಾಸ ಬುಡಕಟ್ಟು ಸಂರಕ್ಷಣಾ ಸಮಿತಿಯು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕರ್ನಾಟಕದ ಬಳ್ಳಾರಿ, ವಿಜಯನಗರ, ಹಾಗೂ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ನಾಯ್ಕಡ ಬುಡಕಟ್ಟಿಗೆ ಸೇರಿದ ನಾಯಕ ಅಥವಾ ನಾಯ್ಕ ಪಂಗಡದವರಾದ ಮಾಸ ನಾಯಕ ಅಥವಾ ಮಾಸ ಬೇಡರಿಗೆ 1976 ಮತ್ತು 1991 ನೇ ಸಾಲಿನಿಂದ 2021ನೇ ಸಾಲಿನವರೆಗೂ ಪರಿಶಿಷ್ಟ ಪಂಗಡದ “ನಾಯಕ” ಪ್ರಮಾಣ ಪತ್ರ ಕೋರಿ ಅರ್ಜಿ ಸಲ್ಲಿಸಿದರೆ ಪರಿಶಿಷ್ಟ ಪಂಗಡದ “ನಾಯಕ ಪ್ರಮಾಣ ಪತ್ರವನ್ನು ನೀಡಲಾಗುತ್ತಿತ್ತು. ಆದರೆ ಈಗ ಸುಮಾರು 5-6 ತಿಂಗಳಿಂದ ನಾಡ ಕಛೇರಿ (ಅಟಲ್ ಜಿ ಜನಸ್ನೇಹಿ ಕೇಂದ್ರದ ಅಂತರ್ಜಾಲದಲ್ಲಿ ಪರಿಶಿಷ್ಟ ಪಂಗಡದ ನಾಯಕ ” ಎಂಬ ಪದವನ್ನು ಕೈ ಬಿಡಲಾಗಿದೆ ಮತ್ತು ನಾಯಕ ಎಂದು ಎಸ್ ಟಿ ಪ್ರಮಾಣ ಪತ್ರವನ್ನು ನೀಡುತ್ತಿಲ್ಲ.

ನಾಯಕ Nayaka’ ಬದಲಾಗಿ (Nayaka (Including Parivara and Talawara)) (ನಾಯಕ(ಪರಿವಾರ ತಳವಾರ ಸೇರಿದಂತೆ)) ಅಥವಾ ನಾಯಕ(ಪರಿವಾರ) ಅಥವಾ ನಾಯಕ (ತಳವಾರ) ಎಂದು ನೀಡಲಾಗುತ್ತಿದೆ. ಸರ್ಕಾರದ ಈ ಸಂವಿಧಾನ ವಿರೋಧಿ ಕ್ರಮವು ನಿಜವಾದ ನಾಯ್ಕಡ-ನಾಯಕ ಪಂಗಡದವರಿಗೆ ಕಾನೂನಿನ ಹಾನಿಯುಂಟು ಮಾಡಿದೆ.

“ಯಾರು ತಳವಾರ ಮತ್ತು ಪರಿವಾರ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಬೇಡಿಕೆಯನ್ನು ಇಟ್ಟರೂ, ಯಾರು ತಳವಾರ ಮತ್ತು ಪರಿವಾರ ಎಂದು ಎಸ್ ಟಿ ಪ್ರಮಾಣ ಪತ್ರ ಕೋರಿ ಅರ್ಜಿಸಲ್ಲಿಸುತ್ತಾರೋ ಅವರಿಗೆ ನೀಡಲಿ.” ಅದು ಬಿಟ್ಟು ಮೂಲ ನಾಯಕ ಪಂಗಡದವರಾದ ನಮಗೆ ನಾಯಕ ಪುಮಾಣ ಪತ್ರವನ್ನು ಕೊಡದ ಹೊಸ ಜಾತಿಯನ್ನು ಬರೆದುಕೊಳ್ಳುವಂತೆ ಮಾಡಿರುವುದನ್ನು ನಾವು ಉಗ್ರವಾಗಿ ಖಂಡಿಸುತ್ತೇವೆ. ಕೂಡಲೇ ಸರ್ಕಾರ ನಾಯಕ (ಪರಿಶಿಷ್ಟ ಪಂಗಡ) ಎಂದು ಪ್ರಮಾಣ ಪತ್ರವನ್ನು ನೀಡುವಂತೆ ಕೋರುತ್ತೇವೆ ಎಂದು ತಿಳಿಸಿದ್ದಾರೆ.

1976 ರಿಂದ ಮಾಸ ನಾಯಕರ ಬುಡಕಟ್ಟು, ಲಕ್ಷಣಗಳನ್ನು ಆಧಾರಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದವರೆಂದು ಮಾಸ ನಾಯಕರಿಗೆ “ನಾಯಕ” ಎಂದೇ ಎಸ್ ಟಿ ಪ್ರಮಾಣ ಪತ್ರ ಕೊಡಲಾಗುತ್ತಿತ್ತು. ಆದರೆ ನಮಗೆ ನಮ್ಮ ಪಂಗಡದ ಹೆಸರನ್ನು ಬದಲಾವಣೆ ಮಾಡಿ ನಾಯಕ (ಪರಿವಾರ ಮತ್ತು ತಳವಾರ) ಎಂದು ನಮೂದಿಸಿ ನಮ್ಮ ಬುಡಕಟ್ಟಿನ ಮೂಲ ಹೆಸರನ್ನೆ ಇಲ್ಲದಂತೆ ಮಾಡಿರುತ್ತಿರಿ. ನಮಗೂ ಪರಿವಾರ ಮತ್ತು ತಳವಾರ ಜಾತಿಯವರಿಗೂ ಯಾವುದೇ ಸಂಬಂಧವಿರುವುದಿಲ್ಲ. ದುರುದ್ದೇಶದಿಂದ ಈ ರೀತಿ ಕಾನೂನನ್ನು ಮಾಡಿ ಮೂಲ ಬುಡಕಟ್ಟು ಜನರಿಗೆ ಕಾನೂನು ತೊಡಕನ್ನು ಉಂಟು ಮಾಡುತ್ತಿರುವುದಲ್ಲದೆ ನಮ್ಮ ಮೂಲ ಪಂಗಡದ ಹೆಸರನ್ನು ನಿರ್ನಾಮ ಮಾಡಲು ಹೊರಟಿರುತ್ತೀರಿ ಎಂದಿದ್ದಾರೆ.

ಆದ್ಯರಿಂದ ಮಾಸ ನಾಯಕರಾದ ನಮಗೆ “ನಾಯಕ’ ಎಂದೇ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರವನ್ನು ಮಾತ್ರ ನೀಡಲು ಒತ್ತಾಯಪೂರ್ವಕವಾಗಿ ವಿನಂತಿಸುತ್ತಿದ್ದೇವೆ. ನಮ್ಮ ಪರಿಶಿಷ್ಟ ಪಂಗಡದ ಪ್ರಮಾಣ ಪತ್ರಗಳಲ್ಲಿ ತಳವಾರ ಪರಿವಾರ ಎಂಬ ಹೆಸರಗಳನ್ನು ನಮೂದಿಸುವಂತಿಲ್ಲ. ಇತ್ತೀಚೆಗೆ ಸಂಸತ್ ನಲ್ಲಿ ಮಾಡಿರುವ The Counstitution (Scheduled Tribes) Order (Amendment) Act,2020ರ ಪುಕಾರ ನಮ್ಮ ಮೂಲ ನಾಯ್ಕಡ ನಾಯಕ ಪಂಗಡದ ಹೆಸರನ್ನು ಬದಲಾವಣೆ ಮಾಡುವ ಬಗ್ಗೆ ಯಾವುದೇ ಕಾನೂನನ್ನು ಮಾಡಿರುವುದಿಲ್ಲ. ಆದರೂ ಸಹ ತಪ್ಪು ತಪ್ಪಾಗಿ ಕಾನೂನನ್ನು ಅರ್ಥೈಸಿ ಬುಡಕಟ್ಟು ಜನರ ಅಸ್ತಿತ್ವವನ್ನು ನಿರ್ನಾಮ ಮಾಡುತ್ತಾ ಹಕ್ಕುಗಳನ್ನು ಅಪಹರಿಸಲು ಸಂಚನ್ನು ಮಾಡಲಾಗುತ್ತಿದೆ.

ಆದ್ದರಿಂದ ಎಲ್ಲಾ ರೀತಿಯಿಂದ ಸರ್ಕಾರದ ಈ ನಡೆಯನ್ನು ಪರಿವಾರ ತಳವಾರ ಜಾತಿಯವರ ಕುಯಿಕ್ತಿಯಂತೆ ಮಾಡುತ್ತಿರುವುದು ನಮ್ಮ ವ್ಯಾಸ ನಾಯಕರಿಗೆ ಬಾರಿ ಅನಾವಾಗುತ್ತಿದೆ. ಆದ್ದರಿಂದ ಈ ಕೂಡಲೇ ಮೊದಲಿನ ರೀತಿಯಲ್ಲಿ ನಾಯಕ (ಪರಿಶಿಷ್ಟ ಪಂಗಡ) ಎಂದು ಮಾತ್ರ ಪ್ರಮಾಣ ಪತ್ರ ನೀಡಬೇಕು ಎಂದು ಒತ್ತಾಯಿಸಿ ಸಾಂಕೇತಿಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಸದರಿ ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗುವುದು.

ಆದ್ದರಿಂದ ನಮ್ಮ ಬುಡಕಟ್ಟು ಜನಾಂಗದ ಎಲ್ಲಾ ಬಂಧುಗಳು ಈ ಒಂದು ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಕೋರಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending