Connect with us

ದಿನದ ಸುದ್ದಿ

ಬಳ್ಳಾರಿ | ಬಗೆಹರಿಯದ ಟ್ರಾಫಿಕ್ ಸಮಸ್ಯೆ ; ಸಿಪಿಐ ಮೌನ

Published

on

~ಗಿರೀಶ್ ಕುಮಾರ್ ಗೌಡ, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ನಿರಂತರವಾಗಿ ಬೈಕ್, ಕಾರು ಅಪಘಾತಗಳಲ್ಲಿ 7 ಕ್ಕಿಂತ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ‌. ಆದರೆ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಟ್ರಾಫಿಕ್ ನಲ್ಲಿನ ಸಮಸ್ಯೆಯಿಂದಾಗಿ ಈ ಅಪಘಾತಗಳು ನಡೆಯುತ್ತಿವೆ. ಆದರೆ ದಂಡ ಹಾಕಲು ಮುಂದಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸ್ಥಳೀಯ ರಾಜಕೀಯ ನಾಯಕರ ಒತ್ತಡ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಸ್ಪಿಯಿಂದ ಪತ್ರಿಕಾ ಪ್ರಕಟಣೆ

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳಲ್ಲಿ ತಲೆಗೆ ತೀವ್ರಗಾಯಗಳಾಗಿ ಸಾವಿಗೀಡಾಗುರುತ್ತಿರುವುದು ಕಂಡುಬರುತ್ತಿದ್ದು, ಪ್ರತಿಯೊಬ್ಬ ಸಾರ್ವಜನಿಕರು ವಾಹನ ಚಲಾಯಿಸುವಾಗ ಸವಾರ ಮತ್ತು ಹಿಂಬದಿ ಸವಾರ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.ವಾಹನ ಚಲಾಯಿಸುವ ತಮ್ಮ ಕುಟುಂಬದ ಎಲ್ಲಾ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಡ್ಡಾಯವಾಗಿ ಐ.ಎಸ್.ಐ ಮಾರ್ಕ್ ಹೊಂದಿದ ಹೆಲ್ಮೆಟ್ ‌ಅನ್ನು ಧರಿಸಬೇಕು.

ಮುಖ್ಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಬೇಕು.ಪ್ರಸ್ತುತ ಜಿಲ್ಲೆಯ ಸಾರ್ವಜನಿಕ ರಸ್ತೆಯಲ್ಲಿ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದ್ದು, ಒಂದು ವೇಳೆ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ಪ್ರಕರಣ ದಾಖಲಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಕೆಲ ದಿನಗಳು ಮಾತ್ರ ಹೆಲ್ಮೆಟ್

ಬಳ್ಳಾರಿ ಜಿಲ್ಲೆಯಲ್ಲಿ ಕೆಲ ದಿನಗಳ ಕಾಲ ಮಾತ್ರ ಹೆಲ್ಮೆಟ್ ಹಾಕೋದು ಮತ್ತು ಬೇಸಿಗೆಯಲ್ಲಿ ಹೆಲ್ಮೆಟ್ ಜಾರಿ ಇಲ್ಲ, ಒಟ್ಟಾರೆಯಾಗಿ ಜನರು ತಮ್ಮ ಜೀವದ ಉಳಿವಿಗಾಗಿ ಹೆಲ್ಮೆಟ್ ಕಡ್ಡಾಯವಾಗಿ ಹಾಕಬೇಕು ಎನ್ನುವುದು ಸಾಮಾನ್ಯ ಅಂಶವಾಗಿದೆ. ಆದರೆ ಇಲ್ಲಿಯ ಹಿರಿಯ ರಾಜಕೀಯ ವ್ಯಕ್ತಿಗಳು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಹೆಲ್ಮೆಟ್ ಬೇಡ ಎನ್ನುವ ಕಾರಣ ಬರೆದು ಅದನ್ನು ತಡೆಹಿಡಿದಿರುತ್ತಾರೆ. ಇನ್ನೊಂದು ಕಡೆ ಪೊಲೀಸ್ ಇಲಾಖೆ ಇಂದಿನಿಂದ ಹೆಲ್ಮೆಟ್ ಕಡ್ಡಾಯ ಅಂತಾರೆ.

ಜಿಲ್ಲಾಧಿಕಾರಿ ಕಚೇರಿಯ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳೂ ಹೆಲ್ಮೆಟ್ ಹಾಕಲ್ಲ, ಯಾರಾದರೂ ಪೊಲೀಸರು ಅವರನ್ನ ನಿಲ್ಲಿಸಿದರೆ ನಾವು ಡಿಸಿ ಮತ್ತು ಎಸ್ಪಿ ಕಚೇರಿ ಸಿಬ್ಬಂದಿಗಳು ಎನ್ನುವ ಉತ್ತರ ನೀಡುತ್ತಾರೆ.
ರಾಜಕೀಯ ವ್ಯಕ್ತಿಗಳ ಹಿಂಬಾಲಕರು, ಆ ಸಂಘಟನೆ, ಈ ಸಂಘಟನೆ, ಗೃಹರಕ್ಷಕದಳ, ವಾರ್ತಾ ಇಲಾಖೆ, ಮಾಧ್ಯಮದವರು, ಶಿಕ್ಷಣ ಇಲಾಖೆ, ಎಸಿ ಕಚೇರಿ, ತಹಶಿಲ್ದಾರರ ಕಚೇರಿ, ಆರ್.ಟಿ.ಓ ಇಲಾಖೆ ಇನ್ನಿತರ ಇಲಾಖೆಗಳ ಹೆಸರು ಹೇಳಿಕೊಂಡು ಹೆಲ್ಮೆಟ್ ಹಾಕದೇ ದಂಡ ಕಟ್ಟದೇ ತಪ್ಪಿಸಿಕೊಳ್ಳುತ್ತಿರುವುದು ದುರಂತ.

ಇನ್ನು ಪೊಲೀಸ್ ಇಲಾಖೆಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಐ.ಎಸ್.ಐ ಮಾರ್ಕ್ ಇಲ್ಲದ ಹೆಲ್ಮೆಟ್ ಹಾಕಿಕೊಂಡು ಬೈಕ್ ಗಳನ್ನು ಚಾಲನೆ ಮಾಡುತ್ತಾರೆ. ಜನರಿಗೆ ಮಾತ್ರ ಐ.ಎಸ್.ಐ ಹೆಲ್ಮೆಟ್ ಎಂದು ಹೇಳ್ತಾರೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪತ್ರಿಕಾಪ್ರಕಟಣೆ ನೀಡಿದರು, ಸುದ್ದಿ ಪ್ರಸಾರ ಆದ್ರೂ ಜನರು ಮಾತ್ರ ಹೆಲ್ಮೆಟ್ ಹಾಕಲಿಲ್ಲ. ಇನ್ನು ದಂಡ ಹಾಕಿದ ಪೊಲೀಸ್ ಸಿಬ್ಬಂದಿಗಳಿಗೆ ಶಾಸಕ ಹಾಗೂ ಸಿಪಿಐ ಒತ್ತಾಯ ಹಾಕೋದ್ ಸಹ ದುರಂತವಾಗಿದೆ.

ಸ್ಥಳೀಯ ಶಾಸಕ ಎಲ್ಲಿಯವರೆಗೆ ಇರುತ್ತಾರೋ ಅಲ್ಲಿಯ ವರೆಗೆ ಸಂಚಾರಿ ಠಾಣೆಯ ಸಿಪಿಐಯಾಗಿ ಇರುತ್ತಾರೆ ಎನ್ನುವ ಅಂಶ ಸಹ ಬೆಳಕಿಗೆ ಬಂದಿದೆ. ಮರಳು, ಜಲ್ಲಿ, ಮರಂ ಇನ್ನಿತರ ಸರಬರಾಜಿನ ಶಾಸಕ ಹಿಂಬಾಲಕರಿಗೆ ತೊಂದರೆ ಕೊಡಬಾರದು ಎನ್ನುವ ರಾಜಿಯೊಂದಿಗೆ ಈ ಕೆಲಸ ನಡೆಯುತ್ತಿದೆ. ಇನ್ನು ಪಾಲಿಟ್ನಿನಿಕ್ ಕಾಲೇಜ್ ಹತ್ತಿರ ಆದ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತ ಪಟ್ಟರು, ಆ ಟ್ರ್ಯಾಕ್ಟರ್ ಯಾರದು ? ಎನ್ನುವ ಮಾಹಿತಿ ಬೆಳಕಿಗೆ ಬರಲಿಲ್ಲವೇ ಇದು ಸಹ ದುರಂತ ವಾಗಿದೆ.

ನಗರದ ರಸ್ತೆಯ ತುಂಬೆಲ್ಲಾ ಬಂಡಿಗಳು, ಪುಟ್ ಪಾತ್ ಮೇಲೆ ವ್ಯಾಪಾರ

ಇನ್ನು ಬಳ್ಳಾರ ನಗರದಲ್ಲಿ ಪ್ರತಿಯೊಂದು ಸ್ಥಳದಲ್ಲಿ ವ್ಯಾಪಾರ ಮಾಡುವ ಬಂಡಿಗಳು, ಎಲ್ಲೆಂದರಲ್ಲಿ ಆಟೋಗಳ ನಿಲ್ದಾಣಗಳು, ಪುಟ್ ಪಾತ್ ಮೇಲೆ ವ್ಯಾಪಾರ ಮಾಡುವ ಜನರು, ಇದರಿಂದಾಗಿ ಪಾದಚಾರಿಗಳು ರಸ್ತೆಯಲ್ಲಿ ನಡೆದು ಹೋಗುವ ಪರಿಸ್ಥಿತಿ ಉಂಟಾಗಿದೆ ಇದಕ್ಕೆ ಕಾರಣ ಸಂಚಾರ ಪೊಲೀಸ್ ಅಧಿಕಾರಿದ ನಿಲಕ್ಷ್ಯವಾಗಿದೆ.

ಹೊರರಾಜ್ಯದ ವಾಹನಗಳಿಗೆ ಮಾತ್ರ ದಂಡ

ಹೊರರಾಜ್ಯಗಳ ಬೈಕ್, ಕಾರು, ಲಾರಿಗಳು ಇನ್ನಿತರ ವಾಹನಗಳಿಗೆ ಕೇಸ್ ಹಾಕ್ತಾರೆ ಆದರೆ ಬಳ್ಳಾರಿ ಜಿಲ್ಲೆಯ ವಾಹನ ಸವಾರರಿಗೆ ಕೇಸ್ ಗಳನ್ನು ಹಾಕದೆ ಇರೋದು ದುರಂತ. ಇನ್ನು ಮಹಿಳೆಯರಿಗೆ ನಿಯಮಗಳನ್ನು ಉಲ್ಲಂಘನೆ ಮಾಡಿದ್ರೇ ದಂಡನೆ ಇಲ್ಲ.

ಠಾಣೆಯ ಎಸ್.ಬಿ ಆಯೂಬ್ ದರ್ಪ

ಇನ್ನು ಸಂಚಾರಿ ಪೊಲೀಸ್ ಠಾಣೆಯಲ್ಲಿನ ಎಸ್.ಬಿ ಆಯೂಬ್, ಠಾಣೆಯ ಸಿಪಿಐ,ಪಿಎಸ್ಐ ಗಿಂತ ಇವರ ದರ್ಪ ಹೆಚ್ಚಾಗಿದೆ. ಠಾಣೆಗೆ ಬರುವ ಸಾರ್ವಜನಿಕರಿಗೆ ಏಕವಚನ ಮಾತನಾಡೋದ್, ಅವಾಚ್ಯ ಶದ್ಭಗಳಿಂದ ಆಟೋಚಾಲಕರಿಗೆ ನಿಂದನೆ ಮಾಡೋದು ಇತನ ಕರ್ತವ್ಯ, ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಲು ಈ ಠಾಣೆಯ ಸಿಪಿಐ ಮತ್ತು ಎಸ್.ಬಿ ಆಯೂಬ್ ಕಲ್ಲಿನ ಬಂಡಿ, ಇನ್ನಿತರ ಬಂಡಿಗಳಿಗೆ ತಿಂಗಳಿಗೆ 1000 ರೂಪಾಯಿ ಸಹ ವಸೂಲಿ ಮಾಡುತ್ತಿದ್ದಾರೆ. ಆದರೆ ಟ್ರಾಫಿಕ್ ಮಾತ್ರ ಸರಿಪಡಿಸುತ್ತಿಲ್ಲದೆ ಇರೋದ್ ದುರಂತವಾಗಿದೆ.

ಬಳ್ಳಾರಿ ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಒಬ್ಬರು, ಬೈಕ್ ಸವಾರನಿಗೆ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 500 ರೂಪಾಯಿ ದಂಡ ಹಾಕಿದ್ದಾರೆ, ಈ ಬೈಕ್ ಸವಾರ ಸ್ಥಳೀಯ ಶಾಸಕರಿಗೆ ಫೋನ್ ಮಾಡಿಕೊಟ್ಟು, ಎ.ಎಸ್.ಐ.ಗೇ ನಿನಗೆ ಸರ್ಕಾರದಿಂದ ಸಂಬಳ ಬರುತ್ತದೆ ತಾನೇ ನೀನೇ 500 ಕಟ್ಟು ಎಂದು ಹೇಳಿದ ಉದಾಹರಣೆ ಇದೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಇನ್ನು ಈ ಸಿಪಿಐ ಶಾಸಕರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಯಮಗಳು ಅನ್ವಯವಾಗುವುದಿಲ್ಲವೇ ?

~ನೊಂದ ಪೊಲೀಸ್ ಸಿಬ್ಬಂದಿಗಳು

ಬಾಡಿ ಕ್ಯಾಮರ ಹಾಕಲ್ಲ

ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ದಂಡ ಹಾಕುವ ಸಿಬ್ಬಂದಿಗಳು, ವಿವಿಧ ಠಾಣೆಯ ಎ.ಎಸ್.ಐ, ಪಿ.ಎಸ್.ಐ, ಸಿ.ಪಿ.ಐ, ಡಿವೈಎಸ್ಪಿ, ಎಸ್ಪಿ ಯಾರೂ ಸಹ ಕರ್ತವ್ಯದಲ್ಲಿ‌ ಇದ್ದಾಗ ಬಾಡಿ ಕ್ಯಾಮರ ಹಾಕದೇ ಇರೋದು ದುರಂತ.

ಬಾಡಿ ಕ್ಯಾಮರ ಹಾಕ್ತಾರೆ, ನೀವು ನೋಡಿಲ್ಲ ಎನ್ನುವ ಮಾಹಿತಿ ಎಸ್ಪಿ ಅವರು ತಿಳಿಸಿದರು. ಎಷ್ಟು ಕ್ಯಾಮರ ಇದೆ ಎಂದು ಪ್ರಶ್ನೆ ಮಾಡಿದ್ದಕ್ಕೆ ಇಲ್ಲ ನೋಡಿ ಹೇಳುವೆ ಎಂದರು.

~ಡಾ.ಶೋಭಾರಾಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಬಳ್ಳಾರಿ ಜಿಲ್ಲೆ

ಒಟ್ಟಾರೆಯಾಗಿ ಬಳ್ಳಾರಿ ನಗರ ಮತ್ತು ಜಿಲ್ಲೆಯಲ್ಲಿ ಟ್ರಾಫಿಕ್ ಮುಕ್ತ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎನ್ನುವುದ ಸಾರ್ವಜನಿಕ ಒತ್ತಾಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

Published

on

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ವಿವರ

ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.

ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.

ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್‍ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್‍ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್‍ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.

ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್‍ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending