ದಿನದ ಸುದ್ದಿ
ಟೊಯೋಟಾ ಕಾರ್ಖಾನೆ ಕಾರ್ಮಿಕರ ಮುಷ್ಕರ : ಅಹವಾಲು ಆಲಿಸಿದ ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 80 ದಿನಗಳಿಂದ ಮುಷ್ಕರ ನಡೆಸುತ್ತಿರುವ ಟೊಯೊಟ ಕಾರ್ಖಾನೆಯ ಬಿಡದಿ ಘಟಕದ ಕಾರ್ಮಿಕರು, ಮತ್ತವರ ಕುಟುಂಬದವರನ್ನು ಭಾನುವಾರ ಭೇಟಿ ನೀಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ಆಲಿಸಿದರು.
ನಂತರ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಕರೆಮಾಡಿ ಮಾತನಾಡಿದ ಅವರು, ಆದಷ್ಟು ಶೀಘ್ರ ಆಡಳಿತ ಮಂಡಳಿ ಹಾಗೂ ಕಾರ್ಮಿಕ ನಾಯಕರ ಸಭೆ ಕರೆದು ಸಮಸ್ಯೆ ಬಗೆಹರಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರವಿ, ಸಿ.ಎಂ. ಲಿಂಗಪ್ಪ, ಮಾಜಿ ಶಾಸಕರಾದ ಮಾಗಡಿ ಬಾಲಕೃಷ್ಣ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.
ಜಪಾನಿನ ಟೊಯೊಟಾ ಕಂಪನಿಗೆ ರಾಜ್ಯದಲ್ಲಿ ಉತ್ಪಾದನಾ ಘಟಕ ಆರಂಭಿಸಲು ಭೂಮಿ, ನೀರು, ವಿದ್ಯುತ್ ನೀಡಿರುವುದು ಇಲ್ಲಿನ ಸರ್ಕಾರ. ನಮ್ಮ ರಾಜ್ಯದ ಸೌಲಭ್ಯಗಳನ್ನು ಬಳಸಿಕೊಂಡು ಇಲ್ಲಿನ ಕಾರ್ಮಿಕರ ಮೇಲೆ ಜಪಾನಿನ ಕಾನೂನುಗಳನ್ನು ಅನ್ವಯಿಸೋಕೆ ಹೊರಟರೆ ಅದು ತಪ್ಪಾಗುತ್ತೆ. 1/5#Toyota pic.twitter.com/vfy3c2TMSH
— Siddaramaiah (@siddaramaiah) January 31, 2021
ವಿದೇಶದ ಯಾವುದೇ ಕಂಪನಿಗಳು ನಮ್ಮಲ್ಲಿ ಬಂಡವಾಳ ಹೂಡಿಕೆ ಮಾಡಲು, ಉತ್ಪಾದನಾ ಘಟಕಗಳನ್ನು ಆರಂಭಿಸಲು ನಮ್ಮ ಅಭ್ಯಂತರವಿಲ್ಲ. ಆದರೆ ಅವುಗಳು ಈ ನೆಲದ ಕಾನೂನಿಗೆ ಅನ್ವಯವಾಗಿ ತನ್ನ ಕಾರ್ಮಿಕರನ್ನು ನಡೆಸಿಕೊಳ್ಳಬೇಕಾಗುತ್ತದೆ. 2/5#Toyota
— Siddaramaiah (@siddaramaiah) January 31, 2021
ಟೊಯೊಟಾದ ಬಿಡದಿ ಘಟಕದ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕೂಡಲೇ ಸಮಸ್ಯೆ ಬಗೆಹರಿಸುವಂತೆ @CMofKarnataka ಅವರು ಹಾಗೂ ಕಾರ್ಮಿಕ ಸಚಿವರ ಮೇಲೆ ಒತ್ತಡ ಹೇರುತ್ತೇನೆ. 5/5#Toyota
— Siddaramaiah (@siddaramaiah) January 31, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243